< गणना 11 >

1 इस्राएल लोक आपल्या त्रासाबद्दल कुरकुर करू लागले तसे परमेश्वराने ऐकले. परमेश्वराने लोकांचे ऐकले आणि तो रागावला. परमेश्वरापासूनचा अग्नी त्यांच्यात पेटला आणि त्याने छावणीच्या हद्दीवरचे काही भाग भस्म केले.
ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು.
2 तेव्हा लोकांनी मोशेकडे मदतीसाठी ओरड केली. मोशेने परमेश्वरास विनंती केली तेव्हा अग्नी विझला.
ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ, ಮೋಶೆಯು ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು ಆಗ ಬೆಂಕಿಯು ಆರಿಹೋಯಿತು.
3 त्यामुळे त्या ठिकाणाचे नांव तबेरा असे पडले. लोकांनी त्या ठिकाणाला तसे नांव दिले कारण परमेश्वराच्या अग्नीमुळे छावणीचा भाग जळून गेला.
ಯೆಹೋವ ದೇವರು ಹತ್ತಿಸಿದ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.
4 जे परराष्ट्रीय इस्राएल लोकाबरोबर राहत होते, त्यांना चांगले अन्न खावेसे वाटू लागले. इस्राएल लोकांनी तक्रार व रडण्यास करण्यास सुरवात केली. “आम्हांला मांस खावयास कोण देईल?
ಅವರೊಳಗಿದ್ದ ಮಿಶ್ರ ಗುಂಪಿನ ಜನರು ಮಾಂಸಕ್ಕಾಗಿ ದುರಾಶೆಪಟ್ಟರು. ಇಸ್ರಾಯೇಲರು ಸಹ ತಿರುಗಿ ಅಳುತ್ತಾ, “ನಮಗೆ ಮಾಂಸವನ್ನು ತಿನ್ನುವುದಕ್ಕೆ ಕೊಡುವವರು ಯಾರು?
5 मिसरमध्ये आम्हास मासे फुकट खाण्यास मिळत होते. त्याचप्रमाणे तेथे आम्हास काकड्या, खरबूजे, फळभाजी, कांदे, लसूण मिळत असे त्याची आठवण आम्हास येते.
ನಾವು ಈಜಿಪ್ಟ್ ದೇಶದಲ್ಲಿ ಉಚಿತವಾಗಿ ತಿಂದ ಮೀನನ್ನೂ ಸವತೆ ಕಾಯಿಯನ್ನೂ ಕರ್ಬೂಜಗಳನ್ನೂ ನೀರುಳ್ಳಿ ಈರುಳ್ಳಿ ಬೆಳ್ಳುಳ್ಳಿಗಳನ್ನೂ ಜ್ಞಾಪಿಸಿಕೊಳ್ಳುತ್ತೇವೆ.
6 आता आम्ही कमजोर झालो आहोत. मान्न्याशिवाय आम्ही येथे काहीच पाहत नाही!”
ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು, ಈ ಮನ್ನವಲ್ಲದೆ ಬೇರೆ ಯಾವುದೂ ನಮ್ಮ ಕಣ್ಣುಗಳ ಮುಂದೆ ಇರುವುದಿಲ್ಲ,” ಎಂದರು.
7 हा मान्ना धण्याच्या बीसारखा होता, त्याचा रंग मोत्यासारखा होता.
ಆ ಮನ್ನವು ಕೊತ್ತಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸಿತು.
8 लोक तो चोहोकडे फिरून गोळा करीत. तो जात्यात दळीत किंवा उखळात कुटीत, भांड्यात शिजवीत व त्याच्या भाकरी करीत. त्याची चव ताज्या जैतून तेलात तळलेल्या पुरीसारखी लागत असे.
ಜನರು ಹೊರಗೆ ಹೋಗಿ ಅದನ್ನು ಕೂಡಿಸಿ, ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ, ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡುತ್ತಿದ್ದರು. ಅದರ ರುಚಿಯು ಓಲಿವ್ ಎಣ್ಣೆಯಿಂದ ಮಾಡಿದ ರೊಟ್ಟಿಯಹಾಗೆ ಇತ್ತು.
9 जेव्हा रात्री छावणीवर दहिवर पडले म्हणजे मान्नासुध्दा पडत असे.
ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುವಾಗ ಅದರೊಂದಿಗೆ ಮನ್ನವು ಬೀಳುತ್ತಿತ್ತು.
10 १० सर्व लोक त्यांच्या कुटुंबात रडत असल्याचा आवाज मोशेने ऐकला. आणि प्रत्येक मनुष्य आपापल्या तंबूच्या दाराशी बसून रडत होते. परमेश्वराचा राग भयंकर भडकला आणि मोशेच्या दृष्टीने त्यांची तक्रार चूक होती.
ಆಗ ಪ್ರತಿಯೊಂದು ಕುಟುಂಬದ ಜನರು ತಮ್ಮ ಗುಡಾರದ ಬಾಗಿಲಿನಲ್ಲಿ ನಿಂತು ಅಳುವುದನ್ನು ಮೋಶೆ ಕೇಳಿದನು. ಯೆಹೋವ ದೇವರು ಬಹಳ ಕೋಪಗೊಂಡರು. ಮೋಶೆ ಗಲಿಬಿಲಿಗೊಂಡನು.
11 ११ मोशे परमेश्वरास म्हणाला, तू आपल्या दासास इतके वाइट का वागवतोस? तू माझ्यावर प्रसन्न नाहीस का? या सर्व लोकांचा भार तू मला वाहण्यास सांगतोस.
ಮೋಶೆಯು ಯೆಹೋವ ದೇವರಿಗೆ, “ಈ ಎಲ್ಲಾ ಜನರ ಭಾರವನ್ನು ನನ್ನ ಮೇಲೆ ಹೊರಿಸಿ ನೀವು ಏಕೆ ತೊಂದರೆಯನ್ನು ನಿಮ್ಮ ಸೇವಕನ ಮೇಲೆ ತಂದಿದ್ದೀರಿ? ನಿಮ್ಮನ್ನು ಅತೃಪ್ತಿಗೊಳಿಸಲು ನಾನೇನು ಮಾಡಿದ್ದೇನೆ?
12 १२ मी या लोकांचे गर्भधारण केले काय? मी त्यांना जन्म दिला आहे का म्हणून तू म्हणतोस की, जसा पिता आपल्या बाळाला छातीशी धरून घेऊन जातो तसे मी त्यांना न्यावे? जो देश देण्याविषयी त्यांच्या पूर्वजांना तू शपथ दिली त्यांना मी घेऊन जावे का?
ನಾನು ಈ ಎಲ್ಲಾ ಜನರನ್ನು ಗರ್ಭಧರಿಸಿ ಜನ್ಮವಿತ್ತೆನೋ? ದಾದಿಯು ಹಸುಗೂಸನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ತನ್ನ ತೋಳುಗಳಲ್ಲಿ ಎತ್ತಿಕೊಂಡು ಅವರ ಪಿತೃಗಳಿಗೆ ನೀವು ವಾಗ್ದಾನ ಮಾಡಿದ ದೇಶಕ್ಕೆ ನಡೆಸಬೇಕೆಂದು ನೀವು ನನಗೇಕೆ ಹೇಳಿದ್ದೀರಿ?
13 १३ एवढ्या लोकांस पुरेल एवढे मांस देण्यासाठी मी कोठे शोधू? ते माझ्याकडे आसवे गाळून रडत आहेत, ते म्हणतात आम्हास खावयास मांस दे!
ಈ ಸಮಸ್ತ ಜನರಿಗೆ ಕೊಡುವುದಕ್ಕೆ ಮಾಂಸವು ನನಗೆ ಎಲ್ಲಿಂದ ದೊರಕುವುದು? ‘ನಮಗೆ ತಿನ್ನಲು ಮಾಂಸವನ್ನು ಕೊಡು,’ ಎಂದು ನನ್ನ ಬಳಿಗೆ ಬಂದು ಅಳುತ್ತಿದ್ದಾರೆ.
14 १४ मी एकटा या सर्वांची काळजी घेऊ शकत नाही. हे माझ्यासाठी फारच जड आहे.
ನಾನು ಒಬ್ಬೊಂಟಿಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವುದಕ್ಕೆ ಶಕ್ತನಲ್ಲ. ಅದು ನನಗೆ ಅತಿದೊಡ್ಡ ಭಾರವಾಗಿದೆ.
15 १५ जर तू मला अशा मार्गाने वागवतोस, तुझी दया माझ्यावर असल्यास मला आता मारुन टाक आणि माझे दुःख दूर कर.
ಈ ರೀತಿಯಲ್ಲಿ ನೀವು ನನ್ನನ್ನು ನಡೆಸುವುದಾದರೆ, ಈಗಲೇ ನನ್ನನ್ನು ಕೊಂದುಬಿಡಿ. ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತರೆ, ನಾನು ನನ್ನ ಸ್ವಂತ ನಾಶವನ್ನು ಎದುರಿಸದಂತೆ ಕಾಪಾಡಿ,” ಎಂದನು.
