< विलापगीत 4 >
1 १ सोने कसे निस्तेज झाले! शूद्ध सोने कसे बदलले आहे! पवित्रस्थानाचे दगड प्रत्येक रस्त्याच्या चौकात विखुरले आहेत.
೧ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.
2 २ सियोनेचे मोलवान पुत्र शुद्ध सोन्याच्या बरोबरीचे होते, पण आता ते कुंभाराच्या हाताने केलेल्या केवळ मडक्याप्रमाणे मानलेले आहेत.
೨ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು, ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.
3 ३ कोल्ही आपल्या पिलांना स्तनांजवळ घेऊन दुध पाजतात. पण माझ्या लोकांची कन्या वाळवंटात राहणाऱ्या शहामृगाप्रमाणे निर्दयी झाली आहे.
೩ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಸಾಕುತ್ತವೆ; ಆದರೆ ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.
4 ४ तान्ह्या मुलांची जीभ तहानेने टाळूला चिकटली आहे. बालके भाकर मागतात, पण त्यांना कोणीही भाकर देत नाही.
೪ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.
5 ५ जे पूर्वी स्वादिष्ट अन्न खात असत, ते आता रस्त्यावर उपाशी पडले आहेत. जे किरमिजी वस्र घालत असत, त्यांनी आता उकिरड्यांचा आश्रय घेतला आहे.
೫ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕುಗೆಟ್ಟು ಅಲೆಯುತ್ತಾರೆ; ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ಹೊದ್ದುಕೊಳ್ಳುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು.
6 ६ सदोमावर कोणी हात टाकला नाही तरी त्याचा अकस्मात नाश झाला, त्याच्या पापांपेक्षा माझ्या लोकांच्या कन्येचे दुष्कर्म मोठे आहे. सदोमाचा व गमोराचा अचानक नाश झाला, आणि त्यामध्ये कोणत्याही मनुष्याचा हात नव्हता.
೬ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.
7 ७ तिचे सरदार बर्फासारखे चकाकत असत व दुधापेक्षा पांढरे होते. ते पोवळयांसारखे कांतीने लाल होते. त्यांचे तेज जणू काही नीलमण्यासारखे होते.
೭ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.
8 ८ पण आता त्यांचे चेहरे काजळीपेक्षा काळे झाले आहेत. त्यांना रस्त्यात कोणी ओळखतसुध्दा नाही. त्यांची कातडी सुरकुतली आणि हाडाला चिकटली आहे. ती लाकडाप्रमाणे शुष्क झाली आहे.
೮ಈಗ ಅವರ ಮುಖವು ಕಾರ್ಮೋಡದಂತೆ ಕಡುಕಪ್ಪಾಗಿದೆ, ಬೀದಿಗಳಲ್ಲಿ ಅವರ ಗುರುತು ಯಾರಿಗೂ ಸಿಕ್ಕದು. ಅವರ ಚರ್ಮವು ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ, ಒಣಗಿದ ಕಟ್ಟಿಗೆಯಂತಾಗಿದೆ.
9 ९ जे उपासमारीने मरण पावले त्यांच्यापेक्षा जे तलवारीने मरण पावले त्यांचे बरे झाले आहे. कारण उपासमार झालेले फारच दु: खी होते. ते व्याकुळ झाले होते. शेतामधून काहीच न मिळाल्यामुळे ते मरण पावले.
೯ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.
10 १० दयाळू स्त्रीयांच्या हातांनी आपली मुले शिजविली, ती माझ्या लोकांच्या कन्येच्या विनाशसमयी ती त्यांचे अन्न झाली.
೧೦ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು.
11 ११ परमेश्वराने आपला क्रोध प्रकट केला. त्यांने आपला संतप्त राग ओतला आहे. त्याने सियोनेत आग लावली आहे व त्या आगित तिचे आधारस्तंभे जाळून टाकले आहेत.
೧೧ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.
12 १२ पृथ्वीवरील राजांचा व पृथ्वीवरील राहणाऱ्यांचा ह्यावर विश्वास बसला नाही की, यरूशलेमेच्या प्रवेशद्वारांतून शत्रू किंवा वैरी वेशींत शिरतील.
