< लूक 9 >

1 मग त्याने त्या बारा शिष्यांस एकत्र बोलावून त्यांना सर्व भूतांवर आणि रोग बरे करायला, सामर्थ्य व अधिकार दिला,
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,
2 आणि त्याने त्यांना देवाच्या राज्याविषयीचा संदेश जाहीर करायला व रोग्यांना बरे करायला पाठवले.
ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.
3 तो त्यांना म्हणाला, “वाटेसाठी काही घेऊ नका; काठी किंवा झोळी किंवा भाकर किंवा पैसा घेऊ नका आणि दोन दोन अंगरखेही घेवू नका.
ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ನಿಮ್ಮ ಪ್ರಯಾಣಕ್ಕಾಗಿ ಏನನ್ನೂ ತೆಗೆದುಕೊಂಡು ಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು.
4 आणि ज्या कोणत्याही घरात तुम्ही जाल, तेथेच राहा व तेथूनच निघून जा.
ಇದಲ್ಲದೆ ಆ ಊರಿನಿಂದ ಹೊರಡುವ ತನಕ ನೀವು ಯಾವ ಮನೆಯಲ್ಲಿ ಇಳಿದುಕೊಂಡಿರುವಿರೋ, ಆ ಮನೆಯಲ್ಲೇ ಉಳಿದುಕೊಳ್ಳಿರಿ.
5 जितके तुम्हास अंगीकारीत नाहीत तितक्यांच्याविरुद्ध साक्ष व्हावी म्हणून तुम्ही त्या नगरातून निघते वेळी आपल्या पायांची धूळ झाडून टाका.”
ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು.
6 तेव्हा ते निघाले आणि सर्व ठिकाणी सुवार्ता सांगत व रोग बरे करीत गांवोगांवी फिरत गेले.
ಆಗ ಅವರು ಹೊರಟು ಗ್ರಾಮಗಳಿಗೆ ಹೋಗಿ, ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿಯೂ ರೋಗಿಗಳನ್ನು ವಾಸಿಮಾಡುತ್ತಿದ್ದರು.
7 घडत असलेल्या सर्व गोष्टी ऐकून हेरोद राजा फार घोटाळ्यात पडला, कारण “योहान मरण पावलेल्यांमधून उठला आहे.” असे कित्येक म्हणत होते;
ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಗೊಂಡನು, ಏಕೆಂದರೆ ಸತ್ತಿದ್ದ ಯೋಹಾನನು ತಿರುಗಿ ಬದುಕಿಬಂದಿದ್ದಾನೆಂದು ಕೆಲವರೂ,
8 आणि कित्येक म्हणत होते की “एलीया प्रकट झाला आहे” आणि दुसरे म्हणत होते की “पुरातन संदेष्ट्यातील कोणीएक उठला आहे.”
ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆಂದು ಮತ್ತೆ ಕೆಲವರೂ ಹೇಳಿಕೊಳ್ಳುತ್ತಿದ್ದರು.
9 तेव्हा हेरोद म्हणाला, “योहानाचे शीर मी तोडले, पण ज्याच्याविषयी अशा गोष्टी मी ऐकतो तो हा कोण आहे?” आणि तो त्यास भेटायला पाहत होता.
ಆದರೆ ಹೆರೋದನು, “ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ” ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು.
10 १० मग प्रेषितांनी परत येऊन आपण जे काही केले होते ते त्यास सविस्तर सांगितले. मग तो त्यांना बरोबर घेऊन बेथसैदा नावाच्या नगराकडे एकीकडे गेला.
೧೦ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.
11 ११ परंतु याविषयी लोकांनी ऐकल्यावर ते त्याच्यामागे गेले. तेव्हा तो त्यांचे स्वागत करून त्यांच्याशी देवाच्या राज्याविषयी बोलू लागला आणि ज्यांना बरे होण्याची गरज होती त्यांना त्याने बरे केले.
೧೧ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು.
12 १२ दिवस संपत आला, तेव्हा बारा जण जवळ येऊन त्यास म्हणाले, “समुदायाला निरोप दे, म्हणजे ते आसपासच्या गावांत व खेड्यांत जाऊन उतरतील व खाण्याची सोय करतील; कारण आपण येथे रानातल्या ठिकाणी आहो.”
