< यहेज्केल 17 >
1 १ परमेश्वराचा शब्द माझ्याकडे आला आणि म्हणाला,
ಯೆಹೋವ ದೇವರ ವಾಕ್ಯವು ನನಗೆ ಬಂದಿತು,
2 २ मानवाच्या मुला, इस्राएलाच्या घराण्याला कोडे सांग आणि दाखला सांग.
“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನ್ನು ಒಗಟಾಗಿ ಹೇಳು.
3 ३ सांग की परमेश्वर देव तुम्हास सांगत आहे, एक मोठा गरुड मोठ्या पंखासह आणि लांब दातेरी चाकासह व पिसाऱ्याने परिपूर्ण आणि ते बहुरंगी आहेत ते लबानोन पर्वतावर गेला व त्यांने गंधसरुची फांदी मोडून टाकली.
ಅವರಿಗೆ ಹೇಳತಕ್ಕದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಶಕ್ತಿಶಾಲಿ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ಮತ್ತು ವಿಧವಿಧವಾದ ಬಣ್ಣಬಣ್ಣದ ಪುಕ್ಕಗಳಿಂದ ತುಂಬಿದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಕೊಂಬೆಯನ್ನು ಹಿಡಿದು,
4 ४ त्यांच्या फांदीचा शेंडा मोडून टाकला आणि त्यास कनानात घेऊन गेला, त्यास व्यापाऱ्यांच्या शहरात लावले.
ಅದರ ಚಿಗುರುಗಳ ಕೊನೆಯನ್ನು ಕಿತ್ತು, ವ್ಯಾಪಾರದ ದೇಶಕ್ಕೆ ತೆಗೆದುಕೊಂಡುಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.
5 ५ त्याने त्यातले काही बीज घेतले आणि पेरणी करण्यासाठी तयार भूमीत जेथे विपुल पाणी होते तेथे वाळुंजासारखे लावले.
“‘ಅದು ದೇಶದ ಬೀಜವನ್ನೂ ಸಹ ತೆಗೆದುಕೊಂಡುಹೋಗಿ ಫಲವತ್ತಾದ ಭೂಮಿಯಲ್ಲಿ ಇರಿಸಿತು. ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿತು.
6 ६ मग त्याची वाढ होऊन द्राक्षाच्या झाडाच्या फांद्या पसरल्या व गरुडाकडे झुकल्या आणि त्याचे मुळ त्याकडे वाढ झालेले होते.
ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷಿಗಿಡವಾಯಿತು. ಅದರ ರೆಂಬೆಗಳು ಅವನ ಕಡೆಗೆ ತಿರುಗಿಕೊಂಡವು. ಅದರ ಬೇರುಗಳು ಅದರ ಕೆಳಗಿದ್ದವು. ಹೀಗೆ ಅದು ದ್ರಾಕ್ಷಿಗಿಡವಾಯಿತು. ಕೊಂಬೆಗಳು ಹುಟ್ಟಿಕೊಂಡು ಬಳ್ಳಿಗಳು ಹಬ್ಬಿದವು.
7 ७ पण तेथे अजून एक मोठा गरुड असून मोठे पंख आणि पिसारा असलेला होता आणि पाहा! या द्राक्षलता गरुडाकडे झुकलेली असून व त्यांच्या फांद्याही गरुडाकडे पसरलेल्या होत्या, त्यास रोपन केल्या पासून त्यास विपुल पाणी घातले होते.
“‘ಶಕ್ತಿಶಾಲಿ ರೆಕ್ಕೆಗಳೂ, ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು. ಆಗ ಆ ದ್ರಾಕ್ಷಿ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅವನ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅವನ ಮೂಲಕ ನೀರನ್ನು ಪಡೆಯುತ್ತಿತ್ತು.
8 ८ त्यास सुपीक जमीनीत विपुल पाण्याजवळ रोपण केलेले होते त्यामुळे त्यांच्या फांद्या बहरल्या आणि ते फलदायी झाले, त्यातून उत्तम दर्जाची द्राक्ष आली.
