< यिर्मया 52 >
1 १ सिद्कीया राज्य करू लागला तेव्हा तो एकवीस वर्षाचा होता; अकरा वर्षे त्याने यरूशलेमेवर राज्य केले. त्याच्या आईचे नाव हमूटल. ती लिब्नाकर यिर्मयाची मुलगी होती.
೧ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.
2 २ यहोयाकीम याने जी प्रत्येकगोष्ट केली होती त्याप्रमाणे यानेही, परमेश्वराच्या दृष्टीने जे वाईट होते ते केले.
೨ಇವನು ಯೆಹೋಯಾಕೀಮನಂತೆ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
3 ३ आपल्या दृष्टीसमोरून त्यांना काढून टाकेपर्यंत, परमेश्वराच्या कोपाद्वारे यरूशलेम व यहूदामध्ये सर्व या घटना घडल्या. मग सिद्कीयाने बाबेलाच्या राजाच्या विरोधात बंड केले.
೩ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.
4 ४ मग असे झाले की, त्याच्या कारकिर्दीच्या नवव्या वर्षाच्या दहाव्या महिन्यात दहाव्या दिवशी बाबेलाचा राजा नबुखद्नेस्सर याने आपल्या सर्व सैन्याबरोबर यरूशलेमेविरूद्ध चाल करून आला. त्याने त्याच्यापुढे तळ ठोकला आणि त्यांच्याभोवती वेढ्याची भिंत बांधली
೪ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,
5 ५ म्हणून सिद्कीया राजाच्या अकराव्या वर्षापर्यंत त्या नगराला वेढा पडला होता.
೫ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
6 ६ चौथ्या महिन्याच्या नवव्या दिवशी, नगरात भयंकर दुष्काळ पडला, तो इतका की, देशातल्या लोकांसाठी अन्नाचा कण नव्हता.
೬ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,
7 ७ मग नगराच्या तटाला खिंडार पाडण्यात आले आणि सर्व लढणारे माणसे पळाले राजाच्या बागेजवळ दोहो तटामध्ये जी वेस होती तिच्या वाटेने ते रात्री नगरातून निघून गेले आणि खास्दी लोक नगराच्यासभोवती होते, म्हणून ते अराब्याच्या वाटेने निघून गेले.
೭ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.
8 ८ पण खास्द्यांच्या सैन्याने राजाच्या पाठीस लागून यरीहोच्या मैदानात सिद्कीयाला गाठले. त्याचे सर्व सैन्य त्याच्यापासून पांगून दूर गेले.
೮ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.
9 ९ त्यांनी राजाला पकडले व त्यास हमाथ देशातील रिब्ला येथे बाबेलाच्या राजाकडे वर नेले. तेथे त्याने त्यास शिक्षा ठरवली.
೯ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
10 १० बाबेलाच्या राजाने सिद्कीयाच्या मुलांना त्याच्या डोळ्यापुढे मारले आणि यहूदाच्या सर्व अधिकाऱ्यांचीही त्याने रिब्ला येथे हत्या केली.
೧೦ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.
11 ११ मग बाबेलाच्या राजाने सिद्कीयाचे डोळे काढले, त्यास पितळी बेड्या घालून बाबेलास नेले. त्याने त्यास त्याच्या मरणाच्या दिवसापर्यंत तुरुंगातच ठेवले.
೧೧ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.
12 १२ आता बाबेलाच्या राजा नबुखद्नेस्सर याच्या कारकिर्दीच्या एकोणिसाव्या वर्षी, पाचव्या महिन्याच्या दहाव्या दिवशी, नबूजरदान यरूशलेमेस आला. तो बाबेलामधील राजाचा सेवक व राजाच्या अंगरक्षकांचा नायक होता.
೧೨ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.
13 १३ त्याने परमेश्वराचे घर जाळले, राजवाडा व यरूशलेमेमधील सर्व घरेही जाळली. नगरातील प्रत्येक महत्वाची इमारतसुद्धा त्याने जाळून टाकली.
೧೩ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
14 १४ राजाच्या अंगरक्षकाच्या नायकाबरोबर असलेल्या सर्व खास्दी सैन्याने यरूशलेमेभोवती असलेली तटबंदी मोडून तोडून टाकली.
೧೪ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.
15 १५ सेनापती नबूजरदानाने यरूशलेम नगरामध्ये अजूनही राहत असलेल्या सर्व लोकांस कैदी म्हणून नेले. बाबेलाच्या राजाला आधीच शरण आलेल्यांनाही तो घेऊन गेला. यरूशलेममध्ये मागे राहिलेले कुशल कारागीरही त्याने बरोबर नेले.
೧೫ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.
16 १६ पण राजाचा अंगरक्षकांचा नायक नबूजरदान याने देशातील काही अगदी गरीब त्यांना द्राक्षमळ्यांत व शेतांत काम करण्यासाठी मागेच ठेवले.
೧೬ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.
17 १७ परमेश्वराच्या घरातील असलेले पितळी खांब, परमेश्वराच्या घरातील पितळी गंगाळसागर व त्याच्या बैठकी खास्द्यांनी तोडून तुकडे तुकडे केले आणि सर्व पितळ परत बाबेलाला घेऊन गेले.
೧೭ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು,
18 १८ पात्रे, फावडी, दिव्याची कात्री, वाट्या, आणि मंदिरातील सेवा ज्या पितळी उपकरणाने याजक करीत ती सर्व खास्द्यांनी नेली.
೧೮ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
19 १९ पेले व धूपपात्रे, वाट्या, बहुगुणी, दीपस्तंभ, चमचे, कटोरे जी सोन्याची आणि रुप्याचे बनवली होती ती राजाचा अंगरक्षकांचा नायक तीदेखील घेऊन गेला.