೧೨ಸಂಜೆಯಾಗುತ್ತಿರಲು, ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೋಸ್ಕರ ಊಟವಸತಿಗಳನ್ನು ಏರ್ಪಡಿಸಿಕೊಳ್ಳಲಿ; ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲಾ” ಎಂದು ಆತನಿಗೆ ಹೇಳಲಾಗಿ,
13 १३ पण तो त्यांना म्हणाला, “तुम्हीच त्यांना खायला द्या.” ते म्हणाले, “आम्ही जाऊन या लोकांसाठी अन्न विकत आणले नाही, तर पाच भाकरी व दोन मासे एवढ्याशिवाय आम्हाजवळ काही नाही.”
೧೩ಆತನು, “ನೀವೇ ಅವರಿಗೆ ಊಟಕ್ಕೆ ಕೊಡಿರಿ” ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು.
14 १४ कारण ते सुमारे पाच हजार पुरूष होते. तेव्हा त्याने आपल्या शिष्यांना सांगितले, “पन्नास पन्नास जणांच्या पंक्ती करून त्यास बसवा,”
೧೪ಅಲ್ಲಿ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿಯಿದ್ದರು. ಆಗ ಯೇಸುವು ತನ್ನ ಶಿಷ್ಯರಿಗೆ, “ಇವರನ್ನು ಒಂದೊಂದು ಪಂಕ್ತಿಗೆ ಹೆಚ್ಚುಕಡಿಮೆ ಐವತ್ತೈವತ್ತರಂತೆ ಕೂರಿಸಿರಿ” ಎಂದು ಹೇಳಲು,
15 १५ मग त्यांनी सांगितल्याप्रमाणे करून सर्वांस बसवले.
೧೫ಅವರು ಅದರಂತೆ ಮಾಡಿ ಎಲ್ಲರನ್ನೂ ಕುಳ್ಳಿರಿಸಿದರು.
16 १६ त्याने त्या पांच भाकरी व ते दोन मासे घेतले आणि वर स्वर्गाकडे पाहून त्यास आशीर्वाद दिला आणि त्यांचे तुकडे करून ते लोकसमुदायाला वाढण्याकरता शिष्यांजवळ दिले.
೧೬ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು.
17 १७ तेव्हा ते सर्व जेवून तृप्त झाले; आणि त्यांनी मोडलेल्या तुकड्यांतले उरले ते बारा टोपल्या भरून त्यांनी उचलून घेतले.
೧೭ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು.
18 १८ आणि असे झाले की तो एकांतात प्रार्थना करत असता शिष्य त्याच्याबरोबर होते, तेव्हा त्याने त्यांना विचारून म्हटले, “लोकसमुदाय मला कोण म्हणून म्हणतात?”
೧೮ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, “ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಲು,
19 १९ मग त्यांनी उत्तर देऊन म्हटले, “बाप्तिस्मा करणारा योहान, पण कित्येक म्हणतात ‘एलीया,’ व कित्येक म्हणतात की, पुरातन संदेष्ट्यातील कोणीएक पुन्हा उठला आहे.”
೧೯ಅವರು, “ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ, ಕೆಲವರು ಎಲೀಯನು ಎಂದೂ, ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ” ಎಂದು ಹೇಳಿದರು.
20 २० त्याने त्यांना म्हटले, “पण तुम्ही मला कोण म्हणून म्हणता?” तेव्हा पेत्राने उत्तर देऊन म्हटले, “देवाचा ख्रिस्त.”
೨೦ಯೇಸು ಅವರನ್ನು, “ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
21 २१ पण हे कोणाला सांगू नये अशी त्याने त्यांना निक्षून आज्ञा केली.
೨೧ಆಗ ಯೇಸುವು, ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟನು.
22 २२ आणि म्हटले, “मनुष्याच्या पुत्राने पुष्कळ दुःखे सोसावी आणि वडील व मुख्य याजक लोक व नियमशास्त्र शिक्षक यांच्याकडून नाकारले जावे व जीवे मारले जावे व तिसऱ्या दिवशी पुन्हा उठवले जावे, याचे अगत्य आहे.”
೨೨ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.
23 २३ आणि तो सर्वांना म्हणाला, “जर कोणी माझ्यामागे येऊ इच्छितो तर त्याने स्वतःला नाकारावे व दररोज आपला वधस्तंभ उचलून घ्यावा व माझ्यामागे चालावे.
೨೩ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
24 २४ कारण जो कोणी आपला जीव वाचवू इच्छितो तो त्यास गमावील, परंतु जो कोणी माझ्याकरिता आपला जीव गमावील तो त्यास वाचवील.
೨೪ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.
25 २५ कारण मनुष्याने सगळे जग मिळवून स्वतःला गमावले किंवा स्वतःचा नाश करून घेतला तर त्यास काय लाभ होईल?
