< 2 शमुवेल 3 >

1 दावीद आणि शौल यांच्या घराण्यांमध्ये दीर्घकाळ युध्द चालू राहिले. काही दिवसानंतर दावीदाची ताकद वाढत चालली तर शौलाचे घराणे कमकुवत बनत गेले.
ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.
2 हेब्रोन येथे दावीदाला पुत्र झाले, त्यांचा क्रम असा इज्रेलची अहीनवाम हिच्यापासून पाहिला मुलगा झाला तो अम्नोन.
ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು; ಚೊಚ್ಚಲ ಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು.
3 दुसरा मुलगा किलाब, हा कर्मेलची नाबालची विधवा अबीगईल हिचा मुलगा. अबशालोम तिसरा, गशूरचा राजा तलमय याची मुलगी माका ही याची आई.
ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.
4 अदोनीया चौथा, हग्गीथ ही त्याची आई, शफाट्या पाचवा, त्याची आई अबीटल.
ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು. ಐದನೆಯವನು ಶೆಫಟ್ಯನು, ಇವನು ಅಬೀಟಲಳ ಮಗನು.
5 दावीदाची पत्नी एग्ला हिच्यापासून सहावा इथ्राम झाला. हेब्रोनमध्ये जन्मलेले हे त्याचे सहा पुत्र.
ಆರನೆಯವನು ಇತ್ರಾಮನು. ಇವನು ದಾವೀದನಿಗೆ ಅವನ ಹೆಂಡತಿಯಾದ ಎಗ್ಲಳಲ್ಲಿ ಹುಟ್ಟಿದವನು. ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಇವರೇ.
6 शौल आणि दावीद यांच्या घराण्यात चाललेल्या लढायांमध्ये शौलाच्या सैन्यातील अबनेरचे बळ वाढत चालले.
ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧ ನಡೆಯುತ್ತಿರುವಾಗ ಸೌಲನ ವಂಶದವರಲ್ಲಿ ಅಬ್ನೇರನೇ ಬಲಿಷ್ಠನಾಗಿದ್ದನು.
7 शौलाची रिस्पा नामक उपपत्नी असून ती अय्याची मुलगी होती. ईश-बोशेथ अबनेरला म्हणाला, “माझ्या वडिलांच्या दासीशी तू शारीरिक संबध का ठेवतोस?”
ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, “ನೀನು ನನ್ನ ತಂದೆಯ ಉಪಪತ್ನಿಯರನ್ನು ಕೂಡಿದ್ದೇಕೆ?” ಎಂದು ಕೇಳಿದನು.
8 या बोलण्याचा अबनेरला संताप आला. तो म्हणाला, मी काय यहूदाच्या असलेल्या कुत्र्याचे डोके आहे? शौलाशी आणि त्याच्या घराण्याशी मी एकनिष्ठ राहिलेलो आहे. दावीदाच्या हातून मी तुमचा पराभव होऊ दिला नाही. मी विश्वासघात केला नाही, पण आता तू मला या स्त्रीच्या संदर्भात दोष देत आहेस.
ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈ ವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ಮಿತ್ರರಿಗೂ ದಯೆತೋರಿಸುತ್ತಿದ್ದೇನಲ್ಲಾ. ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಈ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?
9 आता मात्र मी निश्चित सांगतो की, परमेश्वराने भाकित केल्याप्रमाणे सर्व घडेल. माझ्या हातून आता हे सर्व प्रत्यक्षात आले नाही, तर देव खुशाल माझे वाईट करो.
ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,
10 १० शौलाच्या घराण्याकडून राज्य काढून घेऊन ते दावीदाकडे सोपवण्याचे भाकित परमेश्वराने केले आहे. परमेश्वर दावीदाला इस्राएल आणि यहूदा यांचा राजा करणार आहे. दानपासून बैर-शेब्यापर्यंत त्याचे राज्य असेल.
೧೦ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆ ಹೋದರೆ, ಆತನು ನನಗೆ ಬೇಕಾದದ್ದನ್ನು ಮಾಡಲಿ” ಅಂದನು.
11 ११ ईश-बोशेथ हे ऐकून इतका घाबरला की त्याने अबनेरला काहीही प्रत्युत्तर केले नाही.
೧೧ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರಕೊಡಲಾರದೆ ಹೋದನು.
12 १२ अबनेरने दूताकरवी दावीदाला निरोप पाठवला, “या प्रदेशावर कोणी राज्य करावे असे तुला वाटते? माझ्याशी करार कर. म्हणजे इस्राएलचा राजा म्हणून तुला मान्यता मिळवून द्यायला मी मदत करीन.”
