< यिर्मया 51 >
1 १ परमेश्वर असे म्हणतो, पाहा, मी बाबेलावर आणि लेब-कामाईत जे कोणी राहतात त्यांच्याविरुद्ध विध्वंसक वाऱ्याने खळबळ उडवीन.
೧ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಮೇಲೂ, ಲೇಬ್ ಕಾಮೈ ದೇಶದವರ ಮೇಲೂ ನಾಶನದ ಗಾಳಿಯನ್ನು ಬೀಸಮಾಡುವೆನು.
2 २ मी बाबेलाकडे परदेशीय पाठवीन. ते तिला पाखडून काढतील आणि तिचा देश उध्वस्त करतील, कारण ते तिला अरिष्टाच्या दिवशी चहूकडून तिच्याविरूद्ध होतील.
೨ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು. ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯಮಿತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.
3 ३ तिरंदाजाने आपले धनुष्य वाकवू नये; त्यांनी चिलखते घालू नये. तिच्या तरुणांना वाचवू नको. तिच्या सर्व सैन्याला विध्वंसकाच्या हवाली कर.
೩ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ. ಬಾಬೆಲಿನ ಯುವಕರನ್ನು ಉಳಿಸದಿರಿ; ಅದರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ.
4 ४ कारण जखमी लोक खास्द्यांच्या भूमीत पडतील. वधलेले तिच्या रस्त्यांवर पडतील.
೪ಕಸ್ದೀಯರು ತಮ್ಮ ದೇಶದಲ್ಲಿ ಹತರಾಗಿ ಬೀಳುವರು, ಬಾಬೆಲಿನ ಬೀದಿಗಳಲ್ಲಿ ಇರಿಯಲ್ಪಟ್ಟು ಮಣ್ಣುಪಾಲಾಗುವರು.
5 ५ कारण जरी इस्राएलाच्या पवित्र प्रभूविरूद्ध केलेल्या अपराधांनी त्यांचा देश भरून गेला आहे, तरी इस्राएलास व यहूदास, त्यांचा देव सेनाधीश परमेश्वर याने त्यांना सोडले नाही.
೫ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ, ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.
6 ६ बाबेलामधून पळून जा. प्रत्येक मनुष्याने आपणास वाचवावे. तिच्या अन्यायात नष्ट होऊ नये. कारण परमेश्वराचा सूड घेण्याचा समय आहे. तो तिला तिचे सर्व प्रतिफळ भरून देईल.
೬ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.
7 ७ बाबेल परमेश्वराच्या हातातील सोन्याचा पेला होता, तिने सर्व देशाला धुंद केले आहे. राष्ट्रे तिचा द्राक्षरस प्याली आणि ते विवेकशून्य झाले.
೭ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.
8 ८ बाबेल अकस्मात पडेल आणि नाश होईल. त्याची शकले पडतील. तिच्यासाठी शोक करा. तिच्या वेदनेसाठी तिला औषध द्या. कदाचित् ती बरी होईल.
೮ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.
9 ९ बाबेल बरी होण्याची आमची इच्छा होती, पण ती बरी झाली नाही, चला आपण सर्व तिला सोडून व दूर आपल्या देशात जाऊ. कारण तिचा गुन्हा आकाशास पोहचला आहे; त्याचा आभाळापर्यंत ढीग झाला आहे.
೯ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.
10 १० परमेश्वराने आपली नितीमत्ता जाहीर केली आहे. या, परमेश्वर आमचा देव याची कृत्ये आपण सीयोनांत सांगू या.
೧೦ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡೆಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!
11 ११ बाण धारदार करा! ढाली घ्या. परमेश्वराने माद्य राजाचा आत्म्यास चिथावणी दिली आहे कारण बाबेलाचा नाश करावा अशी त्याची योजना होती. कारण हा परमेश्वराकडून सूड आहे, त्याचे मंदिर उध्वस्त केल्याबद्दलचा सूड आहे.
೧೧ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!
