< यिर्मया 29 >

1 बंदिवान करून नेलेल्यांतील राहिलेले वडील याजक, संदेष्टे आणि यरूशलेमेमधून बाबेलास ज्यास नबुखद्नेस्सराने कैद करून नेले होते, त्या सर्व लोकांस यिर्मया संदेष्ट्याने यरूशलेमेहून पत्र पाठवले.
ಪ್ರವಾದಿಯಾದ ಯೆರೆಮೀಯನು ಸೆರೆಯಲ್ಲಿರುವ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಒಯ್ದ ಜನರೆಲ್ಲರಿಗೂ
2 राजा यकन्या, राजमाता, व उच्च अधिकारी, यहूदाचे व यरूशलेमेचे नेते, व कारागीर हे यरूशलेमेमधून निघून गेल्यावर यिर्मयाने हे पत्र पाठवले.
ಅರಸನಾದ ಯೆಕೊನ್ಯನೂ ರಾಜಮಾತೆಯೂ ಕಂಚುಕಿಗಳೂ ಯೆಹೂದದ ಯೆರೂಸಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.
3 ज्यांना यहूदाचा राजा सिद्कीया याने बाबेलाचा राजा नबुखद्नेस्सर याच्याकडे एलास शाफानाचा व गमऱ्या हिल्कीयाचा मुलगा यांच्या हस्ते पत्र पाठवले.
ಯೆಹೂದದ ಅರಸನಾದ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರೀಯನ ಕೈಯಿಂದಲೂ ಕಳುಹಿಸಿದ ಪತ್ರ:
4 पत्रात असे म्हटले, ज्यांना मी यरूशलेमेहून कैद करून बाबेलास नेण्यास लावले त्या सर्वांना सेनाधीश परमेश्वर, इस्राएलाचा देव असे सांगतो,
ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಯೆರೂಸಲೇಮಿನಿಂದ ಬಾಬಿಲೋನಿಗೆ ನಾನು ಕರೆದೊಯ್ದ ಸೆರೆಯವರೆಲ್ಲರಿಗೆ ಹೇಳುವುದೇನೆಂದರೆ:
5 “घरे बांधून त्यामध्ये राहा. बागे लावा आणि त्याचे फळ खा.
“ಮನೆಗಳನ್ನು ಕಟ್ಟಿ ವಾಸಮಾಡಿರಿ. ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ.
6 स्त्रिया करा, आणि मुलाला व मुलीला जन्म द्या, नंतर आपल्या मुलांसाठी स्त्रिया करून द्या आणि तुमच्या मुलींना नवरे करून द्या. त्यांनी मुलांना व मुलींना जन्म द्यावा. तेथे तुम्ही वाढा, कमी होऊ नका.
ಮದುವೆಮಾಡಿಕೊಂಡು, ಪುತ್ರಪುತ್ರಿಯರನ್ನು ಪಡೆಯಿರಿ. ನಿಮ್ಮ ಪುತ್ರರಿಗೆ ಹೆಂಡತಿಯರನ್ನು ಹುಡುಕಿರಿ. ನಿಮ್ಮ ಪುತ್ರಿಯರನ್ನು ಮದುವೆಮಾಡಿಕೊಡಿರಿ; ಅವರು ಪುತ್ರಪುತ್ರಿಯರನ್ನು ಹೆರಲಿ. ಹೀಗೆ ನೀವು ಕಡಿಮೆಯಾಗದೆ, ಅಲ್ಲಿ ಹೆಚ್ಚಿರಿ.
7 मी ज्या नगरांत तुम्हास बंदिवान करून न्यायला लावले त्याच्या शांतीसाठी झटा आणि त्यांच्यावतीने माझ्याबरोबर मध्यस्थी करा. कारण त्यांच्या शांतीत तुमची शांती आहे.”
ನಾನು ನಿಮ್ಮನ್ನು ಸೆರೆಯಾಗಿ ಒಯ್ದ ಪಟ್ಟಣದ ಸಮಾಧಾನ ಮತ್ತು ಸಮೃದ್ಧಿಯನ್ನು ಹುಡುಕಿರಿ. ಅದಕ್ಕೋಸ್ಕರ ಯೆಹೋವ ದೇವರಿಗೆ ಪ್ರಾರ್ಥನೆಮಾಡಿರಿ. ಏಕೆಂದರೆ ಅದರ ಸಮಾಧಾನದಿಂದ ನಿಮಗೆ ಸಮಾಧಾನವಾಗುವುದು.”