೧೨ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಪ್ರಯತ್ನದಲ್ಲಿ ನಾನು ನಿನ್ನ ಸಂಗಡ ಕೈಜೋಡಿಸುತ್ತೇನೆ” ಎಂದು ಹೇಳಿಸಿದನು.
13 १३ यावर दावीद म्हणाला, “हे छान झाले मी करार करायला तयार आहे. आता माझे एक मागणे आहे. शौलाची मुलगी मीखल हिला आपल्याबरोबर आणलीस तरच मी तुला भेटीन.”
೧೩ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ಆದರೆ ನಿನ್ನಿಂದ ನನಗೆ ಒಂದು ಸಹಾಯ ಬೇಕು. ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ, ನೀನು ನನ್ನ ಮುಖವನ್ನು ನೋಡಕೂಡದು” ಎಂದು ಉತ್ತರಕೊಟ್ಟನು.
14 १४ शौलाचा मुलगा ईश-बोशेथ याच्याकडे दावीदाने जासूदाकरवी निरोप पाठवला, “माझी पत्नी मीखल हिला माझ्याकडे पाठवून द्यावे. ती मला देण्यात आलेली आहे. तिच्या प्राप्तीसाठी मी शंभर पलिष्ट्यांचा वध केला होता.”
೧೪ಆಗ ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು” ಎಂಬುದಾಗಿ ಆಜ್ಞಾಪಿಸಿದನು.
15 १५ तेव्हा ईश-बोशेथने लईशाचा मुलगा पालटीयेल याच्याकडून मीखलला आणण्यास माणसे पाठवली.
೧೫ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ಕರೆಯಿಸಿದನು.
16 १६ पालटीयेल हा मीखलचा पती तो तिच्या मागोमाग बहूरीमपर्यंत रडत रडत गेला. पण अबनेरने त्यास परत जाण्यास सांगितले तेव्हा तो मागे फिरला.
೧೬ಆಗ ಪಲ್ಟೀಯೇಲನು ಬಹುರೀಮಿನವರೆಗೆ ಅಳುತ್ತಾ ಆಕೆಯ ಹಿಂದೆ ಹೋದನು. ಅನಂತರ ಅಬ್ನೇರನು ಅವನಿಗೆ, “ಹಿಂದಿರುಗಿ ಮನೆಗೆ ಹೋಗು” ಎಂದು ಹೇಳಲು ಅವನು ಹಿಂದಿರುಗಿ ಹೋದನು.
17 १७ अबनेराने इस्राएलाच्या वडीलधाऱ्या मंडळीकडे निरोप पाठवला, “दावीदाला राजा करावे असे तुमच्या मनात होते.
೧೭ಅಬ್ನೇರನು ಇಸ್ರಾಯೇಲರ ಹಿರಿಯರಿಗೆ, “ದಾವೀದನು ನಮ್ಮ ಅರಸನಾಗಬೇಕೆಂದು ನೀವು ಮೊದಲು ಅಪೇಕ್ಷಿಸಿದಂತೆಯೇ ಈಗ ಮಾಡಿರಿ.
18 १८ आता ते प्रत्यक्षात आणा परमेश्वराने दावीदा विषयी म्हटले आहे, पलिष्टी लोक आणि इतर शत्रू यांच्यापासून मी माझ्या इस्राएल लोकांचे संरक्षण करीन. माझा सेवक दावीद याच्यामार्फत मी हे करीन.”
೧೮ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ” ಎಂದು ಹೇಳಿದನು.
19 १९ अबनेरने हे सर्व हेब्रोन येथे दावीदाच्या कानावर घातले. बन्यामीन घराण्यातील लोकांशीही तो या विषयी बोलला त्यांना आणि इस्राएल लोकांस ते चांगले वाटले.
೧೯ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು ಇಸ್ರಾಯೇಲರೂ ಬೆನ್ಯಾಮೀನ್ಯರೆಲ್ಲರೂ ಒಪ್ಪಿಕೊಂಡು ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕೋಸ್ಕರ ಹೆಬ್ರೋನಿಗೆ ಹೊರಟನು.
20 २० एवढे झाल्यावर तो आपल्या बरोबर वीस जणांना घेऊन हेब्रोन येथे दावीदाकडे आला. दावीदाने अबनेर आणि त्याच्या बरोबरचे हे सर्व लोक यांना मेजवानी दिली.
೨೦ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣ ಮಾಡಿಸಿದನು.
