< अनुवाद 26 >
1 १ तुमचा देव परमेश्वर तुम्हास देणार असलेल्या प्रदेशात पाऊल टाकून तेथील जमिनीचा ताबा घेऊन, तेथे वस्ती कराल.
೧ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವನ್ನು ನೀವು ಸೇರಿ, ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ,
2 २ तेथील परमेश्वराने दिलेल्या शेतजमिनीचे सर्व प्रथम उत्पन्न गोळा करून घरी आणाल. तेव्हा पहिले पीक टोपल्यात भरुन त्या घेऊन तुमचा देव परमेश्वर ह्याने निवडलेल्या त्याच्या पवित्र निवासस्थानी जा.
೨ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.
3 ३ व त्यावेळी जो याजक असेल त्याच्याकडे जाऊन सांगा की “परमेश्वराने आमच्या पूर्वजांनी आम्हांला शपथपुर्वक जो देश देण्याचे वचन दिले होते. त्यामध्ये मी पोहोंचलो आहे,”
೩ನೀವು ಅದನ್ನು ತೆಗೆದುಕೊಂಡುಹೋಗಿ ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ, “ಯೆಹೋವನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಾವು ಸೇರಿದ್ದಾಯಿತೆಂದು ನೀನು ಸೇವಿಸುವ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾವು ಈಗ ಒಪ್ಪಿಕೊಂಡಿದ್ದೇವೆ” ಎಂದು ಹೇಳಬೇಕು.
4 ४ मग तो याजक तुमच्या हातून ती टोपली घेईल. तुमचा देव परमेश्वर ह्याच्या वेदीसमोर तो ती खाली ठेवील.
೪ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮುಂದೆ ಇಡುವನು.
5 ५ तेव्हा तुम्ही तुमचा देव परमेश्वर ह्यासमोर असे म्हणावे, “आमचा पूर्वज हा भटकणारा अरामी होता, तो खाली मिसरमध्ये जाऊन राहिला. तिथे पोहोंचला तेव्हा त्याचा परिवार लहान होता. पण मिसरमध्ये त्याचे महान व सामर्थ्यशाली राष्ट्र बनले.
೫ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.
6 ६ तेथे मिसरी लोकांनी आम्हास वाईट वागणूक दिली. आम्हास गुलाम बनवले. जबरदस्तीने कष्टाच्या कामाला जुंपले व छळ केला.
೬ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.
7 ७ मग आम्ही परमेश्वर जो आमच्या पूर्वजांचा देव ह्याचा धावा केला. त्यांच्या बद्दलची गाऱ्हाणी सांगितली. परमेश्वराने आमचे ऐकले. त्याने आमचा त्रास, आमचे कष्ट आणि छळ त्याने पाहिले.
೭ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ, ನಮ್ಮ ದುರವಸ್ಥೆಯನ್ನೂ, ಕಷ್ಟವನ್ನೂ ಮತ್ತು ಉಪದ್ರವವನ್ನೂ ನೋಡಿದನು.
8 ८ मग परमेश्वराने आपल्या प्रचंड सामर्थ्याने आम्हास मिसरमधून बाहेर आणले. तेव्हा त्याने मोठ्या भयानकपणाने चमत्कार व चिन्ह प्रताप दाखवले आणि उत्पात घडवले.
೮ಆತನು ತನ್ನ ಭುಜಬಲವನ್ನೂ, ಶಿಕ್ಷಾಹಸ್ತವನ್ನೂ, ಮಹಾಭೀತಿಗಳನ್ನೂ, ಮಹತ್ಕಾರ್ಯಗಳನ್ನೂ ಮತ್ತು ಸೂಚಕಕಾರ್ಯಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದನು.
9 ९ आणि येथे आम्हास आणून ही दुधामधाचे पाट वाहणारी भूमी आम्हास दिली.
೯ಅವನು ನಮ್ಮನ್ನು ಐಗುಪ್ತದೇಶದಿಂದ ಕರೆತಂದು ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ.
10 १० आता हे परमेश्वरा, त्या भूमीतील पहिले उत्पन्न आम्ही आणले आहे.” मग तो उत्पन्नाचा वाटा परमेश्वरासमोर ठेवून परमेश्वरास वंदन करा.
೧೦ಆದುದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ, ಅದನ್ನು ಸ್ವೀಕರಿಸಬೇಕು” ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು.