12 १२ बाबेलाच्या तटासमोर झेंडा उभारा. पहारा बळकट करा. पहारेकरी ठेवा; जे कोणी नगरातून पळून येतील त्यांना पकडण्यासाठी सैनिकांना लपवा, कारण परमेश्वराने बाबेलाच्या रहिवाश्याविरूद्ध जी योजना करून सांगितले ते त्याने केलेच आहे.
೧೨ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ.
13 १३ तुम्ही लोक जे बहुत पाण्याच्या प्रवाहाजवळ राहतात, जे तुम्ही लोक खजिन्यांनी धनवान आहात, तुझा शेवट आला आहे. तुझ्या आयुष्याची दोरी आता संक्षीप्त केली आहे.
೧೩ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.
14 १४ सेनाधीश परमेश्वराने आपल्याच जीविताची शपथ वाहिली आहे की, “टोळाच्या पीडेप्रमाणे, मी तुला तुझ्या शत्रूंनी भरीन.” ते तुझ्याविरूद्ध युद्धाची आरोळी करतील.
೧೪ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು, ‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು.
15 १५ त्याने पृथ्वी आपल्या सामर्थ्याने निर्माण केली, त्याने आपल्या ज्ञानाने कोरडी भूमी स्थापिली आपल्या बुद्धीने आकाश पसरिले;
೧೫ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ವಿಸ್ತರಿಸಿದ್ದಾನೆ.
16 १६ जेव्हा तो गरजतो, तेव्हा आकाशात पाण्याचा गडगडाट होतो, कारण तो पृथ्वीच्या शेवटापासून धुके वर आणतो. तो पावसासाठी वीजा निर्माण करतो आणि आपल्या कोठारातून वारा काढून पाठवतो.
೧೬ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
17 १७ प्रत्येक मनुष्य पशूसारखा ज्ञानहीन झाला आहे; प्रत्येक धातु कारागीर आपल्या मूर्तीमुळे लज्जित झाला आहे. कारण त्याच्या ओतीव मूर्ती खोट्या आहेत. तेथे त्यांच्यात जीवन नाही.
೧೭ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
18 १८ त्या निरुपयोगी आहेत, त्या चेष्टेचे काम आहे. त्यांच्या शिक्षेच्या दिवशी त्या नष्ट होतील.
೧೮ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.
19 १९ पण देव, याकोबाचा हिस्सा, त्यासारखा नाही, कारण तो सर्व गोष्टींचा निर्माणकर्ता आहे. इस्राएल त्याच्या वतनाचा वंश आहे; त्याचे नाव सेनाधीश परमेश्वर आहे.
೧೯ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ಹೆಸರು.
20 २० तू माझा लढाईचा हातोडा आहेस, माझे लढाईचे हत्यार आहेस. तुझ्याबरोबर मी राष्ट्रांना मोडून तुकडे तुकडे करीन आणि राज्यांचा नाश करीन.
೨೦ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;
21 २१ तुझ्याबरोबर मी घोडे आणि त्यांचे स्वार त्यांचे तुकडे तुकडे करीन, तुझ्याबरोबर मी त्यांचे रथ आणि सारथी ह्यांचे तुकडे तुकडे करीन.
೨೧ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ; ನಿನ್ನಿಂದ ರಥವನ್ನೂ, ಸಾರಥಿಯನ್ನೂ ನಾಶಮಾಡುತ್ತೇನೆ;
22 २२ तुझ्याबरोबर मी प्रत्येक पुरुष आणि स्त्रिया यांचे तुकडे तुकडे करीन; तुझ्याबरोबर मी वृद्ध आणि तरुण यांचे तुकडे तुकडे करीन. तुझ्याबरोबर मी तरुण पुरुष आणि कुमारी मुलगी यांचे तुकडे तुकडे करीन.