16 १६ परमेश्वर मोशेला म्हणाला, इस्राएलाच्या वडिलांचे सत्तर मनुष्ये मजकडे आण. मंडळीचे नेते असलेल्या या लोकांस दर्शनमंडपाच्या दारापाशी आण; व तुझ्याबरोबर त्यांना उभे कर.
ಯೆಹೋವ ದೇವರು ಮೋಶೆಗೆ, “ಜನರ ನಾಯಕರೆಂದೂ, ಹಿರಿಯರೆಂದೂ, ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂತಹ ಇಸ್ರಾಯೇಲರ ಹಿರಿಯರೊಳಗಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ, ಅವರನ್ನು ದೇವದರ್ಶನದ ಗುಡಾರದ ಕಡೆಗೆ ಕರೆದುಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
17 १७ मग मी खाली येऊन तेथे तुझ्याशी बोलेन. मग तुझ्यावर असलेल्या आत्म्यातून काही भाग मी त्यांनाही देईन. मग लोकांची काळजी घेण्यास ते तुला मदत करतील. ह्याप्रकारे इस्राएल लोकांची जबाबदारी केवळ तुझ्या एकट्यावर राहणार नाही.
ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.
18 १८ लोकांस सांग उद्या तुम्ही स्वत: शुद्ध राहा म्हणजे तुम्हास मांस खावयास मिळेल. परमेश्वराने तुमचे रडगाणे ऐकले आहे. आम्हास मांस खाण्यास पाहिजे! आम्ही मिसरमध्ये होतो ते बरे होते, असे तुम्ही म्हणाला ते शब्दही परमेश्वराने ऐकले आहेत. तेव्हा आता परमेश्वर तुम्हास मांस देईल आणि तुम्ही ते खाल.
ಜನರಿಗೆ ನೀನು, “‘ನಾಳೆಗಾಗಿ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ. ನಮಗೆ ಯಾವನು ಮಾಂಸವನ್ನು ತಿನ್ನುವುದಕ್ಕೆ ಕೊಡುವನು? ಈಜಿಪ್ಟ್ ದೇಶದಲ್ಲಿ ನಮಗೆ ಒಳ್ಳೆಯದು ಇತ್ತು,’ ಎಂದು ಹೇಳಿ, ಯೆಹೋವ ದೇವರು ಕೇಳುವಂತೆ ಅತ್ತಿರಿ. ಆದಕಾರಣ ಯೆಹೋವ ದೇವರು ನಿಮಗೆ ತಿನ್ನುವುದಕ್ಕೆ ಮಾಂಸವನ್ನು ಕೊಡುವನು ಮತ್ತು ನೀವು ಅದನ್ನು ತಿನ್ನುವಿರಿ.
19 १९ तुम्ही ते एक, किंवा दोन, किंवा पाच, किंवा दहा दिवस, वीस दिवसच नाही तर,
ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ.
20 २० परंतु तुम्ही ते पूर्ण महिनाभर तुमच्या नाकपुड्यातून निघेपर्यंत आणि तुम्हास शिसारी येईपर्यंत तुम्ही ते खाल. कारण तुम्ही जो परमेश्वर तुम्हामध्ये राहतो त्यास तुम्ही नाकारले आहे. तुम्ही त्याच्यासमोर रडला. तुम्ही म्हणाला, आम्ही मिसर देश का सोडला?
ಅದು ನಿಮ್ಮ ಮೂಗಿನಿಂದ ಬಂದು, ನಿಮಗೆ ಅಸಹ್ಯವಾಗುವ ತನಕ ಪೂರ್ತಿ ತಿಂಗಳವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವ ದೇವರನ್ನು ಅಲಕ್ಷ್ಯಮಾಡಿ, ಅವರ ಎದುರಿನಲ್ಲಿ ಅತ್ತು, ‘ನಾವು ಏಕೆ ಈಜಿಪ್ಟಿನಿಂದ ಬಂದೆವು,’ ಎಂದು ಹೇಳುತ್ತೀರಲ್ಲಾ, ಎಂದು ಹೇಳು,” ಎಂದರು.
21 २१ नंतर मोशे म्हणाला, परमेश्वरा येथे सहा लाख लोक आहेत आणि तू म्हणतोस की, ह्याना पूर्ण महिनाभर पुरेल एवढे मांस मी खावयास देईन!
