< यिर्मया 25 >

1 यहूदातील सर्व लोकांबद्दल यिर्मयाकडे आलेले वचन, ते असे, यहूदाचा राजा योशीया, याचा मुलगा, यहोयाकीम याच्या कारकिर्दीच्या चौथ्या वर्षी, हे बाबेलचा राजा नबुखद्नेस्सर ह्याच्या पाहिल्या वर्षात,
ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.
2 यहूदा लोकांस आणि यरूशलेमधील राहणाऱ्यांना यिर्मया संदेष्ट्याने पुढील संराष्ट्र घोषीत केला:
ಪ್ರವಾದಿಯಾದ ಯೆರೆಮೀಯನು ಯೆಹೂದದ ಸಮಸ್ತ ಜನರಿಗೂ, ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನೆಂದರೆ:
3 यहूदाचा राजा आमोन ह्याचा मुलगा योशीया ह्याच्या कारकिर्दीच्या तेराव्या वर्षापासून तर गेली तेवीस वर्षे परमेश्वराचे वचन माझ्याकडे येत आले आहे, मी तेव्हापासून आजपर्यंत तुम्हास ते ऐकवित आलो. पण तुम्ही ऐकले नाही आणि लक्ष दिले नाही.
ಆಮೋನನ ಮಗನೂ, ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿವಸದವರೆಗೆ ಅಂದರೆ, ಕಳೆದ ಇಪ್ಪತ್ತಮೂರು ವರ್ಷಗಳಿಂದ ಯೆಹೋವ ದೇವರು ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.
4 परमेश्वराने, त्याच्या सेवकांना संदेष्ट्यांना पुन्हा पुन्हा तुमच्याकडे पाठवले, ते बाहेर जाण्यासाठी उत्सुक होते, पण तुम्ही त्यांचे ऐकले नाही. तुम्ही त्यांच्याकडे लक्षसुद्धा दिले नाही.
ಇದಲ್ಲದೆ ಯೆಹೋವ ದೇವರು ತಮ್ಮ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾರೆ. ಬೆಳಿಗ್ಗೆ ಎದ್ದು ಕಳುಹಿಸಿದ್ದಾರೆ. ಆದರೆ ನೀವು ಕೇಳಲಿಲ್ಲ. ಕೇಳುವುದಕ್ಕೆ ನಿಮ್ಮ ಕಿವಿ ಕೊಡಲಿಲ್ಲ.
5 ते संदेष्टे म्हणाले, “प्रत्येक मनुष्य आपल्या वाईट कृत्यांपासून, आपल्या कर्माच्या दुष्टतेपासून फिरा, आणि जे राष्ट्र परमेश्वराने तुम्हास आणि तुमच्या पूर्वजांना कायमचा राहण्यास दिला, त्यामध्ये जा.
ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.
6 म्हणून दुसऱ्या दैवतांना अनुसरायला आणि त्यांना पाया पडायला त्यांच्या मागे जाऊ नका आणि तुम्ही त्यास आपल्या हातांच्या कामाने मला राग आणू नका, म्हणजे मी तुमचे काही वाईट करणार नाही.”
ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಆರಾಧಿಸುವುದಕ್ಕೂ ಹಿಂಬಾಲಿಸಬೇಡಿರಿ. ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ. ಆಗ ನಿಮಗೆ ಯಾವ ಕೇಡೂ ಮಾಡೆನು.”
7 परमेश्वर असे म्हणतो, “पण तुम्ही माझे ऐकले नाहीत, आणि तुम्हावर अरिष्ट यावे म्हणून तुम्ही आपल्या हातांच्या कामाने मला राग आणून दिला.”
“ಆದರೂ ನೀವು ನನಗೆ ಕಿವಿಗೊಡದೆ, ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.
8 सेनाधीश परमेश्वर असे म्हणतो, पाहा! “तुम्ही माझ्या संदेशाकडे लक्ष दिले नाही.
ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ನನ್ನ ಮಾತುಗಳನ್ನು ಕೇಳದ ಕಾರಣ
9 म्हणून मी लवकरच उत्तरेकडील कुळांना आणि बाबेलचा राजा नबुखद्नेस्सर, या देशाविरूद्ध आणि त्यातील सर्व राहणाऱ्यांविरूद्ध, तुझ्या भोवती असणाऱ्या राष्ट्रांविरूद्ध बोलावून घेईन. परमेश्वर असे म्हणतो, कारण मी त्यांना नाश करण्यासाठी ठेवीण. आणि त्यांना विस्मय व फूत्कार व सर्व काळ ओसाड असे करीन.
ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.
10 १० त्या ठिकाणच्या सुखाच्या व आनंदाच्या कल्लोळांचा मी शेवट करीन. तेथे नव वर वधूचा सुखाचा शब्द उमटणार नाही, जात्यांचा आवाज येणार नाही आणि दिव्यातला प्रकाश नाहीसा होईल असे मी करीन.
ನಾನು ಈ ದೇಶಗಳಿಂದ ಸಂತೋಷದ ಶಬ್ದ ಮತ್ತು ಸಂತೋಷದ ಶಬ್ದವನ್ನು ಮಾತ್ರ ತೆಗೆದುಹಾಕುತ್ತೇನೆ, ವಧು ಅಥವಾ ವಧುವಿನ ಧ್ವನಿ ಅಲ್ಲಿ ಕೇಳಿಸುವುದಿಲ್ಲ, ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು.
11 ११ आणि ती सगळी भूमी वैराण व वाळवंट होईल, आणि ही राष्ट्रे सत्तर वर्षांपर्यंत बाबेलाच्या राजाचे दास होतील.
ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು.
12 १२ परमेश्वर असे म्हणतो, आणि असे होईल सत्तर वर्षे संपल्यावर, मी बाबेलाच्या राजाला आणि त्या राष्ट्राला आणि खास्द्यांच्या देशाला त्यांच्या दुष्कृत्यांमुळे शिक्षा करीन.” त्या भूमीचे रुपांतर कायमच्या वाळवंटात करीन.
“ಎಪ್ಪತ್ತು ವರ್ಷ ತುಂಬಿದ ಮೇಲೆ ನಾನು ಬಾಬಿಲೋನಿನ ಅರಸನನ್ನೂ, ಆ ಜನಾಂಗವನ್ನೂ, ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
13 १३ आणि त्या देशाविरूद्ध जी काही वचने मी बोललो, म्हणजे जे काही या पुस्तकात लिहीले आहे, जे सगळ्या राष्ट्रांविषयी यिर्मयाने भविष्य सांगितले ते मी त्यांच्यावर आणीन.
ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ, ಯೆರೆಮೀಯನು ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಸಿ, ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡುವೆನು.
14 १४ त्यांना राष्ट्रांचे आणि मोठ्या राजांचे दास्य करावे लागेल. त्यांच्या कृत्यांबद्दल योग्य अशीच शिक्षा त्यांना मी देईन.
ಅನೇಕ ಜನಾಂಗಗಳೂ, ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆಗಳ ಪ್ರಕಾರವೂ, ಅವರ ಕೈಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
15 १५ कारण परमेश्वर, इस्राएलाचा देव, त्याने मला हे सांगितले: “माझ्या हातातील क्रोधाच्या द्राक्षरसाचा प्याला घे आणि मी तुला पाठवतो त्या सर्व राष्ट्रांना हा द्राक्षरस प्यायला लाव.
ಇಸ್ರಾಯೇಲಿನ ದೇವರಾದ ಯೆಹೋವ ದೇವರು ನನಗೆ ಹೀಗೆಂದರು: “ಈ ರೌದ್ರದ ದ್ರಾಕ್ಷಾರಸದ ಪಾತ್ರೆಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತೆಗೆದುಕೋ.
16 १६ कारण ते हा द्राक्षरस पितील आणि जी तलवार मी त्यांच्यामध्ये पाठवीन तिच्यामुळे ते मागेपुढे डोलतील व वेड्याप्रमाणे वागतील.”
ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತ ಕದಲಿ ಓಲಾಡುವರು.”
17 १७ मग मी परमेश्वराच्या हातातून द्राक्षरसाचा प्याला घेतला. देवाने मला पाठवलेल्या त्या सर्व राष्ट्रांत मी प्यायला लावला.
ಆಗ ನಾನು ಪಾತ್ರೆಯನ್ನು ಯೆಹೋವ ದೇವರ ಕೈಯಿಂದ ತೆಗೆದುಕೊಂಡು, ಯೆಹೋವ ದೇವರು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.
18 १८ यरूशलेम, यहूदा शहर आणि तिच्यातील राजे आणि नेते यांना मी तो प्याला दिला, म्हणजे वैराण, विस्मय व वाळवंट, आणि फुत्कार व शाप असे होतील.
ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು.
19 १९ दुसऱ्या राष्ट्रांनाही तो प्यावा लागेल, मी मिसरच्या राजा फारो, त्याच्या अधिकाऱ्यांना, त्याच्या सेवकांना, आणि त्याच्या लोकांस,
ಈಜಿಪ್ಟಿನ ಅರಸನಾದ ಫರೋಹನಿಗೂ, ಅವನ ಸೇವಕರಿಗೂ, ಅವನ ಅಧಿಕಾರಿಗಳಿಗೂ, ಅವನ ಎಲ್ಲಾ ಜನರಿಗೂ,
20 २० मी सर्व मिश्रित लोक, अरब व ऊस देशातील राजे, पलिष्ट्यांच्या देशातील सर्व राजे, अष्कलोन, गज्जा, एक्रोन व अश्दोद शहरामधील उरलेले अशा सर्व राजांना त्या प्याल्यातून द्राक्षरस पिण्यास भाग पाडले.
ವಿದೇಶೀಯ ಜನರೆಲ್ಲರಿಗೂ, ಊಚ್ ದೇಶದ ಅರಸರೆಲ್ಲರಿಗೂ, ಫಿಲಿಷ್ಟಿಯ ದೇಶದ ಅರಸರಾದ, ಅಷ್ಕೆಲೋನಿಗೂ, ಗಾಜಕ್ಕೂ, ಎಕ್ರೋನಿಗೂ, ಅಷ್ಡೋದಿನ ಉಳಿದವರಿಗೂ,
21 २१ आणि अदोम, मवाब व अम्मोन यामधील राजांनाही द्राक्षरस प्यायला लावले.
ಎದೋಮಿಗೂ, ಮೋವಾಬಿಗೂ, ಅಮ್ಮೋನ್ಯರಿಗೂ,
22 २२ आणखी सोरच्या व सीदोनाचे सर्व राजे, समूद्राच्या दुसऱ्या बाजूस असणारे सर्व राजे,
ಟೈರಿನ ಅರಸರೆಲ್ಲರಿಗೂ, ಸೀದೋನಿನ ಅರಸರೆಲ್ಲರಿಗೂ, ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ,
23 २३ आणि ददान, तेमा व बूज केसांच्या या कडा कापलेले सर्व लोक,
ದೆದಾನಿಗೂ, ತೇಮಾಕ್ಕೂ, ಬೂಜಿಗೂ, ಕಟ್ಟಕಡೆಯ ಮೂಲೆಯವರೆಗೂ,
24 २४ अरबस्तानातील सर्व राजे, व जे मिश्रित लोक रानांत राहतात त्यांचे सर्व राजे,
ಅರೇಬಿಯದ ಅರಸರೆಲ್ಲರಿಗೂ, ಮರುಭೂಮಿಯಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ,
25 २५ आणि जिमरी, एलाम व माद्य येथील सर्व राजे,
ಜಿಮ್ರಿಯ ಅರಸರೆಲ್ಲರಿಗೂ, ಏಲಾಮಿನ ಅರಸರೆಲ್ಲರಿಗೂ, ಮೇದ್ಯದ ಅರಸರೆಲ್ಲರಿಗೂ,
26 २६ उत्तरेकडील सर्व, दूरच्या व जवळचे राजे या सर्वांना, या पृथ्वीवर असणारे सर्व, आपल्या राज्यांसहीत, भावांसहीत, त्या सर्वांना मी तो प्याला प्या प्यायला लावला आहे. पण बाबेलचा राजा, त्या सर्वांच्या नंतर या प्याल्यातून पिईल.