೨೨ನಿನ್ನಿಂದ ಸ್ತ್ರೀಪುರುಷರನ್ನು ನಾಶಮಾಡುತ್ತೇನೆ; ನಿನ್ನಿಂದ ಬಾಲಕರನ್ನು ಮತ್ತು ವೃದ್ಧರನ್ನು ನಾಶ ಮಾಡುತ್ತೇನೆ; ನಿನ್ನಿಂದ ಯುವತೀ ಮತ್ತು ಯುವಕರನ್ನು ನಾಶಮಾಡುವೆನು;
23 २३ तुझ्याबरोबर मी मेंढपाळ व त्याचे कळप यांचे तुकडे तुकडे करीन; तुझ्याबरोबर मी शेतकरी आणि त्यांच्या बैलांची जोडी यांचे तुकडे तुकडे करीन. तुझ्याबरोबर मी राज्यकर्ते व अधिकारी यांचे तुकडे तुकडे करीन.
೨೩ನಿನ್ನಿಂದ ಕುರುಬನನ್ನೂ ಹಾಗು ಹಿಂಡನ್ನೂ ನಾಶಮಾಡುತ್ತೇನೆ; ನಿನ್ನಿಂದ ರೈತನನ್ನೂ ಹಾಗೂ ನೊಗದ ಎತ್ತುಗಳನ್ನೂ ನಾಶಮಾಡುವೆನು; ನಿನ್ನಿಂದ ದೇಶಾಧಿಪತಿಗಳನ್ನೂ ಮತ್ತು ನಾಡ ಒಡೆಯರನ್ನೂ ನಾಶಮಾಡುವೆನು;
24 २४ परमेश्वर असे म्हणतो, मी बाबेलाला व खास्द्यांच्या देशातल्या सर्व राहणाऱ्यांनी जे अनिष्ट त्यांनी तुमच्या समक्ष सियोनेत केले आहे त्या सर्वांचे फळ भरून देईन.
೨೪ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ, ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬಿಲೋನಿಗೆ ಮುಯ್ಯಿತೀರಿಸುವೆನು’” ಎಂದು ಯೆಹೋವನು ಅನ್ನುತ್ತಾನೆ.
25 २५ परमेश्वर असे म्हणतो, “हे नाश करणाऱ्या पर्वता तू जो दुसऱ्यांचा नाश करतो, मी तुझ्याविरूद्ध आहे, सर्व पृथ्वीचा नाश करतो. मी आपल्या हाताने तुला तडाखा देईल आणि तुला कड्यांवरुन खाली लोटून देईन. मग बेचिराख झालेल्या पर्वताप्रमाणे मी तुला करीन.
೨೫ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.
26 २६ म्हणून ते तुझ्यामधून इमारतीच्या कोपऱ्यासाठी किंवा पायासाठी एकही दगड तोडून घेणार नाहीत; कारण तुझा कायमचा विध्वंस होईल.” असे परमेश्वर म्हणतो.
೨೬ಮೂಲೆಗಲ್ಲಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು, ನೀನು ನಿತ್ಯನಾಶಕ್ಕೆ ಗುರಿಯಾಗುವಿ, ಇದು ಯೆಹೋವನ ನುಡಿ” ಎಂಬುದೇ.
27 २७ पृथ्वीवर निशाण उंच करा. राष्ट्रांमध्ये कर्णा फुंका. तिच्यावर हल्ला करण्यासाठी राष्ट्रांना नेमा. तिच्याविरूद्ध अरारात, मिन्नी, आष्कनाज या राज्यांना एकत्र बोलवा, तिच्याविरूद्ध हल्ला करण्यास सेनापतीची निवड करा. विक्राळ टोळांप्रमाणे घोडे येऊ द्या.
೨೭“ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.
28 २८ तिच्याविरूद्ध हल्ला करण्यासाठी राष्ट्रे माद्यांचे राजे, त्यांचे सर्व अधिपती आणि राज्याच्या अंमलाखालचा सर्व देश सिद्ध करा.
೨೮ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ.
29 २९ भूमी हालेल व यातना होतील, कारण बाबेल देश उजाड, निर्जन करण्याचे परमेश्वराचे बाबेलाविरूद्धच्या ठरून योजना सिद्धीस जात आहेत.
೨೯ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.
30 ३० बाबेलात सैनिक लढाई करायचे थांबले आहेत. ते त्यांच्या बालेकिल्ल्यात राहत आहेत. त्यांची शक्ती संपली आहे; ते स्त्रिया असे झाले आहेत. तिची घरे पेटवली आहेत, तिच्या वेशीच्या दारांचे अडसर मोडले आहेत.