11 ११ त्यानंतर सर्वजण एकत्र भोजन करा. तुम्हास व तुमच्या कुटुंबियांना तुमचा देव परमेश्वर ह्याच्या कृपेने जे जे चांगले मिळाले त्याबद्दल आनंद व्यक्त करा. यामध्ये लेवी आणि गावातील परकीय यांनाही सामील करून घ्या.
೧೧ಆತನು ನಿಮಗೂ ಮತ್ತು ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ, ಲೇವಿಯರೂ ಮತ್ತು ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.
12 १२ प्रत्येक तिसरे वर्ष हे दशांश देण्याचे वर्ष होय. यावर्षी आपल्या उत्पन्नाचा दहावा हिस्सा लेवी, गावातील परकीय विधवा अनाथ यांना द्या म्हणजे तेही तुझ्या गावात तृप्त होतील.
೧೨ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.
13 १३ यावेळी तुमचा देव परमेश्वर ह्याला सांगा की “माझ्या घरातून मी हा उत्पन्नाचा पवित्र हिस्सा आणला आहे. लेवी, परकीय, विधवा, अनाथ या सर्वांना द्यायचे ते मी दिले आहे. तुझ्या सर्व आज्ञांचे न चुकता पालन केले आहे. कोणत्याही आज्ञेचे उल्लंघन केलेले नाही.
೧೩ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ನಾವು ಪ್ರತ್ಯೇಕಿಸಿದ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದಿದ್ದೇವೆ. ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರು, ಪರದೇಶಿಗಳು, ಅನಾಥರು, ವಿಧವೆಯರು ಇಂಥವರಿಗೆ ಕೊಟ್ಟಿದ್ದೇವೆ ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ ಮತ್ತು ಮರೆಯಲೂ ಇಲ್ಲ.
14 १४ मी दु: खी मन: स्थितीत यातील काही खाल्लेले नाही. तसेच अशुद्ध असताना यातील काही खाल्लेले नाही. मृतांना यातील काही अर्पण केले नाही. मी आपला देव परमेश्वर याचे ऐकले आहे. तुझ्या आज्ञांप्रमाणे वागलो आहे.
೧೪ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.
15 १५ आता तू तुझ्या पवित्र निवासस्थानातून, स्वर्गातून आम्हा इस्राएल लोकांस आशीर्वाद दे. आम्हास दिलेल्या भूमीला आशीर्वाद दे. ही दुधामधाची रेलचेल असलेली भूमी आम्हास द्यायचे तू आमच्या पूर्वजांना कबूल केले होतेस.”
೧೫ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ” ಎಂದು ಹೇಳಬೇಕು.
16 १६ “तुम्ही हे सर्व नियम व विधी पाळावे अशी तुमचा देव परमेश्वर ह्याची तुम्हास आज आज्ञा आहे. ते सर्व तुम्ही मन: पूर्वक पाळा.
೧೬ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಆಜ್ಞಾಪಿಸಿದ್ದಾನೆ. ಆದುದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.
17 १७ परमेश्वर हाच तुमचा देव असे आज तुम्ही म्हणाला आहात. त्याच्या मार्गाने चालायचे तुम्ही मान्य केले आहे. त्याच्या शिकवणीनुसार वागायचे त्याचे नियम व आज्ञा पाळायचे तुम्ही वचन दिले आहे. तो जे जे सांगेल त्याप्रमाणे आचरण ठेवायचे तुम्ही कबूल केले आहे.
೧೭ನಮಗೆ ಯೆಹೋವನೇ ದೇವರಾಗಿರುವನೆಂದೂ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿಯಮಗಳನ್ನು ಕೈಕೊಂಡು, ಆತನ ಮಾತಿಗೆ ಲಕ್ಷ್ಯವಿಡುವೆವು ಎಂದು ನೀವು ಈಗ ಒಡಂಬಟ್ಟಿದ್ದೀರಿ.
18 १८ परमेश्वराने आज तुम्हास पूर्वी सांगितल्याप्रमाणे आपली खास प्रजा म्हणून आपलेसे केले आहे. माझ्या सर्व आज्ञा पाळाव्या असेही तुम्हास त्याने सांगितले आहे.
೧೮ಯೆಹೋವನೋ ನಿಮ್ಮ ವಿಷಯದಲ್ಲಿ, “ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ
19 १९ इतर सर्व राष्ट्रापेक्षा तो तुम्हास महान करणार आहे. तो तुम्हास प्रशंसा, नावलौकिक, सन्मान बहाल करील. आणि त्याच्याच सांगण्याप्रमाणे तुम्ही परमेश्वर आपला देव ह्याची पवित्र प्रजा व्हाल.”
೧೯ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.