ಹತ್ತಿರದಲ್ಲಿಯೂ, ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿರುವ ಉತ್ತರ ದಿಕ್ಕಿನ ಅರಸರೆಲ್ಲರಿಗೂ, ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯಗಳಿಗೂ ಕುಡಿಸಿದೆನು. ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
27 २७ “परमेश्वर मला म्हणाला, यिर्मया, तू त्यांना असे सांग, सेनाधीश परमेश्वर, इस्राएलचा देव म्हणतो: प्या आणि त्यामुळे झिंगा आणि वांत्या करा, पडा आणि मी पाठवत असलेली तलवार येण्यापर्यंत परत उठू नका.
“ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’
28 २८ मग ते तुझ्या हातातून प्यायला पिण्यास तयार नसतील तर, तू त्यांना असे सांग सेनाधीश परमेश्वर असे म्हणतो, तुम्ही खरोखरच या प्याल्यातून पिणारच.
ಅವರು ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಂಡು ಕುಡಿಯಲು ತಿರಸ್ಕರಿಸಿದರೆ, ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀವು ನಿಶ್ಚಯವಾಗಿ ಕುಡಿಯಬೇಕು.
29 २९ कारण पाहा! माझ्या नावाने ओळखल्या जाणाऱ्या नगरावर जर मी आपत्ती आणत आहे, तर तुम्हास शिक्षा होणार नाही असे कसे? तुमची सुटका होणार नाही, कारण मी पृथ्वीवरील सर्व राहणाऱ्यांविरूद्ध तलवारीला पाठवणार आहे.” सेनाधीश परमेश्वर असे म्हणतो.
ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’
30 ३० “तर यिर्मया, तू त्यांना हे भविष्यवचन सांग, त्यांना बोल: परमेश्वर उंचावरुन गर्जना करतो, आणि त्याच्या पवित्र मंदिरातून आपला शब्द उच्चारील, तो त्याच्या कळपाविरूद्ध गर्जना करील. द्राक्षरस काढताना, द्राक्षे तुडविताना, लोक ज्याप्रमाणे मोठ्याने गातात, तसा, देशाच्या सर्व राहणाऱ्यांविरूद्ध तो ओरडेन.
“ಆದ್ದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ, ಅವರಿಗೆ ಹೇಳತಕ್ಕದ್ದೇನೆಂದರೆ, “‘ಯೆಹೋವ ದೇವರು ಉನ್ನತದಿಂದ ಗರ್ಜಿಸಿ, ತಮ್ಮ ಪರಿಶುದ್ಧ ನಿವಾಸದೊಳಗಿಂದ ತಮ್ಮ ಶಬ್ದವನ್ನು ಕೊಡುವರು. ತಮ್ಮ ನಿವಾಸದ ಮೇಲೆ ಗಟ್ಟಿಯಾಗಿ ಗರ್ಜಿಸಿ, ದ್ರಾಕ್ಷಿ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವರು.
31 ३१ तो आवाज पृथ्वीच्या शेवटापर्यंत येणार, कारण परमेश्वराचा विवाद राष्ट्रांविरूद्ध आहे, तो त्यांचा न्यायनिवाडा करणार. आणि तो सर्व देहावर न्यायव्यवस्था चालवणार. दुष्टांना तो तलवारीस देणार.” परमेश्वर असे म्हणतो.
ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’” ಎಂದು ಯೆಹೋವ ದೇವರು ಹೇಳುತ್ತಾರೆ.
32 ३२ सेनाधीश परमेश्वर असे म्हणतो, “अरिष्टे एका राष्ट्रातून दुसऱ्या राष्ट्रात पुढे जाणार, आणि पृथ्वीवरच्या अतिदूरच्या ठिकाणाहून वादळाची सुरुवात होईल.”