೩೦ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.
31 ३१ बाबेलाच्या राजाला त्याचे नगर सर्वस्वी काबीज झाले आहे हे सांगण्यासाठी एका दूतामागून दुसरा दूत आणि एक जासूद दुसऱ्या जासूदाला सांगण्यास धावत आहेत.
೩೧ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ, ಅರಸನ ಬಳಿ ಬಂದು, ‘ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ,
32 ३२ नदीचे उतार जप्त झाले आहेत. शत्रू किल्ले जाळत आहेत आणि बाबेलाचे लढणारी माणसे गोंधळून गेले आहेत.
೩೨ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ’ ಎಂದು ತಿಳಿಸುವರು.”
33 ३३ कारण सेनाधीश परमेश्वर, इस्राएलाचा देव असे म्हणतो, “मळण्याच्या वेळी खळे जसे असते त्यासारखी बाबेलाची कन्या आहे. तिला पायाखाली तुडवण्याची वेळ आहे. अजून थोडा अवकाश आहे, मग तिच्या कापणीचा समय येईल.”
೩೩ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.
34 ३४ यरूशलेम म्हणते, बाबेलाचा राजा नबुखद्नेस्सराने मला खाऊन टाकले आहे. त्याने मला निचरून कोरडे केले आहे आणि मला रिकामे पात्र करून ठेवले आहे. त्याने मला अजगराप्रमाणे गिळून टाकले आहे.
೩೪ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.
35 ३५ मजवर व माझ्या कुटूंबावर केलेला जुलूम बाबेलाविरूद्ध उलटो, असे सियोनामध्ये राहणारे म्हणतील. “माझे रक्त पाडल्याचा दोष खास्द्यांच्या रहिवाश्याविरूद्ध फिरो.” असे यरूशलेम म्हणेल.
೩೫ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬಿಲೋನಿಗೆ ತಟ್ಟಲಿ’ ಎಂದು ಚೀಯೋನಿನವರು ಅನ್ನುತ್ತಾರೆ; ‘ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ’ ಎಂದು ಯೆರೂಸಲೇಮಿನವರು ಹೇಳುತ್ತಾರೆ.”
36 ३६ म्हणून परमेश्वर असे म्हणतो, पाहा, मी तुझ्या दाव्याविषयी बाजू मांडीन आणि तुझ्यासाठी सूड घेईन. कारण मी बाबेलाचे समुद्र आटवीन आणि तिचे झरे सुकवून टाकीन.
೩೬ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.
37 ३७ बाबेल पडक्या इमारतीच्या दगडाविटांची रास, कोल्ह्यांचे राहण्याचे ठिकाण, दहशत, चेष्टेचा विषय, निर्जन स्थान असे होईल.
೩೭ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.
38 ३८ “बाबेली जमून तरुण सिंहाप्रमाणे गर्जना करतील. ते सिंहाच्या छाव्याप्रमाणे गुरगुरतील.
೩೮ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ.
39 ३९ जेव्हा ते अधाशीपणाने तप्त होतील, तेव्हा मी त्यांना मेजवानी देईन. मग त्यांनी उल्लास करून निरंतरची झोप घ्यावी व जागे होऊ नये म्हणून मी त्यांना मस्त करीन.” असे परमेश्वर म्हणतो.
೩೯ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.
40 ४० “मी त्यांना कोकरासारखे, मेंढे व बोकड यांच्यासारखे खाली कत्तल करण्यास घेऊन जाईन.
೪೦“ನಾನು ಅವರನ್ನು ಕುರಿ, ಟಗರು ಮತ್ತು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು.
41 ४१ शेशख कसे काबीज झाले आहे! सर्व जगाचा प्रशंसा असा कसा धरला गेला आहे. राष्ट्रांत बाबेल कशी उध्वस्त जागा झाली आहे.
೪೧ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ, ಬಾಬೆಲ್ ಜನಾಂಗಗಳ ಬೆರಗಿಗೆ ಈಡಾಗಿದೆ!
