< यिर्मया 6 >
1 १ बन्यामीनच्या लोकांनो, जीव वाचविण्यासाठी पळा. यरूशलेमपासून दूर पळा. तकोवामध्ये तुतारी फुंका. बेथ-हक्करेमवर धोक्याचा इशारा देणारे निशाण उभारा. हे सर्व करा कारण उत्तरेकडून अरिष्ट येत आहे. भयानक नाश तुमच्याकडे येत आहे.
೧“ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.
2 २ सियोनेची कन्या, जी सुंदर आणि नाजूक अशी आहे, तिचा मी नाश करणार आहे.
೨ಚೀಯೋನ್ ನಗರಿಯು ಸೊಂಪಾದ ಹಸುರುಗಾವಲಿಗೆ ಸಮಾನವಾಗಿ ನನಗೆ ಕಾಣುತ್ತದೆ.
3 ३ मेंढपाळ आणि त्यांचे कळप तिच्याकडे जातील. ते तिच्या सर्व बाजूंना तंबू ठोकतील. प्रत्येक मनुष्य स्वत: च्या हाताने कळपाची काळजी घेतील.
೩ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು.
4 ४ “परमेश्वराच्या नावात तिच्यावर हल्ला करा. उठा! आपण दुपारी हल्ला करु. हे किती वाईट आहे की दिवस मावळत आहे आणि संध्याछाया लांबत आहेत.
೪ಇವರು, ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ, ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು ಅನ್ನುವರು.
5 ५ तर आपण रात्रीच तिच्यावर हल्ला करु या व तिच्या भक्कम तटबंदीचा नाश करु या.”
೫ಎದ್ದು ರಾತ್ರಿಯಲ್ಲಿ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳುಮಾಡೋಣ ಅಂದುಕೊಳ್ಳುವರು.
6 ६ कारण सेनाधीश परमेश्वर असे म्हणतो, शक्तीमान परमेश्वर असे म्हणतो, “झाडे कापा आणि यरूशलेमविरूद्ध मोर्चा बांधा. या नगरीला शिक्षा व्हावीच, कारण या नगरीच्या आत जुलुमाशिवाय काहीही नाही.
೬ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ.
7 ७ जशी विहीर आपले पाणी ताजे ठेवते, तशीच ही नगरी आपला दुष्टपणा ताजा ठेवते. तिच्यामध्ये लूटमार व हिंसाचार हे ऐकू येतात. पीडा आणि दु: ख सदोदीत माझ्या समोर आहे.
೭ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.
8 ८ यरूशलेम, धोक्याचा इशारा ऐक. जर तू ऐकले नाहीस तर मी तुझ्याकडे पाठ फिरवीन, आणि तुला ओसाड असे करीन, जेथे कोणीही राहू शकणार नाही.”
೮ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ.
9 ९ सेनाधीश परमेश्वर असे म्हणतो, “ते इस्राएलाचे शेष उरलेल्या द्राक्षांसारखे वेचून काढतील, तू आपला हात द्राक्षे खुडणाऱ्याप्रमाणे डाहाळ्यातून फिरव.”
೯ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ.
10 १० मी कोणाला घोषीत करू आणि चेतावणी देऊ, जेणेकरून ते ऐकतील? पाहा, त्यांचा कान बेसुंता आहे म्हणून त्यांना ऐकू येत नाही. पाहा, परमेश्वराचे वचन त्यांची चूक दुरुस्त करण्यासाठी त्यांच्या जवळ आले आहे, पण त्यांना ते नको आहे.
೧೦ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.
11 ११ म्हणून मी परमेश्वराच्या रागाने भरलो आहे. “तो आतल्या आत दाबून धरण्याचा मला आता कंटाळा आला आहे. रस्त्यावर खेळणाऱ्या मुलांवर, एकत्र जमलेल्या तरुणांवर परमेश्वराचा राग ओतणार आहे. पुरुष व त्याची पत्नी असे दोघही, तसेच सर्व म्हातारे पकडले जातील.
೧೧ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.
12 १२ त्यांची घरे दुसऱ्यांना दिली जातील त्यांची शेते व त्यांच्या स्त्रिया दुसऱ्यांना दिल्या जातील. मी माझा हात उगारून देशातील रहिवाश्यांवर हल्ला करीन,” असे परमेश्वर म्हणतो.
೧೨ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.
13 १३ “कारण त्यांच्यातील लहानांपासून तर मोठ्यांपर्यंत ते सर्व अप्रामाणिक मिळकतीचा लोभ धरतात. भविष्यवाद्यांपासून ते याजकापर्यंत, त्यांच्यातील प्रत्येकजण फसवे काम करतो.
೧೩ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.
14 १४ आणि शांती नसता, शांती, शांती, असे म्हणून त्यांनी माझ्या लोकांची जखम वरवर बरी केली आहे.
೧೪ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
15 १५ त्यांनी केलेल्या दुष्कृत्यांमुळे ते लाजले का? त्यांना काही लाज वाटली नाही आणि त्यांनी पण त्यांना अजिबात लाज वाटत नाही. त्यांना कोणत्याही अपमानास्पद वागणूकीचा अनुभव घेतला नाही. यास्तव मी ज्यावेळी त्यांना शिक्षा करीन तेव्हा ते पडणाऱ्यांबरोबर पडतील. ते उध्वस्त केले जातील.” परमेश्वर असे म्हणतो.
೧೫ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.
