< एज्रा 6 >
1 १ तेव्हा राजा दारयावेशाने बाबेलच्या ऐतिहासिक कागदपत्रांचा शोध घेण्याचा आदेश दिला.
ಆಗ ಅರಸನಾದ ದಾರ್ಯಾವೆಷನ ಅಪ್ಪಣೆಯ ಪ್ರಕಾರ ಅವರು ಬಾಬಿಲೋನಿನ ಭಂಡಾರದಲ್ಲಿದ್ದ ಗ್ರಂಥಾಲಯದಲ್ಲಿ ಹುಡುಕಿದರು.
2 २ मेदी प्रांतातील अखमथा राजवाड्यात एक गुंडाळी सापडली. तिच्यावर लिहिले होते.
ಮೇದ್ಯರ ದೇಶದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಜ್ಞಾಪಕಾರ್ಥದ ಒಂದು ಸುರುಳಿ ಸಿಕ್ಕಿತು. ಅದರಲ್ಲಿ ಹೀಗೆ ಬರೆಯಲಾಗಿತ್ತು:
3 ३ “कोरेश राजाच्या कारकिर्दीच्या पहिल्या वर्षी यरूशलेममधील मंदिराच्या बाबतीत राजाने असा आदेश दिला की, जेथे यज्ञ अर्पण करीत त्याठिकाणी देवाचे मंदिर बांधावे. ‘मंदिराचा पाया बांधून काढावा. त्याच्या भिंतीची उंची साठ हात आणि रुंदी साठ हात असावी.
ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನೆಂದರೆ: ಜನರು ಬಲಿಗಳನ್ನು ಸಮರ್ಪಿಸುವುದಕ್ಕಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಅಸ್ತಿವಾರಗಳನ್ನು ಬಲವಾಗಿ ಹಾಕಬೇಕು. ಅದರ ಎತ್ತರ 27 ಮೀಟರ್, ಅದರ ಅಗಲ 27 ಮೀಟರ್ ಆಗಿರಲಿ.
4 ४ मोठ्या दगडांचे तीन थर आणि मोठ्या लाकडाचा एक थर असावा. त्याचा खर्च राजाच्या घरातून केला जावा.
ದೊಡ್ಡ ಕಲ್ಲುಗಳ ಮೂರು ಸಾಲುಗಳೂ, ಹೊಸ ತೊಲೆಗಳ ಒಂದು ಸಾಲೂ ಇರಲಿ. ಅದರ ಖರ್ಚು ಅರಮನೆಯ ಬೊಕ್ಕಸದಿಂದ ಕೊಡಲಾಗುವುದು.
5 ५ देवाच्या घरातील सोन्यारुप्याची पात्रे जी नबुखद्नेस्सराने यरूशलेमेच्या मंदिरातून काढून बाबेलला आणली आहेत ती परत करावी. ती तू यरूशलेमास पाठवावी आणि देवाच्या घरात जमा करावी.’
ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದುಕೊಂಡು ಬಾಬಿಲೋನಿಗೆ ಒಯ್ದ ದೇವರ ಆಲಯದ ಬೆಳ್ಳಿಬಂಗಾರದ ಸಲಕರಣೆಗಳನ್ನು ತಿರುಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತೆಗೆದುಕೊಂಡುಹೋಗಿ, ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇಡಬೇಕು.
6 ६ आता नदीपलीकडील ततनइ, शथर-बोजनइ आणि तुमचे साथीदार अधिकारी जे नदीपलीकडे आहा ते तुम्ही तेथून दूर व्हा.
ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದು ಏನೆಂದರೆ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಯಾದ ತತ್ತೆನೈನೇ, ಶೆತರ್ ಬೋಜೆನೈಯೇ, ನದಿಯ ಆಚೆಯಲ್ಲಿರುವ ನಿಮ್ಮ ಜೊತೆಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರಿ.
7 ७ देवाच्या घराचे काम चालू द्या. यहूदी अधिकारी आणि यहूदी वडीलांनी हे देवाचे मंदिर त्याच्या जागी पुन्हा बांधावे.
ದೇವರ ಆಲಯವನ್ನು ಕಟ್ಟುವ ಕೆಲಸಕ್ಕೆ ನೀವು ಅಡ್ಡಿಮಾಡಬೇಡಿರಿ. ಯೆಹೂದ್ಯರ ಅಧಿಪತಿಯೂ, ಯೆಹೂದ್ಯರ ಹಿರಿಯರೂ ಅದರ ಸ್ಥಳದಲ್ಲಿ ದೇವರ ಆಲಯವನ್ನು ಕಟ್ಟಿಸಲಿ.
8 ८ आता माझा आदेश असा आहे. देवाचे मंदिर बांधण्यासाठी यहूदी वडीलजनांसाठी पूर्ण खर्च राजाच्या निधीतून नदीच्या पलीकडील येणाऱ्या खंडणीतून त्या मनुष्यांना देण्यासाठी वापरावा. यासाठी की, त्यांनी त्यांचे काम थांबवू नये.
ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವುದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನೆಂದರೆ: ಅವರು ಅಭ್ಯಂತರ ಮಾಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ತೆರಿಗೆಯಿಂದಲೇ ಈ ಮನುಷ್ಯರಿಗೆ ವೆಚ್ಚವನ್ನು ಕೊಡಬೇಕು.
9 ९ स्वर्गातील देवाच्या होमार्पणासाठी त्या लोकांस जे काही लागेल ते बैल, मेंढे, कोकरे आणि यरूशलेमेमधील याजकांना मागतील तितके गहू, मीठ, द्राक्षरस तेल या वस्तू त्यांना रोजच्या रोज न चुकता द्या.
ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ ಅವರಿಗೆ ಬೇಕಾದ ಹೋರಿಗಳೂ, ಟಗರುಗಳೂ, ಕುರಿಮರಿಗಳೂ, ಗೋಧಿಯೂ, ಉಪ್ಪೂ, ದ್ರಾಕ್ಷಾರಸವೂ, ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಬೇಕು.
10 १० हे करा यासाठी की, त्यांनी स्वर्गातील देवाला अर्पण आणावे आणि राजासाठी, माझ्यासाठी व माझ्या मुलासाठी देवाकडे प्रार्थना करावी.
ಇದಲ್ಲದೆ ಅವರು ಪರಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ, ಅರಸನ ಪ್ರಾಣಕ್ಕೋಸ್ಕರವೂ, ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡಬೇಕು.
11 ११ मी तुम्हास आज्ञा करतो की, जो कोणी माझ्या आज्ञेचे उल्लंघन करील त्याच्या घराचे लाकूड काढून त्याच्यावर त्यास टांगावे. त्या अपराधामुळे त्याचे घर कचऱ्याचा ढिग करावा.
ನಾನು ಕೊಡುವ ಅಪ್ಪಣೆ ಏನೆಂದರೆ, ಯಾವನಾದರೂ ಈ ನನ್ನ ಆಜ್ಞೆಯನ್ನು ಬದಲು ಮಾಡಿದರೆ, ಅವನ ಮನೆಯಿಂದ ಒಂದು ತೊಲೆಯನ್ನು ತೆಗೆದು ಅದರಿಂದಲೇ ಅವನನ್ನು ಗಲ್ಲಿಗೆ ಏರಿಸಬೇಕು. ಅವನ ಮನೆಯನ್ನು ಇದರ ನಿಮಿತ್ತ ತಿಪ್ಪೆಯನ್ನಾಗಿ ಮಾಡಿಬಿಡಬೇಕು.
12 १२ यरूशलेमेतील देवाच्या या मंदिराचा नाश करण्यास किंवा उल्लंघन करणारा जो कोणी राजा असो किंवा लोक आपले हात लावतील त्यांचा नाश जो देव तेथे राहतो तो करील. मी दारयावेश हा हुकूम करीत आहे. तो पूर्णपणे पाळावा.”
ಇದಲ್ಲದೆ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡಿರಲು, ಯೆರೂಸಲೇಮಿನ ಈ ದೇವಾಲಯವನ್ನು ಕಟ್ಟಬೇಕೆಂಬ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ದೇವಾಲಯವನ್ನು ನಾಶಮಾಡುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ, ಜನರನ್ನೂ ದೇವರು ನಾಶಮಾಡಲಿ. ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಪಾಲಿಸಬೇಕು, ಎಂಬುದು.
13 १३ नदीच्या पलीकडील अधिकारी ततनइ, शथर-बोजनइ आणि त्यांचे सोबती यांनी राजा दारयावेशाच्या आदेशाच्या प्रत्येक गोष्टीचे पालन केले.
ಆಗ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅರಸನಾದ ದಾರ್ಯಾವೆಷನು ಕಳುಹಿಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.
14 १४ यहूद्यांचे वडील बांधणीचे काम करीत राहिले. हाग्गय हा संदेष्टा आणि इद्दोचा मुलगा जखऱ्या यांनी प्रोत्साहन दिल्यामुळे त्यामध्ये त्यांना यश आले. इस्राएलाच्या देवाच्या आज्ञेप्रमाणे आणि पारसाचे राजे कोरेश, दारयावेश व अर्तहशश्त यांच्या आदेशानुसार यांनी मंदिर बांधून पूर्ण केले.
ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗನಾದ ಜೆಕರ್ಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ, ಕೋರೆಷ್, ದಾರ್ಯಾವೆಷ್ ಹಾಗೂ ಅರ್ತಷಸ್ತ ಎಂಬ ಪರ್ಷಿಯದ ರಾಜರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.
15 १५ हे मंदिर राजा दारयावेशाच्या कारकिर्दीच्या सहाव्या वर्षी अदार महिन्याच्या तृतीयेला पूर्ण झाले.