ಅದು ಕೊಂಬೆಗಳನ್ನು ಬೆಳೆಸಿ ಫಲಕೊಡುವ ಹಾಗೆಯೂ, ಒಳ್ಳೆಯ ದ್ರಾಕ್ಷಿಗಿಡ ಆಗುವ ಹಾಗೆಯೂ, ಒಳ್ಳೆಯ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲಾಗಿತ್ತು.’
9 ९ हे घडेल का? लोकांस असे सांगा परमेश्वर देव हे म्हणतो; त्याचे मुळ उपटून टाकू नका; आणि त्याची फळे तोडू नका, त्यांची वाढ सुकून जाईल; कोणतेही बाहूबल कोणताही जनसमुदाय त्यास उपटून टाकणार नाही.
“ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮೃದ್ಧಿಯಾಗಿರುವುದೋ? ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ, ಅದು ಒಣಗುವುದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿ ಹೋದಾಗ, ಅದನ್ನು ಬೇರುಸಹಿತ ಕೀಳಬೇಕಾದರೆ ಮಹಾಬಲವಾಗಲಿ ಅಥವಾ ಬಹಳ ಜನರಾಗಲಿ ಇರಬೇಕಿಲ್ಲ.
10 १० मग पाहा! त्यास रोपन केल्यावर त्याची वाढ होईल, ते सुकून जाणार नाही? जेव्हा पूर्वेकडील वारा त्यास स्पर्श करेल? ते आपल्या जागेत पूर्ण वाळून जाईल.
ಹೌದು, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವುದೇ? ಅದಕ್ಕೆ ಪೂರ್ವದಿಕ್ಕಿನ ಗಾಳಿ ಬಡಿಯುವಾಗ ಅದು ಸಂಪೂರ್ಣವಾಗಿ ಒಣಗುವುದಿಲ್ಲವೇ? ಅದು ಮೊಳೆತ ಪಾತಿಗಳಲ್ಲಿಯೇ ಒಣಗಿ ಹೋಗುವುದಿಲ್ಲವೇ?’”
11 ११ मग परमेश्वर देवाचा शब्द माझ्याकडे आला आणि म्हणाला
ಯೆಹೋವ ದೇವರ ವಾಕ್ಯವು ನನಗೆ ಬಂದಿತು,
12 १२ बंडखोर घराण्याशी बोल या गोष्टी काय आहे ते तुला माहित नाही का? पाहा! बाबेलचा राजा यरूशलेमकडे येईल त्यांचा राजा आणि राज पुत्राला घेऊन, बाबेलात जाईल.
“‘ಇದರ ಅಭಿಪ್ರಾಯ ನಿಮಗೆ ತಿಳಿಯುವುದಿಲ್ಲವೋ?’ ಎಂದು ತಿರುಗಿಬೀಳುವ ಮನೆಯವರಿಗೆ ಹೇಳು ಮತ್ತು ಅವರಿಗೆ, ‘ಇಗೋ, ಬಾಬಿಲೋನಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸನನ್ನೂ, ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಒಯ್ದಿದ್ದಾನೆ.
13 १३ मग राजवंशाला घेऊन जाईल, त्याच्याशी करार करेल आणि त्यांना शपथेखाली घेऊन येईल. आणि भूमीतील बलवानांना सोबत घेऊन जाईल.
ಅರಸನ ಸಂತಾನದವರನ್ನು ಕರೆದುಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿ, ಅವನಿಂದ ಪ್ರಮಾಣ ಮಾಡಿಸಿ, ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
14 १४ मग राज्य रसातळाला जाईल मग उच्च पातळी गाठणार नाही, त्याचा करार मान्य करुनच भूमीवर वावरता येईल.
ಆ ರಾಜ್ಯವು ಮೇಲೇಳದ ಹಾಗಿದ್ದರೂ, ಅವನು ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು.