21 २१ अबनेर दावीदाला म्हणाला, “महाराज, सर्व इस्राएल लोकांस मी आता आपल्या पायाशी एकत्र आणतो. ते तुमच्याशी करार करतील. मग आपल्या इच्छेप्रमाणे तुम्ही इस्राएलवर राज्य कराल.” तेव्हा दावीदाने अबनेरला निरोप दिला. अबनेर शांततेने परत गेला.
೨೧ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಾಯೇಲರನ್ನೆಲ್ಲಾ ಕೂಡಿಸಿ, ನನ್ನ ಒಡೆಯನಾದ ಅರಸನ ಬಳಿಗೆ ಕರೆದುಕೊಂಡು ಬರುವೆನು. ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು. ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು” ಎಂದು ಹೇಳಲು ದಾವೀದನು ಅವನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು.
22 २२ इकडे यवाब आणि दावीदाचे लोक युध्दावरून परत आले. त्यांनी शत्रूकडून बऱ्याच मौल्यवान वस्तू लुटून आणल्या. दावीदाने निरोप दिल्यावर अबनेर नुकताच शांतचित्ताने तेथून गेला होता. तेव्हा हेब्रोन येथे दावीदाजवळ तो अर्थातच नव्हता.
೨೨ಸುಲಿಗೆ ಮಾಡುವುದಕ್ಕಾಗಿ ಹೋಗಿದ್ದ ದಾವೀದನ ಭಟರು ಯೋವಾಬನೂ ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂತಿರುಗಿ ಬಂದರು. ಅವನು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು.
23 २३ यवाब सर्वसैन्यासह हेब्रोन येथे आला. सैन्यातील लोक यवाबाला म्हणाले, “नेरचा मुलगा अबनेर दावीदराजाकडे आलेला होता आणि दावीदाने त्यास शांत मनाने जाऊ दिले.”
೨೩ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ, ಅರಸನು ಅವನನ್ನು ಸುರಕ್ಷಿತವಾಗಿ ಕಳುಹಿಸಿದನೆಂದೂ ತಿಳಿದು, ಅರಸನ ಬಳಿಗೆ ಹೋಗಿ,
24 २४ तेव्हा यवाब राजाकडे आला आणि म्हणाला, “हे आपण काय केलेत? अबनेर येथे आलेला असताना तुम्ही त्यास तसेच जाऊ दिलेत! असे का?
೨೪“ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ. ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದೇಕೆ?
25 २५ या नेरच्या मुलाला तुम्ही ओळखताच. त्याचा यामध्ये कावा आहे. तो येथील बातमी काढायला आला होता.”
೨೫ನೇರನ ಮಗನಾದ ಅಬ್ನೇರನ ಸಂಗತಿ ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವುದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೇ” ಎಂದು ಹೇಳಿ,
26 २६ मग दावीदाकडून निघून यवाबाने आपले दूत अबनेरच्या मागावर पाठवले. त्यांनी त्यास सिरा विहिरीजवळ गाठले आणि परत आणले. दावीदाला याची काहीच कल्पना नव्हती.
೨೬ಯೋವಾಬನು ದಾವೀದನನ್ನು ಬಿಟ್ಟು, ಹೊರಗೆ ಹೋಗಿ, ಅಬ್ನೇರನನ್ನು ಕರೆತರುವಂತೆ ದೂತರನ್ನು ಕಳುಹಿಸಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ.
27 २७ हेब्रोन येथे त्यास आणल्यावर यवाबाने त्यास गुप्त मसलत करण्यासाठी म्हणून वेशीच्या आत घेतले आणि अबनेरच्या पोटावर वार केला. अबनेर गतप्राण झाला. यवाबाचा भाऊ असाएल याला अबनेराने मारले होते त्याचा यवाबाने सूड उगवला.
೨೭ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.
28 २८ दावीदाला हे वृत्त समजले तेव्हा तो म्हणाला, “नेरचा मुलगा अबनेर याच्या खुनाच्या बाबतीत मी आणि माझे राज्य निर्दोष आहोत, परमेश्वर हे जाणतो.
೨೮ಸ್ವಲ್ಪ ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ, ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.
29 २९ यवाब आणि त्याचे कुटुंबीय या कृत्याला जबाबदार आहेत. तेव्हा अपराधी ते आहेत. याचे फळ त्यांना भोगावे लागेल त्याच्या वंशातील लोक महारोग, पंगुत्व यांनी ग्रासले जातील, युध्दात मारले जातील. त्यांची अन्नान्नदशा होईल.”
೨೯ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.
30 ३० गिबोनच्या लढाईत अबनेरने असाएलला मारले. आपल्या भावाच्या वधाचे प्रत्युत्तर म्हणून यवाब आणि अबीशय यांनी अबनेरला मारले.
