< यिर्मया 26 >
1 १ योशीयाचा मुलगा, यहोयाकीम, यहूदाचा राजा ह्याच्या राज्याच्या आरंभी परमेश्वराकडून हे वचन आले, ते म्हणाले,
೧ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
2 २ परमेश्वर म्हणाला, “यिर्मया, परमेश्वराच्या मंदिराच्या प्रांगणात उभा राहा आणि परमेश्वराच्या मंदिरात उपासना करण्यास येणाऱ्यांना हा सर्व यहूदातील नगरांना तुला त्यांच्याजवळ बोलायला आज्ञापितो ती बोल, एक शब्द कमी करु नको.
೨“ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.
3 ३ कदाचित् ते ऐकतील आणि प्रत्येक जण त्याच्या कुमार्गापासून वळेल, त्यांच्या कर्मांच्या दुष्टपणाबद्दल त्यांना शिक्षा करण्याच्या माझ्या बेतांबद्दल मीही कदाचित् पुनर्विचार करीन.
೩ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
4 ४ तू त्यांना सांग ‘परमेश्वर असे म्हणतो: जर तुम्ही माझ्या नियमशास्त्राप्रमाणे ऐकले नाही, जे मी तुम्हा समोर ठेवले आहे,
೪ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,
5 ५ जर तुम्ही माझ्या सेवकांचे जे संदष्टे आहेत, ज्यांना मी तुम्हाकडे नित्याने पाठवत आलो आहे, त्यांचे ऐकले नाही.
೫ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,
6 ६ तर मी हे घर शिलोसारखे करीन, पृथ्वीवरील सर्व राष्ट्रांच्या देखत मी या नगराला शाप असे करीन.”
೬ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.
7 ७ परमेश्वराच्या मंदिरातील यिर्मयाचे हे बोलणे याजकांनी, संदेष्ट्यांनी आणि सगळ्या लोकांनी ऐकले.
೭ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ ಕೇಳಿದರು.
8 ८ परमेश्वराने आज्ञा केल्याप्रमाणे, यिर्मयाने, परमेश्वराने सांगितलेली प्रत्येक गोष्ट सांगितली, नंतर याजकांनी, संदेष्ट्यांनी आणि लोकांनी यिर्मयाला धरले. ते म्हणाले, तू खचित मरशील!
೮ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!
9 ९ शिलोच्या मंदिराप्रमाणे या घराचा नाश होईल आणि हे नगर निर्जन असे होईल, ज्यात कोणीच राहत नाही, परमेश्वराच्या नावाने तू हे भविष्य का सांगितले? आणि परमेश्वराच्या मंदिरात सर्व लोक यिर्मयाभोवती जमले.
೯ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.
10 १० यहूदातील राज्यकर्त्यांना ही सर्व हकिकत कळली, म्हणून ते राज्याचा घरातून बाहेर आले व वरती परमेश्वराच्या मंदिरात गेले. तेथे ते परमेश्वराच्या मंदिरात नव्या प्रवेशद्वाराजवळ स्थानांवर बसले.
೧೦ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.
11 ११ नंतर याजक व संदेष्टे अधिकाऱ्यांशी व सर्व लोकांशी बोलले. ते म्हणाले “यिर्मयाला ठार करावे. यरूशलेम शहराबद्दल तो वाईट भविष्यकथन करतो तुम्ही त्याचे बोलणे तुमच्या स्वत: च्या कानांनी ऐकलेच आहे.”
೧೧ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.
12 १२ मग यिर्मया यहूदाच्या अधिकाऱ्यांशी व इतर लोकांशी बोलला तो म्हणाला, “जी वचने तुम्ही ऐकली, ती या नगरीबद्दल व या मंदिराबद्दल हे भविष्य म्हणून सांगण्यासाठी परमेश्वरानेच मला पाठवले.
೧೨ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.
13 १३ तर आता तुम्ही आपली कर्मे आणि मार्ग व्यवस्थीत करा, आणि तुमचा परमेश्वर, तुमचा देव, याची वाणी ऐका, म्हणजे तो जे अरिष्ट तुम्हावर आणण्याचा बेत करीत आहे त्यामध्ये तो कदाचीत फेरविचार करीन.