೧೨ವೈರಿಗಳೂ ಮತ್ತು ಎದುರಾಳಿಗಳೂ ಯೆರೂಸಲೇಮಿನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಅರಸರು ಅಥವಾ ಭೂನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ.
13 १३ असे घडले कारण, तिच्या संदेष्ट्यांनी पाप केले, तिच्या धर्मगुरुंनी दुष्कृत्ये केली, त्यांनी नीतिमान लोकांचे रक्त यरूशलेमामध्ये सांडले होते.
೧೩ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.
14 १४ ते आंधळयांप्रमाणे रस्त्यात भटकत होते. कोणीही त्यांच्या वस्त्रालाही शिवू शकले नाहीत, कारण ती रक्ताने माखली होती.
೧೪ಆಹಾ, ಆ ಯಾಜಕ ಮತ್ತು ಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.
15 १५ दूर व्हा, “दूर व्हा! अमंगळ लोकहो.” आम्हास स्पर्श नका करू, असे लोक त्यांना म्हणाले, ते पळून जाऊन भटकत राहीले, तेव्हा राष्ट्रांमधील लोक म्हणाले, “त्यांनी आमच्याबरोबर राहू नये.”
೧೫ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.
16 १६ परमेश्वराने आपल्या समोरून त्यांना विखरले आहे, तो पुन्हा त्याच्याकडे पाहणार नाही, याजकांची मर्यादा त्यांनी राखली नाही. त्यांनी वडिलांचा मान राखला नाही.
೧೬ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.
17 १७ मदतीची निरर्थक वाट पाहून आमचे डोळे थकले आहेत. आम्ही आतूरतेने वाट पाहत असता जे राष्ट्र आमचा बचाव करू शकले नाही त्याची वाट आम्ही पाहिली आहे.
೧೭ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ.
18 १८ आमच्या शत्रूंनी आमची शिकार केली आणि आम्ही रस्त्यांवरसुध्दा जाऊ शकलो नाही. आमचा शेवट जवळ आला! आमचे आयुष्य सरले होते! आमचा अंत आला आहे!
೧೮ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿಮಾಡಿಕೊಂಡಿರುವುದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರ ಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು; ಹೌದು, ನಮಗೆ ಅಂತ್ಯವು ಬಂದೇ ಬಂತು.
19 १९ आमचा पाठलाग करणारे गरुडापेक्षाही वेगवान होते. त्यांनी आमचा डोंगरांत पाठलाग केला. आम्हास पकडण्यासाठी ते रानात दडून बसले.
೧೯ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.
20 २० आमच्या दृष्टीने जो राजा सर्वश्रेष्ठ होता जो परमेश्वराचा अभिषिक्त, आमच्या नाकपूड्यातील श्वास. त्यांच्या खाचेत पकडला गेला. ज्याच्या बद्दल आम्ही असे म्हणालो की, “आम्ही त्याच्या सावलीत राहू. तो इतर राष्ट्रापासून आमचे रक्षण करतो.”
೨೦ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.
21 २१ ऊस देशात राहणाऱ्या अदोमाच्या कन्ये आनंदित हो आणि हर्ष कर. पण लक्षात ठेव की प्याला तुमच्याकडेसुध्दा येईल, तेव्हा तू मस्त होऊन आपणास विवस्त्र करशील.
೨೧ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.
22 २२ सियोन कन्ये, तुझी शिक्षा संपली. आता पुन्हा तुला कैद करून नेले जाणार नाही. अदोमाच्या कन्ये, तुमची पापे उघडी करून परमेश्वर तुम्हास शिक्षा करील.
೨೨ಚೀಯೋನೆಂಬ ಕನ್ಯೆಯೇ, ನಿನ್ನ ದೋಷಫಲವೆಲ್ಲಾ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು. ಎದೋಮೆಂಬ ಕನ್ಯೆಯೇ, ನಿನ್ನ ದೋಷದ ನಿಮಿತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.