೧೯ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.
20 २० दोन खांब, गंगाळसागर, व त्याच्या बैठकीखालचे बारा पितळी बैल शलमोन राजाने परमेश्वराच्या घरासाठी बनविले होते, या वस्तूतील अधिक पितळ वजनात मावणे शक्य नव्हते.
೨೦ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.
21 २१ प्रत्येक खांब अठरा हात उंच होता. त्याच्या घेराला बारा हात दोरी लागे. प्रत्येकाची जाडी चार बोटे होती व पोकळ होती.
೨೧ಕಂಬಗಳು ಎಂಥವುಗಳೆಂದರೆ ಮೊದಲನೆಯ ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಅದರ ಸುತ್ತಳತೆಯು ಹನ್ನೆರಡು ಮೊಳ; ಅದು ನಾಲ್ಕು ಬೆರಳಷ್ಟು ದಪ್ಪವಾಗಿಯೂ, ಪೊಳ್ಳಾಗಿಯೂ ಇತ್ತು.
22 २२ त्यावर पितळेचा कळस होता. कळसाची उंची पाच हात होती, त्यासभोवती सर्व जाळीकाम व चारी बांजूनी डाळिंबे होती. ती सर्व पितळे बनवली होती. दुसरे खांब व त्याची डाळिंबे पहिल्या खांबाप्रमाणे सारखीच होती.
೨೨ಕಂಬದ ಮೇಲೆ ಐದು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು; ಕುಂಭದ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ಅಲಂಕಾರವಾಗಿ ಹಾಗೆಯೇ ಇತ್ತು.
23 २३ असे तेथे कळसाच्या चाऱ्ही बाजूंना शहाण्णव डाळिंबे होती आणि जाळीकामावर सभोवती सर्व डाळिंबे शंभर होती.
೨೩ನಾಲ್ಕು ಪಕ್ಕಗಳಲ್ಲಿ ತೊಂಭತ್ತಾರು ದಾಳಿಂಬ ಹಣ್ಣುಗಳಿದ್ದವು; ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬ ಹಣ್ಣುಗಳಿದ್ದವು.
24 २४ अंगरक्षकांच्या नायकाने बंदिवान प्रमुख याजक सराया व दुसरा याजक सफन्या यांच्याबरोबर आणि तीन द्वारपालांनाही एकत्रित नेले.
೨೪ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,
25 २५ सैनिकांवर जो अधिकारी नेमला होता त्यास आणि जे सात माणसे राजाला सल्ला देत, ते अजूनपर्यंत नगरातच होते. त्याप्रमाणेच मनुष्यांची सैन्यात भरती करणारा जबाबदार सेनापतीचा चिटणीस, त्यांच्याबरोबर देशातील नगरात असलेले साठ महत्वाची माणसे यांना नगरातून पकडून नेले.
೨೫ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ರೈತರು ಇದ್ದರು.
26 २६ नंतर अंगरक्षकाचा नायक नबूजरदान याने त्यांना घेऊन रिब्ला येथे बाबेलाच्या राजाकडे आणले.
೨೬ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು.
27 २७ रिब्लामध्ये बाबेलाच्या राजाने त्यांना हमाथ देशात रिब्ला येथे मार देऊन ठार केले. अशा तऱ्हेने यहूदा आपल्या देशातून हद्दपार झाला.
೨೭ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.
28 २८ नबुखद्नेस्सराने ज्या कोणी लोकांस हद्दपार केले होते ते हेः सातव्या वर्षी तीन हजार तेवीस यहूदी गेले.
೨೮ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.
29 २९ नबुखद्नेस्सराच्या अठराव्या वर्षी त्याने आठशे बत्तीस लोकांस यरूशलेमेमधून नेले.
೨೯ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಎಂಟುನೂರ ಮೂವತ್ತೆರಡು ಜನರನ್ನು ಯೆರೂಸಲೇಮಿನಿಂದ ಸೆರೆಯೊಯ್ದನು.
30 ३० नबुखद्नेस्सराच्या राजाच्या तेविसाव्या वर्षी गारद्यांचा अंगरक्षक नबूजरदान याने यहूदातले सातशे पंचेचाळीस लोक हद्दपार केले. सर्व हद्दपार लोक मिळून चार हजार सहाशे होते.
೩೦ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.
31 ३१ मग असे झाले की, यहूदाचा राजा यहोयाखीन याच्या हद्दपारीच्या सदतिसाव्या वर्षी, बाराव्या महिन्यात, महिन्याच्या पंचविसाव्या दिवशी, बाबेलाचा राजा अवील-मरोदख याने यहूदाचा राजा यहोयाखीन ह्यास बंदिवासातून मुक्त केले. ज्यावर्षी अवील-मरोदख राज्य करू लागला त्यावर्षी हे घडले.
೩೧ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಬಾಬೆಲಿನ ಅರಸನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.
32 ३२ तो त्यांच्याशी प्रेमळपणे बोलला आणि जे दुसरे राजे त्याच्याबरोबर बाबेलात होते त्यांच्यापेक्षा त्यास सन्मानाचे आसन दिले.
೩೨ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತ ಸ್ಥಾನವನ್ನು ಕೊಟ್ಟನು.
33 ३३ अवील-मरोदखाने यहोयाखीनाचे बंदिवासातील वस्त्रे बदलली आणि आपल्या उरलेल्या आयुष्यात त्याने नियमीत राजाच्या मेजावर भोजन केले.
೩೩ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.
34 ३४ आणि त्याच्या आयुष्याच्या सर्व दिवसात त्याच्या मृत्यूपर्यंत त्यास प्रत्येक दिवशी बाबेलाचा राजा नियमीत भोजनाचा भत्ता देत असे.
೩೪ಅವನು ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು.