< लूक 10 >
1 १ यानंतर प्रभूने आणखी सत्तर जणांस नेमून ज्या ज्या नगरांत व ज्या ज्याठिकाणी तो स्वतः जाणार होता तेथे दोघे असे त्यांना आपल्यापुढे पाठवले.
೧ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.
2 २ तो त्यांना म्हणाला, “पीक फार आहे परंतु कामकरी थोडके आहेत, यास्तव पिकाच्या प्रभूने आपल्या पिकात कामकरी पाठवावे म्हणून तुम्ही त्याची प्रार्थना करा.”
೨ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ.
3 ३ जा; पाहा, लांडग्यांच्या मध्ये जसे कोंकरांस पाठवावे तसे मी तुम्हास पाठवतो.
೩ಹೋಗಿರಿ, ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ.
4 ४ पिशवी किंवा झोळी किंवा वहाणा घेऊ नका व वाटेने कोणाला सलाम करू नका.
೪ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.
5 ५ तुम्ही ज्या कोणत्याही घरात जाल तेथे पहिल्याने, या घराला शांती असो असे म्हणा.
೫ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ.
6 ६ जर तेथे कोणी शांतिप्रिय मनुष्य असला तर तुमची शांती त्याच्यावर राहील; पण तो नसला तर ती तुमच्याकडे परत येईल.
೬ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು.
7 ७ तुम्ही त्याच घरात राहून ते देतील ते खातपीत जा; कारण कामकरी आपल्या मजुरीस योग्य आहे; घरोघरी फिरू नका.
೭ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.
8 ८ आणि तुम्ही ज्या कोणत्याही नगरांत जाल आणि ते तुम्हास स्वीकारतो, त्यामध्ये ते जे तुमच्यापुढे वाढतील ते खा,
೮ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.
9 ९ आणि त्यामध्ये जे दुखणाईत असतील त्यांना बरे करा व त्यांना सांगा की, देवाचे राज्य तुमच्याजवळ आले आहे.
೯ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.
10 १० परंतु तुम्ही ज्या कोणत्याही नगरांत जाल आणि ते तुमचे स्वागत नाही केले तर रस्त्यांवर बाहेर जाऊन असे म्हणा,
೧೦ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು,
11 ११ तुमच्या नगराची धूळ आमच्या पायांला लागली ती देखील आम्ही तुमच्याविरुध्द झाडून टाकतो; तरी हे जाणा की देवाचे राज्य जवळ आले आहे.
೧೧‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.
12 १२ मी तुम्हास सांगतो की त्यादिवशी सदोमाला त्या नगरापेक्षा अधिक सोपे जाईल.
೧೨ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.
13 १३ “हे खोराजिना, तुला हाय! हे बेथसैदा, तुला हाय! कारण तुमच्यामध्ये जी सामर्थ्याची कृत्ये होत आहेत ती जर सोर व सिदोन यांच्यामध्ये झाली असती तर त्यांनी मागेच गोणताट अंगावर घेऊन व राखेत बसून पश्चात्ताप केला असता.
೧೩ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.
14 १४ यामुळे न्यायकाळी सोर व सिदोन यांना अधिक सोपे जाईल.
೧೪ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು.
15 १५ हे कफर्णहूमा, तू आकाशापर्यंत उंचावला जाशील काय? तू नरकापर्यंत उतरशील. (Hadēs )
೧೫ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ. (Hadēs )
16 १६ जो शिष्यांचे ऐकतो तो माझे ऐकतो आणि जो शिष्यांना नाकारतो तो मला नाकारतो आणि जो मला नाकारतो तो ज्याने मला पाठवले त्यास नाकारतो.”
೧೬ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.
17 १७ ते सत्तर लोक आनंदाने परतले आणि म्हणाले, “प्रभू, तुझ्या नावाने भूतेसुद्धा आम्हास वश होतात!”
೧೭ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.
18 १८ तेव्हा तो त्यांना म्हणाला, “मी सैतानाला आकाशातून विजेसारखे पडताना पाहिले!
೧೮ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.
19 १९ पाहा, मी तुम्हास साप आणि विंचू यांना तुडविण्याचा व शत्रूच्या सर्व सामर्थ्यावर अधिकार दिला आहे आणि कशानेच तुम्हास अपाय होणार नाही.
೧೯ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
20 २० तथापि तुम्हास दुष्ट आत्मे वश होतात याचा आनंद मानू नका तर तुमची नावे स्वर्गात लिहिली आहेत याचा आनंद माना.”
೨೦ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.
21 २१ त्या क्षणी तो पवित्र आत्म्यात आनंदीत झाला आणि म्हणाला, “हे पित्या, स्वर्गाच्या आणि पृथ्वीच्या प्रभू मी तुझी स्तुती करतो, कारण तू या गोष्टी ज्ञानी आणि बुद्धीमान लोकांपासून लपवून ठेवून त्या लहान बालकांस प्रकट केल्या आहेस. होय, पित्या कारण तुला जे योग्य वाटले ते तू केलेस.
೨೧ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
22 २२ माझ्या पित्याने सर्व गोष्टी माझ्यासाठी दिल्या होत्या आणि पुत्र कोण आहे हे पित्याशिवाय कोणालाच ठाऊक नाही आणि पुत्राशिवाय कोणालाही पिता कोण आहे हे माहीत नाही व ज्या कोणाला ते प्रकट करण्याची पुत्राची इच्छा असेल त्यालाच फक्त माहीत आहे.”
೨೨ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.
