< प्रेषि. 14 >

1 पौल व बर्णबा इकुन्या शहरात गेले, ते तेथील यहूदी सभास्थानात गेले, तेथील लोकांशी ते बोलले, पौल व बर्णबा अशा रीतीने बोलले की, पुष्कळ यहूदी लोकांनी व ग्रीक लोकांनी त्यांनी जे सांगितले त्यावर विश्वास ठेवला.
ಇಕೋನ್ಯದಲ್ಲಿಯೂ ಪೌಲ ಮತ್ತು ಬಾರ್ನಬರು ವಾಡಿಕೆಯಂತೆ ಯೆಹೂದ್ಯರ ಸಭಾಮಂದಿರಕ್ಕೆ ಹೋದರು. ಅವರು ಅಲ್ಲಿ ಪರಿಣಾಮಕಾರಿಯಾಗಿ ಮಾತನಾಡಿದ್ದರಿಂದ ಬಹು ಸಂಖ್ಯೆಯಲ್ಲಿ ಯೆಹೂದ್ಯರೂ ಗ್ರೀಕರೂ ವಿಶ್ವಾಸವನ್ನಿಟ್ಟರು.
2 परंतु काही यहूदी लोकांनी विश्वास ठेवला नाही, त्यांनी परराष्ट्रीय लोकांची मने भडकाविली आणि बंधुजनांविषयीची मने वाईट केली.
ಆದರೆ ನಂಬಲು ನಿರಾಕರಿಸಿದ ಯೆಹೂದ್ಯರು ಯೆಹೂದ್ಯರಲ್ಲದವರ ಮನಸ್ಸನ್ನು ಕೆಡಿಸಿ, ಸಹೋದರರ ಮೇಲೆ ವಿರೋಧ ಭಾವನೆ ಹುಟ್ಟಿಸಿದರು.
3 म्हणून पौल व बर्णबाने त्याठिकाणी बरेच दिवस मुक्काम केला आणि परमेश्वराच्या बलाने येशूविषयी धैर्याने सांगत राहीले, पौल व बर्णबाने देवाच्या कृपेविषयी साक्ष दिला, परमेश्वराने त्यांना पौल व बर्णबाला चमत्कार व अद्भूते कृत्ये करण्यास मदत करून ते जे काही सांगत होते ते खरे ठरवले.
ಆದ್ದರಿಂದ ಪೌಲ ಬಾರ್ನಬರು ಅಲ್ಲಿ ಬಹಳ ಸಮಯವಿದ್ದು ಕರ್ತ ಯೇಸುವಿನ ವಿಷಯದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು. ಆದ್ದರಿಂದ ಕರ್ತ ಯೇಸು ಅವರ ಕೈಗಳಿಂದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟು ತಮ್ಮ ಕೃಪಾವಾಕ್ಯವನ್ನು ಖಚಿತಪಡಿಸಿದರು.
4 परंतु शहरातील काही लोकांस यहूदी लोकांची मते पटली, दुसऱ्या लोकांस प्रेषित पौल व बर्णबाचे म्हणणे पटले, त्यामुळे शहरात दोन तट पडले.
ಆದರೆ ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯಗಳಾದವು. ಕೆಲವರು ಯೆಹೂದ್ಯರ ಪರವಾದರು, ಇನ್ನೂ ಕೆಲವರು ಅಪೊಸ್ತಲರ ಪರವಾದರು.
5 काही परराष्ट्रीय लोक, काही यहूदी लोक व त्यांचे पुढारी यांनी पौल व बर्णबाला बांधले व इजा करण्याचा प्रयत्न केला, त्यांना पौल व बर्णबा यांना दगडमार करून मारावयाचे होते.
ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ನಾಯಕರನ್ನು ಕೂಡಿಕೊಂಡು ಪೌಲ, ಬಾರ್ನಬರನ್ನು ಅವಮಾನ ಮಾಡಿ ಅವರ ಮೇಲೆ ಕಲ್ಲೆಸೆಯಬೇಕೆಂದು ನುಗ್ಗಿದಾಗ,
6 पौल व बर्णबा यांना जेव्हा त्याविषयी कळले तेव्हा त्यांनी ते शहर सोडले, ते लुस्र व दर्बे या लुकवनिया देशाच्या नगरात गेले आणि त्या शहरांच्या सभोवतालच्या परिसरात गेले.
ಈ ವಿಷಯ ಅಪೊಸ್ತಲರಿಗೆ ತಿಳಿಯಲು ಅವರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆ ಹಾಗೂ ಅವುಗಳ ಸುತ್ತಮುತ್ತಲ ಪ್ರದೇಶಗಳಿಗೆ ಓಡಿಹೋದರು.
