< यशया 28 >
1 १ एफ्राइममधील मद्यप्यांनो तुमच्या गर्वाच्या मुकुटाला हायहाय! आणि धुंद झालेल्या सुपिक खोऱ्याच्या माथ्यावरील मोठी शोभा देणारे जे कोमेजणारे फुल त्यास हायहाय!
ಕುಡುಕರಿಂದ ಕೂಡಿದ ಎಫ್ರಾಯೀಮಿನ ಕಿರೀಟದಂತಿರುವ ನಗರಕ್ಕೆ ಕಷ್ಟ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಕಷ್ಟ!
2 २ पाहा! परमेश्वराकडे पराक्रमी आणि बलवान असा एक आहे. तो गारपिटीप्रमाणे आहे. नष्ट करणाऱ्या वादळाप्रमाणे, आणि प्रचंड ढगफूटी प्रमाणे, तो पृथ्वीला आपल्या हाताने ताडना करेल.
ಇಗೋ, ಕರ್ತರಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ಹೊಡೆದು ಬಿಡುವ ಬಿರುಗಾಳಿಯಂತೆಯೂ, ಪ್ರಳಯ ಮಾಡುವ ದೊಡ್ಡ ನೀರನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈಯಿಂದ ಬೀಳಿಸುವನು.
3 ३ एफ्राइममधील मद्याप्यांचा अभिमानी मुकुट पायाखाली तुडवला जाईल.
ಕುಡುಕರಾದ ಎಫ್ರಾಯೀಮ್ಯರ ಗರ್ವದ ಕಿರೀಟವು ಕಾಲಿನ ತುಳಿತಕ್ಕೆ ಈಡಾಗುವುದು.
4 ४ त्याच्या वैभवशाली सौंदर्याचे कोमेजणारे फूल, जे खोऱ्याच्या माथ्यावर आहे, उन्हाळ्यात झाडावर प्रथम आलेल्या अंजिरांप्रमाणे त्याची स्थिती होईल, त्याकडे पाहणारा पाहतो तेव्हा तो त्याच्या हातांत असतानांच तो खाऊन टाकतो.
ಫಲವತ್ತಾದ ಕಣಿವೆಗೆ ತಲೆಯ ಮೇಲಿರುವ ಅಲಂಕಾರದ ಶೃಂಗಾರವಾಗಿದ್ದು, ಬೇಸಿಗೆ ಮುಂಚೆ ಮಾಗಿದ ಅಂಜೂರದ ಹಣ್ಣಿನ ಹಾಗೆ ಇರುವುದು. ಜನರು ಅವರನ್ನು ನೋಡಿ ಕೈಗೆ ತೆಗೆದುಕೊಂಡ ತಕ್ಷಣ ಅವರು ನುಂಗುತ್ತಾರೆ.
5 ५ त्या दिवशी सेनाधीश परमेश्वर आपल्या लोकांच्या उरलेल्यांना सुंदर मुकुट असा होईल.
ಆ ದಿನದಲ್ಲಿ ಸೇನಾಧೀಶ್ವರ ಯೆಹೋವ ದೇವರು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವೂ ಮತ್ತು ಸುಂದರವಾದ ಮಕುಟವೂ ಆಗಿರುವರು.
6 ६ आणि जो न्याय करत बसतो त्यास तो न्यायाचा आत्मा आणि जे वेशीजवळ लढाई मागे हटवतात त्यांना तो पराक्रम असा होईल.
ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ, ಬಾಗಿಲಿನ ಕಡೆಗೆ ಯುದ್ಧವನ್ನು ತಿರುಗಿಸುವವನಿಗೆ ಪರಾಕ್ರಮವೂ ಆಗಿರುವನು.
7 ७ पण हे सुद्धा द्राक्षरसाने हेलकावे खात आहेत, आणि मादक मद्यानी अडखळत आहेत. याजक व संदेष्टे सर्वच जण द्राक्षरस व मद्य पिऊन धुंद झाले आहेत आणि मद्याने त्यांना गिळून घेतले आहे. ते मद्याने अडखळून पडत आहेत आणि ते दृष्टांतात भ्रमतात, ते न्याय करण्यात अडखळतात.
