< मत्तय 14 >
1 १ त्यावेळी चौथाई देशांचा राजा हेरोदाने येशूची किर्ती ऐकली.
ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ,
2 २ तेव्हा त्याने आपल्या चाकरांना म्हटले, “येशू हा बाप्तिस्मा करणारा योहान आहे. त्यास मरण पावलेल्यातून उठविण्यात आले आहे म्हणून याच्याठायी सामर्थ्य कार्य करीत आहे.”
ತನ್ನ ಸೇವಕರಿಗೆ, “ಈತನು ಸ್ನಾನಿಕನಾದ ಯೋಹಾನನೇ. ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ! ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಹೇಳಿದನು.
3 ३ हेरोदाने आपला भाऊ फिलिप्प याची पत्नी हेरोदिया हिच्यामुळे योहानाला अटक करून तुरूंगात टाकले होते.
ಹೆರೋದನು ತನ್ನ ಸಹೋದರ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ, ಯೋಹಾನನನ್ನು ಹಿಡಿಸಿ, ಕಟ್ಟಿ ಸೆರೆಯಲ್ಲಿ ಹಾಕಿಸಿದ್ದನು.
4 ४ कारण योहान त्यास सांगत होता, “तू तिला पत्नी बनवावे हे देवाच्या नियमशास्त्राच्या योग्य नाही.”
ಏಕೆಂದರೆ ಯೋಹಾನನು, “ನೀನು ಅವಳನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಅವನಿಗೆ ಹೇಳಿದ್ದನು.
5 ५ हेरोद त्यास मारावयास पाहत होता, पण तो लोकांस भीत होता कारण लोकांचा असा विश्वास होता की, योहान संदेष्टा आहे.
ಹೆರೋದನು ಯೋಹಾನನನ್ನು ಕೊಲ್ಲಬೇಕೆಂದಿದ್ದರೂ ಜನಸಮೂಹಕ್ಕೆ ಭಯಪಟ್ಟನು. ಅವರು ಯೋಹಾನನನ್ನು ಪ್ರವಾದಿಯೆಂದು ಎಣಿಸಿದ್ದರು.
6 ६ हेरोदाच्या वाढदिवशी हेरोदियाच्या मुलीने दरबारात नाच करून हेरोदाला खूश केले.
ಆದರೆ ಹೆರೋದನ ಹುಟ್ಟಿದ ದಿನವನ್ನು ಆಚರಿಸುವಾಗ, ಹೆರೋದ್ಯಳ ಮಗಳು ಅವರ ಮುಂದೆ ನರ್ತನ ಮಾಡಿ ಹೆರೋದನನ್ನು ಬಹಳ ಮೆಚ್ಚಿಸಿದಳು.
7 ७ त्यामुळे त्याने शपथ वाहून ती जे काही मागेल ते देण्याचे अभिवचन तिला दिले.
ಆದ್ದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅರಸನು ಆಣೆಯಿಟ್ಟು ಪ್ರಮಾಣ ಮಾಡಿದನು.
8 ८ तिच्या आईच्या सांगण्यावरून ती म्हणाली, “बाप्तिस्मा करणारा योहानाचे शीर तबकात घालून मला इथे आणून द्या.”
ಅವಳು ತನ್ನ ತಾಯಿಯ ಸಲಹೆ ಪಡೆದು, “ಸ್ನಾನಿಕನಾದ ಯೋಹಾನನ ತಲೆಯನ್ನು ಇಲ್ಲಿಯೇ ಒಂದು ತಟ್ಟೆಯಲ್ಲಿ ನನಗೆ ತರಿಸಿಕೊಡು,” ಎಂದು ಹೇಳಿದಳು.
9 ९ हेरोद राजाला फार वाईट वाटले. तरी त्याने आपल्या शपथपूर्वक दिलेल्या वचनामुळे व आमंत्रित लोकांमुळे ते द्यावयाची आज्ञा केली.
ಆಗ ಅರಸನು ದುಃಖಪಟ್ಟರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.
10 १० आणि त्याने तुरुंगात माणसे पाठवून योहानाचे शीर उडवले.
ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿದ್ದ ಯೋಹಾನನ ತಲೆಯನ್ನು ಕಡಿಸಿದನು.
11 ११ मग त्यांनी त्याचे शीर तबकात घालून त्या मुलीला आणून दिले. तिने ते आपल्या आईकडे आणले.
ಇದಲ್ಲದೆ ಅವನ ತಲೆಯನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.
12 १२ मग त्याच्या शिष्यांनी येऊन त्याचे प्रेत उचलून नेले व त्यास पुरले आणि त्यांनी जाऊन जे घडले ते येशूला सांगितले.
ಬಳಿಕ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ತಿಳಿಸಿದರು.
13 १३ मग ते ऐकून येशू तेथून होडीत बसून निवांत जागी निघून गेला. हे ऐकून लोकसमुदाय नगरांतून त्याच्यामागे पायीपायी गेले.