೩೦ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ಸಾಯಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.
31 ३१ दावीदाने यवाब व त्याच्या बरोबरचे सर्व लोक यांना सांगितले, “तुमची ही वस्त्रे फाडा आणि शोक झाला असल्याचे दाखवणारी वस्त्रे घाला.” अबनेरच्या मृत्युबद्दल दुःख व्यक्त करा.
೩೧ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ” ಎಂದು ಆಜ್ಞಾಪಿಸಿ ತಾನು ಶವಯಾತ್ರೆ ಹಿಂದೆ ಹೋದನು.
32 ३२ त्यांनी हेब्रोन येथे अबनेरचे दफन केले. दावीद अत्यंविधीला हजर होता. अबनेरच्या कबरीपाशी राजा आणि इतर सर्वजण यांनी विलाप केला.
೩೨ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು. ಜನರೆಲ್ಲರೂ ಅತ್ತರು.
33 ३३ तेथे दावीद राजाने हे शोकगीत म्हटले, “एखाद्या मूढ गुन्हेगाराप्रमाणे अबनेर मेला, नाही का?
೩೩ದಾವೀದನು ಅಬ್ನೇರನನ್ನು ಕುರಿತು, “ಅಬ್ನೇರನೇ ನಿನಗೆ ಮೂರ್ಖರಿಗಾಗುವಂತೆ ದುರ್ಮರಣವಾಯಿತೋ?
34 ३४ अबनेर, अरे, तुझ्या हातात बेड्या नव्हत्या, पाय साखळदंडांनी बांधले नव्हते. नाही रे, तुला कपटी लोकांनी मारले.” मग पुन्हा सर्वांनी अबनेरसाठी शोक व्यक्त केला.
೩೪ನಿನ್ನ ಕೈಗಳು ಕಟ್ಟಲ್ಪಡಲಿಲ್ಲ. ನಿನ್ನ ಕಾಲುಗಳಿಗೆ ಬೇಡಿಗಳು ಹಾಕಿರಲಿಲ್ಲ. ನೀನು ದುಷ್ಟರಿಂದ ಹತನಾದಂತೆ ಹತನಾದಿ” ಎಂದು ಶೋಕಗೀತೆಯನ್ನು ಹಾಡಲು ಜನರು ತಿರುಗಿ ಅತ್ತರು.
35 ३५ दावीदाने काही तरी खाऊन घ्यावे म्हणून दिवसभर लोकांनी त्याची मनधरणी केली. पण दावीदाने एक निर्धार केला होता. सूर्यास्तापूर्वी मी भाकर किंवा तत्सम काहीही खाल्ले तरी देव मला शासन करो, मला संकटात टाको असे तो बोलला होता.
೩೫ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟು ಹೇಳಿದನು.
36 ३६ लोकांनी हे सर्व पाहिले आणि दावीद राजाची वर्तणूक पाहून त्यांना आनंद झाला.
೩೬ಜನರು ಇದನ್ನು ಕಂಡು ಮೆಚ್ಚಿದರು. ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.
37 ३७ दावीदाने नेर चा पुत्र अबनेरला मारलेले नाही याबद्दल यहूदा आणि इस्राएल लोकांची खात्री पटली.
೩೭ನೇರನ ಮಗನಾದ ಅಬ್ನೇರನ ಕೊಲೆಯಲ್ಲಿ ಅರಸನು ಕೈಹಾಕಲಿಲ್ಲವೆಂಬುದು ಅವನ ಎಲ್ಲಾ ಜನರಿಗೂ ಇಸ್ರಾಯೇಲರಿಗೂ ಅದೇ ದಿನ ಗೊತ್ತಾಯಿತು.
38 ३८ दावीद राजा आपल्या सेवकांना म्हणाला, आज एक मुख्य आणि महत्वाचा पुढारी इस्राएलमध्ये मारला गेला हे तुम्ही जाणत नाही काय?
೩೮ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಾಯೇಲರಲ್ಲಿ ಹತವಾದವನು, ಪ್ರಭುವೂ, ಮಹಾಪುರುಷನೂ ಆಗಿದ್ದಾನೆಂಬುದು ನಿಮಗೆ ಗೊತ್ತಿದೆಯಲ್ಲಾ.
39 ३९ आज जरी मी आभिषिक्त राजा आहे, तरी मी अशक्त आहे. सरुवेच्या मुलांचे हे वर्तन मला फार त्रासदायक झाले आहे. परमेश्वर त्यांच्या गुन्ह्याबद्दल त्यांना तसेच शासन करो.
೩೯ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.

< 2 शमुवेल 3 >