ಇವರು ಸಹ ದ್ರಾಕ್ಷಾರಸದಿಂದ ಮತ್ತರಾಗಿದ್ದಾರೆ. ಮದ್ಯದಿಂದಲೂ ಓಲಾಡುತ್ತಿದ್ದಾರೆ. ಯಾಜಕನೂ ಪ್ರವಾದಿಯೂ ಮದ್ಯದಿಂದ ಮತ್ತರಾಗಿದ್ದಾರೆ. ದ್ರಾಕ್ಷಾರಸದಿಂದ ತೂರಾಡುತ್ತಿದ್ದಾರೆ. ಮದ್ಯದಿಂದ ಓಲಾಡುತ್ತಿದ್ದಾರೆ. ದರ್ಶನವಾಗುತ್ತಿರುವಾಗಲೂ ಅವರು ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
8 ८ खरोखर सर्व मेजे ओकारीने भरलेली आहेत, कोठेही स्वच्छ जागा राहिलेली नाही.
ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
9 ९ तो कोणाला ज्ञान शिकवील? आणि तो कोणाला निरोप समजावेल? दुग्धापासून दूर केलेल्यांना किंवा स्तनपानापासून दूर केलेल्यांना काय?
ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಮತ್ತು ಯಾರಿಗೆ ಬೋಧನೆಯನ್ನು ತಿಳಿದುಕೊಳ್ಳುವ ಹಾಗೆ ಮಾಡುತ್ತಾನೆ? ಆಗತಾನೇ ಹಾಲು ಬಿಟ್ಟ ಕೂಸುಗಳಿಗೋ, ಎಳೆಯ ಮಕ್ಕಳಿಗೋ?
10 १० कारण नियमा वर नियम, नियमावर नियम, ओळीवर ओळ, ओळीवर ओळ, इथे थोडे, तिथे थोडे, असे आहे.
ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ.
11 ११ खरच, तोतऱ्या ओठांनी आणि अन्य भाषेने तो या लोकांशी बोलेल.
ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರೊಡನೆ ಮಾತನಾಡುತ್ತಾನೆ.
12 १२ पूर्वी तो त्यांना म्हणाला, “येथे विश्रांती आहे, थकलेल्यांना येथे येऊन विश्रांती घेऊ द्या, आणि हे उत्साहवर्धक आहे.” पण ते काही ऐकेनात.
ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ. ನಿಮಗೆ ಅನುಕೂಲವಾದ ಉಪಶಮನ ಇದೇ,” ಎಂದು ಹೇಳಿದಾಗಲೂ ಅವರು ಕೇಳಲಿಲ್ಲ.
13 १३ लोकांस परमेश्वराचे बोलणे परक्या भाषेसारखे अनाकलनीय वाटले. हुकूमावर हुकूम, हुकूमावर हुकूम, नियमावर नियम, नियमावर नियम, थोडे इकडे, थोडे तिकडे, एक धडा तिकडे. लोकांनी स्वत: ला पाहिजे ते केले. म्हणून ते मागे पडून पराभूत झाले, ते सापळ्यात अडकले आणि पकडले गेले.
ಆಗ ಯೆಹೋವ ದೇವರು ಅವರಿಗೆ ಹೀಗೆ ಹೇಳಿದರು: ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಇದರಿಂದ ಅವರು ಎಡವಿಬಿದ್ದು ಗಾಯಗೊಳ್ಳಬಹುದು. ಮತ್ತು ಬಲೆಯಲ್ಲಿ ಸಿಕ್ಕಿ ಬೀಳುವರು.
14 १४ याकरिता, जे तुम्ही थट्टा करता, आणि जे तुम्ही यरूशलेमेवर राज्य करता, ते तुम्ही परमेश्वराचे वचन काय म्हणते ते ऐका.
ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನರನ್ನು ಆಳುವ ಹಾಸ್ಯದ ಜನರಾದ ನೀವು ಯೆಹೋವ ದೇವರ ಮಾತನ್ನು ಕೇಳಿರಿ.
15 १५ तुम्ही म्हटले, “आम्ही मृत्यूबरोबर करारनामा केला आहे. अधोलोकाशी आम्ही करार केला आहे म्हणून आम्हांला शिक्षा होणार नाही, जेव्हा बुडवणारी शिक्षा पार केली जाईल तेव्हा ती आमच्यापर्यंत येऊ शकणार नाही; कारण आम्ही कपटाच्या मागे लपलो आहोत व असत्याला आपले आश्रय केले आहे.” (Sheol )
“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ? (Sheol )
16 १६ यासाठी परमेश्वर, माझा प्रभू म्हणतो, “पाहा, मी सियोनेत आधारशिला, पारखलेला धोंडा, कोपऱ्याचा मोलवान धोंडा, स्थीर पाया म्हणून घालतो. जो कोणी त्यावर विश्वास ठेवेल, तो लाजवला जाणार नाही.
ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.
17 १७ मी न्याय मोजमापाची काठी, आणि नितीमत्ता हा ओळंबा असे करीन, तेव्हा गारपीट खोट्यांचे आश्रय झाडून टाकील, आणि पूराचे पाणी लपण्याच्या जागा झाकून टाकील.”
ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ ಮತ್ತು ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು. ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು. ಅಡಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿ ಬಿಡುವುದು.
18 १८ तुमचा मृत्यूशी असलेला करारनामा विरवला जाईल आणि अधोलोकाशी तुमचा झालेला करार रद्द केला जाईल. जेव्हा प्रकोपाचा पूर पार केला जाईल, त्या द्वारे तुम्ही झाकले जाल. (Sheol )
ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವುದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವುದಿಲ್ಲ. ವಿಪರೀತ ಬಾಧೆಯು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು. (Sheol )
19 १९ जेव्हा तो पार जाईल तेव्हा तो तुला झाकून टाकेल. आणि रोज रोज सकाळी, दिवसा आणि रात्री तो पार जाईल. आणि जेव्हा संदेश कळेल, तर ते भयच असे होईल.
ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು. ಏಕೆಂದರೆ ಅದು ಹೊತ್ತಾರೆಯಿಂದ ಹೊತ್ತಾರೆಗೆ, ಹಗಲು ರಾತ್ರಿಯೂ ಹಾದುಹೋಗುವುದು.” ಆಗ ದೇವರ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.
20 २० कारण अंथरूण पाय पसरावयास खूप लहान आहे, आणि पांघरुण पांघरायला पुरत नाही एवढे ते अरुंद आहे.
ಮೈ ಚಾಚುವುದಕ್ಕೆ ಹಾಸಿಗೆ ಚಿಕ್ಕದಾಗಿರುವುದು. ಮುದುರಿಕೊಂಡು ಮಲಗುವುದಕ್ಕೆ, ಹೊದಿಕೆಯ ಅಗಲ ಸಾಲದು.
21 २१ जसा परासीम डोंगरामध्ये परमेश्वर उभा राहिला होता, जसा तो गिबोन दरीत रागावला होता त्याप्रमाणे तो रागावेल. अशासाठी की त्याने आपले कार्य, त्याचे अद्भूत कृत्य आणि त्याचे विस्मयकारी कृत्य करावे.
ಯೆಹೋವ ದೇವರು ಪೆರಾಚೀಮ್ ಪರ್ವತದಲ್ಲಿ ಎದ್ದಂತೆ ಏಳುವರು. ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ, ಅಪರೂಪವಾದ ತಮ್ಮ ಕೆಲಸವನ್ನು ನಡಿಸಿ, ಅಪೂರ್ವವಾದ ತಮ್ಮ ಕಾರ್ಯವನ್ನು ನೆರವೇರಿಸುವನು.