ಯೇಸು ಆ ವಿಷಯವನ್ನು ಕೇಳಿದಾಗ ದೋಣಿಯನ್ನು ಹತ್ತಿ ಅಲ್ಲಿಂದ ಏಕಾಂತ ಸ್ಥಳಕ್ಕೆ ಹೊರಟರು. ಜನರು ಇದನ್ನು ಕೇಳಿ ಪಟ್ಟಣಗಳಿಂದ ಕಾಲು ನಡಿಗೆಯಲ್ಲಿ ಯೇಸುವನ್ನು ಹಿಂಬಾಲಿಸಿದರು.
14 १४ मग जेव्हा त्याने मोठा लोकसमुदाय पाहिला. तेव्हा त्यास त्यांच्याविषयी कळवळा आला व जे आजारी होते त्यांना त्याने बरे केले.
ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು, ಅವರ ಮೇಲೆ ಕನಿಕರಪಟ್ಟು, ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದರು.
15 १५ मग संध्याकाळ झाल्यावर त्याचे शिष्य त्याच्याकडे आले आणि म्हणाले, “ही अरण्यातील जागा आहे आणि भोजनाची वेळ होऊन गेली आहे. लोकांनी गावामध्ये जाऊन स्वतःकरता अन्न विकत घ्यावे म्हणून त्यांना पाठवून द्या.”
ಸಂಜೆಯಾದಾಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಸಮಯವು ದಾಟಿದೆ. ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು,” ಎಂದರು.
16 १६ परंतु येशू त्यांना म्हणाला, “त्यांना जाण्याची गरज नाही. तुम्हीच त्यांना काही खायला द्या.”
ಆದರೆ ಯೇಸುವು, “ಅವರು ಹೋಗಬೇಕಾಗಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದು ಹೇಳಿದರು.
17 १७ ते त्यास म्हणाले, आमच्याजवळ केवळ “पाच भाकरी व दोन मासे आहेत.”
ಅವರು ಯೇಸುವಿಗೆ, “ನಮ್ಮ ಹತ್ತಿರ ಐದು ರೊಟ್ಟಿ ಎರಡು ಮೀನುಗಳು ಮಾತ್ರ ಇವೆ,” ಎಂದು ಉತ್ತರಕೊಟ್ಟರು.
18 १८ तो म्हणाला, “ते माझ्याकडे आणा.”
ಯೇಸು, “ಅವುಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದರು.
19 १९ मग लोकांस गवतावर बसण्याची आज्ञा केली. त्याने त्या पाच भाकरी व दोन मासे घेऊन वर आकाशाकडे पाहून त्यावर आशीर्वाद मागितला. नंतर त्याने भाकरी मोडून शिष्यांना दिल्या व शिष्यांनी लोकांस दिल्या.
ಜನಸಮೂಹವು ಹುಲ್ಲಿನ ಮೇಲೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಕೊಟ್ಟು, ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
20 २० ते सर्व जेवून तृप्त झाले. मग त्या उरलेल्या तुकड्यांच्या त्यांनी बारा टोपल्या भरून घेतल्या.
ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು.
21 २१ जेवणारे सुमारे पाच हजार पुरूष होते. शिवाय स्त्रिया व मुले होतीच.
ಊಟಮಾಡಿದವರಲ್ಲಿ ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿ ಇದ್ದರು.
22 २२ मी लोकसमुदायास निरोप देत आहे तो तुम्ही तारवात बसून माझ्यापुढे पलीकडे जा असे म्हणून त्याने लगेच शिष्यांना पाठवून दिले.
ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಆಚೆದಡಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.
23 २३ लोकांस पाठवून दिल्यावर तो प्रार्थना करण्यास एकांत ठिकाणी डोंगरावर गेला, रात्र झाली तेव्हा तो तेथे एकटाच होता.
ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ, ಪ್ರಾರ್ಥನೆಮಾಡಲು ಏಕಾಂತವಾಗಿ ಬೆಟ್ಟಕ್ಕೆ ಹೋದರು. ಸಂಜೆಯಾದಾಗ ಯೇಸು ಒಬ್ಬರೇ ಅಲ್ಲಿ ಇದ್ದರು.
24 २४ पण तारू सरोवरामध्ये होते. इकडे वारा विरूद्ध दिशेने वाहत असल्यामुळे तारू लाटांनी हेलकावत होते व त्यामुळे ते त्याच्यावर ताबा ठेवू शकत नव्हते.
ಅಷ್ಟರಲ್ಲಿ ದೋಣಿಯು ತೀರದಿಂದ ಬಹುದೂರ ಹೋಗಿತ್ತು, ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
25 २५ तेव्हा रात्रीच्या चौथ्या प्रहरी येशू त्याच्याकडे आला. तो पाण्यावरून चालत होता.
ರಾತ್ರಿ ಮೂರು ಗಂಟೆಯಲ್ಲಿ ಯೇಸು ಸರೋವರದ ಮೇಲೆ, ನಡೆಯುತ್ತಾ ಶಿಷ್ಯರ ಬಳಿಗೆ ಬಂದರು.
