< मलाखी 3 >
1 १ “पाहा! मी माझा दूत पाठवत आहे, आणि तो माझ्यापुढे मार्ग तयार करील. आणि ज्या प्रभूला तुम्ही शोधता आणि ज्याच्यात तुम्ही आनंदी होता, तो कराराचा दूत, अचानक आपल्या मंदिरात येत आहे. पाहा तो येत आहे, असे सेनाधीश परमेश्वर म्हणतो.”
೧“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
2 २ त्याच्या आगमनाच्या दिवशी कोण टिकून राहणार? आणि जेव्हा तो दिसेल तेव्हा कोण उभा राहिल? कारण तो शुद्धकरणाऱ्या अग्नीसारखा आणि परीटाच्या खारासारखा आहे.
೨ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.
3 ३ आणि तो चांदी गाळणारा व स्वच्छ करणारा असा बनेल, आणि तो लेवीच्या संतानास शुद्ध करेल. तो त्यांना सोन्याप्रमाणे आणि चांदीप्रमाणे शुध्द करेल आणि ते न्यायीपणाने परमेश्वरास अर्पण करतील.
೩ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.
4 ४ तेव्हा जसे पुरातन दिवसात आणि प्राचीन वर्षात तसे यरूशलेम व यहूदाची अर्पणे परमेश्वरास सुखकारक असतील.
೪ಆಗ ಯೆಹೂದದ ಮತ್ತು ಯೆರೂಸಲೇಮಿನ ನೈವೇದ್ಯವು, ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾದಂತೆ ಆಗಿರುವುದು.
5 ५ “मग मी तुमच्याकडे न्याय निवाडा करण्यासाठी येईन. आणि जादूटोणा, व्यभिचार, खोटी शपथ वाहणारे, आणि जे मोलकऱ्याला मोलाविषयी आणि विधवेला व अनाथाला पीडतात, आणि परराष्ट्रीयांचा न्याय विपरीत करतात, आणि माझे भय धरीत नाही यांच्याविरूद्ध मी त्वरीत साक्षी होईन,” सेनाधीश परमेश्वर असे म्हणतो.
೫“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
6 ६ “कारण मी परमेश्वर आहे, मी कधीही बदलत नाही, म्हणून याकोबाच्या मुलांनो, तुमचा नाश झाला नाही.
೬“ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”
7 ७ तुमच्या पूर्वजांच्या दिवसांपासून तुम्ही माझे नियम अनुसरण्याचे सोडून भलतीकडे वळले आहात, ते तुम्ही पाळले नाहीत. माझ्याकडे फिरा म्हणजे मी तुमच्याकडे फिरेन,” सेनाधीश परमेश्वर असे म्हणतो, “पण तुम्ही म्हणता, ‘आम्ही कसे परत फिरावे?’
೭“ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಯಾವ ವಿಷಯದಲ್ಲಿ ತಿರುಗೋಣ?” ಎನ್ನುತ್ತೀರಿ.
8 ८ मनुष्य देवाला लुटणार काय? तरीही तुम्ही मला लुटता. पण तुम्ही असे म्हणता, ‘आम्ही तुझे काय लुटले आहे?’ तुम्ही दशमांश व अर्पणे यांविषयी मला लुटता.
೮“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.
9 ९ तुम्ही संपूर्ण राष्ट्राने मला लुटले आहे, म्हणून तुम्ही शापाने शापीत झाला आहात.”
೯ನೀವು ಅಂದರೆ ಈ ಜನಾಂಗದವರೆಲ್ಲಾ ನನ್ನಿಂದ ಕದ್ದುಕೊಳ್ಳುವವರಾದ ಕಾರಣ ಶಾಪಗ್ರಸ್ತರಾಗಿದ್ದೀರಿ.
10 १० सेनाधीश परमेश्वर असे म्हणतो, “माझ्या घरात अन्न असावे यासाठी तुम्ही संपूर्ण दशमांश कोठरांत आणा. आणि तुम्ही असे केले म्हणजे मी तुमच्यासाठी आकाशाच्या खिडक्या उघडून जागा पुरणार नाही एवढा आशीर्वाद तुम्हावर ओतीन की नाही याविषयी माझी प्रचिती पाहा.
೧೦ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.
11 ११ आणि खाऊन टाकणाऱ्याला मी तुमच्यासाठी धमकावेन, मग तो तुमच्या भूमीचे पीक नाश करणार नाही, तुमच्या बागेतील द्राक्षवेलींचे फळ अकाली गळणार नाही,” सेनाधीश परमेश्वर असे म्हणतो.
೧೧ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
12 १२ “सर्व राष्ट्रे तुला सुखी म्हणतील, कारण तुमची भूमी आनंदाची होईल,” असे सेनाधीश परमेश्वर म्हणतो.
೧೨“ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
13 १३ परमेश्वर म्हणतो, “तुमचे शब्द माझ्याविरूद्ध कठोर झाले आहेत. पण तुम्ही म्हणता, आम्ही तुझ्याविरूद्ध काय बोललो?”
೧೩“ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹಳ ಕಠಿಣ” ಎಂದು ಯೆಹೋವನು ಅನ್ನುತ್ತಾನೆ. “ನಿನಗೆ ವಿರುದ್ಧವಾಗಿ ಏನು ಮಾಡಿದ್ದೇವೆ?” ಅನ್ನುತ್ತೀರಾ?
14 १४ तुम्ही म्हणालात “परमेश्वराची सेवा करणे व्यर्थ आहे; आम्ही त्याचे आज्ञापालन केले, आणि आम्ही सेनाधीश परमेश्वरापुढे शोक करत चाललो याचा काय लाभ झाला?
೧೪ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?
15 १५ तर आता आम्ही गर्विष्ठांना सुखी म्हणतो, होय, जे दुष्टाई करतात ते वाढवले जातात, आणि ते देवाची परीक्षा पाहतात तरी सुटतात.”
೧೫ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲಾ.
16 १६ तेव्हा जे परमेश्वराचे भय धरीत असत ते एकमेकांशी बोलत होते, आणि परमेश्वराने ते ध्यान देऊन ऐकले. मग जे परमेश्वराचे भय धरत असत आणि त्याच्या नांवाचा सन्मान करत असत त्यांच्यासाठी त्यांच्यासमोर स्मरणाचे पुस्तक लिहिले गेले.
೧೬ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.
17 १७ सेनाधीश परमेश्वर असे म्हणतो, “मी हे करीन त्या दिवशी ते माझे, म्हणजे माझे खासगीचे धन होतील, आणि जसा कोणी आपली सेवा करणारा आपला मुलगा याच्यावर दया करीत असतो तसा मी त्यांच्यावर दया करीन.
೧೭ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
18 १८ तुम्ही माझ्याकडे परत याल. मग दुष्ट मनुष्य आणि चांगला मनुष्य यातील फरक तुम्हास कळेल. देवाला अनुसरणारा व न अनुसणारा यातील फरक तुम्हास समजेल.”
೧೮ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.