16 १६ परमेश्वर असे म्हणतो: “चौकात उभे राहा आणि पाहा. जुना रस्ता कोणता ते विचारा. चांगल्या रस्त्याची चौकशी करा, नंतर त्याच चाला आणि तुमच्या जीवा करता विसाव्याची जागा शोधा.” पण तुम्ही लोक म्हणाला, आम्ही जाणार नाही.
೧೬ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.
17 १७ रणशिंगाचा आवाज ऐकायला तुमच्यावर मी रखवालदार नियूक्त केले. पण ते म्हणाले, आम्ही ऐकणार नाही.
೧೭‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.
18 १८ यास्तव राष्ट्रांनो, ऐका! पाहा, त्यांच्यासोबत काय होईल, याचे तुम्ही साक्षीदार आहात.
೧೮ಆದಕಾರಣ, ಜನಾಂಗಗಳೇ, ಕೇಳಿರಿ! ಜನಸಮೂಹವೇ, ಅವರಲ್ಲಿ ನಡೆದದ್ದನ್ನು ಮನಸ್ಸಿಗೆ ತಂದುಕೋ!
19 १९ हे पृथ्वी, ऐक! पाहा, या लोकांवर मी अनर्थ आणणार आहे, म्हणजे त्यांच्याच विचारांचे फळ त्यांच्यावर आणीन. कारण त्यांनी माझ्या वचनांकडे दुर्लक्ष केलेच, पण ह्याव्यतीरिक्त ते धिक्कारले आहे.
೧೯ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.
20 २० परमेश्वर म्हणतो, “शेबाहून धूप आणि दूरवरच्या देशातून गोड सुगंध माझ्या काय कामाचा? तुमची होमार्पणे आणि यज्ञ मला मान्य नाहीत.”
೨೦ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.
21 २१ यास्तव परमेश्वर असे म्हणतो: “मी या लोकांविरूद्ध अडखळणे ठेवीन. त्यावर वडील व मुले अडखळून पडतील. राहणारे आणि शेजारी हे नष्ट होतील.”
೨೧ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು. ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು” ಎಂದು ನುಡಿಯುತ್ತಾನೆ.
22 २२ परमेश्वर पुढे असे म्हणतो: “उत्तरेकडून लोक येत आहे. पृथ्वीवरच्या अतीदूरच्या ठिकाणाहून मोठे राष्ट्र येत आहे.
೨೨“ಆಹಾ, ಉತ್ತರ ದಿಕ್ಕಿನಿಂದ ಜನಸಮೂಹ ಬರುತ್ತದೆ, ಮಹಾ ಜನಾಂಗವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.
23 २३ ते धनुष्य आणि भाला उचलतील. ते क्रूर आहेत आणि ते दया करीत नाही. त्यांचा आवाज समुद्राच्या गर्जने सारखा आहे. आणि हे सियोन कन्ये, लढाईसाठी सिद्ध झालेल्या पुरूषांप्रमाणे विशिष्ट रचना करूण ते घोड्यांवरून स्वारी करतात.”
೨೩ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ. ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ನುಡಿಯುತ್ತಾನೆ.
24 २४ त्यांच्याबद्दल आम्ही बातमी ऐकली आहे. दुःखात आमचे हात कोलमडले आहेत. प्रसूती होणाऱ्या स्त्रीप्रमाणे आमची स्थिती झाली आहे.
೨೪ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ.
25 २५ बाहेर शेतात जाऊ नका आणि रस्त्यावर चालू नका. कारण शत्रूची तलवारी आणि धोका सगळीकडे आहे.
೨೫ಊರ ಹೊರಗೆ ಹೋಗಬೇಡಿರಿ, ದಾರಿಯಲ್ಲಿ ನಡೆಯಬೇಡಿರಿ; ಶತ್ರುವಿನ ಕತ್ತಿಯಿದೆ, ಸುತ್ತುಮುತ್ತಲು ದಿಗಿಲು.
26 २६ माझ्या लोकांच्या कन्ये, शोकवस्त्रे घाल आणि राखेत लोळ, एकुलता एक मुलगा गेल्याप्रमाणे आकांत कर. कारण नाश करणारा अगदी एकाएक आपल्यावर येईल.
೨೬ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.
27 २७ “यिर्मया, मी तुला पारखणारा असे केले आहे. म्हणजे तू त्यांच्या मार्ग तपासावा आणि पारखून पाहावा.
೨೭ಯೆಹೋವನು ನನಗೆ, “ನಾನು ನಿನ್ನನ್ನು ನನ್ನ ಜನವೆಂಬ ಅದಿರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.
28 २८ ते सर्व लोक दुराग्रही आहेत. जे दुसऱ्यांची निंदा करतात. ते सर्व कास्य व लोखंड आहेत, जे भ्रष्टपणे वागतात.
೨೮ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.
29 २९ भाता जळाला आहे, अग्नीतून शिसे जळून निघाले आहे, ते स्वत: ला व्यर्थच गाळीत राहतात, कारण जे दुष्ट ते काढून टाकलेले नाहीत.
೨೯ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ.
30 ३० त्यांना ‘टाकाऊ चांदी’ असे म्हटले जाईल. कारण परमेश्वराने त्यांना नाकारले आहे.”
೩೦ಯೆಹೋವನಾದ ನಾನು ಇವರನ್ನು ನೂಕಿಬಿಟ್ಟಿದ್ದರಿಂದ ಇವರು ‘ಕಂದು ಬೆಳ್ಳಿ’ ಎನಿಸಿಕೊಳ್ಳುವರು” ಎಂದು ಹೇಳಿದ್ದಾನೆ.