15 १५ पण मिसऱ्यांनी त्यास घोडे व बहुत लोक द्यावेत म्हणून तो आपला राजदुत पाठवून त्याजविरूद्ध बंड करेल तो यशस्वी होईल का? या गोष्टी करणाऱ्याची सुटका होईल का? जर तो कराराचे उल्लंघन करेल, त्याची सुटका होईल का?
ಆದರೆ ಅರಸನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು, ತನ್ನ ರಾಯಭಾರಿಗಳನ್ನು ಈಜಿಪ್ಟಿಗೆ ಕಳುಹಿಸಿ, ತನಗೆ ಕುದುರೆಗಳನ್ನೂ, ಬಹಳ ಜನರನ್ನೂ ಕೊಡಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿಯಾಗುವನೋ? ಇಂತಹ ಸಂಗತಿಗಳನ್ನು ಮಾಡುವವನು ತಪ್ಪಿಸಿಕೊಳ್ಳುವನೋ ಅಥವಾ ಒಡಂಬಡಿಕೆಯನ್ನು ಮುರಿದು ತಪ್ಪಿಸಿಕೊಳ್ಳಲಾಗುವುದೋ?
16 १६ माझ्या जीवताची शपथ असे परमेश्वर देव जाहीर करतो तो निश्चित राज्याच्या भूमीत मरेल ज्याने त्यास राजा केले, ज्या राजाने करार केला ज्याने त्यास तुच्छ लेखून करार मोडला. तो बाबेलाच्या मध्यवर्ती ठिकाणी मरेल.
“‘ನಿಶ್ಚಯವಾಗಿ ಯಾವನಿಂದ ಅರಸನಾಗಿ ಆಯ್ಕೆಗೊಂಡನೋ ಎಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ನನ್ನ ಜೀವದಾಣೆ ಅವನು ಇರುವಲ್ಲಿಯೇ ಬಾಬಿಲೋನಿನ ಮಧ್ಯದಲ್ಲಿ ಇವನು ಸಾಯುವನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
17 १७ फारो आपल्या पराक्रमी बाहूबलाने अनेक लोकांस जमवेल युध्दाने त्याचा बचाव होणार नाही, जेव्हा बाबेलाच्या पर्वतावर वेढा बुरुज बांधतील आणि अनेकांचा धुव्वा उडवण्यासाठी ते बुरुज पाडून टाकतील.
ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನೂ, ಕೋಟೆಗಳನ್ನೂ ಕಟ್ಟಿದರೂ ಯುದ್ಧದಲ್ಲಿ ಅವನಿಗೆ ಏನೂ ಪ್ರಯೋಜನವಾಗುವುದಿಲ್ಲ.
18 १८ करार मोडून राजाने शपथेला तुच्छ लेखले, पाहा! तो आपल्या हाताने वचनप्राप्ती करेल, पण त्याने जे केले त्यासाठी तो निभावणार नाही.
ಅವನು ಒಡಂಬಡಿಕೆಯನ್ನು ಮುರಿದು, ಪ್ರಮಾಣ ವಚನವನ್ನು ತಿರಸ್ಕರಿಸಿದನು. ಅವನು ಒಡಂಬಡಿಕೆಯಲ್ಲಿ ತನ್ನ ಹಸ್ತವನ್ನಿಟ್ಟಿದ್ದರೂ ಈ ಎಲ್ಲಾ ಸಂಗತಿಗಳನ್ನು ಮಾಡಿದ್ದರಿಂದ ಅವನು ತಪ್ಪಿಸಿಕೊಳ್ಳಲಾರನು.
19 १९ यास्तव परमेश्वर देव असे सांगतो जसे मी शपथेने म्हणतो, त्याने करार मोडला आणि तुच्छ लेखले? म्हणून मी त्याच्या माथी शासन आणिन;
“‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ ನಿಶ್ಚಯವಾಗಿ ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ, ಅವನು ಮೀರಿದ ಒಡಂಬಡಿಕೆಯನ್ನೂ ಅವನ ತಲೆಯ ಮೇಲೆಯೇ ಹೊರಿಸುವೆನು.
