< यिर्मया 10 >

1 इस्राएलाच्या वंशजांनो, परमेश्वर जे वचन तुम्हास घोषीत करीत आहे ते ऐका.
ಇಸ್ರಾಯೇಲಿನ ವಂಶದವರೇ, ಯೆಹೋವ ದೇವರು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ.
2 परमेश्वर असे म्हणतो, “देशांचे मार्ग शिकू नका. आणि आकाशातील चिंन्हाना घाबरुन जाऊ नका, कारण त्यामुळे राष्ट्रे भयभीत असतात.
ಯೆಹೋವ ದೇವರು ಹೀಗೆ ಹೇಳುತ್ತಾರೆ: ಬೇರೆ ಜನಾಂಗಗಳ ಆಚರಣೆಗಳನ್ನು ಅನುಸರಿಸಬೇಡಿರಿ. ಅವರು ಆಕಾಶದ ಗುರುತುಗಳಿಗೆ ಹೆದರುತ್ತಾರೆ. ನೀವು ಅವುಗಳಿಗೆ ಹೆದರಬೇಡಿರಿ.
3 त्या लोकांच्या चालीरीती अर्थशून्य आहेत. कारण कोणी जंगलातून झाड तोडतो, असे ते कुऱ्हाडीने केलेले कारागीराच्या हाताचे काम आहे.
ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ.
4 नंतर ते त्यांना चांदीसोन्याने त्यांना सजवतात. ते खाली पडू नयेत म्हणून हातोड्याने व खिळ्याने ते घट्ट बसवितात.
ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ. ಮೊಳೆಗಳಿಂದಲೂ ಸುತ್ತಿಗೆಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
5 अशा मूर्ती काकडीच्या मळ्यातील बुजगावण्यासारख्या आहेत. त्या बोलू शकत नाहीत वा चालू शकत नाहीत. लोकांसच त्या वाहून न्याव्या लागतात. तेव्हा त्यांना घाबरु नका. त्या मूर्ती तुमचे वाईटही करु शकत नाहीत व चांगलेही करु शकत नाहीत.”
ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಅವರ ವಿಗ್ರಹಗಳು ಮಾತನಾಡುವುದಿಲ್ಲ. ಅವುಗಳನ್ನು ಹೊತ್ತುಕೊಳ್ಳತಕ್ಕದ್ದು, ಏಕೆಂದರೆ ಅವು ನಡೆಯಲಾರವು. ಅವುಗಳಿಗೆ ಭಯಪಡಬೇಡಿರಿ. ಏಕೆಂದರೆ, ಅವು ಕೆಟ್ಟದ್ದನ್ನು ಮಾಡಲಾರವು. ಒಳ್ಳೆಯದನ್ನು ಮಾಡುವುದೂ ಸಹ ಅವುಗಳಲ್ಲಿ ಇಲ್ಲ.
6 परमेश्वर तुझ्यासारखा दुसरा कोणीही नाही. तू महान आहेस आणि तुझ्या नावातच सामर्थ्य आहे.
ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. ನೀವು ಮಹೋತ್ತಮರು, ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು.
7 तुला कोण भिणार नाही, हे राष्ट्राच्या राजा? कारण तू त्या योग्यतेचा आहेस, कारण राष्ट्रांच्या सर्व ज्ञान्यांमध्ये आणि त्यांच्या सर्व राज्यांमध्ये तुझ्यासारखा कोणी नाही.
ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.
8 ते सर्व पशूसारखे आणि मूर्ख आहेत, दीड दमडीच्या लाकडाच्या मूर्तींचे अनुयायी आहेत.
ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ.
9 ते लोक तार्शीशाहून ठोकून आणलेली चांदी आणि उफाजहून आणलेले सोने, कारागिराच्या व सोनाराच्या हातचे अशे ते काम आहे. ते निळ्या आणि जांभळ्या रंगाचे कपडे चढवितात शहाणे लोक असे देव तयार करतात.
ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ.
10 १० पण परमेश्वरच फक्त खरा देव आहे. तोच जिवंत आणि सार्वकालीक राजा आहे. पृथ्वी त्याच्या क्रोधाने कंपन पावते आणि त्याचा कोप राष्ट्रे सहन करु शकत नाहीत.
ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.
11 ११ परमेश्वर म्हणतो, “त्या लोकांस पुढील संराष्ट्र द्या. ‘त्या खोट्या देवांनी पृथ्वीची आणि स्वर्गाची निर्मिती केली नाही. ते स्वर्गांतून आणि पृथ्वीवरुन नाहीसे होतील.
“ನೀವು ಅವರಿಗೆ ಹೀಗೆ ಹೇಳಬೇಕು: ‘ಆಕಾಶಗಳನ್ನೂ ಭೂಮಿಯನ್ನೂ ಉಂಟು ಮಾಡದ ದೇವರುಗಳು, ಭೂಮಿಯ ಮೇಲಿನಿಂದಲೂ ಈ ಆಕಾಶದ ಕೆಳಗಿನಿಂದಲೂ ನಾಶವಾಗುವುವು.’”
12 १२ ज्याने आपल्या सामर्थ्याने पृथ्वी निर्माण केली आणि आपल्या ज्ञानाचा उपयोग करून त्याने जग निर्माण केले आपल्या समंजसपणाच्या आधारे आकाश पांघरले.
ಆದರೆ ದೇವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.