23 २३ आणि शिष्यांकडे वळून तो एकांतात बोलला, “तुम्ही जे पाहता ते पाहणारे डोळे धन्य.
೨೩ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು.
24 २४ मी तुम्हास सांगतो, अनेक राजांनी व संदेष्ट्यांनी तुम्ही जे पाहता ते पाहण्याची इच्छा बाळगली, परंतु त्यांनी ते पाहिले नाही आणि तुम्ही जे ऐकता ते ऐकण्याची इच्छा बाळगली, परंतु त्यांनी ते ऐकले नाही.”
೨೪ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.
25 २५ नंतर एक नियमशास्त्राचा शिक्षक उभा राहिला आणि त्याने येशूची परीक्षा पाहण्याचा प्रयत्न केला, तो म्हणाला, “गुरुजी, अनंतकाळचे जीवन मिळण्यासाठी मी काय केले पाहीजे?” (aiōnios )
೨೫ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು, (aiōnios )
26 २६ तेव्हा येशू त्यास म्हणाला, “नियमशास्त्रात काय लिहिले आहे? तू त्यामध्ये काय वाचतोस?”
೨೬ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?” ಎಂದು ಕೇಳಿದನು.
27 २७ तो म्हणाला, “तू तुझा देव प्रभू याच्यावर पूर्ण अंतःकरणाने, पूर्ण आत्म्याने, पूर्ण शक्तीने प्रीती कर.” व स्वतःवर जशी प्रीती करतोस तशी तू आपल्या शेजाऱ्यावरही प्रीती कर.
೨೭ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.
28 २८ तेव्हा येशू त्यास म्हणाला, “तू बरोबर उत्तर दिलेस, हेच कर म्हणजे तू जगशील.”
೨೮ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು.
29 २९ पण आपण योग्य प्रश्न विचारला आहे हे इतरांना दाखवून देण्यासाठी त्याने येशूला विचारले, “मग माझा शेजारी कोण?”
೨೯ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,
30 ३० येशूने उत्तर दिले, “एक मनुष्य यरूशलेम शहराहून यरीहोस निघाला होता आणि तो लुटारुंच्या हाती सापडला. त्यांनी त्याचे कपडे काढून घेऊन त्यास मारले व त्यास अर्धमेला टाकून ते निघून गेले.
೩೦ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.
31 ३१ तेव्हा त्याचवेळी एक याजक त्या रस्त्याने जात होता. याजकाने त्यास पाहिले, पण तो रस्त्याच्या दुसऱ्या बाजूने निघून गेला.
೩೧ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು.
32 ३२ त्याच रस्त्याने एक लेवी त्याठिकाणी आला. लेव्याने त्यास पाहिले व तो सुद्धा रस्त्याच्या दुसऱ्या बाजूने निघून गेला.
೩೨ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು.
33 ३३ मग एक शोमरोनी त्याच रस्त्याने प्रवास करीत असता तो होता तेथे आला त्या मनुष्यास पाहून त्यास त्याचा कळवळा आला
೩೩ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ,
34 ३४ तो त्याच्याजवळ आला त्याच्या जखमांवर तेल व द्राक्षरस ओतून त्या बांधल्या आणि त्यास आपल्या गाढवावर बसवून त्यास उतारशाळेत आणले व त्याची देखभाल केली.
೩೪ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.
35 ३५ दुसऱ्या दिवशी त्याने दोन चांदीचे नाणे काढले आणि उतारशाळेच्या मालकाला दिले व म्हणाला, ‘याची चांगली देखभाल कर म्हणजे यापेक्षा जे तू अधिक खर्च करशील ते मी परत आल्यावर तुला देईन.’
೩೫ಮರುದಿನ ಅವನು ಎರಡು ದಿನಾರಿಗಳನ್ನುತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.
36 ३६ लुटारुंच्या तावडीत जो मनुष्य सापडला होता, त्याचा त्या तिघांपैकी कोण खरा शेजारी होता असे तुला वाटते?”
೩೬ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?” ಎಂದು ಕೇಳಿದ್ದಕ್ಕೆ,
37 ३७ तो नियमशास्त्राचा शिक्षक म्हणाला, “ज्याने त्याच्यावर दया केली तो.” तेव्हा येशू त्यास म्हणाला, “जा आणि तूही तसेच कर.”
೩೭ಆ ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು.
38 ३८ मग येशू आणि त्याचे शिष्य त्याच्या मार्गाने जात असता, तो एका गावात आला. तेथे मार्था नावाच्या स्त्रीने त्याचे स्वागत करून आदरातिथ्य केले.
೩೮ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.
39 ३९ तिला मरीया नावाची एक बहीण होती, ती प्रभूच्या पायाजवळ बसली व तो काय बोलतो हे ऐकत राहिली.
೩೯ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.
40 ४० पण मार्थेची अति कामामुळे तारांबळ झाली. ती येशूकडे आली आणि म्हणाली, “प्रभू, माझ्या बहिणीने सर्व काम माझ्यावर टाकले याची तुला काळजी नाही काय? तेव्हा मला मदत करायला तिला सांग.”
೪೦ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.
41 ४१ प्रभूने उत्तर दिले, “मार्था, मार्था, तू पुष्कळ गोष्टीविषयी दगदग करतेस.
೪೧ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.
42 ४२ पण एकच गोष्ट आवश्यक आहे. हे मी सांगतो आणि मरीयेने तिच्यासाठी चांगला वाटा निवडला आहे. तो तिच्यापासून काढून घेतला जाणार नाही.”
೪೨ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.