< शास्ते 1 >
1 १ यहोशवाच्या मृत्यूनंतर, इस्राएल लोकांनी परमेश्वरास असे म्हणून विचारले, “कनानी लोकांशी लढावयास आम्ही जाऊ तेव्हा आमच्या वतीने पहिल्याने कोणी स्वारी करावी?”
ಯೆಹೋಶುವನು ಮರಣ ಹೊಂದಿದ ಬಳಿಕ ಇಸ್ರಾಯೇಲರು, “ಕಾನಾನ್ಯರೊಡನೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವ ದೇವರನ್ನು ಕೇಳಿದರು.
2 २ परमेश्वर म्हणाला, “यहूदा तुमचे नेतृत्व करील; पाहा, हा देश मी त्याच्या हाती दिला आहे.”
ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಹೋಗಲಿ; ನಾನು ಆ ದೇಶವನ್ನು ಇವರ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ,” ಎಂದರು.
3 ३ यहूदाच्या लोकांनी आपले भाऊ, “शिमोन याच्या लोकांस म्हटले, आमच्याबरोबर आमच्या प्रदेशात वर या, म्हणजे आपण एकत्र मिळून कनान्यांविरुद्ध लढाई करू, त्याप्रमाणे तुमच्या प्रदेशात आम्हीही तुम्हामध्ये येऊ;” तेव्हा शिमोनाचा वंश त्यांच्याबरोबर गेला.
ಯೆಹೂದ ಗೋತ್ರದವರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ನೀವು ನಮ್ಮ ಸಂಗಡ ನಮ್ಮ ಪ್ರಾಂತಕ್ಕೆ ಬನ್ನಿರಿ, ಕಾನಾನ್ಯರ ಮೇಲೆ ಯುದ್ಧ ಮಾಡೋಣ. ಹಾಗೆಯೇ ನಾವು ನಿಮ್ಮ ಸಂಗಡ ನಿಮ್ಮ ಪ್ರಾಂತಕ್ಕೆ ಬರುತ್ತೇವೆ,” ಎಂದರು. ಹೀಗೆ ಸಿಮೆಯೋನ್ಯರು ಅವರ ಸಂಗಡ ಹೋದರು.
4 ४ मग यहूदाचे लोक वर चढून गेले, या प्रकारे परमेश्वराने कनानी व परिज्जी ह्यांच्यावर त्यांना विजय दिला व त्यांनी बेजेक शहर येथे त्यांच्या दहा हजार लोकांस ठार मारले.
ಯೆಹೂದ ಗೋತ್ರದವರು ಹೋದಾಗ, ಯೆಹೋವ ದೇವರು ಕಾನಾನ್ಯರನ್ನೂ ಪೆರಿಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಬೆಜೆಕಿನಲ್ಲಿ ಹತ್ತು ಸಾವಿರ ಜನರನ್ನು ಕೊಂದರು.
5 ५ बेजेक येथे त्यांना अदोनी-बेजेक सापडला आणि तेव्हा त्यांनी त्याच्याशी लढाई केली व कनानी व परिज्जी यांचा पराभव केला.
ಅವರು ಬೆಜೆಕಿನಲ್ಲಿ ಅರಸನಾದ ಅದೋನೀಬೆಜೆಕನನ್ನು ಸಂಧಿಸಿ, ಅವನ ವಿರೋಧವಾಗಿ ಯುದ್ಧಮಾಡಿ, ಕಾನಾನ್ಯರನ್ನೂ ಪೆರಿಜೀಯರನ್ನೂ ಕೊಂದುಹಾಕಿದರು.
6 ६ पण अदोनी-बेजेक पळून गेला, तेव्हा त्यांनी त्यांचा पाठलाग करून त्यास पकडले आणि त्यांच्या हातांचे व पायांचे अंगठे कापून टाकले.
ಆದರೆ ಅದೋನೀಬೆಜೆಕನು ಓಡಿ ಹೋದದ್ದರಿಂದ, ಅವನನ್ನು ಹಿಂದಟ್ಟಿ ಹಿಡಿದು, ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.