22 २२ तर आता तुम्ही थट्टा करू नका, नाहीतर तुमची बंधणे घट्ट करण्यात येतील. कारण पृथ्वीवर नाश होण्याचा ठराव, मी सेनाधीश परमेश्वरापासून ऐकला आहे.
ಹೀಗಿರುವುದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗಬೇಡಿರಿ. ಸರ್ವಶಕ್ತ ಆಗಿರುವ ಕರ್ತ ಯೆಹೋವ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರ ತರಲು ನಿರ್ಣಯಿಸಿದೆ, ಎಂಬ ತೀರ್ಪನ್ನು ನಾನು ಕೇಳಿದ್ದೇನೆ.
23 २३ मी सांगत असलेला संदेश लक्षपूर्वक ऐका, सावध असा, माझे शब्द ऐका.
ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
24 २४ पेरणी करण्यासाठी शेतकरी सतत शेत नांगरतो का? तो सतत मशागत करतो का?
ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣುಹೆಂಟೆಯನ್ನು ತೆಗೆದು, ದಿನವೆಲ್ಲಾ ಹೊಡೆಯುವನೋ?
25 २५ त्याने जमीन तयार केल्यावरच तो काळे जिरे टाकतो व जिरे विखरतो, तो गहू रांगेत आणि जव नेमलेल्या ठिकाणी आणि त्याच्या काठाला काठ्या गहू पेरीत नाही काय?
ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ, ಜೀರಿಗೆಯನ್ನು ಚದರಿಸಿ ಮತ್ತು ಗೋಧಿಯನ್ನು ಸಾಲುಸಾಲಾಗಿಯೂ, ಜವೆಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.
26 २६ कारण त्याचा देव त्यास सूचना देतो, तो त्यास सुज्ञपणे शिकवतो.
ಏಕೆಂದರೆ ಅವನ ದೇವರು ಅವನಿಗೆ ಸೂಚಿಸುತ್ತಾರೆ. ಮತ್ತು ಸರಿಯಾದ ಮಾರ್ಗವನ್ನು ಕಲಿಸುತ್ತಾರೆ.
27 २७ शिवाय, काळे जिरे घणाने मळत नाही, किंवा तिच्यावर गाडीचे चाक फिरवले जात नाही, पण काळे जिरे काठीने आणि जिरे दंडाने झोडतात.
ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವುದಿಲ್ಲ. ಜೀರಿಗೆಯನ್ನು ಒಕ್ಕುವುದು ಬಂಡಿಯ ಚಕ್ರ ತಿರುಗಿಸುವುದರಿಂದ ಅಲ್ಲ. ಅಗಸೆಯು ಕೋಲಿನಿಂದಲೂ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದ ಆಗಿರುತ್ತದೆ.
28 २८ भाकरीसाठी धान्य दळतात, पण ते नीट दळले जात नाही. आणि जरी त्याच्या गाडीचे चाक व त्याचे घोडे ते विखरतात तरी तो ते दळीत नाही.
ರೊಟ್ಟಿಗಾಗಿ ಗೋಧಿಯ ಕಾಳನ್ನು ಪುಡಿಮಾಡಬೇಕು; ಯಾವಾಗಲೂ ಅದನ್ನು ಒಕ್ಕುತ್ತಿರುವುದಿಲ್ಲ. ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವುದಿಲ್ಲ ಅವನ ಕುದುರೆ ಸವಾರದಿಂದ ಒಕ್ಕುತ್ತಿರುವುದಿಲ್ಲ.
29 २९ सेनाधीश परमेश्वर, जो संकल्पात सुंदर आहे आणि ज्ञानाने श्रेष्ठ आहे. त्याच्याकडून हे आहे.
ಈ ವಿವೇಕವು ಸಹ ಅತಿಶಯ ಆಲೋಚನಾಪರರೂ, ಕಾರ್ಯಸಾಧಕ ಜ್ಞಾನ ಶ್ರೇಷ್ಠರೂ ಆಗಿರುವ ಸೇನಾಧೀಶ್ವರ ಯೆಹೋವ ದೇವರಿಂದಲೇ ಹೊರಡುತ್ತದೆ.