7 आणि तेथे त्यांनी सुवार्ता सांगितली.
ಹೀಗೆ ಅವರು ಅಲ್ಲೆಲ್ಲಾ ಸುವಾರ್ತೆ ಸಾರಿದರು.
8 लुस्र येथे एक मनुष्य होता त्याचे पाय अधू होते तो जन्मतःच पांगळा जन्मला होता व कधीच चालला नव्हता.
ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದನು. ಅವನು ಹುಟ್ಟು ಕುಂಟನಾಗಿದ್ದುದರಿಂದ ಅವನೆಂದೂ ನಡೆದಾಡಿರಲಿಲ್ಲ.
9 पौल भाषण करीत असताना हा मनुष्य ऐकत होता, पौलाने त्याच्याकडे दृष्टी लावून व त्यास आपण बरे होऊ असा त्या मनुष्याचा विश्वास आहे असे पाहून.
ಪೌಲನು ಮಾತನಾಡುತ್ತಿರುವುದನ್ನು ಅವನು ಆಲಿಸುತ್ತಿದ್ದನು. ಪೌಲನು ನೇರವಾಗಿ ಅವನನ್ನೇ ದೃಷ್ಟಿಸಿ ನೋಡಿ, ತಾನು ಗುಣಹೊಂದಲು ಅವನಲ್ಲಿ ವಿಶ್ವಾಸವಿದೆಯೆಂದು ಕಂಡು,
10 १० मोठ्याने म्हणाला, “तुझ्या पायांवर नीट उभा राहा!” तेव्हा त्या मनुष्याने उडी मारली आणि चालू लागला.
“ಎದ್ದೇಳು, ಕಾಲೂರಿ ನಿಲ್ಲು!” ಎಂದು ದೊಡ್ಡ ಧ್ವನಿಯಿಂದ ಹೇಳಿದನು. ಆ ಮನುಷ್ಯನು ಜಿಗಿದು ನಿಂತು, ನಡೆದಾಡಲು ಪ್ರಾರಂಭಿಸಿದನು.
11 ११ पौलाने केलेले लोकांनी जेव्हा पाहिले, तेव्हा ते आपल्या लुकवनिया भाषेत ओरडले, ते म्हणाल, “देव मनुष्यांच्या रूपाने आमच्यात उतरले आहेत.”
ಪೌಲನು ಮಾಡಿದ್ದನ್ನು ಜನರು ಕಂಡಾಗ, ಲುಕವೋನಿಯ ಭಾಷೆಯಲ್ಲಿ, “ಮಾನವ ರೂಪದಲ್ಲಿ ದೇವರುಗಳು ಬಂದಿದ್ದಾರೆ!” ಎಂದು ಘೋಷಿಸಿದರು.
12 १२ लोकांनी बर्णबाला ज्यूपितर म्हटले व पौलाला मर्क्युरी म्हटले, कारण पौल मुख्य बोलणारा होता.
ಅವರು ಬಾರ್ನಬನನ್ನು “ಜೆಯುಸ್” ದೇವರು ಎಂದೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು “ಹೆರ್ಮೆ” ದೇವರು ಎಂದೂ ಕರೆದರು.
13 १३ ज्यूपितरचे मंदिर जवळ होते, या मंदिराचा पुजारी काही बैल व फुले घेऊन वेशीजवळ आला, पुजारी व लोकांस पौल व बर्णबा यांची उपासाना करण्यासाठी त्यांच्यापुढे बळी द्यावयाचा होता.
ಪಟ್ಟಣದ ಹೊರಗೆ ಸಮೀಪದಲ್ಲಿದ್ದ ಜೆಯುಸ್ ದೇವರ ಗುಡಿಯ ಪೂಜಾರಿಯು, ಪಟ್ಟಣದ ದ್ವಾರಗಳ ಬಳಿಗೆ ಹೋರಿಗಳನ್ನೂ ಹೂಮಾಲೆಗಳನ್ನೂ ತೆಗೆದುಕೊಂಡು ಬರಲು, ಅವರಿಗಾಗಿ ಯಜ್ಞಗಳನ್ನು ಅರ್ಪಿಸಲು ಜನರು ಅಪೇಕ್ಷಿಸಿದರು.
14 १४ परंतु ते काय करीत आहेत, हे जेव्हा प्रेषित पौल व बर्णबा यांना समजले तेव्हा त्यांनी आपले कपडे फाडले व लोकांच्या गर्दीत शिरले आणि मोठ्याने म्हणाले.