7 ७ तेव्हा अदोनी-बेजेक म्हणाला, “हातांचे व पायांचे अंगठे कापून टाकलेले सत्तर राजे माझ्या मेजाखाली अन्न वेचीत होते; जसे मी केले तसे देवाने माझे केले आहे.” त्यांनी त्यास यरूशलेमेस आणले; तेथे तो मेला.
ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.
8 ८ यहूदाच्या लोकांनी यरूशलेम नगराविरुद्ध लढाई करून ते घेतले, आणि तलवारीच्या धारेने त्यावर हल्ला करून त्या नगराला आग लावली.
ಯೆಹೂದ ಗೋತ್ರದವರು ಯೆರೂಸಲೇಮಿನವರ ಮೇಲೆ ಯುದ್ಧಮಾಡಿ, ಅಲ್ಲಿದ್ದವರನ್ನು ಖಡ್ಗದಿಂದ ಸಂಹರಿಸಿ, ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
9 ९ नंतर यहूदाचे लोक डोंगराळ प्रदेश, नेगेब आणि पश्चिमेकडील तळवटीच्या डोंगराळ प्रदेशात राहणाऱ्या कनान्यांशी लढावयाला खाली गेले.
ತರುವಾಯ ಯೆಹೂದ ಗೋತ್ರದವರು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋದರು.
10 १० मग हेब्रोनात राहणाऱ्या कनान्यांविरुद्ध यहूदा पुढे चालून गेला. (हेब्रोनाचे पूर्वीचे नाव किर्याथ-आर्बा होते) आणि त्यांनी शेशय, अहीमान व तलमय यांचा पराभव केला.
ಯೆಹೂದ ಗೋತ್ರದವರು ಪೂರ್ವದಲ್ಲಿ ಕಿರ್ಯತ್ ಅರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಸೋಲಿಸಿದರು.
11 ११ तेथून यहूदाचे लोक दबीरच्या रहिवाश्यांवर पुढे चालून गेले. (दबीरचे पूर्वीचे नाव किर्याथ-सेफर होते)
ಅಲ್ಲಿಂದ ದೆಬೀರಿನ ನಿವಾಸಿಗಳ ವಿರೋಧವಾಗಿ ಹೋದರು. ದೆಬೀರಿಗೆ ಮೊದಲು ಕಿರ್ಯತ್ ಸೇಫೆರ್ ಎಂಬ ಹೆಸರಿತ್ತು.
12 १२ कालेब म्हणाला, “जो कोणी लढून किर्याथ-सेफर काबीज करील त्यास मी आपली मुलगी अखसा पत्नी म्हणून देईन.”
ಕಾಲೇಬನು, “ಕಿರ್ಯತ್ ಸೇಫೆರ ಮೇಲೆ ದಾಳಿಮಾಡಿ ತೆಗೆದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ,” ಎಂದು ಹೇಳಿದ್ದನು.
13 १३ तेव्हा कालेबाचा धाकटा भाऊ कनाज अथनिएल ह्याचा मुलगा ह्याने दबीर नगर काबीज केले आणि म्हणून कालेबाने आपली मुलगी अखसा त्यास पत्नी करून दिली.
ಆಗ ಕಾಲೇಬನ ತಮ್ಮನಾದ ಕೆನಾಜನ ಮಗನಾದ ಒತ್ನಿಯೇಲನು ಅದನ್ನು ಹಿಡಿದನು. ಅನಂತರ ಕಾಲೇಬನು ತನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಕೊಟ್ಟನು.
14 १४ ती आली तेव्हा आपल्या पित्यापासून काही शेतजमीन मागून घेण्यासाठी तिने त्यास गळ घातली. ती गाढवावरून उतरली तेव्हा कालेबाने तिला विचारले, “मी तुझ्यासाठी काय करू शकतो?”
ಒಂದು ದಿನ ಅಕ್ಷಾ ಒತ್ನಿಯೇಲನೊಂದಿಗೆ ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಇನ್ನೂ ಒಂದು ಹೊಲವನ್ನು ಕೇಳುವುದಕ್ಕೆ ಅವನನ್ನು ಪ್ರೇರೇಪಿಸಿ, ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳಿಗೆ, “ನಿನಗೆ ಏನು ಬೇಕು?” ಎಂದನು.