13 १३ त्याच्या वाणीने आकाशात पाण्याच्या गडगडाट होतो, आणि तो पृथ्वीच्या शेवटापासून धुके वर चढवतो. तो पावसासाठी विजा निर्माण करतो, आणि आपल्या भांडारातून वारा बाहेर काढतो.
ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ. ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ.
14 १४ ज्ञानाशिवाय, प्रत्येक मनुष्य अज्ञानी झाला आहे. आपण निर्माण केलेल्या मूर्तीमुळेच सोनार लाजवले जातात. कारण त्या मूर्ती म्हणजे फक्त असत्य आहे. त्यामध्ये काही सजीवपणा नाही.
ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ.
15 १५ त्या निरुपयोगी आहेत, खोट्यांचे काम आहेत, त्यांच्या शिक्षेसमयी त्यांचा नाश होईल.
ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ. ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು.
16 १६ पण देव, याकोबाचा वाटा, त्यांसारखा नाही, कारण तो सर्व गोष्टी घडवणारा आहे. इस्राएल त्याच्या वतनाचा वंश आहे. सेनाधीश परमेश्वर हे त्याचे नाव आहे.
ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.
17 १७ अहो वेढ्यामध्ये जगत असलेल्या लोकांनो. आपल्या वस्तू गोळा करा आणि राष्ट्र सोडा.
ಮುತ್ತಿಗೆಗೆ ಒಳಗಾದವರೇ, ನಿಮ್ಮ ದೇಶ ಬಿಡಲು ನಿಮ್ಮ ಸೊತ್ತುಗಳನ್ನು ಕೂಡಿಸಿರಿ.
18 १८ परमेश्वर असे म्हणतो, पाहा, यावेळी, मी देशात राहणाऱ्यांना बाहेर फेकून देईन. आणि त्यांना धडा शिकवावा म्हणून त्यांना दु: ख देईल.”
ಏಕೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣೆಯಿಂದ ಎಸೆದುಬಿಡುತ್ತೇನೆ. ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.”
19 १९ माझी मोडलेली हाडे आणि संक्रमीत झालेल्या जखमांमुळे मला हाय हाय! तेव्हा मी म्हणालो, “खचित हे माझे दु: ख आहे, आणि मला ते पूर्णपणे भोगलेच पाहिजे.”
ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ವಾಸಿಪಡಿಸಲಾಗದು. ಆದರೆ ನಾನು ನಿಶ್ಚಯವಾಗಿ, “ಇದು ನನ್ನ ರೋಗ, ಇದನ್ನು ನಾನು ಸಹಿಸಲೇಬೇಕಾಗಿದೆ,” ಎಂದೆನು.
20 २० माझ्या तंबूचा नाश झाला आणि माझ्या तंबूचे सर्व दोर तुटले आहेत. माझी मुले मला सोडून निघून गेली आहेत. माझा तंबू उभारायला एकही मनुष्य उरला नाही. माझा निवारा बांधायला एकही मनुष्य शिल्लक नाही.
ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ; ಅವರು ಇಲ್ಲ. ಇನ್ನು ಮೇಲೆ ನನ್ನ ಡೇರೆಯನ್ನು ಹರಡುವುದಕ್ಕೂ, ನನ್ನ ಪರದೆಗಳನ್ನು ನಿಲ್ಲಿಸುವುದಕ್ಕೂ ಒಬ್ಬನೂ ಇಲ್ಲ.
21 २१ कारण मेंढपाळ मूर्ख झाले आहेत. ते परमेश्वराचा शोध घेत नाहीत. म्हणून त्यांना यश नाही, त्यांचे सर्व कळप विखरले आहेत.
ಏಕೆಂದರೆ, ಕುರುಬರು ಪಶುಗಳಂತಾದರು. ಅವರು ಯೆಹೋವ ದೇವರನ್ನು ಹುಡುಕಲಿಲ್ಲ. ಆದ್ದರಿಂದ ಅವರು ಸಫಲವಾಗುವುದಿಲ್ಲ. ಅವರ ಮಂದೆಗಳೆಲ್ಲಾ ಚದರಿಸಲಾಗುವುವು.
22 २२ बातमीचा अहवाल आला आहे, पाहा! यहूदातील शहरांचा नाश करायला आणि कोल्ह्यांची वस्ती करायला. उत्तरेतून मोठा भूमीकंप येत आहे.
ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವುದಕ್ಕೂ, ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೂ, ಸುದ್ದಿಯ ಶಬ್ದವೂ, ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
23 २३ परमेश्वरा, मला माहीत आहे, मनुष्याची वाट ही त्याच्याकडून नाही येत. चालत्या मनुष्यास आपली पावले नीट करता येत नाही.
ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು.
24 २४ परमेश्वरा, मला शिस्त लाव! पण रागाच्या भरात नाही तर न्याय्य रीतीने शिस्त लाव! नाहीतर तू कदाचित् आमचा नाश करशील.
ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು.
25 २५ जे राष्ट्र तुला ओळखत नाही आणि जे कुटुंब तुझ्या नामाचा धावा करत नाही, त्यावर तू आपला क्रोध ओत. कारण त्यांनी याकोबाचा विनाश केला आहे आणि त्यास खाऊन टाकले आहे, त्यांनी त्यास क्षीण केले आहे. त्याची वस्ती ओसाड केली आहे.
ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.

< यिर्मया 10 >