ಅರಸನಾದ ದಾರ್ಯಾವೆಷನ ಆಳಿಕೆಯ ಆರನೆಯ ವರ್ಷದ ಆಡಾರ್ ತಿಂಗಳ, ಮೂರನೆಯ ದಿವಸದಲ್ಲಿ ಈ ಆಲಯವನ್ನು ಕಟ್ಟಿ ಮುಗಿಸಲಾಯಿತು.
16 १६ इस्राएल लोकांनी, याजक, लेवी, बंदिवासातून आलेले यांनी देवाच्या मंदिराची प्रतिष्ठापना आनंदाने केली.
ಆಗ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಸೆರೆಯಿಂದ ಬಂದ ಮಿಕ್ಕಾದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠಾಪಿಸಿದರು.
17 १७ प्रतिष्ठापनेच्या वेळी त्यांनी शंभर बैल, दोनशे मेंढे, चारशे कोकरे होमात अर्पण केले. तसेच इस्राएलाच्या पापार्पणासाठी बारा बकरेही अर्पण केले. इस्राएलाच्या बारा घराण्यासाठी प्रत्येकी एक असे ते होते.
ದೇವರ ಆಲಯದ ಪ್ರತಿಷ್ಠಾಪನೆಗೋಸ್ಕರ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ, ನಾನೂರು ಕುರಿಮರಿಗಳನ್ನೂ, ಇಸ್ರಾಯೇಲ್ ಕುಲ ಗೋತ್ರಗಳ ಲೆಕ್ಕದ ಪ್ರಕಾರ, ಸಮಸ್ತ ಇಸ್ರಾಯೇಲರ ದೋಷಪರಿಹಾರ ಬಲಿಗಾಗಿ ಹನ್ನೆರಡು ಮೇಕೆಯ ಹೋತಗಳನ್ನೂ ಅರ್ಪಿಸಿದರು.
18 १८ यरूशलेममधील या मंदिराच्या सेवेसाठी त्यांनी मोशेच्या पुस्तकात लिहिल्याप्रमाणे, याजकांची आणि लेव्याची त्यांच्या-त्यांच्या वर्गानुसार योजना केली.
ಮೋಶೆಯ ಗ್ರಂಥದಲ್ಲಿ ಬರೆದ ಹಾಗೆ ಯೆರೂಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆಗೋಸ್ಕರ ಯಾಜಕರನ್ನು ಮತ್ತು ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
19 १९ बंदिवासातून परत आलेल्या लोकांनी पहिल्या महिन्याच्या चौदाव्या दिवशी वल्हांडण सण पाळला.
ಇದಲ್ಲದೆ ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.
20 २० वल्हांडण सण साजरा करण्यासाठी याजक आणि लेवी यानी एकचित्ताने स्वत: ला शुद्ध केले. कैदेतून आलेल्या सर्व लोकांसाठी व आपल्यासाठी त्यांनी वल्हांडणाचा कोकरा बली दिला.
ಯಾಜಕರೂ ಲೇವಿಯರೂ ಕೂಡ ಶುದ್ಧ ಮಾಡಿಕೊಂಡಿದ್ದರು. ಅವರೆಲ್ಲರು ಶುದ್ಧರಾದ ನಂತರ, ಲೇವಿಯರು ಸೆರೆಯಿಂದ ಬಂದವರೆಲ್ಲರಿಗೋಸ್ಕರವೂ, ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಯನ್ನು ವಧಿಸಿದರು.
21 २१ बंदिवासातून परतून आलेल्या समस्त इस्राएल लोकांनी वल्हांडणाचे भोजन केले. इस्राएलाचा देव परमेश्वर याला शोधायला जे देशातील लोकांच्या अशुद्धतेपासून दूर होऊन त्यांच्याकडे आले होते त्यांनी ते खाल्ले.
ಸೆರೆಯಿಂದ ತಿರುಗಿ ಬಂದ ಇಸ್ರಾಯೇಲರು ತಮ್ಮ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರನ್ನು ಹುಡುಕಲು ದೇಶದ ಜನಾಂಗಗಳ ಅಶುದ್ಧತೆಯಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡು, ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು,
22 २२ बेखमीर भाकरीचा सण त्यांनी उत्साहाने सात दिवस साजरा केला. कारण देवाच्या, इस्राएलाच्या देवाच्या मंदिराच्या कामात त्यांचे हात मजबूत करायला परमेश्वराने अश्शूरच्या राजाचे मन त्यांच्याकडे फिरवून त्यांना आनंदीत केले.
ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. ಏಕೆಂದರೆ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವುದಕ್ಕೆ ಅಸ್ಸೀರಿಯ ದೇಶದ ಅರಸನ ಹೃದಯವನ್ನು, ಅವರ ಕಡೆಗೆ ಮನಪರಿವರ್ತಿಸಿದ್ದರಿಂದ ಯೆಹೋವ ದೇವರು ಅವರನ್ನು ಸಂತೋಷಪಡಿಸಿದರು.