15 १५ ती त्यास म्हणाली, “मला आशीर्वाद द्या; तुम्ही मला नेगेब प्रदेशात स्थायिक केले आहे तेव्हा मला पाण्याचे झरेही द्या” आणि कालेबाने तिला वरचे व खालचे झरे दिले.
ಅದಕ್ಕೆ ಅವಳು ಅವನಿಗೆ, “ನನಗೆ ಒಂದು ಸಹಾಯಮಾಡಬೇಕು. ಮೊದಲು ದಕ್ಷಿಣ ಹೊಲವನ್ನು ನೀನು ನನಗೆ ಕೊಟ್ಟೆ; ನೀರಿನ ಬುಗ್ಗೆಗಳನ್ನು ಸಹ ನನಗೆ ಕೊಡು,” ಎಂದಳು. ಆಗ ಕಾಲೇಬನು ಅವಳಿಗೆ ಮೇಲಿನ ಹಾಗೂ ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.
16 १६ मोशेचा मेहुणा जो केनी त्यांचे वंशज यहूदाच्या लोकांबरोबर खजुरीच्या नगराहून अरादाजवळील यहूदातले (जे नेगेबात आहे) रान आहे तेथे चढून गेले; आणि तेथे जाऊन यहूदा लोक अराद जवळ त्या लोकांबरोबर राहिले.
ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು, ಯೆಹೂದ ಗೋತ್ರದವರ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೆಹೂದದ ಗೋತ್ರದವರ ಮರುಭೂಮಿಗೆ ಬಂದು, ಅಲ್ಲಿನ ಜನರ ಸಂಗಡ ವಾಸವಾಗಿದ್ದರು.
17 १७ आणि यहूदाची माणसे त्यांचा भाऊ शिमोन ह्याच्या मनुष्यांबरोबर गेली आणि त्यांनी सफाथ येथे राहणारे कनानी यांच्यावर हल्ला करून त्यांचा पूर्णपणे नाश केला; त्या नगराचे नाव हर्मा असे म्हटले होते.
ಯೆಹೂದ ಗೋತ್ರದವರು ತನ್ನ ಸಹೋದರರಾದ ಸಿಮೆಯೋನ್ಯರ ಸಂಗಡ ಹೊರಟು, ಚೆಫೆತ್ನಲ್ಲಿ ವಾಸವಾಗಿರುವ ಕಾನಾನ್ಯರ ಮೇಲೆ ದಾಳಿಮಾಡಿ, ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೊರ್ಮಾ ಎಂದು ಕರೆಯಲಾಗಿತ್ತು.
18 १८ यहूदाच्या लोकांनी गज्जा व त्याच्या सभोवतालची जमीन, अष्कलोन व त्याच्या सभोवतालची जागा आणि एक्रोन व त्याच्या सभोवतालची जागा ही नगरे घेतली.
ಇದಲ್ಲದೆ ಯೆಹೂದ ಗೋತ್ರದವರು ಗಾಜಾವನ್ನೂ ಅದರ ಮೇರೆಯನ್ನೂ; ಅಷ್ಕೆಲೋನನ್ನೂ, ಅದರ ಮೇರೆಯನ್ನೂ; ಎಕ್ರೋನನ್ನೂ, ಅದರ ಮೇರೆಯನ್ನೂ ತೆಗೆದುಕೊಂಡರು.
19 १९ यहूदाच्या लोकांबरोबर परमेश्वर होता आणि त्यांनी डोंगराळ प्रदेश ताब्यात घेतला, पण खोऱ्यात राहणाऱ्या लोकांजवळ लोखंडी रथ असल्याने त्यांना घालवून देणे त्यांना जमेना.
ಯೆಹೋವ ದೇವರು ಯೆಹೂದ ಗೋತ್ರದವರ ಸಂಗಡ ಇದ್ದುದರಿಂದ, ಅವರು ಬೆಟ್ಟದ ಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿಣದ ರಥಗಳಿದ್ದುದರಿಂದ, ಅವರು ಅವರನ್ನು ಹೊರಡಿಸಲಾರದೆ ಹೋದರು.
20 २० मोशेच्या सांगण्याप्रमाणे हेब्रोन कालेबाला देण्यात आले व त्याने तेथून अनाकाच्या तिघा मुलांना घालवून दिले.