ಆದರೆ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ಇದನ್ನು ಕೇಳಿದಾಗ, ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದ ಕಡೆಗೆ ಓಡಿಬಂದು ಕೂಗಿ ಹೇಳಿದ್ದೇನೆಂದರೆ:
15 १५ लोकांनो, या गोष्टी तुम्ही का करीत आहात? आम्ही देव नाही! तुम्हास जशा भावना आहेत, तशाच आम्हासही आहेत! आम्ही तुम्हास सुवार्ता सांगायला आलो, आम्ही तुम्हास हे सांगत आहोत की या व्यर्थ गोष्टींपासून तुम्ही तुमचे मन वळवावे, खऱ्या जिवंत देवाकडे आपले मन लावावे, त्यानेच आकाश, पृथ्वी, समुद्र व जे काही आहे ते निर्माण केले.
“ಪ್ರಿಯ ಜನರೇ, ನೀವಿದನ್ನು ಏಕೆ ಮಾಡುತ್ತಿರುವಿರಿ? ನಾವೂ ನಿಮ್ಮ ಹಾಗೆಯೇ ಮಾನವರು. ಇಂಥಾ ವ್ಯರ್ಥವಾದ ಸಂಗತಿಗಳನ್ನು ಬಿಟ್ಟು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದ ಜೀವಿಸುವ ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನಿಮಗೆ ಸುವಾರ್ತೆಯನ್ನು ಸಾರುತ್ತಿದ್ದೇವೆ.
16 १६ भूतकाळात, देवाने सर्व राष्ट्रांना त्यांना जसे पाहिजे तसे वागू दिले.
ದೇವರು ಹಿಂದಿನ ಕಾಲದಲ್ಲಿ, ಆಯಾ ದೇಶಗಳು ತಮ್ಮ ತಮ್ಮ ಮಾರ್ಗಗಳಲ್ಲಿಯೇ ನಡೆಯುವಂತೆ ಬಿಟ್ಟುಬಿಟ್ಟರು.
17 १७ परंतु देवाने अशा गोष्टी केल्या, की त्याद्वारे तो खरा आहे हे सिद्ध व्हावे, तो तुमच्यासाठी चांगल्या गोष्टी करतो, तो तुम्हास आकाशातून पाऊस देतो, योग्यवेळी तो तुम्हास चांगले पीक देतो, तो तुम्हास भरपूर अन्न देतो व तो तुमची अंतःकरणे आनंदाने भरतो.
ಆದರೂ ದೇವರು ತಮ್ಮ ಬಗ್ಗೆ ಸಾಕ್ಷಿಕೊಡದೆ ಇರಲಿಲ್ಲ. ಆಕಾಶದಿಂದ ಮಳೆಯನ್ನೂ ಸಕಾಲದಲ್ಲಿ ಬೆಳೆಯನ್ನೂ ನಿಮಗೆ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೆಯದನ್ನು ಮಾಡುತ್ತಾ ಬಂದವರು ದೇವರೇ.”
18 १८ पौल व बर्णबाने या गोष्टी लोकांस सांगितल्या व मोठ्या प्रयासाने आपणास यज्ञ अर्पिण्यापासून त्याना परावृत्त केले.
ಹೀಗೆ ಹೇಳಿದರೂ ಆ ಜನಸಮೂಹ ಅವರಿಗೆ ಬಲಿಯರ್ಪಿಸುವುದನ್ನು ತಡೆಯಲು ಕಷ್ಟವಾಯಿತು.
19 १९ नंतर अंत्युखिया व इकुन्या येथील काही यहूदी लोक तेथे आले, त्यांनी लोकसमुदायाची मने आपल्या बाजूस वळविली आणि पौलाला दगडमार केला, त्यामध्ये पौल मरण पावला असे समजून त्यांनी त्यास ओढत नेऊन नगराबाहेर टाकले.
ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.
20 २० पण शिष्य पौलाभोवती जमा झाल्यावर पौल उठून परत शहरात गेला व दुसऱ्या दिवशी बर्णबाबरोबर तो दर्बे शहरास गेले.
ಆದರೆ ಶಿಷ್ಯರು ಬಂದು ಪೌಲನ ಸುತ್ತಲೂ ನಿಂತುಕೊಳ್ಳಲು ಅವನು ಎದ್ದು ಪಟ್ಟಣಕ್ಕೆ ಹಿಂದಿರುಗಿ ಹೋದನು. ಮರುದಿನ ಅವನೂ ಬಾರ್ನಬನೂ ದೆರ್ಬೆಗೆ ಹೊರಟು ಹೋದರು.
21 २१ आणि त्या नगरात त्यांनी सुवार्ता सांगून अनेक लोकांस शिष्य केले, त्यानंतर ते लुस्र, इकुन्या आणि अंत्युखिया नगरांना परत आले.
ಆ ಪಟ್ಟಣದಲ್ಲಿ ಪೌಲ, ಬಾರ್ನಬರು ಸುವಾರ್ತೆಯನ್ನು ಸಾರಿದರು. ಬಹುಜನರನ್ನು ಶಿಷ್ಯರನ್ನಾಗಿ ಮಾಡಿದರು. ಅನಂತರ ಅವರು ಲುಸ್ತ್ರ, ಇಕೋನ್ಯ ಮತ್ತು ಅಂತಿಯೋಕ್ಯಗಳಿಗೆ ಹಿಂದಿರುಗಿದರು.
22 २२ आणि त्यांनी तेथील शिष्यांना येशूवरील विश्वासात बळकट केले, त्यांनी आपल्या विश्वासांत अढळ रहावे म्हणून उत्तेजन दिले, ते म्हणाले, “अनेक दुःखांना तोंड देत आपण देवाच्या राज्यात प्रवेश केला पाहिजे.”
ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.
23 २३ पौल व बर्णबाने प्रत्येक मंडळीत वडीलजनांची नेमणूक केली, त्यांनी या वडिलांसाठी उपवास आणि प्रार्थना केल्या, प्रभू येशूवर विश्वास असलेले असे सर्व वडीलजन होते म्हणून पौलाने व बर्णबाने त्यांना प्रभूच्या हाती सोपवले.
ಪ್ರತಿಯೊಂದು ಸಭೆಯಲ್ಲಿ ಪೌಲ, ಬಾರ್ನಬರು ಸಭಾ ಹಿರಿಯರನ್ನು ನೇಮಿಸಿ, ಉಪವಾಸ ಪ್ರಾರ್ಥನೆಯನ್ನು ಮಾಡಿ ಅವರು ನಂಬಿದ್ದ ಕರ್ತ ಯೇಸುವಿಗೆ ಅವರನ್ನು ಒಪ್ಪಿಸಿಕೊಟ್ಟರು.
24 २४ पौल आणि बर्णबा पिसिदिया प्रदेशातून गेले नंतर ते पंफुलिया येथे आले.
ತರುವಾಯ ಪಿಸಿದ್ಯವನ್ನು ದಾಟಿಕೊಂಡು, ಪಂಫುಲ್ಯದೊಳಗೆ ಬಂದರು,
25 २५ त्यांनी पिर्गा शहरात देवाचा संदेश दिला नंतर ते अत्तलिया शहरात गेले.
ಪೆರ್ಗೆಯಲ್ಲಿ ದೇವರ ವಾಕ್ಯವನ್ನು ಸಾರಿ, ಅಲ್ಲಿಂದ ಅತ್ತಾಲಿಯ ಎಂಬಲ್ಲಿಗೆ ಹೋದರು.
26 २६ नंतर तेथून पुढे पौल व बर्णबा सिरीया प्रांतातील अंत्युखियात समुद्रमार्गे गेले, जे काम त्यांनी पूर्ण केले होते त्याची सुरुवात त्यांनी देवाच्या कृपेने अंत्युखियापासूनच केली होती.
ಅತ್ತಾಲಿಯದಿಂದ ನೌಕೆಯಲ್ಲಿ ಪ್ರಯಾಣಮಾಡಿ ಅಂತಿಯೋಕ್ಯಕ್ಕೆ ಬಂದರು. ಅವರು ಪೂರೈಸಿದ ಸೇವೆಗಾಗಿ ದೇವರ ಕೃಪೆಗೆ ತಮ್ಮನ್ನು ಸಮರ್ಪಿಸಿಕೊಂಡದ್ದು ಈ ಪಟ್ಟಣದಿಂದಲೇ.
27 २७ ते जेव्हा तेथे पोहोचले, तेव्हा त्यांनी मंडळीला एकत्र बोलावले आणि देवाने त्यांच्याबाबतीत ज्या ज्या गोष्टी केल्या त्या त्यांना सांगितल्या तसेच दुसऱ्या देशातील परराष्ट्रीय लोकांमध्ये देवाने विश्वासाचे द्वार कसे उघडले ते सांगितले.
ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.
28 २८ नंतर ते विश्वास ठेवणाऱ्यांबरोबर तेथे बरेच दिवस राहिले.
ಅವರು ಅಲ್ಲಿಯೇ ಶಿಷ್ಯರೊಂದಿಗೆ ಬಹುಕಾಲ ತಂಗಿದ್ದರು.

< प्रेषि. 14 >