ಆದರೆ ಮೋಶೆಯು, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಅವರು ಒಂದು ತಿಂಗಳು ಪೂರ್ತಿ ತಿನ್ನುವ ಹಾಗೆ, ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀವು ಹೇಳಿದ್ದೀರಿ.
22 २२ आम्ही त्यांना तृप्त करावे म्हणून शेरडेमेंढरे व गुरेढोर कापावीत काय? किंवा समुद्रातील सर्व मासे त्यांच्यासाठी गोळा करून आणावे काय?
ಅವರಿಗೆ ಸಾಕಾಗುವ ಹಾಗೆ ಕುರಿದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ಮೀನುಗಳನ್ನೆಲ್ಲಾ ಕೂಡಿಸಿ ತರಬೇಕೋ?” ಎಂದು ಕೇಳಿದನು.
23 २३ परमेश्वर मोशेला म्हणाला, “माझा हात तोकडा आहे काय? आता माझे शब्द खरे आहेत की नाही हे तू पाहशील.”
ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಎಂದು ನೀನು ನೋಡುವೆ,” ಎಂದರು.
24 २४ मोशे बाहेर गेला आणि परमेश्वर जे बोलला ते लोकांस सांगितले. मग मोशेने मंडळीच्या सत्तर वडिलांना एकत्र जमविले आणि त्याने त्यांना तंबू सभोवती उभे केले.
ಆಗ ಮೋಶೆ ಹೋಗಿ ಯೆಹೋವ ದೇವರ ಮಾತುಗಳನ್ನು ಜನರಿಗೆ ಹೇಳಿ, ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ, ಗುಡಾರದ ಸುತ್ತಲೂ ನಿಲ್ಲಿಸಿದನು.
25 २५ मग परमेश्वर ढगात उतरून आला आणि मोशेशी बोलला. मोशेवर परमेश्वराचा आत्मा होता. त्यातून काही घेऊन परमेश्वराने ते त्या सत्तर वडिलावर ठेवला. तो आत्मा आल्यावर ते संदेश सांगू लागले. परंतु त्यानंतर मात्र त्यांनी पुन्हा संदेश सांगितला नाही.
ಯೆಹೋವ ದೇವರು ಮೇಘದೊಳಗಿಂದ ಇಳಿದು, ಅವನ ಸಂಗಡ ಮಾತನಾಡಿ, ಅವನ ಮೇಲಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ತೆಗೆದು, ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟರು. ಆದ್ದರಿಂದ ಆತ್ಮವು ಅವರ ಮೇಲೆ ನೆಲೆಯಾಗಿದ್ದಾಗ ಅವರು ಪ್ರವಾದಿಸಿದರು. ಆಮೇಲೆ ಅವರು ಪ್ರವಾದಿಸಲಿಲ್ಲ.
26 २६ त्यातील दोन वडील एलदाद व मेदाद छावणीच्या बाहेर गेले नाहीत. त्यांची नांवे वडीलांच्या यादीत होती. परंतु ते छावणीतच राहिले; त्यामुळे आत्मा त्यांच्यावरही आला आणि ते छावणीतच संदेश सांगू लागले.
ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್. ಮತ್ತೊಬ್ಬನ ಹೆಸರು ಮೇದಾದ್. ಇವರು ನಾಯಕರ ಪಟ್ಟಿಯಲ್ಲಿದ್ದವರಾಗಿದ್ದರು. ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಗುಡಾರಕ್ಕೆ ಹೊರಟು ಹೋಗದೆ, ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.
27 २७ तेव्हा एका तरुणाने पळत जाऊन मोशेला हे सांगितले. तो म्हणाला, एलदाद व मेदाद हे छावणीत संदेश सांगत आहेत.
ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ, “ಎಲ್ದಾದನೂ, ಮೇದಾದನೂ ಪಾಳೆಯದಲ್ಲಿ ಪ್ರವಾದಿಸುತ್ತಾರೆ,” ಎಂದನು.
28 २८ तेव्हा नूनाचा मुलगा यहोशवा मोशेला म्हणाला, मोशे, माझे स्वामी तुम्ही त्यांना बंदी घाला. यहोशवा तरुण असल्यापासून मोशेचा मदतनीस होता.
ಅದಕ್ಕೆ ಯೌವನಸ್ಥರಲ್ಲಿ ಒಬ್ಬನೂ, ಮೋಶೆಯ ಸೇವಕನೂ ಆಗಿದ್ದ ನೂನನ ಮಗ ಯೆಹೋಶುವನು, “ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ,” ಎಂದನು.