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವುದು. ಭೂಮಿಯ ಮೇರೆಗಳಿಂದ ಮಹಾ ಬಿರುಗಾಳಿ ಏಳುವುದು.”
33 ३३ आणि जे परमेश्वरापासून मारले गेले, त्या लोकांची प्रेते पृथ्वीच्या एका टोकाकडून दुसऱ्या टोकाकडे पसरतील. त्यांच्यासाठी कोणीही शोक करणार नाही किंवा ती गोळा करणार नाही आणि पुरणारही नाही. शेणाप्रमाणे ती जमिनीवर पडतील.
ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯವರೆಗೆ ಯೆಹೋವ ದೇವರಿಂದ ಹತರಾದವರು ಇರುವರು. ಅವರಿಗೋಸ್ಕರ ಗೋಳಾಡುವುದಿಲ್ಲ. ಅವರನ್ನು ಕೂಡಿಸುವುದಿಲ್ಲ. ಅವರನ್ನು ಹೂಳಿಡುವುದಿಲ್ಲ. ಅವರು ಭೂಮಿಯ ಮೇಲೆ ಗೊಬ್ಬರದಂತಿರುವರು.
34 ३४ मेंढपाळांनो विलाप करा आणि मदतीसाठी रडा. कळपातील धन्यांनो जमिनीवर लोळा. कारण ही तुला मारल्या जाण्याचा आणि विखरण्याचा दिवस आला आहे. तुम्ही फुटक्या मडक्याच्या तुकड्याप्रमाणे सगळीकडे पडाल.
ಕುರುಬರೇ, ಗೋಳಿಟ್ಟು ಕೂಗಿರಿ. ಮಂದೆಯಲ್ಲಿನ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ. ಏಕೆಂದರೆ ನಿಮ್ಮನ್ನು ಕೊಲ್ಲುವುದಕ್ಕೂ, ಚದರಿಸುವುದಕ್ಕೂ ದಿನಗಳು ತುಂಬಿ ಇವೆ. ಆಗ ನೀವು ಒಡೆದುಹೋದ ಅಂದವಾದ ಪಾತ್ರೆಯಂತೆ ಬೀಳುವಿರಿ.
35 ३५ मेंढपाळांना लपायला कोठेही आश्रय राहणार नाही. आणि कळपातील धन्यांना सुटता येणार नाही.
ಆಗ ಕುರುಬರಿಗೆ ಓಡಿ ಹೋಗುವುದಕ್ಕೂ, ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವುದಕ್ಕೂ ಮಾರ್ಗವಿಲ್ಲದೆ ಹೋಗುವುದು.
36 ३६ मग मेंढपाळांच्या दुःखाचे रडणे आणि कळपाच्या धन्याचा विलाप तिथे असेल. कारण परमेश्वर त्यांच्या कळपाचा विनाशक झाला आहे.
ಕುರುಬರ ಕೂಗಿನ ಶಬ್ದವು, ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳಿಸುತ್ತಿದೆ. ಏಕೆಂದರೆ ಯೆಹೋವ ದೇವರು ಅವರ ಮೇವಿನ ಸ್ಥಳವನ್ನು ಹಾಳು ಮಾಡಿದ್ದಾರೆ.
37 ३७ त्या शांत कुरणांचा नाश केला जाईल आणि ती ओसाड वाळवंट होतील. परमेश्वराचा संतप्त क्रोध हा,
ಸಮಾಧಾನವುಳ್ಳ ಗೋಮಾಳಗಳು ಯೆಹೋವ ದೇವರ ಕೋಪದ ದೆಸೆಯಿಂದ ಕೆಡವಿಬಿದ್ದವು.
38 ३८ जसा गुहेत राहणाऱ्या तरुन सिंहाप्रमाणे, ज्याने आपली गुहा सोडली आहे त्याप्रमाणे असेल. कारण पीडणाऱ्या तलवारींमुळे व त्याच्या संतप्त क्रोधामुळे त्यांचा देश ओसाड झाला आहे.
ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.

< यिर्मया 25 >