8 कारण सेनाधीश परमेश्वर, इस्राएलाचा देव, असे म्हणतो, “तुमच्यामध्ये असलेले तुमचे संदेष्टे आणि ज्योतिषीह्न्जी यांनी तुम्हास फसवू नये आणि तुम्ही ज्यास आपली स्वप्ने पाहण्यास लावता त्याचे तुम्ही ऐकू नका.
ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳೂ ನಿಮ್ಮ ಶಕುನದವರೂ ನಿಮಗೆ ಮೋಸಮಾಡದಿರಲಿ. ನೀವು ಕೇಳುವ ನಿಮ್ಮ ಕನಸುಗಳಿಗೆ ಕಿವಿಗೊಡಬೇಡಿರಿ.
9 कारण ते माझ्या नामाने लबाड भविष्य सांगतात. मी त्यांना बाहेर पाठविले नाही.” असे परमेश्वर म्हणतो.
ಏಕೆಂದರೆ ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
10 १० कारण परमेश्वर असे म्हणतो, जेव्हा बाबेलाच्या राज्यास सत्तर वर्षे होतील, मी तुम्हास मदत करील आणि तुम्हास या स्थळी परत आणण्याचे सुवचन मी पूर्ण करीन.
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
11 ११ कारण परमेश्वर असे म्हणतो की, तुमच्याविषयी माझ्या मनात ज्या योजना आहेत त्या मी जाणतो; त्या योजना तुमच्या हिताच्या आहेत आणि अनिष्टासाठी नाहीत, त्या तुम्हास भविष्य व आशा देणाऱ्या आहेत.
ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.
12 १२ मग तुम्ही माझा धावा कराल आणि जाऊन माझी प्रार्थना कराल आणि तेव्हा मी तुमचे ऐकेन.
ಆಗ ನನ್ನನ್ನು ಕರೆಯುವಿರಿ. ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ. ನಾನು ನಿಮಗೆ ಕಿವಿಗೊಡುವೆನು.
13 १३ कारण जेव्हा तुम्ही आपल्या संपूर्ण हृदयाने मला शोधाल, तेव्हा मी तुम्हास सापडेन.
ನನ್ನನ್ನು ಹುಡುಕುವಿರಿ. ಪೂರ್ಣಹೃದಯದಿಂದ ನನ್ನನ್ನು ಹುಡುಕುವಾಗ, ನನ್ನನ್ನು ಕಂಡುಕೊಳ್ಳುವಿರಿ.
14 १४ परमेश्वर असे म्हणतो की मग मी तुम्हास प्राप्त होईल. “मी तुम्हास बंदिवासातून परत आणीन आणि ज्या सर्व राष्ट्रांत व सर्व स्थानात मी तुम्हास विखरविले त्यातून मी तुम्हास एकवटीन आणि ज्या स्थानातून मी तुम्हास कैद करून नेले आहे त्याकडे मी तुम्हास परत आणीन.” असे परमेश्वर म्हणतो.
ನಿಮಗೆ ದೊರೆಯುವೆನು. ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಿಂದಲೂ, ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನು. ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿದೆನೋ, ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.”
15 १५ “कारण तुम्ही म्हटले आहे की, परमेश्वराने आम्हासाठी बाबेलामध्ये संदेष्टे उत्पन्न केले आहेत.”
ಆದರೆ, “ಯೆಹೋವ ದೇವರು ನಮಗೆ ಬಾಬಿಲೋನಿನಲ್ಲಿ ಪ್ರವಾದಿಗಳನ್ನು ಎಬ್ಬಿಸಿದ್ದಾನೆ,” ಎಂದು ನೀವು ಹೇಳಿದ್ದರಿಂದ,
16 १६ दावीदाच्या सिंहासनावर जो बसला आहे त्याच्याविषयी आणि जे लोक त्या नगरात राहतात, तुमचे बांधव जे बंदिवासात तुमच्याबरोबर बाहेर गेले नाहीत, त्या सर्वांविषयी परमेश्वर म्हणतो,
ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ, ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ
17 १७ सेनाधीश परमेश्वर असे म्हणतो की, पाहा, मी त्यांच्यावर तलवार, दुष्काळ आणि आजार पाठवीन. कारण मी त्यांना कुजलेल्या अंजिरासारखे करीन जे खाण्याससुद्धा घाणेरडे असते.
ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ಅವರಲ್ಲಿ ಖಡ್ಗವನ್ನೂ ಕ್ಷಾಮವನ್ನೂ ವ್ಯಾಧಿಯನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿರುವುದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರಗಳ ಹಾಗೆ ಮಾಡುವೆನು.
18 १८ आणि मी त्यांचा तलवार, दुष्काळ आणि मरीने पाठपुरावा करीन आणि पृथ्वीवरील सर्व राज्याच्या दृष्टीने दहशत पोहचेल असे मी त्यांना करीन. मी त्यांना ज्या राष्ट्रात विखरविले आहे तेथे भयंकर भीती, शाप व निंदा व उपहास या गोष्टींचे ते विषय होतील.
ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.
19 १९ परमेश्वर असे म्हणतो, याचे कारण हे आहे की, मी आपले सेवक संदेष्टे यांच्याद्वारे माझी वचने पाठवली, तरी त्यांनी माझे ऐकले नाही. मी वारंवार त्यांना पाठवले पण तुम्ही ऐकले नाही, असे परमेश्वर म्हणतो.
ಏಕೆಂದರೆ ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ. ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಿಗ್ಗೆ ಪುನಃ ಕಳುಹಿಸಿದೆನು. ಆದರೆ ಅವರು ಕೇಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
20 २० “तर बंदिवानानो ज्या तुम्हास यरूशलेमेहून बाबेलास पाठविले ते तुम्ही परमेश्वराचे वचन ऐका.”
ಆದ್ದರಿಂದ ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಕಳುಹಿಸಿದ ಸೆರೆಯವರೆಲ್ಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ,
21 २१ कोलायाचा मुलगा अहाब व मासेयाचा मुलगा सिद्कीया, ते माझ्या नावाने खोटे भविष्य सांगतात, यांच्याविषयी इस्राएलाचा देव सेनाधीश परमेश्वर असे म्हणतो, पाहा, मी त्यांना बाबेलाचा राजा नबुखद्नेस्सराच्या हाती देईन. आणि तो त्यास तुमच्या डोळ्यांसमोर ठार करील.
ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗ ಅಹಾಬನ ವಿಷಯವೂ, ಮಾಸೇಯನ ಮಗ ಚಿದ್ಕೀಯನ ವಿಷಯವೂ, ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ. ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದುಹಾಕುವನು.
22 २२ नंतर यहूदाचे जे सर्व बंदिवान करून बाबेलात नेलेल्या या मनुष्यांविषयी हा शाप म्हणतील, सिद्कीया व अहाब यांना बाबेलाच्या राजाने अग्नीवर भाजले तसे परमेश्वर तुला करो.
ಬಾಬಿಲೋನಿನಲ್ಲಿರುವ ಯೆಹೂದದ ಸೆರೆಯವರೆಲ್ಲರು ಅವರಿಂದ ಶಾಪವನ್ನು ತೆಗೆದುಕೊಂಡು, ‘ಬಾಬಿಲೋನಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ, ಅಹಾಬನ ಹಾಗೆಯೂ ಯೆಹೋವ ದೇವರು ನಿನಗೆ ಮಾಡಲಿ,’ ಎಂದು ಹೇಳುವರು.
23 २३ हे यासाठी होईल की, कारण त्यांनी इस्राएलामध्ये लज्जास्पद गोष्टी केल्यात, आपल्या शेजाऱ्यांच्या बायकांबरोबर व्यभिचार केला आणि जे मी त्यांना आज्ञापिले नाही ते वचन ते खोटेपणाने माझ्या नावाने बोलले आहेत. कारण जो मी एक आहे तो जाणतो. असे परमेश्वर म्हणतो.
ಏಕೆಂದರೆ ಅವರು ತಮ್ಮ ನೆರೆಯವರ ಹೆಂಡರ ಸಂಗಡ ವ್ಯಭಿಚಾರ ಮಾಡಿ, ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ, ಇಸ್ರಾಯೇಲಿನಲ್ಲಿ ನೀಚತನವನ್ನು ನಡೆಸಿದರು. ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
24 २४ शमाया नेहेलमकराबद्दल, हे सांग,
ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು:
25 २५ सेनाधीश परमेश्वर, इस्राएलाचा देव, हे म्हणतो, कारण जे सर्व लोक यरूशलेमेत आहेत त्यांच्याकडे व मासेयाचा मुलगा याजक सफन्या व सर्व याजक यांच्याकडे तू आपल्या नावाने पत्रे पाठवून व म्हटले,
“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ, ಮಾಸೇಯನ ಮಗ ಯಾಜಕನಾದ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದೆಯಲ್ಲಾ?
26 २६ परमेश्वराने तुला यहोयादाच्या जागी याजक म्हणून नेमले आहे. यासाठी की, परमेश्वराच्या मंदिराचा तू अधिकारी असावे. जो कोणी वेडा होऊन आपणास संदेष्टा करतो, ते सर्व लोक तुझ्या नियंत्रणात आहेत. तू त्यांना खोड्यात अडकवून व बेडी घालावी.
‘ಏಕೆಂದರೆ, ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯನಿಗೆ ಯೆಹೋವ ದೇವರ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ, ನೀನು ಅಂಥವರನ್ನು ಕೋಳದಲ್ಲಿಯೂ, ಸೆರೆಯಲ್ಲಿಯೂ ಇಡುವ ಹಾಗೆಯೂ, ಯೆಹೋವ ದೇವರು ಯಾಜಕನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕನಾಗಿ ಇಟ್ಟಿದ್ದಾರೆ.
27 २७ म्हणून आता, अनाथोथकर यिर्मया जो आपणास तुम्हासमोर संदेष्टा म्हणवतो त्यास तू का धमकावले नाहीस?
ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಗದರಿಸಲಿಲ್ಲ?
28 २८ कारण त्याने बाबेलास आम्हाकडे पत्र पाठवले व म्हटले की, “बंदिवास दीर्घकाळ राहील, म्हणून घरे बांधा, वस्ती करा, बागा लावा व त्याची फळे खा.”
ಏಕೆಂದರೆ, ಅವನು ಸೆರೆಯು ಬಹಳ ದೀರ್ಘವಾಗುವುದು, ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ; ಎಂದು ನಮಗೆ ಬಾಬಿಲೋನಿಗೆ ಹೇಳಿ ಕಳುಹಿಸಿದ್ದಾನೆ.’”
29 २९ सफन्या याजकाने हे पत्र यिर्मया संदेष्ट्याला ऐकू येईल असे वाचले.
ಆಗ ಯಾಜಕನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆಮೀಯನಿಗೆ ಓದಿ ಹೇಳಿದನು.
30 ३० मग यिर्मयाकडे परमेश्वराचे वचन आले आणि म्हणाले,
ಆಗ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು:
31 ३१ “सर्व बंदिवासांतल्या लोकांस निरोप पाठव व सांग, नेहेलमकर घराण्यातील शमाया याच्याबद्दल परमेश्वर असे म्हणतो ‘कारण शमायाने तुम्हास भविष्य सांगितले आहे पण मी त्यास पाठविलेले नाही. कारण तुम्ही खोट्यावर विश्वास ठेवावा, असे त्याने केले आहे.
“ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸಬೇಕಾದದ್ದೇನೆಂದರೆ, ‘ಯೆಹೋವ ದೇವರು ನೆಹೆಲಾಮ್ಯನಾದ ಶೆಮಾಯನ ವಿಷಯವಾಗಿ ಹೀಗೆ ಹೇಳುತ್ತಾರೆ. ಶೆಮಾಯನು, ನಾನು ಅವನನ್ನು ಕಳುಹಿಸದೆ ಇರುವಾಗ, ನಿಮಗೆ ಪ್ರವಾದಿಸಿ, ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಇಡಮಾಡಿದ ಕಾರಣ,
32 ३२ म्हणून परमेश्वर असे म्हणतो की, पाहा, मी शमाया नेहेलमकराला आणि त्याच्या वंशजाला शिक्षा करीन. या लोकांमध्ये वस्ती करायला त्याचा कोणी उरणार नाही. मी आपल्या लोकांसाठी जे चांगले करीन ते तो पाहणार नाही. कारण त्याने परमेश्वराविरूद्ध गैरविश्वासाचे भाषण केले आहे. असे परमेश्वर म्हणतो.
ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’”

< यिर्मया 29 >