20 २० मी आपले पाश त्याच्यावर टाकीन, त्यास पारध म्हणून पकडेन, मग त्यास बाबेलात नेईन आणि शासन अमलात आणिन जेव्हा त्यांनी देशद्रोह केला व माझ्याशी विश्वासघात केला.
ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ. ಆಗ ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಬಾಬಿಲೋನಿಗೆ ಕರೆತಂದಿದ್ದೇನೆ ಮತ್ತು ಅವನು ನನಗೆ ನಂಬಿಕೆದ್ರೋಹ ಮಾಡಿದ ಕಾರಣ ಅಲ್ಲಿ ಅವನಿಗೆ ನ್ಯಾಯತೀರ್ಪು ವಿಧಿಸುತ್ತೇನೆ.
21 २१ आणि त्याच्या बाहूबलाचे सर्व शरणस्थान तलवारीने मोडले गेले, आणि जे उरलेले सर्व दिशेने विखुरले गेले आहे, मग तुला कळेल मी परमेश्वर देव आहे, मी जे बोलले ते घडेल.
ಅವನ ಸೈನ್ಯಗಳೆಲ್ಲಾ ಖಡ್ಗದಿಂದ ಬೀಳುವುದು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಹೋಗುವರು. ಆಗ ಯೆಹೋವ ದೇವರಾದ ನಾನೇ ಅದನ್ನು ಹೇಳಿದೆನೆಂದು ನಿಮಗೆ ತಿಳಿಯುವುದು.
22 २२ परमेश्वर देव हे म्हणतो, मग मी स्वतःला देवदार झाडाच्या उच्च ठिकाणी घेऊन जाईल आणि मी त्यांचे रोपन करेल व त्यांच्या फांद्या तोडल्या जातील व मी स्वतःला उच्चस्थानी स्थापील.
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು. ಇದರ ತುದಿಯಲ್ಲಿರುವ ಎಳೆಯದಾದ ಕೊಂಬೆಯನ್ನು ಕತ್ತರಿಸಿ, ಎತ್ತರವಾದ ಪರ್ವತದ ಮೇಲೆ ನಾಟುವೆನು.
23 २३ मी त्यांना इस्राएलाच्या पर्वतावर रोपन करेल व त्यांना फांद्या, फळे येतील आणि ते देवदार झाडाचे उदात्त होतील म्हणून पंखाचे पक्षी त्याखाली राहतील, ते त्यांच्या फांद्यांमध्ये घरटे करतील.
ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು. ಅದು ಕೊಂಬೆಗಳಲ್ಲಿ ಹುಟ್ಟಿಕೊಂಡು ಫಲಫಲಿಸುವುದು; ಸೊಂಪಾದ ದೇವದಾರು ಆಗುವುದು. ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಗಳೂ, ಅದರ ಕೊಂಬೆಗಳ ನೆರಳಿನ ಕೆಳಗೆ ವಾಸಮಾಡುವುವು.
24 २४ मग सर्व झाडाच्या पक्षांना कळेल की मी परमेश्वर देव आहे, मी उच्च झाड खाली आणेन; मी लहान झाडाला उच्च करीन, मी सुकलेल्या झाडाला पाणी देईन; कारण मी त्यांच्यावर वारा वाहून वाळवले आहे. मी परमेश्वर देव आहे, मी जे जाहीर केले आहे ते घडेल.
ಯೆಹೋವ ದೇವರಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರ ಪಡಿಸಿ, ಹಸುರಾಗಿರುವುದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ, ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವುದು. “‘ಯೆಹೋವ ದೇವರಾದ ನಾನೇ ಮಾತನಾಡಿ, ಅದನ್ನು ನಡೆಸಿದ್ದೇನೆ.’”