೧೩ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
14 १४ माझ्याबद्दल म्हणाल, तर मी तुमच्या हातात आहे. तुम्हास योग्य व बरोबर वाटेल ते माझ्यासोबत करा.
೧೪ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವುದನ್ನು ನನಗೆ ಮಾಡಿರಿ.
15 १५ पण तुम्ही मला ठार मारलेत, तर एका गोष्टीची खात्री बाळगा. निरपराध मनुष्यास मारल्याबद्दल तुम्ही अपराधी ठराल. तुम्ही या नगरीला आणि तिच्यात राहणाऱ्या प्रत्येक मनुष्यासही अपराधी बनवाल. परमेश्वराने खरोखरच मला तुमच्याकडे ह्यासाठी पाठवले आहे की ही सर्व वचने तुमच्या कानात बोलावी.”
೧೫ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.
16 १६ मग अधिकारी आणि सर्व लोक याजकांना व संदेष्ट्यांना बोलले, “यिर्मयाला अजिबात मारु नका. त्याने आपल्याला सांगितलेल्या गोष्टी परमेश्वराच्या नावाने आम्हाला ही वचने घोषीत केली आहे.”
೧೬ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.
17 १७ नंतर काही वडीलधारी उभे राहिले आणि ते सभेतील सर्व लोकांस उद्देशून म्हणाले,
೧೭ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು,
18 १८ “ते म्हणाले, मोरेष्टचा मीखा, हा हिज्कीया यहूदाचा राजाच्या दिवसात भविष्यसांगत असे. तो यहूदाच्या सर्व लोकांस म्हणाला, सेनाधीश परमेश्वर असे म्हणतो, सियोनेचा नाश होईल सियोन नांगरलेले शेत होईल. यरूशलेम दगडांची रास होईल. मंदिर असलेली टेकडी वनातील उंच टेकडी सारखी होईल.”
೧೮“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ
19 १९ “तर हिज्कीया यहूदाचा राजा आणि सर्व यहूदाने मीखाला ठार मारले काय? त्याने परमेश्वराबद्दल भय बाळगले की नाही? आणि त्याने परमेश्वराचा राग शांत केला, आणि त्याच्याविरुध्द जे अरिष्ट परमेश्वराने योजिले होते, त्या गोष्टी त्याने घडू दिल्या नाहीत. अशाने तर आम्ही आपल्याच जिवाविरूद्ध मोठे पाप करु.”
೧೯ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.
20 २० पूर्वी आणखी एक मनुष्य, किर्याथ-यारीमकर, शमायाचा मुलगा, उरीया, हा परमेश्वराच्या नावाने भविष्य सांगत होता. त्याने या नगरीच्या विरोधात आणि या भूमीच्याही विरोधात, यिर्मयाप्रमाणेच भविष्य सांगितले आहेत.
೨೦ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.
21 २१ परंतू राजा यहोयाकीम, त्याचे सर्व सैन्य व अधिकाऱ्याने हे वचन ऐकले आणि यहोयाकीम राजा उरीयाला मारु इच्छित होता, हे उरीयाला समजल्यावर तो घाबरला व मिसर देशात पळाला.
೨೧ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.
22 २२ पण यहोयाकीम राजाने एलनाथान नावाच्या मनुष्याबरोबर आणखी काही माणसे देऊन त्यांना मिसरला पाठवले. एलनाथान अखबोरचा मुलगा होता,
೨೨ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
23 २३ त्या मनुष्यांनी उरीयाला मिसरहून परत आणले. ते त्यास यहोयाकीम राजाकडे घेऊन गेले. यहोयाकीमने उरीयाला तलवारीने मारण्याचा हुकूम दिला. नंतर सामान्य लोकांच्या दफनभूमीत त्याचे प्रेत पाठवण्यात आले.
೨೩ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
24 २४ पण अहीकाम या प्रतिष्ठित व्यक्तीने यिर्मयाला पाठिंबा दिला अहीकाम शाफानचा मुलगा होता. त्याने यिर्मयाला याजक व संदेष्टे यांच्या हातातून सोडवले, जे त्यास मारणार होते.
೨೪ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.