26 २६ शिष्य त्यास पाण्यावरून चालताना पाहून घाबरून गेले व म्हणाले, हे “भूत आहे.” आणि ते भिऊन ओरडले
ಯೇಸು ಸರೋವರದ ಮೇಲೆ ನಡೆಯುವುದನ್ನು ಶಿಷ್ಯರು ಕಂಡು ಕಳವಳಪಟ್ಟು, “ಅದು ಭೂತ,” ಎಂದು ಭೀತಿಯಿಂದ ಕೂಗಿಕೊಂಡರು.
27 २७ पण येशू लगेच त्यांना म्हणाला, “धीर धरा, मी आहे; भिऊ नका.”
ಯೇಸು ತಕ್ಷಣವೇ ಅವರಿಗೆ, “ಧೈರ್ಯವಾಗಿರಿ, ನಾನೇ, ಭಯಪಡಬೇಡಿರಿ,” ಎಂದರು.
28 २८ पेत्र म्हणाला, प्रभूजी जर आपण असाल तर मला पाण्यावरून आपणाकडे येण्यास सांगा.
ಆಗ ಪೇತ್ರನು ಯೇಸುವಿಗೆ, “ಸ್ವಾಮೀ, ನೀವೇ ಆಗಿದ್ದರೆ, ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರಲು ನನಗೆ ಅಪ್ಪಣೆಕೊಡಿರಿ,” ಎಂದನು.
29 २९ येशू म्हणाला, “ये.” मग पेत्र तारवातून उतरून व पाण्यावर चालत येशूकडे जाऊ लागला.
ಅದಕ್ಕೆ ಯೇಸು, “ಬಾ,” ಎಂದರು. ಆಗ ಪೇತ್ರನು ದೋಣಿಯಿಂದ ಇಳಿದು, ಯೇಸುವಿನ ಬಳಿಗೆ ಹೋಗುವುದಕ್ಕಾಗಿ ನೀರಿನ ಮೇಲೆ ನಡೆದನು.
30 ३० पण तो पाण्यावर चालत असताना जोराचा वारा पाहून तो भ्याला आणि बुडू लागला असता ओरडून म्हणाला “प्रभूजी, मला वाचवा.”
ಆದರೆ ಬಲವಾದ ಗಾಳಿಯನ್ನು ಕಂಡು, ಅವನು ಭಯಪಟ್ಟು ಮುಳುಗುತ್ತಾ, “ಸ್ವಾಮಿ, ನನ್ನನ್ನು ಕಾಪಾಡಿರಿ!” ಎಂದು ಕೂಗಿ ಹೇಳಿದನು.
31 ३१ आणि लगेच येशूने आपला हात पुढे करून त्यास धरले व म्हटले, “अरे अल्पविश्वासी, तू संशय का धरलास?”
ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?” ಎಂದರು.
32 ३२ मग येशू व पेत्र होडीत गेल्यावर वारा थांबला.
ಅವರು ದೋಣಿ ಹತ್ತಿದಾಗ, ಗಾಳಿ ನಿಂತುಹೋಯಿತು.
33 ३३ तेव्हा जे शिष्य होडीत होते ते त्यास नमन करून म्हणाले, “तुम्ही खरोखर देवाचे पुत्र आहात.”
ದೋಣಿಯಲ್ಲಿದ್ದವರು ಯೇಸುವಿನ ಬಳಿಗೆ ಬಂದು ಅವರನ್ನು ಆರಾಧಿಸಿ, “ನಿಜವಾಗಿಯೂ ನೀವು ದೇವಪುತ್ರ,” ಎಂದು ಹೇಳಿದರು.
34 ३४ नंतर ते पलीकडे गनेसरेताच्या भागात गेले.
ಅವರು ಸರೋವರವನ್ನು ದಾಟಿ, ಗೆನೆಜರೇತ್ ಊರಿಗೆ ಬಂದರು.
35 ३५ तेथील लोकांनी येशूला ओळखून व सभोवतालच्या सर्व प्रदेशात निरोप पाठवला व त्यांनी सर्व प्रकारच्या आजाऱ्यांस त्याच्याकडे आणले.
ಆಗ ಅಲ್ಲಿದ್ದ ಜನರು ಯೇಸುವಿನ ಗುರುತು ಹಿಡಿದು, ಸುತ್ತುಮುತ್ತಲಿನ ಊರುಗಳಿಗೆಲ್ಲಾ ಹೇಳಿ ಕಳುಹಿಸಿ, ರೋಗಿಗಳನ್ನೆಲ್ಲಾ ಯೇಸುವಿನ ಬಳಿಗೆ ತಂದರು.
36 ३६ आणि आम्हास आपल्या वस्त्राच्या काठाला स्पर्श करू द्यावा, अशी विनंती केली, तेव्हा जितक्यांनी स्पर्श केला तितके बरे झाले.
ಅವರು ಯೇಸುವಿನ ಉಡುಪಿನ ಅಂಚನ್ನಾದರೂ ಸ್ಪರ್ಶಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು.