< दानीएल 7 >

1 बाबेलाचा राजा बेलशस्सर याच्या राज्याच्या पहिल्या वर्षी दानीएल आपल्या पलंगावर पडलेला असता त्यास स्वप्न पडले आणि दृष्टांत त्याच्या मनात फिरू लागले मग त्याने ते स्वप्न आणि त्यातील महत्वाच्या घटना लिहून काढत्या.
ಬಾಬಿಲೋನಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಕನಸನ್ನೂ, ದರ್ಶನಗಳನ್ನೂ ಕಂಡು, ತನ್ನ ಕನಸಿನ ತಾತ್ಪರ್ಯವನ್ನು ಬರೆದಿಟ್ಟನು.
2 दानीएलाने म्हटले, “रात्रीच्या माझ्या दृष्टांतात मी पाहीले स्वर्गातील चार वारे महासागरावर घोळत होते.
ದಾನಿಯೇಲನು, “ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿಯು ಮಹಾಸಾಗರವನ್ನು ಕಲಕುತ್ತಿದ್ದವು.
3 चार मोठी श्वापदे जी एकमेकांपासून वेगळी होती, अशी समुद्रातून बाहेर आली.
ಒಂದಕ್ಕೊಂದು ಬೇರೆ ಬೇರೆ ರೂಪದ ನಾಲ್ಕು ದೊಡ್ಡ ಮೃಗಗಳು ಸಮುದ್ರದೊಳಗಿಂದ ಮೇಲೆ ಬಂದವು.
4 पहिले सिंहासारखे असून त्यास गरुडाचे पंख होते. असा मी पाहत असता त्याचे पंख उपटून त्यास जमिनीवर मानवाप्रमाणे दोन पायावर उभे केले. त्यास मानवाचे हृदय देण्यात आले होते.
“ಮೊದಲನೆಯದು ಸಿಂಹದ ಹಾಗಿತ್ತು, ಆದರೆ ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ನಾನು ಗಮನಿಸಲು, ಅದರ ರೆಕ್ಕೆಗಳನ್ನು ಕಿತ್ತುಹಾಕಲಾಗಿ, ಅದು ನೆಲದಿಂದ ಎತ್ತರಕ್ಕೆ ಮನುಷ್ಯನಂತೆ ಕಾಲೂರಿ ನಿಂತಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲಾಯಿತು.
5 नंतर दुसरे श्वापद अस्वलासारखे होते त्याच्या दातामध्ये तिन फासोळया धरल्या होत्या. त्यास सांगण्यात आले ‘उठ, पुढे पुष्कळ मांस खा.’
“ಇದಲ್ಲದೆ, ಎರಡನೆಯ ಮೃಗವು ಕರಡಿಯ ಹಾಗಿರುವಂಥದ್ದನ್ನು ಕಂಡೆನು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿದ್ದವು. ಅದಕ್ಕೆ, ‘ಎದ್ದೇಳು, ಹೆಚ್ಚು ಮಾಂಸವನ್ನು ತಿನ್ನು,’ ಎಂದು ಹೇಳಿದರು.
6 त्यानंतर मी पुन्हा पाहीले तो आणखी एक श्वापद चित्त्याप्रमाणे होते त्याच्या पाठीवर पक्षासारखे चार पंख होते. आणि त्यास चार शिरे होती. त्यास राज्य करण्यासाठी आधिकार दिला होता.
“ಇದಾದ ಮೇಲೆ ನಾನು ನೋಡಲಾಗಿ, ಚಿರತೆಯ ಹಾಗಿರುವ ಇನ್ನೊಂದು ಮೃಗವಿತ್ತು. ಇದರ ಬೆನ್ನಿನ ಮೇಲೆ ಪಕ್ಷಿಯ ರೆಕ್ಕೆಗಳು ನಾಲ್ಕು ಇವೆ. ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇವೆ. ಇದಕ್ಕೆ ಆಳುವ ಅಧಿಕಾರವು ಕೊಡಲಾಗಿತ್ತು.
7 त्यानंतर मी रात्री माझ्या स्वप्नात चौथे श्वापद पाहीले, विक्राळ, भयानक आणि अतिशय मजबूत असे ते होते. त्यास मोठे लोखंडी दात होते, ते सर्व काही चावून त्याचा चुरा करी. आणि उरलेले पायाखाली तुडवी ते इतरांपेक्षा वेगळे होते. आणि त्यास दहा शिंगे होती.
“ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ, ನಾಲ್ಕನೆಯ ಮೃಗವು ಭಯಂಕರವೂ, ಘೋರವೂ, ಬಹು ಬಲವುಳ್ಳದ್ದೂ ಆಗಿತ್ತು. ಅದಕ್ಕೆ ದೊಡ್ಡ ಕಬ್ಬಿಣದ ಹಲ್ಲುಗಳು ಇವೆ. ಅದು ತಿಂದು ತುಂಡುತುಂಡು ಮಾಡಿ, ಮಿಕ್ಕದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದೂ, ಹತ್ತು ಕೊಂಬುಗಳುಳ್ಳದ್ದೂ ಆಗಿತ್ತು.
