< यहेज्केल 24 >
1 १ बाबेलातील बंदिवासाच्या नवव्या वर्षी पुन्हा परमेश्वर देवाचा शब्द माझ्याकडे आला, दहाव्या महिन्याच्या दहाव्या दिवशी म्हणाला,
ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:
2 २ “मानवाच्या मुला, तुझ्यासाठी आजचा दिवस आणि तारीख लिहून ठेव, याच दिवशी बाबेलचा राजा येऊन यरूशलेमेला वेढा देईल.
“ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ. ಅದೇ ದಿನದಲ್ಲಿ ಬಾಬಿಲೋನಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.
3 ३ आणि या फितुर घराण्या विरुध्द म्हणी बोल, दाखले देऊन सांग, प्रभू परमेश्वर देव असे सांगत आहे. एक जेवण शिजवण्याचे भांडे घे व त्यामध्ये पाणी ओत.
ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಟ್ಟು ಅದರಲ್ಲಿ ನೀರನ್ನು ಸುರಿ.
4 ४ मांडी व खांद्याचे तुकडे, अन्नांचे तुकडे त्यामध्ये गोळा कर, त्यामध्ये हाडे टाकून भरणा कर.
ಮಾಂಸದ ತುಂಡುಗಳನ್ನೂ ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೆಯ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆಯ ಎಲುಬುಗಳ ಜೊತೆ ಅದನ್ನು ತುಂಬಿಸು.
5 ५ कळपातले चांगले कोकरु घे, हाडे शिजवण्यासाठी खाली लाकडांचा जाळ कर, त्यांना चांगले शिजू दे त्यातील हाडांनाही शिजू दे.
ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.
6 ६ यास्तव परमेश्वर देव असे म्हणत आहे, या रक्तपाती शहराचा निषेध असो, ती गंज चढलेल्या भांड्यासारखी आहे; त्याचा गंज निघत नाही, त्याच्या तुकड्यातून तुकडा काढून त्यातून काही निघत नाही.
“‘ಆದಕಾರಣ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ರಕ್ತಮಯವಾದ ಆ ಪಟ್ಟಣಕ್ಕೆ ಕಷ್ಟ! ಯಾವುದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ತುಂಡುತುಂಡಾಗಿ ಹೊರಗೆ ತೆಗೆ. ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.
7 ७ तिने सर्वांच्यामध्ये रक्तपात केला तिने गुळगुळीत खडकावर रक्त सांडले जमिनीच्या धुळीने त्यास झाकू दिले नाही.
“‘ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.
8 ८ म्हणून संतापाच्या त्वेषाने मी तिचे रक्त खडकावर सांडले जमीनीच्या धुळीने त्यास झाकू दिले नाही.
ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ ರೋಷವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.
9 ९ यास्तव परमेश्वर देव असे म्हणत आहेः या रक्तपाती शहराचा निषेध असो, मी जळणासाठी लाकडाचा मोठा साठा करीन.
“‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಆ ರಕ್ತಾಪರಾಧವುಳ್ಳ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
10 १० लाकडाचा साठा वाढवा, आग जाळा, मांस शिजवा या ऋतूत रस्सा चांगला बनव, हाडेही भाजू देत.
ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸವನ್ನು ಚೆನ್ನಾಗಿ ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಎಲುಬುಗಳು ಸುಡಲಿ.
11 ११ मग अग्नीवर भांडे रिकामेच असू दे अशासाठी की त्यातील गाळ तप्त अग्नीने जळून जाईल.
ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಣ ಕಲ್ಮಶವು ಕರಗಿ ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.
12 १२ ती कष्टाने खूप कामाने थकली भागली होती, पण अग्नीने तिची झिज झाली होती.
ಅದರ ಕಲ್ಮಶವು ನನ್ನಲ್ಲಿ ಆಯಾಸವನ್ನುಂಟು ಮಾಡೀತೆ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ. ಅದು ಬೆಂಕಿಯಿಂದಲೂ ನೀಗಲಿಲ್ಲ.
13 १३ तुझा लज्जास्पद स्वभाव हा तुझ्या अशुद्धतेत आहे, कारण मी तुला शुद्ध करु पाहिले तरी पण तू शुद्ध झालीच नाही व अशुद्धच राहिल्याने माझा त्वेष तुझ्यावर आला आहे.
“‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.
14 १४ मी परमेश्वर देव असे जाहीर करतो हे असे घडेलच व ते मी करेलच, मी कडक धोरण सोडून देईन, तुझे मार्ग आणि तुझे कार्य हेच तुझा न्याय करतील; असे परमेश्वर देव जाहीर करत आहे.
“‘ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ. ನಾನು ಕೆಲಸ ಮಾಡುವ ಸಮಯ ಬಂದಿದೆ. ನಾನು ಅದನ್ನು ಮಾಡದೆ ಬಿಡುವುದಿಲ್ಲ. ಕಟಾಕ್ಷ ತೋರಿಸುವುದಿಲ್ಲ. ಹಿಂದೆಗೆಯೆನು. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯತೀರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’”
15 १५ मग परमेश्वर देवाचा शब्द माझ्याकडे आला आणि मला म्हणाला,
ಯೆಹೋವ ದೇವರ ವಾಕ್ಯವು ನನಗೆ ಬಂದಿತು:
16 १६ मानवाच्या मुला पाहा! तुझ्या डोळ्यांना जे उत्तम वाटते ते तुझ्यापासून मी काढून घेईन, तरी तू दुःख करु नये व आसवेही गाळू नये व आपली वाहने फाडू नयेत.