೨೫ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
26 २६ जो कोणी माझ्याविषयीची व माझ्या वचनाविषयी लाज धरील त्यांच्याविषयीची लाज मनुष्याचा पुत्र जेव्हा आपल्या स्वतःच्या, पित्याच्या व पवित्र दूतांच्या गौरवाने येईल तेव्हा धरील.
೨೬ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.
27 २७ आणि मी तुम्हास खरे सांगतो की, येथे उभे राहणाऱ्यांतले काही असे आहेत की, ते देवाचे राज्य पाहतील तोपर्यंत त्यांना मरणाचा अनुभव येणारच नाही.”
೨೭ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
28 २८ आणि या गोष्टी सांगितल्यानंतर सुमारे आठ दिवसानी असे झाले की, पेत्र व योहान व याकोब यांना बरोबर घेऊन तो प्रार्थना करायला डोंगरावर गेला.
೨೮ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು.
29 २९ तेव्हा तो प्रार्थना करीत असता त्याच्या मुखाचे रूप पालटले व त्याचे वस्त्र पांढरे शुभ्र लखलखीत झाले.
೨೯ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು. ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು.
30 ३० आणि पाहा, दोन पुरूष त्याच्याशी संभाषण करीत होते; हे मोशे व एलीया होते,
೩೦ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತನಾಡುತ್ತಿದ್ದರು. ಅವರು ಯಾರೆಂದರೆ ಮೋಶೆಯೂ ಎಲೀಯನೂ.
31 ३१ ते तेजस्वी दिसत होते आणि जे त्याचे प्रयाण तो यरूशलेम शहरात पूर्ण करणार होता, त्याविषयी ते बोलत होते.
೩೧ಅವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇಮಿನಲ್ಲಿ ಆತನು ಹೊಂದಬೇಕಾಗಿದ್ದ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
32 ३२ तेव्हा पेत्र व त्याच्याबरोबर जे होते ते झोपेने भारावले होते, परंतु ते पूर्णपणे जागे झाले तेव्हा त्यांचे तेज आणि जे दोन पुरूष त्याच्याजवळ उभे राहिले होते त्यांनाही पहिले.
೩೨ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.
33 ३३ मग असे झाले की ते त्याच्यापासून दूर होत असता पेत्राने येशूला म्हटले, “हे गुरु, येथे असणे आम्हास बरे आहे; तर आम्ही तीन मंडप करू, तुझ्यासाठी एक व मोशेसाठी एक व एलीयासाठी एक.” आपण काय बोलत आहोत याचे त्यास भान नव्हते.
೩೩ಅವರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ, “ಗುರುವೇ ನಾವು ಇಲ್ಲೇ ಇರುವುದು ಒಳ್ಳೆಯದು, ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಎಲೀಯನಿಗೊಂದು ಹಾಗೂ ಮೋಶೆಗೊಂದು” ಎಂದು ಹೇಳಿದನು. ತಾನು ಏನು ಹೇಳುತ್ತಿದ್ದೇನೆಂದು ತನಗೇ ಗೊತ್ತಾಗಲಿಲ್ಲ.
34 ३४ तो या गोष्टी बोलत असता एक ढग येऊन त्यांच्यावर सावली करू लागला आणि ते ढगांत शिरले तेव्हा ते भ्याले.
೩೪ಅವನು ಇದನ್ನು ಹೇಳುತ್ತಿರುವಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಮೋಡವು ಅವರನ್ನು ಆವರಿಸಿಕೊಂಡಾಗ ಅವರು ಹೆದರಿದರು.
35 ३५ आणि ढगांतून वाणी आली, ती म्हणाली, “हा माझा निवडलेला पुत्र आहे, याचे तुम्ही ऐका.”
೩೫ಆಗ ಆ ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು, ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು.
36 ३६ ही वाणी झाल्यावर येशू एकटाच दिसला आणि ते उगेच राहिले व ज्या गोष्टी त्यांनी पहिल्या होत्या त्यांतले काहीच त्यांनी त्या दिवसांमध्ये कोणाला सांगितले नाही.
೩೬ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿನಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.
37 ३७ आणि असे झाले की दुसऱ्या दिवशी ते डोंगरावरून खाली आल्यावर मोठा लोकसमुदाय त्यास भेटला.
೩೭ಮರುದಿನ ಅವರು ಬೆಟ್ಟದಿಂದ ಇಳಿದು ಬಂದಾಗ ಜನರ ದೊಡ್ಡ ಗುಂಪೊಂದು ಆತನನ್ನು ಎದುರುಗೊಂಡಿತು.