29 २९ मोशेने त्यास उत्तर दिले, माझ्या प्रतिष्ठेसाठी तू त्यांचा हेवा करतोस काय? परमेश्वराचे सर्वच लोक संदेष्टे असते आणि परमेश्वराने त्या सर्वांवर आपला आत्मा ठेविला असता तर किती बरे होते.
ಮೋಶೆಯು ಅವನಿಗೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚು ಪಡುತ್ತೀಯೋ? ಯೆಹೋವ ದೇವರ ಜನರೆಲ್ಲಾ ಪ್ರವಾದಿಗಳಾಗಿದ್ದು, ಯೆಹೋವ ದೇವರು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೆಯದು,” ಎಂದನು.
30 ३० मग मोशे व इस्राएलाच्या वडीलजनासह छावणीत परत गेला.
ಆಗ ಮೋಶೆಯೂ, ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
31 ३१ मग परमेश्वराने समुद्रावरुन जोरदार वारा वाहावयास लाविला. त्या वाऱ्याने लावे पक्षी त्या भागात वाहून आणले. ते लावे पक्षी सर्व छावणीच्या भोंवती उडत राहिले. ते इतके होते की छावणीचे अंगण व सारा परिसर त्यांनी भरुन गेला. त्यांचा जमिनीपासून दोन हात उंचीचा थर साचला. मनुष्य एक दिवसभरात जितका दूर चालत जाईल तिथपर्यंत तो थर होता.
ಯೆಹೋವ ದೇವರ ಕಡೆಯಿಂದ ಒಂದು ಗಾಳಿಯು ಹೊರಟು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ತಂದು, ಪಾಳೆಯದ ಸುತ್ತಲೂ ಈ ಕಡೆ ಒಂದು ದಿನದ ದೂರದ ಪ್ರಯಾಣದಷ್ಟು, ಆ ಕಡೆ ಒಂದು ದಿನದ ದೂರದ ಪ್ರಯಾಣದಷ್ಟು ಪಾಳೆಯದ ಬಳಿಯಲ್ಲಿ ಭೂಮಿಯ ಮೇಲೆ ಎರಡು ಮೊಳ ಎತ್ತರದಲ್ಲಿ ಅವುಗಳನ್ನು ಬೀಳುವಂತೆ ಮಾಡಿತು.
32 ३२ लोक बाहेर पडले व त्यांनी दिवसभर व रात्रभर लावे पक्षी गोळा केले आणि त्यांनी पूर्ण दुसरा दिवसभरही ते गोळा केले. ज्याने सर्वात कमी गोळा केले पक्षी त्यांचे दहा होमर भरले. त्यांनी लावे पक्षी सर्व छावणी सभोवती पसरून ठेवले.
ಜನರು ಆ ದಿನವೆಲ್ಲಾ, ಆ ರಾತ್ರಿಯೆಲ್ಲಾ, ಮರು ದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಸಾವಿರ ಕಿಲೋಗ್ರಾಮಿನಷ್ಟು ಕೂಡಿಸಿದನು. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
33 ३३ ते मांस त्यांच्या दातात होते, ते चावण्याच्या आधीच परमेश्वराचा राग त्यांच्यावर भयंकर भडकला. त्यांने लोकांचा भयंकर आजाराने संहार केला.
ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ, ಅದನ್ನು ಅಗಿಯುವುದಕ್ಕಿಂತ ಮುಂಚೆ ಯೆಹೋವ ದೇವರು ಜನರನ್ನು ಘೋರ ವ್ಯಾಧಿಯಿಂದ ಸಾಯಿಸಿದನು.
34 ३४ त्या जागेला किब्रोथ-हत्तव्वा असे नांव दिले. कारण ज्या लोकांस मांस खाण्याची अतिशय तीव्र इच्छा झाली होती त्यांना तेथे पुरण्यात आले.
ಆಶೆ ಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವ ಎಂದು ಹೆಸರಾಯಿತು.
35 ३५ किब्रोथ-हत्तव्वापासून लोकांनी हसेरोथ गावापर्यंत प्रवास केला व तेथे त्यांनी मुक्काम केला.
ತರುವಾಯ ಜನರು ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿಗೆ ಪ್ರಯಾಣಮಾಡಿ ಬಂದು, ಅಲ್ಲಿ ಇಳಿದುಕೊಂಡರು.

< गणना 11 >