< योना 3 >
1 १ परमेश्वराचे वचन दुसऱ्यांदा योनाकडे आले,
ಯೆಹೋವ ದೇವರ ವಾಕ್ಯವು ಎರಡನೆಯ ಸಾರಿ ಯೋನನಿಗೆ ಬಂದಿತು.
2 २ “ऊठ, त्या मोठ्या निनवे शहरास जा, आणि जो संदेश मी तुला सांगेन त्याची घोषणा कर.”
“ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ, ನಾನು ನಿನಗೆ ಹೇಳಿದ ಸಂದೇಶವನ್ನು ಅದರ ನಿವಾಸಿಗಳಿಗೆ ಸಾರು,” ಎಂದು ಹೇಳಿದರು.
3 ३ मग परमेश्वराच्या वचनाप्रमाणे योना उठून निनवेस गेला. निनवे हे फार मोठे शहर होते. ते सर्व चालत फिरण्यास तीन दिवस लागत होते.
ಹೀಗೆ ಯೋನನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ನಿನೆವೆಗೆ ಹೋದನು. ನಿನೆವೆಯು ಮೂರು ದಿವಸದ ಪ್ರಯಾಣದ ಮಹಾ ದೊಡ್ಡ ಪಟ್ಟಣವಾಗಿತ್ತು.
4 ४ योना शहरातून एक दिवसाची वाट चालत असता त्याने घोषणा करून म्हटले, “अजून चाळीस दिवस आहेत, मग निनवेचा नाश होईल.”
ಆಗ ಯೋನನು ಒಂದು ದಿವಸದ ಪ್ರಯಾಣಮಾಡಿ, ಪಟ್ಟಣದಲ್ಲಿ ಪ್ರವೇಶಿಸಿ, “ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ನಾಶವಾಗುವುದು,” ಎಂದು ಕೂಗಿ ಹೇಳಿದನು.
5 ५ तेव्हा निनवेतल्या लोकांनी देवावर विश्वास ठेवला, उपास जाहीर केला, आणि मोठ्यापासून लहानापर्यंत सर्वांनी गोणताट नेसले.
ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.
6 ६ निनवेच्या राजाला ही बातमी समजली, तेव्हा तो आपल्या आसनावरून उठला व आपला झगा आपल्या अंगातून काढून तो गोणताट नेसून राखेत बसला.
ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು.
7 ७ राजाने आणि त्याच्या सरदारांच्या ठरावाने निनवेत घोषणा करून ठराव प्रसिध्द केला. त्याने सांगितले, “कोणत्याही मनुष्यांने अथवा पशूंने, गुराढोरांनी अथवा शेरडामेंढरांनी काही चाखू नये; खाऊ नये व पाणी पिऊ नये.
ಅವನು ನಿನೆವೆಯಲ್ಲಿ ಈ ಘೋಷಣೆಯನ್ನು ಮಾಡಿದನು: “ಅರಸನ ಮತ್ತು ಶ್ರೇಷ್ಠರ ತೀರ್ಪಿನ ಪ್ರಕಾರ: “ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನನ್ನೂ ರುಚಿ ನೋಡದಿರಲಿ, ಮೇಯದಿರಲಿ, ನೀರನ್ನು ಕುಡಿಯದಿರಲಿ.
8 ८ परंतु मनुष्य आणि पशू यांनी गोणताट नेसावेत; देवाचा मनापासून धावा करावा आणि प्रत्येकाने आपल्या कुमार्गापासून व आपल्या हाताच्या दुष्कर्मापासून मागे फिरावे.
ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.
9 ९ न जाणो, कदाचित देव वळेल, अनुताप पावेल व आपल्या संतप्त क्रोधापासून फिरेल, म्हणजे आपला नाश होणार नाही.”
ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?”
10 १० तर ते आपल्या कुमार्गापासून फिरले आहेत, अशी त्यांची कृत्ये देवाने पाहिली आणि ज्या संकटाविषयी देव बोलला होता की, “मी त्यांच्यावर ते आणीन,” त्याविषयी त्याने आपले मन बदलले व त्याने तसे केले नाही.
ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.