42 ४२ बाबेलावर समुद्र आला आहे! ती त्याच्या गरजणाऱ्या लाटांनी झाकली आहे.
೪೨ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.
43 ४३ तिची नगरे नाश झाली आहेत, कोरडी भूमी आणि ओसाड प्रदेश झाली आहे, आणि जिच्यात कोणी मनुष्य राहत नाही आणि कोणी मनुष्यप्राणी त्यातून जात नाही
೪೩ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.
44 ४४ म्हणून बाबेलात मी बेलाला शिक्षा करीन; त्यांने जे गिळले आहे ते मी त्याच्या तोंडातून बाहेर आणील, आणि राष्ट्रे त्याच्याकडे आपल्या संततीला बरोबर घेऊन वाहणार नाही. बाबेलाची भिंत पडेल.
೪೪ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.
45 ४५ माझ्या लोकांनो, बाबेलाच्या शहरातून बाहेर या. माझ्या संतप्त क्रोधापासून तुम्ही प्रत्येकजण आपला जीव वाचवा.
೪೫ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ.
46 ४६ देशातील जे वर्तमान ऐकण्यात येईल त्यांने भिऊ नका अथवा आपले हृदय खचू देऊ नका. कारण एका वर्षात वर्तमान येईल. यानंतर पुढच्या वर्षात वर्तमान येईल, आणि देशात हिंसाचार होईल. राज्यकर्ते राज्यकर्त्याविरूद्ध होतील.
೪೬ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರ್ಷ ಒಂದು ಸುದ್ದಿಯು, ಮತ್ತೊಂದು ವರ್ಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವುದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು.
47 ४७ यास्तव, पाहा, दिवस येत आहेत की, जेव्हा मी बाबेलाच्या कोरीव मूर्तींना शिक्षा करील. तेव्हा तिचा संपूर्ण देश लज्जित होईल, आणि तिचे सर्व वधलेले तिच्यामध्ये पडतील.
೪೭ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.
48 ४८ मग आकाश व पृथ्वी आणि त्यामध्ये जे काही आहे ते सर्व बाबेलावर आनंद करतील. कारण तिचा नाश करणारा उत्तरेकडून येईल.” परमेश्वर असे म्हणतो.
೪೮ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು; ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.”
49 ४९ बाबेलाने जसे इस्राएलाचे वधलेले पडतील असे केले आहे, तसे तिच्या देशात वधलेले सर्व बाबेलात पडतील.
೪೯“ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ, ಹಾಗೆಯೇ ಬಾಬೆಲೂ ಹತವಾಗುವುದು.
50 ५० जे तुम्ही तलवारीपासून वाचले आहात, दूर जा! थांबू नका. दुरून परमेश्वराचे स्मरण करा. यरूशलेमे तुमच्या मनात येवो.
೫೦ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇಮಿನ ಹಂಬಲ ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.
51 ५१ “आम्ही अपमान ऐकला आहे, म्हणून आम्ही लज्जित झालो आहोत. लाजेने आमची तोंडे झाकली आहेत, कारण परमेश्वराच्या घरातील पवित्र स्थानात परक्यांनी प्रवेश केला आहे.”
೫೧ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ?
52 ५२ यास्तव परमेश्वर म्हणतो, पाहा, असे दिवस येत आहेत की, मी तिच्या कोरीव मूर्तींना शिक्षा करीन, आणि तिच्या देशात जखमी झालेले कण्हतील.
೫೨ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.
53 ५३ कारण जरी बाबेल आकाशापर्यंत वर चढली किंवा जरी तिने आपले बळाचे उंचस्थान मजबूत केले, तरी माझ्याकडून नाश करणारे तिच्यावर येतील. असे परमेश्वर म्हणतो.
೫೩ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”
54 ५४ “बाबेलातून दुःखाच्या आरोळीचा, खास्द्यांच्या देशातून मोठा कोसळण्याचा आवाज येतो.
೫೪“ಆಹಾ, ಬಾಬೆಲಿನಿಂದ ಮೊರೆಯೂ, ಕಸ್ದೀಯರ ದೇಶದಿಂದ ಮಹಾನಾಶದ ಶಬ್ದವೂ ಕೇಳಿ ಬರುತ್ತದೆ!
55 ५५ कारण परमेश्वर बाबेलाचा नाश करत आहे. तिच्यातील मोठा आवाज तो नष्ट करत आहे. त्यांचे शत्रू बहुत जलांच्या लाटांप्रमाणे गर्जना करीत आहेत. त्यांच्या गर्जनेचा गोंगाट फार बलवान होत आहे.
೫೫ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತಾನೆ; ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ;
56 ५६ कारण तिच्यावर, म्हणजे बाबेलाविरूद्ध नाश करणारा आला आहे, आणि तिचे योद्धे पकडले गेले आहेत. त्यांचे धनुष्ये मोडली आहेत, कारण परमेश्वर सूड घेणारा देव आहे. तो खचित प्रतिफल भरून देईल.
೫೬ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ.
57 ५७ कारण मी तिचे सरदार, तिचे ज्ञानी, तिचे अधिकारी आणि तिचे सैनिक मस्त होतील व ते अंत नसणाऱ्या झोपेत झोपतील आणि कधी जागे होणार नाहीत.” असे राजाचे म्हणणे आहे; सेनाधीश परमेश्वर त्याचे नाव आहे.
೫೭ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”
58 ५८ सेनाधीश परमेश्वर असे म्हणतो, “बाबेलाची जाड तटबंदी जमीनदोस्त केली जाईल, आणि तिची उंच प्रवेशद्वारे जाळली जातील. मग तिच्या मदतीला येणाऱ्या लोकांची मेहनत निरुपयोगी होईल. जी प्रत्येकगोष्ट राष्ट्र तिच्यासाठी करण्याचा प्रयत्न करेल ती जाळण्यात येईल.”
೫೮ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.
59 ५९ महसेयाचा मुलगा नेरीया याचा मुलगा सारया हा जेव्हा यहूदाचा राजा सिद्कीया ह्याच्याबरोबर त्याच्या राज्याच्या चौथ्या वर्षी, बाबेलास गेला तेव्हा जे वचन यिर्मया संदेष्ट्याने त्यास आज्ञापिले ते हे. कारण सराया हा प्रमुख अधिकारी होता.
೫೯ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರೆಂದರೆ ಸೇನೆಯ ಪ್ರಧಾನ ಅಧಿಕಾರಿ.)
60 ६० यिर्मयाने बाबेलावर जे सर्व अरिष्ट येणार होते ते म्हणजे बाबेलाविषयीची ही सर्व वचने एका गुंडाळीवर लिहिली होती.
೬೦ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು.
61 ६१ यिर्मया सरायाला म्हणाला, “जेव्हा, तू बाबेलास जाशील तेव्हा ही सर्व वचने वाचण्याची खात्री करून घे.
೬೧ಅವನು ಸೆರಾಯನಿಗೆ ಹೀಗೆ ಹೇಳಿದನು, “ನೋಡು, ನೀನು ಬಾಬಿಲೋನಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ ಓದಿ ಹೇಳಿ,
62 ६२ आणि म्हण, ‘हे परमेश्वरा, तू स्वतः या स्थानाविषयी बोलला आहेस की, ते नष्ट होईल. मग तेथे कोणी रहिवासी किंवा लोक व पशू राहणार नाहीत. ती कायमची टाकाऊ होईल.’
೬೨‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.
63 ६३ मग जेव्हा ही गुंडाळी वाचून संपताच त्यास एक दगड बांध आणि फरात नदीमध्ये फेकून दे.
೬೩ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ, ಯೂಫ್ರೆಟಿಸ್ ನದಿಯ ಮಧ್ಯದೊಳಗೆ ಹಾಕಿ,
64 ६४ म्हण ‘बाबेल याप्रमाणे बुडेल. जे अरिष्ट मी तिच्याविरूद्ध पाठवणार आहे त्यामुळे ती कधीही वर येणार नाही आणि ते थकून जातील.” येथे यिर्मयाची वचने संपली.
೬೪ಯೆಹೋವನು ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು” ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು.