< एज्रा 4 >
1 १ यहूदा आणि बन्यामीन यांचे काही शत्रू होते. त्यांनी ऐकले की, बंदिवासातून आलेले लोक इस्राएलाचा देव परमेश्वर याचे मंदिर बांधत आहेत.
೧ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು.
2 २ तेव्हा ते जरुब्बाबेल आणि घराण्यांचे प्रमुख यांच्याकडे येऊन म्हणाले, “आम्हासही तुम्हासोबत बांधकाम करु द्या. तुमच्याप्रमाणेच आम्हीही तुमच्या देवाला शोधतो. आणि अश्शूरचा राजा एसरहद्दोन याने आम्हास या जागी आणल्यापासून तुमच्या देवासाठी आम्ही अर्पण करीत आलो आहोत.”
೨ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.
3 ३ पण जरुब्बाबेल, येशूवा आणि त्यांच्या वडिलांच्या घराण्याचे प्रमुख त्यांना म्हणाले, “तुम्ही नव्हे तर इस्राएलचा देव परमेश्वर याचे मंदिर फक्त आम्हासच बांधायचे आहे. पारसाचा राजा कोरेश याची तशी आज्ञा आहे.”
೩ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, “ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ” ಎಂದು ಉತ್ತರ ಕೊಟ್ಟರು.
4 ४ त्या देशाचे लोक यहूदी लोकांचे हात कमजोर करू लागले. ते बांधकामाविषयी यहूदी लोकांस भीती घालू लागले.
೪ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.
5 ५ पारसाच्या कोरेश राजाची सर्व कारकीर्द संपून दारयावेश राजा सत्तेवर येईपर्यंत त्यांची योजना उधळून लावण्यासाठी ते वकीलाला लाचही देत.
೫ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು.
6 ६ नंतर अहश्वेरोशाच्या राज्याच्या सुरवातीलाच त्यांनी यहूदा व यरूशलेम यातल्या राहणाऱ्यांविरूद्ध आरोप पत्र लिहून पाठवले.
೬ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು.
7 ७ अर्तहशश्ताच्या दिवसात बिश्लाम, मिथ्रदाथ, ताबेल व त्यांचे साथीदार यांनी पारसाच्या राजाला पत्र लिहिले. हे पत्र अरामी लिपीत लिहीले असून व अरामी भाषांतरीत केले होते.
೭ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು.
8 ८ यानंतर मुख्य सेनापती रहूम आणि लेखक शिमशय यांनी यरूशलेम येथील लोकांविरूद्ध अर्तहशश्त राजाला लिहीले.
೮ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರು ಯೆರೂಸಲೇಮಿಗೆ ವಿರುದ್ಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು.
9 ९ मुख्य अधिकारी रहूम, लेखक शिमशय आणि त्यांचे बाकीचे सहभागी दिनाई लोक, टर्पली, अफर्शी, अर्खवी, बाबेली, सुसा येथील एलामी, यांनी एक पत्र लिहिले;
೯ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು.
10 १० आणि, जे त्यांना जाऊन मिळाले ज्यांना आसनपर या थोर आणि बलाढ्य राजाने शोमरोनात आणि नदीच्या प्रदेशात आणून वसवलेले होते.
೧೦ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ.
11 ११ जे पत्र त्यांनी राजा अर्तहशश्त यास पाठवले त्याची प्रत हीच आहे: “नदीच्या प्रदेशात राहणारे आम्ही तुमचे सेवक:
೧೧ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.
12 १२ राजा अर्तहशश्त यास, आम्ही तुम्हास कळवू इच्छितो की, तुम्ही पाठवून दिलेले यहूदी कैदी येथे यरूशलेमेस आले आहेत. ते बंडखोर नगर बांधत आहे. त्यांनी भिंतीचे काम पूर्ण केले आहे आणि पायाची दुरुस्ती केली आहे.
೧೨ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.
13 १३ आता राजाला हे समजावे की, जर हे नगर बांधले आणि हे भिंतीचे काम पूर्ण झाले की, ते लोक तुम्हास खंडणी व कर देणार नाहीत, परंतु त्यामुळे राजाची हानी होईल.
೧೩ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.
14 १४ खचित आम्ही राजाचे मीठ खातो. कारण राजाचा कोणताही अपमान झालेला पाहणे आम्हास योग्य वाटत नाही. म्हणून आम्ही तुला कळवीत आहोत.
೧೪ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.
15 १५ तुझ्या पित्याच्या नोंद-पुस्तकात शोधून पाहा आणि त्यावरुन हे नगर बंडखोर आहे राजांना व प्रांताला उपद्रव करणारे आहे आणि पुरातन काळापासून यामध्ये लोक बंड करीत असत. या कारणासाठी त्या नगराचा नाश करण्यात आला होता.
೧೫ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.
16 १६ आम्ही राजाला कळवतो की, हे नगर आणि त्यासभोवतालची भिंत बांधून पूर्ण झाली की नदीच्या पलीकडे तुमचे काहीच राहणार नाही.”
೧೬ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬುದೇ.”
17 १७ यावर राजाने पुढील उत्तर पाठवले रहूम, शिमशय आणि त्याचे शोमरोनातले साथीदार व नदीच्या पलीकडे राहणारे बाकीचे लोक, “यांना शांती असो.
೧೭ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.
18 १८ तुम्ही पाठवलेल्या पत्राचा अनुवाद करून मला वाचून दाखवण्यात आले.
೧೮ನೀವು ಕಳುಹಿಸಿದ ಪತ್ರವು ನನ್ನ ಮುಂದೆ ಓದಲಾಯಿತು. ಅದರ ಸಂಪೂರ್ಣ ವಿಷಯ ಮನದಟ್ಟಾಯಿತು.
19 १९ याकरीता मी चौकशी करण्याचा आदेश दिला आणि तेव्हा असा शोध लागला की, मागील दिवसात राजाच्या विरूद्ध बंड करीत आणि त्यामध्ये बंड व फितुरी केल्याचे प्रकार तेथे सतत घडत आले आहेत.
೧೯ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು.
20 २० यरूशलेमेवर पराक्रमी राजांनी राज्य केले आणि नदीपलीकडच्या सर्व देशावर अधिकार करीत होते. त्या राजांना लोक कर व खंडणी देत असत.
೨೦ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.
21 २१ आता तुम्ही त्या लोकांस काम थांबवण्याचा हुकूम दिला पाहिजे. मी आज्ञा देईपर्यंत या नगराचे बांधकाम होऊ नये.
೨೧ಆದುದರಿಂದ ಆ ಮನುಷ್ಯರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವ ವರೆಗೆ ಆ ಪಟ್ಟಣವನ್ನು ಕಟ್ಟಲು ಆವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.
22 २२ तर हे करण्याची हयगय करू नका म्हणून काळजीपूर्वक राहा. राजाचे नुकसान होईपर्यंत हानी का वाढू द्यावी?”
೨೨ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು.
23 २३ मग राजा अर्तहशश्तने पाठवलेले फर्मान रहूम, शिमशय आणि त्यांच्याबरोबरचे लोक यांना वाचून दाखवण्यात आली. त्यांचे साथीदार ताबडतोब यरूशलेममधील यहूद्याकडे गेले आणि त्यांनी सक्तीने बांधकाम थांबवले.
೨೩ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.
24 २४ त्यामुळे यरूशलेममधील मंदिराचे काम स्थगित झाले. पारसाचा राजा दारयावेश याच्या कारकिर्दीच्या दुसऱ्या वर्षापर्यंत ते तसेच राहिले.
೨೪ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.