ಮೋಶೆಯು ಹೇಳಿದ ಪ್ರಕಾರ, ಅವರು ಹೆಬ್ರೋನನ್ನು ಕಾಲೇಬನಿಗೆ ಕೊಟ್ಟರು. ಅವರು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟರು.
21 २१ पण बन्यामिनाच्या लोकांनी यरूशलेमेत राहणाऱ्या यबूसी लोकांस बाहेर घालवले नाही, म्हणून आजपर्यंत यबूसी लोक यरूशलेमेत बन्यामिनाच्या लोकांबरोबर राहत आहेत.
ಬೆನ್ಯಾಮೀನ್ಯರಿಗೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಯೆಬೂಸಿಯರು ಈ ದಿನದವರೆಗೂ ಬೆನ್ಯಾಮೀನರ ಸಂಗಡ ವಾಸವಾಗಿದ್ದಾರೆ.
22 २२ योसेफाच्या घराण्यानेही बेथेलावर हल्ला करण्याची तयारी केली; आणि परमेश्वर त्यांच्याबरोबर होता.
ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಏರಿಹೋದರು. ಯೆಹೋವ ದೇವರು ಅವರ ಸಂಗಡ ಇದ್ದರು.
23 २३ योसेफाच्या घराण्याने हेरगिरी करण्यास बेथेल येथे माणसे पाठवली. त्या नगराचे पूर्वीचे नाव लूज होते.
ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಸಂಚರಿಸಿ ನೋಡಲು, ಯೋಸೇಫನ ಮನೆಯವರನ್ನು ಕಳುಹಿಸಲಾಯಿತು.
24 २४ त्या हेरांनी नगरातून एक मनुष्य बाहेर निघताना पाहिला; आणि त्यांनी त्यास म्हटले, “नगरात कसे जायचे ते आम्हांला दाखव म्हणजे आम्ही तुझ्यावर दया करू.”
ಗೂಢಚಾರರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು. ನಾವು ನಿನಗೆ ಕರುಣೆ ತೋರಿಸುವೆವು,” ಎಂದರು.
25 २५ तेव्हा त्याने त्यांना नगरात जाण्याचा मार्ग दाखवला आणि त्यांनी त्या नगरावर तलवार चालवली, पण त्या मनुष्यास व त्याच्या सर्व परिवाराला त्यांनी सुखरूप जाऊ दिले.
ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ, ಅವರು ಬಂದು ಪಟ್ಟಣವನ್ನು ಖಡ್ಗದಿಂದ ಹೊಡೆದು, ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.
26 २६ त्या मनुष्याने हित्ती लोकांच्या देशात जाऊन एक नगर बांधले व त्याचे नाव लूज ठेवले. त्याचे नाव आजपर्यंत तेच आहे.
ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ, ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ, ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈವರೆಗೂ ಅದಕ್ಕೆ ಅದೇ ಹೆಸರಿದೆ.
27 २७ मनश्शेच्या लोकांनी बेथ-शान व त्याची खेडी, तानख व त्याची खेडी, दोर व त्याच्या खेड्यात राहणाऱ्यांना, इब्लाम व त्याची खेडी यामध्ये राहणाऱ्यांना आणि मगिद्दो व त्याची खेडी यामध्ये राहणाऱ्यांना बाहेर घालवून दिले नाही. कारण त्या कनान्यांनी त्या प्रदेशात राहण्याचा निश्चय केला.
ಮನಸ್ಸೆಯ ಗೋತ್ರದವರು ಬೇತ್ ಷೆಯಾನರನ್ನೂ, ಅವರ ಊರುಗಳವರನ್ನೂ; ತಾನಕದವರನ್ನೂ, ಅವರ ಊರುಗಳವರನ್ನೂ; ದೋರಿನವರನ್ನೂ, ಅವರ ಊರುಗಳವರನ್ನೂ; ಇಬ್ಲೆಯಾಮಿನವರನ್ನೂ, ಅವರ ಊರುಗಳವರನ್ನೂ, ಮೆಗಿದ್ದೋನಿನವರನ್ನೂ, ಅವರ ಊರುಗಳವರನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಆ ದೇಶದಲ್ಲಿ ವಾಸಿಸಬೇಕೆಂದಿದ್ದರು.