8 मी ती शिंगे पाहत असतांना, मग त्यांच्यातून आणखी लहान शिंगे निघाले आणि आधिच्या शिंगातून तीन मुळासह उपटली गेली मी पाहिले त्या शिंगास मानवासारखे डोळे होते आणि मोठ्या फुशारक्या मारणारे तोंड होते.
“ಆ ಕೊಂಬುಗಳ ಬಗ್ಗೆ ನಾನು ಆಲೋಚಿಸುತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿದೆ. ಇದರ ಮುಂದೆ ಮೊದಲಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ, ಬಡಾಯಿ ಕೊಚ್ಚುವ ಬಾಯಿಯೂ ಇದ್ದವು.
9 मी पाहत होतो तेव्हा, आसने मांडण्यात आली; आणि एक पुराणपुरूष आसनावर बसला. त्याची वस्त्रे हिमाप्रमाणे शुभ्र होती आणि त्याचे केस लोकरीसारखे स्वच्छ होते. त्याचे आसन आग्नीज्वाला होते. आणि त्याची चाके जळणारा अग्नी होते.
“ನಾನು ನೋಡುತ್ತಿದ್ದ ಹಾಗೆಯೇ, “ಸಿಂಹಾಸನಗಳನ್ನು ಜೋಡಿಸಿದರು. ಅದರ ಮೇಲೆ ಪುರಾತನ ಮನುಷ್ಯನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ, ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ, ಆತನ ಸಿಂಹಾಸನವು ಅಗ್ನಿ ಜ್ವಾಲೆಯಂತೆಯೂ, ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
10 १० त्याच्या समोर अग्नीची नदी वाहत होती, हजारो लोक त्याची सेवा करीत होते, लाखो लोक समोर उभे होते, न्यायसभा चालू होती आणि पुस्तके उघडी होती.
ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.
11 ११ मी सतत त्याकडे पाहत होतो कारण ते लहान शिंग फुशारकी मारत होते. मी पाहत असता त्या श्वापदाचा वध करण्यात आला त्याच्या शरीराचे तूकडे करून ते जाळण्यास देण्यात आले.
“ನಾನು ನೋಡುತ್ತಿರಲು, ಆ ಕೊಂಬು ಬಡಾಯಿಕೊಚ್ಚಿಕೊಂಡದ್ದರಿಂದ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.
12 १२ इतर चार श्वापदाचे प्राण हरण करून त्यांना काही काळ जिवंत ठेवण्यात आले.
ಮಿಕ್ಕ ಮೃಗಗಳನ್ನು ಅವುಗಳ ಅಧಿಕಾರದಿಂದ ಹೊರಹಾಕಲಾಯಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವವರೆಗೂ ಅವುಗಳ ಜೀವವನ್ನು ಉಳಿಸಿದರು.
13 १३ त्या रात्रीच्या माझ्या दृष्टांतात मी पाहिले, आकाशातील मेघावर स्वार होऊन कोणी मानवपूत्रासारखा येताना मी पाहिला तो पुराणपुरूषाकडे आला व त्यास त्याने जवळ केले.
“ನಾನು ಕಂಡ ರಾತ್ರಿಯ ದರ್ಶನದಲ್ಲಿ ಮನುಷ್ಯಪುತ್ರನಂತಿರುವವನು ಆಕಾಶದ ಮೇಘಗಳ ಸಂಗಡ ಪುರಾತನ ಮನುಷ್ಯನ ಬಳಿಗೆ ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.
14 १४ आणि त्यास प्रभुत्व व वैभव व राज्य दिले, ते असे की, सर्व लोक, राष्ट्रे व भाषा यांनी त्याची सेवा करावी; त्याचे प्रभुत्व सनातन प्रभुत्व आहे, ते टळून जायचे नाही, आणि जे नष्ट व्हायचे नाही असे त्याचे राज्य आहे.
ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ.
15 १५ मग मज दानीएलचा जीव घाबरा झाला. मला झालेल्या दृष्टांतामुळे माझे मन विचलीत झाले.
“ದಾನಿಯೇಲನೆಂಬ ನಾನು ನನ್ನ ಆತ್ಮದಲ್ಲಿ ನೊಂದುಕೊಂಡೆನು. ನನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳ ನಿಮಿತ್ತ ಕಳವಳಗೊಂಡೆನು.
16 १६ सिंहासनाच्या जवळ उभे असणाऱ्यांपैकी एकाकडे मी गेलो व या सर्व गोष्टींचा अर्थ त्यास विचारला. तेव्हा त्याने मला सर्व गोष्टीचा अर्थ समजावून सांगितला.
ನಾನು ಹತ್ತಿರ ನಿಂತವರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥವನ್ನು ಕೇಳಿದೆನು. “ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.
17 १७ ती मोठी चार श्वापदे म्हणजे पृथ्वीवर उदयास येणारे चार राजे आहेत.
‘ಈ ದೊಡ್ಡ ಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸರು.
18 १८ पण सर्वोच्च देवाच्या संतांना राज्य प्राप्त होईल, ते युगानयुग त्यांच्या ताब्यात राहील.
ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’
19 १९ नंतर मला त्या चौथ्या श्वापदा विषयी बोलण्याची इच्छा झाली, जे इतरांपेक्षा वेगळे होते. त्याचे दात लोखंडाचे भयंकर असे होते आणि त्याची नखे पितळेची होती, ते चावून चुरा करी. आणि उरलेले जे होते त्याचे पायाखाली तूकडे करी.
“ಆಮೇಲೆ ನಾಲ್ಕನೆಯ ಮೃಗವು ಎಲ್ಲದರಲ್ಲಿ ವ್ಯತ್ಯಾಸವಾಗಿಯೂ, ಅತಿ ಭಯಂಕರವಾಗಿಯೂ, ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ, ಕಂಚಿನ ಉಗುರುಗಳುಳ್ಳದ್ದಾಗಿಯೂ ತುಂಡುತುಂಡು ಮಾಡಿ, ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥದ್ದೂ ಆಗಿದೆ.
20 २० मला त्याची दहा शिंगे आणि त्याचे गुढ जाणायचे होते जी त्याच्या डोक्यावर होती. एक शिंग त्यामध्ये आणखी निघाले त्यामुळे तीन शिंगे तूटून पडली त्या शिंगाला डोळे असून तोंड होते त्यातून ते मोठमोठ्या गोष्टी बोलत होते. त्या शिंगाची जाडी इतरांपेक्षा जास्त होती. या सगळ्यांचा अर्थ काय म्हणून मी इच्छा दर्शविली.
ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ, ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲಿಯೇ ಕಣ್ಣುಳ್ಳದ್ದಾಗಿ ಬಡಾಯಿ ಮಾತನಾಡಿದ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇದ್ದ ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನು ತಿಳಿಯಬೇಕೆಂದಿದ್ದೇನೆ.
21 २१ मी पाहिले त्या शिंगाने पवित्र जनांविरोधात युध्द करून त्यांच्यावर विजय मिळवला.
ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧ ಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು.
22 २२ आणि पुराणपुरूष येईपर्यंत ते त्यांच्यावर प्रबळ होत गेले. मग परात्पर देवाच्या पवित्र जनांस न्याय दिला, राज्य आपल्या मालकीचे करून घेतले, असा समय आला.
ಪುರಾತನ ಮನುಷ್ಯನು ಬಂದು ಮಹೋನ್ನತನ ಪರಿಶುದ್ಧರಿಗೆ ನ್ಯಾಯತೀರ್ಪು ಕೊಡುವವರೆಗೂ, ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದವರೆಗೂ ಅವರ ಮೇಲೆ ಜಯವನ್ನು ಹೊಂದಿತು.
23 २३ त्याने सांगितले चौथे श्वापद हे पृथ्वीवर चौथे राज्य होईल; हे इतर राज्यांपेक्षा वेगळे राहील ते सर्व पृथ्वीला ग्रासून टाकील, आणि तिचे पायाखाली तूकडे करीन.
“ಆಗ ಅವನು ನನಗೆ: ‘ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗುವುದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ, ಭೂಮಿಯನ್ನೆಲ್ಲಾ ತುಳಿದು ತುಂಡುತುಂಡು ಮಾಡುವಂಥಾದ್ದಾಗಿಯೂ ಇರುವುದು.
24 २४ आता दहा शिंगाविषयी या राज्यातून दहा राजांचा उदय होईल; आणि त्यातून आणखी एक राजा निघेल. तो राजा वेगळा असेल आणि तो तीन राजांना पादाक्रांत करील.
ಆ ಹತ್ತು ಕೊಂಬುಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸರು. ಅನಂತರ ಇನ್ನೊಬ್ಬ ಅರಸನು ಹುಟ್ಟುವನು. ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.
25 २५ तो सर्वोच्च देवाच्या विरोधात बोलेल, आणि देवाच्या पवित्र जनांचा छळ करील नेमलेले सण आणि नियम बदलण्याचा तो प्रयत्न करील. या सर्व गोष्टी त्याच्या हातात तिन वर्षे आणि सहा महिण्यासाठी दिल्या जातील.
ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು.
26 २६ पण तिथे न्यायसभा होईल, आणि त्याचे राजकीय सामर्थ्य परत घेण्यात येतील. त्याचा नाश होऊन कायमचा नष्ट करण्यात येईल.
“‘ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯವರೆಗೂ ಅದನ್ನು ಸಂಹರಿಸಿ ನಾಶಪಡಿಸುವುದು.
27 २७ राज्य, प्रभूत्व आणि अखिल पृथ्वीवरचे वैभव सर्वोच्च देवाच्या पवित्र जनांना देण्यात येईल. त्याचे राज्य अनंतकालचे आहे; आणि इतर त्याची सेवा करून त्याचे आज्ञापालन करतील.”
ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’
28 २८ या गोष्टींचा उलगडा इथे संपतो. मी दानीएल या विचारांनी व्याकूळ झालो. माझे तोंड उतरले; पण मी या सर्व गोष्टी मनात ठेवल्या.
“ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು. ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿದವು. ನನ್ನ ಮುಖವು ಕಳೆಗುಂದಿತು. ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.”

< दानीएल 7 >