38 ३८ तेव्हा पाहा, समुदायातील एक मनुष्य मोठ्याने ओरडून म्हणाला, हे गुरु, मी तुला विनंती करतो, माझ्या मुलाकडे पाहा, कारण तो माझे एकुलते मूल आहे.
೩೮ಆಗ ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕನೇ, ನನ್ನ ಮಗನನ್ನು ಕಟಾಕ್ಷಿಸು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು.
39 ३९ आणि पाहा, कोणी आत्मा त्यास धरतो आणि हा एकाएकी ओरडतो, मग तो याला असा पिळतो की त्याच्या तोंडाला फेस येतो, तो याला पुष्कळ त्रास देतो व याला मोठ्या प्रयासाने सोडून जातो.
೩೯ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.
40 ४० आणि तो काढावा म्हणून मी तुझ्या शिष्यांना विनंती केली, परंतु त्यांच्याने तो निघेना.
೪೦ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರನ್ನು ಬೇಡಿಕೊಂಡೆನು. ಆದರೆ ಅವರಿಂದ ಆಗದೆಹೋಯಿತು” ಎಂದು ಹೇಳಿದನು.
41 ४१ तेव्हा येशूने उत्तर देऊन म्हटले, “हे अविश्वासी व विपरीत पिढी, मी कोठेपर्यंत तुमच्याबरोबर राहू व तुमचे सोसू? तू आपल्या मुलाला इकडे आण.”
೪೧ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.
42 ४२ मग तो जवळ येत आहे इतक्यात भूताने त्यास खाली आपटले व भारी पिळून टाकले, पण येशूने त्या अशुद्ध आत्म्याला धमकावले व मुलाला बरे करून त्याच्या पित्याजवळ परत दिले.
೪೨ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.
43 ४३ मग देवाचे हे महान सामर्थ्य पाहून सर्व लोक थक्क झाले आणि तो जी कामे करीत होता त्या सर्वांवरून सर्वजण आश्चर्य करीत असता तो आपल्या शिष्यांना म्हणाला,
೪೩ಅದನ್ನು ನೋಡಿ ಎಲ್ಲರು ದೇವರ ಮಹತ್ಕಾರ್ಯಕ್ಕೆ ಬೆರಗಾದರು. ಯೇಸುಮಾಡಿದ ಎಲ್ಲಾ ಮಹತ್ಕಾರ್ಯಗಳಿಗೆ ಎಲ್ಲರೂ ಆಶ್ಚರ್ಯಪಡುತ್ತಿರಲಾಗಿ, ಆತನು ತನ್ನ ಶಿಷ್ಯರಿಗೆ,
44 ४४ “या गोष्टी तुम्ही लक्षात ठेवा कारण मनुष्याचा पुत्र मनुष्यांच्या हाती दिला जाणार आहे.”
೪೪“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು.
45 ४५ परंतु हे बोलणे त्यांना समजले नाही व त्यांना ते समजू नये म्हणून ते त्यांच्यापासून गुप्त राखलेले होते; आणि ते या बोलण्याविषयी त्यास विचारायला भीत होते.
೪೫ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.
46 ४६ त्यानंतर आपणांमध्ये कोण मोठा आहे याविषयी त्यांच्यामध्ये वादविवाद उठला.
೪೬ತರುವಾಯ ಶಿಷ್ಯರೊಳಗೆ, ತಮ್ಮಲ್ಲಿ ಯಾವನು ಹೆಚ್ಚಿನವನು ಎಂಬ ವಿಚಾರಹುಟ್ಟಿತು.
47 ४७ तेव्हा येशूने त्यांच्या अंतःकरणाचे विचार जाणून एका बालकाला जवळ घेऊन त्यास आपल्यापाशी उभे केले,
೪೭ಯೇಸು ಅವರ ಮನಸ್ಸಿನ ವಿಚಾರವನ್ನು ತಿಳಿದವನಾಗಿ, ಒಂದು ಚಿಕ್ಕಮಗುವನ್ನು ತನ್ನ ಪಕ್ಕದಲ್ಲಿ ನಿಲ್ಲಿಸಿ,
48 ४८ आणि त्यांना म्हटले, “जो कोणी माझ्या नावाने या बालकाला स्वीकारतो तो मला स्वीकारतो आणि जो कोणी माझा स्वीकार करतो तो ज्याने मला पाठवले त्याचा स्वीकार करतो; कारण तुम्हा सर्वांमध्ये जो सर्वांहून लहान आहे तोच मोठा आहे.”
