< इब्री 4 >
1 १ म्हणून देवाच्या विसाव्याच्या ठिकाणी प्रवेश करण्यासाठी देवापासून मिळालेले अभिवचन अजूनही आहे आणि यास्तव तुमच्यापैकी कोणीही ते चुकवू नये म्हणून काळजी घ्या.
೧ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.
2 २ कारण आम्हास सुद्धा सुवार्ता सांगितली गेली आहे ज्याप्रमाणे ती इस्राएल लोकांस सांगण्यात आली होती. परंतु जो संदेश त्यांनी ऐकला त्यापासून त्यांना फायदा झाला नाही कारण तो संदेश त्यांनी ऐकला पण त्यांनी विश्वासाने स्वीकारला नाही.
೨ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
3 ३ ज्या आपण विश्वास ठेवला ते पवित्र शास्त्रात लिहिल्याप्रमाणे त्या विसाव्याच्या ठिकाणी प्रवेश करणार आहोत. असे देवाने म्हणले आहे. “म्हणून मी माझ्या रागाच्या भरात अशी शपथ वाहून म्हणालो, ‘ते माझ्या विसाव्याच्या ठिकाणी कधीच प्रवेश करणार नाहीत” जगाच्या निर्मितीपासूनचे त्याचे काम संपलेले होते तरी तो असे म्हणाला.
೩ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ.
4 ४ कारण पवित्र शास्त्रात तो सातव्या दिवसाबद्दल असे बोलला आहे कीः “आणि सातव्या दिवशी देवाने त्याच्या सर्व कामापासून विश्रांती घेतली.”
೪ಎಲ್ಲಿಯೋ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, “ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು” ಬರೆದದೆ.
5 ५ आणि पुन्हा तो म्हणतो, “ते माझ्या विसाव्याच्या ठिकाणी कधीही प्रवेश करणार नाहीत.”
೫“ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು” ಎಂದು ಭಾಗದಲ್ಲಿ ಆತನು ಪುನಃ ಹೇಳಿದ್ದಾನೆ.
6 ६ ज्यांना अगोदर सुवार्ता सांगण्यात आली होती त्यांचा त्यांच्या अविश्वासामुळे त्यामध्ये प्रवेश झाला नाही, तरी हे खरे आहे की, काही जणांचा त्या विसाव्यात प्रवेश होणार आहे.
೬ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು.
7 ७ त्यांच्यासाठी देवाने पुन्हा एक वेळ निश्चित केली असून त्यास तो “आज” हा एक असा दिवस ठरवतो आणि अगोदर सांगितल्याप्रमाणे इतक्या काळानंतर तो दावीदाच्या द्वारे असे म्हणतो, “आज, जर तुम्ही त्याची वाणी ऐकाल, तर आपली अंतःकरणे कठीण करू नका.”
೭ಪುನಃ ಬಹುಕಾಲದ ನಂತರ ಆತನು ದಾವೀದನ ಮೂಲಕ ‘ಈ ಹೊತ್ತೇ’ ಎಂದು ಬೇರೊಂದು ದಿನವನ್ನು ಗೊತ್ತುಮಾಡಿದ್ದಾನೆ. ಹೇಗೆಂದರೆ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಡುವುದಾದರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ!” ಎಂದು ಹೇಳುತ್ತಾನಷ್ಟೆ.
8 ८ कारण जर यहोशवा त्यांना देवाने दिलेल्या विसाव्याच्या ठिकाणी घेऊन गेला, तर देव दुसऱ्या दिवसाबद्दल पुन्हा बोलला नसता.
೮ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ.
9 ९ म्हणून देवाच्या लोकांसाठी अजूनही विसाव्याचा दिवस आहे.
೯ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.
10 १० कारण जो कोणी देवाच्या विसाव्याच्या ठिकाणी प्रवेश करतो, तो त्याच्या स्वतःच्या कामापासून विसावा घेतो. ज्याप्रमाणे देवाने त्याच्या कामापासून विसावा घेतला होता.
೧೦ಹೇಗೆಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.
11 ११ म्हणून त्या विसाव्याच्या ठिकाणी प्रवेश करण्यासाठी आपण होईल तितका प्रयत्न करावा. यासाठी की, कोणीही इस्राएल लोकांनी आज्ञाभंग केल्याप्रमाणे त्यांचे अनुकरण करू नये.
೧೧ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.
12 १२ कारण देवाचे वचन सजीव, सक्रीय कोणत्याही दुधारी तलवारीपेक्षा अधिक धारदार असून जीव, सांधे व मज्जा यांना भेदून आरपार जाणारे आणि मनातील विचार व हेतू ह्यांची पारख करणारे असे आहे.
೧೨ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
13 १३ आणि कोणतीही निर्मित गोष्ट त्याच्यापासून लपलेली नाही आणि ज्याच्यापाशी आम्हास सर्व गोष्टींचा हिशोब द्यावयाचा आहे, देवासमोर सर्व गोष्टी उघड व स्पष्ट अशा आहेत.
೧೩ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.
14 १४ म्हणून, ज्याअर्थी आम्हास येशू देवाचा पुत्र हा महान महायाजक लाभला आहे व जो स्वर्गात गेला आहे, असा जो विश्वास आपण गाजवितो तो अखंडपणे भक्कम धरून राहू या.
೧೪ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.
15 १५ कारण आपल्याला लाभलेला महायाजक असा नाही, जो आपल्या अशक्तपणाबद्दल सहानुभूती दर्शवण्यास असमर्थ आहे. पण आपल्याला असा याजक लाभला आहे की, जो आमच्यासारखाच सर्व प्रकारच्या मोहाच्या अनुभवातून गेला. तरीही तो पूर्णपणे पापविरहीत राहिला.
೧೫ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
16 १६ तर मग आपण देवाच्या कृपेच्या राजासनाजवळ निर्धाराने जाऊ या. यासाठी की, आमच्या गरजेच्या वेळी साहाय्य मिळावे म्हणून आम्हास दया व कृपा प्राप्त व्हावी.
೧೬ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.