< दानीएल 4 >

1 नबुखद्नेस्सर राजाने सर्व लोक राष्ट्र आणि पृथ्वीवरील सर्व भाषा बोलाणाऱ्या लोकात फर्मान पाठवले की, तुमचे कल्याण होवो.
ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!
2 सर्वोच्च देवाने जी चिन्हे आणि जे चमत्कार माझ्यासाठी केलेले तुम्हास सांगावे हे मला बरे वाटले आहे;
ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.
3 त्याची चिन्हे किती थोर, त्याचे चमत्कार किती अद्भूत, त्याचे राज्य हे सार्वकालीक राज्य आहे. त्याचे स्वामित्व पिढ्यानपिढ्या राहते.
ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.”
4 मी, नबुखद्नेस्सर, माझ्या घरात सुखाने राहत हातो आणि माझ्या महलात समृद्धीचा उपभोग घेत होतो.
“ನೆಬೂಕದ್ನೆಚ್ಚರನಾದ ನಾನು ನನ್ನ ಆಲಯದಲ್ಲಿ ಹಾಯಾಗಿದ್ದೆನು, ಹೌದು ನನ್ನ ಅರಮನೆಯಲ್ಲಿ ಸುಖವಾಗಿದ್ದೆನು.
5 मी स्वप्न पाहिले आणि घाबरलो मी त्यावेळी आपल्या पलंगावर पडलो होतो. त्या दृष्टांतामुळे माझे मन अधिर झाले.
ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.
6 म्हणून मी आज्ञा केली की, बाबेलातील सर्व ज्ञानी लोकांस मजकडे आणावे म्हणजे ते माझ्या स्वप्नाचा उलघडा करतील.
ಆದುದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರೆದುತರುವ ಹಾಗೆ ಆಜ್ಞಾಪಿಸಿದೆನು.
7 तेव्हा जादूगार, भुतविद्या करणारे, खास्दी आणि ज्योतिषी हे मजकडे आले. मी त्यांना स्वप्न सांगितले पण त्याचा उलघडा त्यांना होईना.
“ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.
8 शेवटी दानीएल आत आला, त्यास मी माझ्या देवाचे नाव बेल्टशस्सर दिले आहे. त्यास मी स्वप्न सांगितले.
ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು,
9 बेल्टशस्सरा, सर्व ज्ञान्यांच्या अधिकाऱ्या, मला ठाऊक आहे पवित्र देवाचा आत्मा तुझ्यामध्ये निवास करतो आणि तुला कोणतेही गुढ रहस्य अवघड नाही. मला पडलेल्या स्वप्नाचा अर्थ मला सांग.
‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.
10 १० मी माझ्या पलंगावर पडलो असता मला दिसले ते असे, मी पाहिले, पृथ्वीच्या मधोमध एक मोठा वृक्ष होता आणि त्याची उंची खूप मोठी होती.
೧೦ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ. ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು.
11 ११ तो वृक्ष वाढून मजबूत झाला त्याचा शेंडा आकाशात पोहचला आणि त्याचा देखावा सर्व पृथ्वीच्या सीमेपर्यंत पोहचला.
೧೧ಆ ವೃಕ್ಷವು ಬೆಳೆದು ಬಲಗೊಂಡಿತ್ತು, ಅದರ ತುದಿಯು ಆಕಾಶವನ್ನು ಮುಟ್ಟಿತ್ತು, ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.
12 १२ त्याची पाने सुंदर होती, त्यास भरपूर फळे असून ती सर्वांना खायला पुरेशी होती. वनपशु त्याच्या सावलीत आणि आकाशातील पक्षी त्याच्या फांद्यामध्ये राहत. तो वृक्ष सर्व जिवितांचे पोषण करीत असे.
೧೨ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಆದ್ದರಿಂದ ಎಲ್ಲಕ್ಕೂ ಆಹಾರ, ನೆರಳೂ, ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶ ಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.
13 १३ मी माझ्या बिछान्यात पडलो असता माझ्या मनात पाहिले आणि एक पवित्र देवदूत आकाशातून खाली उतरला.
೧೩ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ,
14 १४ तो मोठ्याने ओरडून म्हणाला हा वृक्ष तोडून टाका आणि त्याच्या फांद्या छाटून टाका, त्याची पाने काढून टाका आणि फळे विखरा, त्याच्या खाली राहणारे प्राणी पळून जावो आणि फांद्यांतील पाखरे उडून जावोत.
೧೪ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!
15 १५ पण त्याचा बुंधा जमिनीत राहू दया. त्यास लोखंड आणि पितळेच्या पट्टया बांधून, कुरणाच्या कोवळ्या गवतात राहू द्या. त्यास आकाशातील दहीवरात भिजू द्या, वनपशुंबरोबर त्यास भूमीवरील गवताचा वाटा मिळू द्या.
