< यशया 32 >

1 पाहा, राजा सदाचाराने राज्य करील, आणि त्याचे सरदार न्यायाने सत्ता चालवतील.
ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
2 प्रत्येक जण जसा वाऱ्यापासून आडोसा व वादळामध्ये आश्रय व पाऊस तसा होईल, सुक्या भूमीत जसे पाण्याचे प्रवाह, उष्ण प्रदेशातील मोठ्या खडकाखालील सावलीसारखा तो होईल.
ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
3 तेव्हा जे हे पाहतील त्यांचे डोळे मंदावणार नाही आणि ऐकणाऱ्यांचे कान हे लक्षपूर्वक ऐकतील.
ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
4 अविचारी बारकाईने समजून घेईल, तोतरा सहजतेने व स्पष्ट बोलेल.
ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆ ಸ್ವಚ್ಛವಾಗಿ ಮಾತನಾಡುವುದಕ್ಕೆ ಸಿದ್ಧವಾಗಿರುವುದು.
5 मूर्खाला अधिक काळ सन्मान्य म्हणणार नाही, किंवा फसविणाऱ्यास प्रतिष्ठीत. म्हणणार नाहीत.
ಇನ್ನು ಮೇಲೆ ಮೂರ್ಖನು ಘನವಂತನೆನಿಸಿಕೊಳ್ಳನು. ಮೋಸಗಾರನು ಮಹನೀಯನೆನಿಸಿಕೊಳ್ಳನು.
6 कारण मूर्ख मनुष्य आपल्या मनात मूर्खपणाच्या गोष्टी बोलतो आणि वाईट गोष्टींचे बेत आखतो आणि तो दुष्कृत्ये आणि देवविरहीत चुकीच्याच गोष्टी परमेश्वराविरूद्ध बोलतो. तो भुकेलेल्यांना अन्न खाऊ देत नाही आणि तहानेलेल्यांना पाणी पिऊ देत नाही.
ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
7 फसवणाऱ्याच्या पद्धती वाईट असतात. तो दुष्ट योजना आखून गरीब योग्य ते बोलतो तेव्हाही तो असत्याने गरीबाचा नाश करू पाहतो.
ಮೋಸಗಾರನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವನು ಬಡವರನ್ನು ಸುಳ್ಳು ಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
8 परंतु सन्माननीय मनुष्य सन्माननीय योजना करतो कारण त्याच्या सन्माननीय कृतीमुळेच तो उभा राहतो.
ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
9 तुम्ही ज्या निर्धास्तपणे राहणाऱ्या स्त्रियांनो उठा, आणि माझी वाणी ऐका; अहो निश्चिंत कन्यांनो, माझे ऐका.
ನಿಶ್ಚಿಂತೆಯರಾದ ಮಹಿಳೆಯರೇ, ಏಳಿರಿ. ನನ್ನ ಸ್ವರವನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
10 १० अहो निश्चिंत स्त्रियांनो, एक वर्षाहून अधिक काळ तुमचा आत्मविश्वास तुटेल, कारण द्राक्षाचे हंगाम बुडेल, फळे गोळा करता येणार नाही.
ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷಿ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.
11 ११ तुम्ही आरामात राहणाऱ्या स्त्रियांनो, थरथर कापा; तुम्ही आत्मविश्वास असणाऱ्यांनो, अस्वस्थ व्हा; आपली तलम चांगली वस्त्रे काढा आणि आपल्याला उघडे करा; आपल्या कमरेभोवती तागाची वस्त्रे गुंडाळा.
ನಿಶ್ಚಿಂತೆಯುಳ್ಳ ಸ್ತ್ರೀಯರೇ, ನೀವು ನಡುಗಿರಿ. ನಿರ್ಭೀತ ಪುತ್ರಿಯರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ, ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.
12 १२ रम्य शेतीसाठी व फलदायी द्राक्षवेलीसाठी त्या विलाप करतील.
ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಳ ನಿಮಿತ್ತವೂ ನಿಮ್ಮ ಎದೆ ಬಡಿದುಕೊಳ್ಳಿರಿ.
13 १३ माझ्या लोकांच्या भूमीवर काटे व कुसळे उगवतील, एकेकाळी आनंदीत असलेल्या शहरातील घरांवरदेखील त्या उगवतील.
ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ.
14 १४ कारण महाल सोडून दिले जातील, गर्दीची शहरे ओस पडतील; टेकडी व टेहळणीचा बुरूज सर्वकाळपर्यंत गुहा होईल, रान गाढवांचा आनंद, कळपांची कुरणे होतील.
ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.
15 १५ जोपर्यंत आम्हावर देवाच्या आत्म्याची वृष्टी वरून होणार नाही तोपर्यंत असे होईल, आणि रान फलदायी शेती होईल, आणि फलदायी शेती मात्र जंगलासारखी होईल.
ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.
16 १६ मग रानात न्यायत्वाची वस्ती होईल, फलदायी शेतीत नितीमत्ता वास करील.
ನ್ಯಾಯವು ಮರುಭೂಮಿಯಲ್ಲಿ ನೆಲೆಗೊಳ್ಳುವುದು, ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವುದು.
17 १७ नितीमत्तेचे कार्य शांती; नितीमत्तेचा परिणाम शांतता आणि सर्वकाळचा आत्मविश्वास होईल.
ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು ನಿತ್ಯವಾದ ಶಾಂತಿಯೂ, ಭರವಸೆಯೂ ಆಗಿರುವುದು.
18 १८ माझे लोक शांतस्थळी वस्ती करतील, सुरक्षित निवासस्थानी, आणि शांत जागी राहतील.
ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ, ಭದ್ರವಾದ ಸ್ಥಳಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
19 १९ पण जंगलाचा नाश होते वेळी गारा पडतील व नगर अगदी जमीनदोस्त केले जाईल.
ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗುವುದು. ಪಟ್ಟಣವು ಸಂಪೂರ್ಣವಾಗಿ ನೆಲಸಮವಾಗುವುದು.
20 २० जे तुम्ही सर्व जलांजवळ पेरता, जे तुम्ही बैल व गाढव यांचे पाय मोकळे करता, ते तुम्ही आशीर्वादित आहा.
ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ, ದನಕತ್ತೆಗಳನ್ನು ಮೇಯಲು ಬಿಡುವ ನೀವು ಧನ್ಯರೇ ಸರಿ.

< यशया 32 >