“ಮನುಷ್ಯಪುತ್ರನೇ, ಒಂದೇ ಏಟಿನಿಂದ ನೇತ್ರಾನಂದವಾಗಿರುವುದನ್ನು ನಿನ್ನಿಂದ ತೆಗೆಯುತ್ತೇನೆ. ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
17 १७ तू मुकाट्याने खेद व्यक्त कर मृतांसाठी दुःख व्यक्त करु नको, आपल्या डोक्यात फेटा राहू दे, व पायात जोडा घाल आपले तोंड झाकू नको दुःखाच्या समयी पत्नीच्या मुत्युनंतर जे पुरुष अन्न पाठवतात ते खाऊ नको.”
ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.”
18 १८ मग पहाटे मी माझ्या लोकांशी बोललो आणि माझी पत्नी सायंकाळी वारली. तेव्हा मला जी आज्ञा झाली तसे मी सकाळी पालन केले.
ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನರೊಂದಿಗೆ ಮಾತನಾಡಿದೆನು. ಸಂಜೆ ನನ್ನ ಹೆಂಡತಿ ಸತ್ತಳು. ಮರುದಿನ ಬೆಳಿಗ್ಗೆ ನಾನು ಆಜ್ಞಾಪಿಸಿದಂತೆ ಮಾಡಿದೆನು.
19 १९ लोकांनी मला विचारले, “तू आम्हास याचा अर्थ काय हे सांगणार नाहीस जे काही तू करत आहेस ते?”
ಆಗ ಜನರು, “ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ? ಯಾಕೆ ಹೀಗೆ ವರ್ತಿಸುತ್ತಿದ್ದೀಯಾ?” ಎಂದು ಕೇಳಿದರು.
20 २० मग मी त्यांना म्हणालो, परमेश्वर देवाचा शब्द माझ्याकडे आला आणि म्हणाला,
ಆದ್ದರಿಂದ ನಾನು ಅವರಿಗೆ ಹೀಗೆ ಹೇಳಿದೆನು, “ಯೆಹೋವ ದೇವರ ವಾಕ್ಯವು ನನಗೆ ಬಂದಿತು,
21 २१ इस्राएलाच्या घराण्याला सांग, परमेश्वर देव असे सांगत आहे पाहा! घमंड तुझी ताकत झाली आहे तुझ्या डोळ्यांना जे बरे वाटते ते तुझ्या जीवाच्या वासनेने माझे पवित्रस्थान विटाळले आहे! आणि जी तुझी मुले व ज्या तुझ्या मुली मागे उरलेल्या होत्या त्या तलवारीने खाली पडल्या आहेत.
ಇಸ್ರಾಯೇಲರ ಮನೆತನದವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ ಎಂದು ಹೇಳು: ಇಗೋ, ನಾನು ನನ್ನ ಪವಿತ್ರಾಲಯವನ್ನೂ, ನಿಮ್ಮ ಮುಖ್ಯಬಲವನ್ನೂ, ನಿಮ್ಮ ನೇತ್ರಾನಂದಕರವಾದದ್ದನ್ನೂ, ನಿಮ್ಮ ಮನಸ್ಸು ಅಭಿಲಾಷಿಸುವುದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳು ಖಡ್ಗದಿಂದ ಬೀಳುವರು.
22 २२ मग मी जे केले तेच तुम्ही कराल; तू आपले तोंड खाली घालणार नाही, दुःखाच्या समयी लोक देतात ती खावयाची भाकर खाणार नाही.
ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳುವುದಿಲ್ಲ ಅಥವಾ ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನುವುದಿಲ್ಲ.
23 २३ त्यापेक्षा आपल्या डोक्यात फेटा आणि पायात जोडा घाला तू खेद व आसवे गाळणार नाहीस, तुझ्या अपराधासाठी वितळले जाशील प्रत्येक त्यांच्या भावंडासाठी विव्हळ होईल.
ನಿಮ್ಮ ಮುಂಡಾಸಗಳು ನಿಮ್ಮ ತಲೆಯ ಮೇಲೆಯೂ ನಿಮ್ಮ ಪಾದರಕ್ಷೆಯು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವುವು. ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರಳುವಿರಿ.
24 २४ मग यहेज्केल तुम्हास चिन्ह होईल जे काही त्याने केले तेच तुम्ही कराल हे जेव्हा होईल तेव्हा तुम्हास कळेल मी परमेश्वर देव आहे.
ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವು ಮಾಡುವಿರಿ. ಈ ರೀತಿ ಆದಾಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ತಿಳಿಯುವಿರಿ.’
25 २५ “पण तू मानवाच्या मुला, ज्या दिवशी त्यांच्यापासून त्यांचा आश्रय ताब्यात घेतला, जो त्यांचा आनंद, गर्व जो त्यांनी पाहिला व ज्याची इच्छा त्यांनी केली जेव्हा मी त्यांच्या मुलामुलींना त्यांच्या पासून घेऊन गेलो.
“ಮನುಷ್ಯಪುತ್ರನೇ, ಅವರ ಮಹತ್ತರ ಸಂತೋಷವನ್ನೂ ಅವರ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವುದನ್ನೂ ಅವರ ಪುತ್ರಪುತ್ರಿಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ ದಿನದಲ್ಲಿ,
26 २६ त्या दिवशी शरणार्थी येतील व तुला बातमी देतील.
ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?
27 २७ त्या दिवशी शरणार्थी व निभावलेले येतील आणि ते तुला सांगतील तू आता फार काळ गप्प रहाणार नाही, असा तू चिन्ह होशील म्हणजे, त्यांना समजेल मी परमेश्वर देव आहे.”
ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ, ಆಗ ನಾನೇ ಯೆಹೋವ ದೇವರೆಂದು ತಿಳಿಯುವರು.”