೪೮ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು.
49 ४९ तेव्हा योहानाने उत्तर देऊन म्हटले, “हे गुरु, आम्ही कोण एकाला तुझ्या नावाने भूते काढतांना पाहिले आणि आम्ही त्यास मना केले, कारण तो आमच्याबरोबर तुझ्यामागे चालत नाही.”
೪೯ಅದಕ್ಕೆ ಯೋಹಾನನು, “ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಅನ್ನಲು,
50 ५० तेव्हा येशूने त्यास म्हटले, “मना करू नका, कारण जो तुम्हास प्रतिकूल नाही तो तुम्हास अनुकूल आहे.”
೫೦ಯೇಸು ಅವನಿಗೆ, “ಅಡ್ಡಿಮಾಡಬೇಡಿರಿ; ನಿಮಗೆ ವಿರುದ್ಧವಲ್ಲದವನು ನಿಮ್ಮ ಪಕ್ಷದವನೇ” ಎಂದು ಹೇಳಿದನು.
51 ५१ आणि असे झाले की त्यास वर घेतले जाण्याचा समय जवळ आला तेव्हा यरूशलेम शहरास जाण्याच्या दृढनिश्चयाने त्याने आपले तोंड वळवले.
೫೧ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.
52 ५२ मग त्याने आपल्यापुढे निरोपे पाठवले, तेव्हा ते निघून त्याच्यासाठी तयारी करण्यास शोमरोन्यांच्या एका गावात गेले,
೫೨ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು.
53 ५३ पण त्यांनी त्यास अंगीकारले नाही, कारण यरूशलेम शहराकडे जाण्याचा त्याचा रोख होता.
೫೩ಆದರೆ ಯೇಸು ಯೆರೂಸಲೇಮಿಗೆ ಹೋಗುವವನಾದ್ದರಿಂದ, ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.
54 ५४ तेव्हा त्याचे शिष्य याकोब व योहान हे पाहून म्हणाले, “हे प्रभू, एलीयाने केले होते तसेच आकाशांतून अग्नीने पडून त्याचा नाश करावा म्हणून आम्ही आज्ञा करावी, अशी तुझी इच्छा आहे काय?”
೫೪ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು,
55 ५५ परंतु त्याने वळून त्यांना धमकावले आणि म्हटले, “तुम्ही कोणत्या आत्म्याचे आहात हे तुम्हास ठाऊक नाही;
೫೫ಯೇಸು ತಿರುಗಿಕೊಂಡು ಅವರನ್ನು ಗದರಿಸಿದನು.
56 ५६ कारण मनुष्याचा पुत्र मनुष्यांच्या जीवाचा नाश करायला नाही, तर त्यांना तारायला आला आहे.” मग ते दुसऱ्या गावाला गेले.
೫೬ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು.
57 ५७ आणि ते वाटेने चालत असता कोणीएक त्यास म्हणाला, “जेथे कोठे तू जाशील तेथे मी तुझ्यामागे येईन.”
೫೭ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,
58 ५८ तेव्हा येशू त्यास म्हणाला, “खोकडांस बिळे व आकाशांतल्या पाखरांस घरटी आहेत, परंतु मनुष्याच्या पुत्राला आपले डोके टेकायला ठिकाण नाही.”
೫೮ಆತನು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
59 ५९ मग त्याने दुसऱ्या एकाला म्हटले, “माझ्यामागे ये,” परंतु तो म्हणाला, “हे प्रभू, पहिल्याने मला जाऊ दे आणि माझ्या पित्याला पुरू दे,”
೫೯ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.
60 ६० तेव्हा येशूने त्यास म्हटले, “मरण पावलेल्यांना आपल्या मरण पावलेल्यांस पुरू दे, परंतु तू जाऊन देवाच्या राज्याची घोषणा कर.”
೬೦ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು” ಎಂದು ಹೇಳಿದನು.
61 ६१ तेव्हा आणखी एकजण म्हणाला, हे प्रभू, मी तुझ्यामागे येईन, परंतु पहिल्याने मला माझ्या घरात जे आहे त्यांचा निरोप घेऊ दे.
೬೧ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು.
62 ६२ पण येशूने त्यास म्हटले, “जो कोणी नांगराला आपला हात घातल्यावर मागील गोष्टींकडे पाहत राहतो असा कोणीही देवाच्या राज्याला उपयोगी नाही.”
೬೨ಯೇಸು ಅವನಿಗೆ, “ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಎಂದು ಹೇಳಿದನು.

< लूक 9 >