28 २८ जेव्हा इस्राएल लोक सामर्थ्यवान झाले तेव्हा त्यांनी कनानी लोकांस कठोर परिश्रमाचे काम करायला लावले; पण त्यांना कधीच पूर्णपणे घालवून दिले नाही.
ಇಸ್ರಾಯೇಲರು ಬಲಗೊಂಡಾಗ, ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ, ಅವರನ್ನು ದಾಸತ್ವಕ್ಕೆ ಕಾನಾನ್ಯರಿಗೆ ನೇಮಕ ಮಾಡಿದರು.
29 २९ एफ्राइमने गेजेर येथे राहणाऱ्या कनान्यांना घालवून दिले नाही, ते कनानी गेजेर येथे त्यांच्यामध्येच राहिले.
ಇದಲ್ಲದೆ ಎಫ್ರಾಯೀಮ್ಯರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು.
30 ३० जबुलूनाने कित्रोन व नहलोल येथील रहिवाश्यांना घालवून दिले नाही; पण जबुलूनाने कनान्यांवर बळजबरी करून कठोर परिश्रमाच्या कामास नेमले.
ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ದಾಸರಾಗಿ ವಾಸಮಾಡುವವರಾದರು.
31 ३१ आशेराने अक्को यातले राहणारे आणि सीदोन व अहलाब व अकजीब व हेल्बा, अफीक व रहोब येथील रहिवाश्यांना घालवून दिले नाही;
ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ; ಸೀದೋನಿನ ವಾಸಿಗಳನ್ನೂ; ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.
32 ३२ म्हणून आशेराचे वंशज त्या देशाच्या कनानी रहिवाश्यांमध्ये राहिले; कारण त्यांनी त्यांना घालवून दिले नाही.
ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ, ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು.
33 ३३ नफतालीच्या वंशजांनी बेथ-शेमेश व बेथ-अनाथ येथील रहिवाश्यांना घालवून दिले नाही; नफताली त्या देशाच्या कनानी रहिवाश्यांमध्ये राहिले; पण बेथ-शेमेश व बेथ-अनाथ येथील रहिवासी नफताली लोकांची कठीण कष्टाची कामे करू लागले.
ನಫ್ತಾಲಿ ಗೋತ್ರದವರು ಬೇತ್ ಷೆಮೆಷ್ ವಾಸಿಗಳನ್ನೂ ಹೊರಡಿಸಿಬಿಡದೆ, ಆ ದೇಶವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್ ಷೆಮೆಷ್, ಬೇತ್ ಅನಾತ್ ಪಟ್ಟಣ ವಾಸಿಗಳು ಅವರಿಗೆ ದಾಸರಾದರು.
34 ३४ अमोरी लोकांनी दानाच्या वंशजांना डोंगराळ प्रदेशात राहण्यास भाग पाडले. ते त्यांना खाली मैदानात उतरू देईनात;
ಅಮೋರಿಯರು ದಾನ್ಯರನ್ನು ತಗ್ಗಿನಲ್ಲಿ ಇಳಿಯಗೊಡದೆ, ಬೆಟ್ಟಗಳಿಗೆ ಓಡಿಸಿಬಿಟ್ಟರು
35 ३५ अमोऱ्यांनी हेरेस डोंगरावर अयालोन व शालबीम येथे राहण्याचा निश्चय केला; पण योसेफाचे घराणे प्रबळ झाल्यावर त्यांनी त्यांना जिंकले आणि कठीण कष्टाचे काम करण्यास त्यांना भाग पाडले.
ಹೀಗೆ ಅಮೋರಿಯರು ಹರ್ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಗೋತ್ರದವರ ಕೈ ಬಲ ಹೆಚ್ಚಾದದ್ದರಿಂದ ಅವರಿಗೆ ದಾಸರಾದರು.
36 ३६ अमोऱ्यांची सीमा अक्रब्बीमाचा चढावापसून आणि सेला येथून डोंगराळ प्रदेशावर गेली होती.
ಹೀಗೆ ಅಮೋರಿಯರ ಮೇರೆಯು ಅಕ್ರಬ್ಬೀಮನ್ನು ಹಿಡಿದು ಸೆಲ ಬಂಡೆಯಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.