೧೫ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ; ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಭೂಮಿಯ ಹುಲ್ಲು ಮೃಗಗಳಿಗೆ ಗತಿಯಾದಂತೆ ಅದಕ್ಕೆ ಗತಿಯಾಗಲಿ.
16 १६ त्याचे मानवी हृदय जावून त्यास प्राण्याचे हृदय प्राप्त होवो, तो पर्यंत सात वर्षे होऊन जातील.
೧೬ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ.
17 १७ हा निर्णय त्या देवदुताच्या घोषणेद्वारे आणि पवित्रजनांच्या विचाराने झाला आहे, यासाठी की मनुष्याच्या राज्यात परात्पर प्रभुत्व करतो, आणि ज्या कोणाला ते द्यायला तो इच्छितो त्यास तो ते देतो, आणि त्यावर मनुष्यातल्या सर्वांहून नीच अशा मनुष्यास तो स्थापतो, असे जिवंतांनी जाणावे.
೧೭ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.
18 १८ हे स्वप्न मी नबुखद्नेस्सर राजाने पाहिले आता तू हे बेल्टशस्सरा ह्याचा अर्थ मला सांग कारण माझ्या राज्यातल्या ज्ञानी जनांपैकी कोणीही ह्याचा अर्थ सांगू शकत नाही, पण तू हे सांगू शकतोस, कारण देवाचा पवित्र आत्मा तुझ्याठायी राहतो.
೧೮ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.”
19 १९ मग दानीएल, ज्यास बेल्टशस्सर नाव देण्यात आले होते तो काही क्षणासाठी गोंधळून गेला आणि त्याचे मन अस्वस्थ झाले. राजा म्हणाला, “बेल्टशस्सर हे स्वप्न किंवा त्याच्या अर्थाने तू घाबरू नकोस.” तेव्हा बोलटशस्सर म्हणाला, “माझ्या स्वामी हे स्वप्न तुझा द्वेष करणाऱ्यास आणि याचा अर्थ तुझा शत्रुस लागू पडो.
೧೯ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!
20 २० जो वृक्ष तू पाहीला, जो वाढून मजबुत झाला आणि ज्याचा शेंडा आकाशात गेला ज्यास सर्व पृथ्वीवरून पाहता येत होते.
೨೦“ಯಾವ ವೃಕ್ಷವು ಬೆಳೆದು ಬಲಗೊಂಡು ಆಕಾಶದ ತುದಿಯನ್ನು ಮುಟ್ಟುತ್ತಾ,
21 २१ ज्यांची पाने सुंदर आणि फळे भरपूर असून ती सर्वांसाठी पुरेशी होती. त्याच्या सावलीत वनपशू राहत आणि फांद्यांमध्ये आकाशातील पक्षी राहत होते.
೨೧ಲೋಕದವರೆಲ್ಲರಿಗೂ ಕಾಣಿಸುತ್ತಾ, ಅಂದವಾದ ಎಲೆಗಳನ್ನೂ ಬಹಳ ಹಣ್ಣುಗಳನ್ನೂ ಬಿಡುತ್ತಾ, ಎಲ್ಲಕ್ಕೂ ಆಹಾರವನ್ನು ಒದಗಿಸುತ್ತಾ ತನ್ನ ನೆರಳನ್ನು ಭೂಜಂತುಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡುತ್ತಾ ಕನಸಿನಲ್ಲಿ ನಿನಗೆ ತೋರಿತೋ,
22 २२ हे राजा तो वृक्ष तू आहेस, तू वाढून बलवान झालास तुझी थोरवी आकाशापर्यंत पोचली आहे, तुझे अधिकार पृथ्वीच्या शेवटापर्यंत पोहचतात.
೨೨ಆ ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.
23 २३ हे राजा, तू एक स्वर्गदूत पाहिला जो स्वर्गातून खाली येवून म्हणाला, ‘हा वृक्ष तोडून ह्याचा नाश करा, पण त्यांचा बुंधा जमिनीत राहू दया, ह्याला लोखंड आणि पितळेच्या पट्टयांनी बांधून कुरणातल्या कोवळया गवतात राहू दया त्याने आकाशाचे दव भिजवो, तो सात वर्षे वनपशुसोबत राहो.’
೨೩“ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.
24 २४ हे राजा ह्याचा अर्थ, असा सर्वोच्च देवाचा हा आदेश आहे. जो माझ्या राजापर्यंत पोचला आहे.
೨೪“ರಾಜನೇ ಇದರ ತಾತ್ಪರ್ಯವೇನೆಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನಾದ ದೇವರ ತೀರ್ಪು ಹೀಗಿದೆ.
25 २५ तुला मनुष्यातून काढून टाकण्यात येईल, तुझी वस्ती वनपशुमध्ये होईल. तुला बैलासारखे गवत खावे लागेल. आकाशातील दवाने तू भिजशील, सात वर्षे जाईपर्यंत तू हे जानशील की, मानवावर देवाची सत्ता आहे.
೨೫ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.
26 २६ जसे सांगण्यात आले आहे की, त्या वृक्षाची बुंधे तशीच राहू दया, हयाच प्रकारे, जेव्हा तू स्वर्गाचे नियम शिकशील तुझे राज्य तुला पुन्हा प्राप्त होईल.
೨೬ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನೆಂದರೆ ಪರಲೋಕಕ್ಕೆ ಸರ್ವಾಧಿಕಾರ ಉಂಟೆಂಬುವುದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವುದು ಎಂಬುವುದೇ.
27 २७ म्हणून हे राजा माझी मसलत तुला मान्य असो, पाप सोडून योग्य ते कर, आपली दुष्टता सोडून जाचलेल्यावर दया कर. असे केल्यास तुझी समृध्दी जास्त दिवस राहील.”
೨೭ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.
28 २८ हे सर्व राजा नबुखद्नेस्सरासोबत बारा महिन्यात घडून आले तो बाबेलातील राजवाड्यात फिरत होता.
೨೮ಇದೆಲ್ಲಾ ರಾಜನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು.
29 २९
೨೯ಹನ್ನೆರಡು ತಿಂಗಳು ಕಳೆದನಂತರ ಅವನು ಬಾಬೆಲಿನ ಅರಮನೆಯ ಮಹಡಿಯ ಮೇಲೆ ತಿರುಗಾಡುತ್ತಾ,
30 ३० “काय ही महान बाबेल नगरी, जी मी माझ्या राज निवासासाठी आणि माझ्या गौरवासाठी बांधली.”
೩೦“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.
31 ३१ जेव्हा राजा हे बोलत होता. पाहा स्वर्गातून वाणी झाली, “राजा नबुखद्नेस्सरा, हे फर्मान ऐक, तुझ्या हातची राजसत्ता गेली आहे.
೩೧ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ, “ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು;
32 ३२ तुला लोकातून काढून टाकण्यात येईल तुझी वस्ती वनपशूत होईल तुला बैलांसारखे गवत खावे लागेल आणि मानवी राज्यावर देवाची सत्ता आहे, तो ते पाहिजे त्यांना देतो, हे तुला ज्ञान होईपर्यंत सात वर्षे जातील.”
೩೨ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.
33 ३३ हे फर्मान त्याच घटकेस नबुखद्नेस्सराचा विरोधात अमलात आले. त्यास मानसातून काढण्यात आले, त्याने बैलांसारखे गवत खाल्ले. त्याचे शरीर आकाशातल्या दवांनी भिजले त्याचे केस गरुडाच्या पिसाप्रमाणे वाढले आणि त्याची नखे पक्षाच्या नखांसारखी झाली.
೩೩ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.
34 ३४ या दिवसाच्या शेवटी मी नबुखद्नेस्सराने माझे डोळे आकाशाकडे लावले, माझी बुद्धीमत्ता मला परत मिळाली, मी सर्वोच्च देवाचे आभार मानले, जो सदाजिवी देव त्याचा मी सन्मान केला आणि त्याची थोरवी गाईली, कारण त्याचे प्रभूत्व कायमचे आणि त्याचे राज्य पिढ्यानपिढ्या राहणारे आहे.
೩೪ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.
35 ३५ भूतलावरील सर्व रहीवासी त्यास शुन्यवत आहेत. तो स्वर्गातील आपल्या सैन्याचे, भूतलावरील रहीवाश्यांचे पाहिजे ते करतो, कोणीही त्यास थांबवू शकत नाही किंवा विचारू शकत नाही की “तू हे का केले?”
೩೫ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.
36 ३६ त्याच समयी माझी बुध्दीमत्ता परत मिळाली माझे राजवैभव आणि प्रताप मला परत प्राप्त झाले मी माझ्या सिंहासनावर पुन्हा बसलो आणि मला मोठी थोरवी प्राप्त झाली.
೩೬ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.
37 ३७ आता मी, नबुखद्नेस्सर, स्वर्गीय राजास गौरव देवून त्याची खूप स्तुती करतो, कारण त्याची सर्व कामे सभ्यतेची आणि त्याचे मार्ग न्यायाचे आहेत. जे गर्वाने चालतात त्यास तो नम्र करतो.
೩೭ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.

< दानीएल 4 >