< नीतिसूत्रे 22 >

1 चांगले नाव विपुल धनापेक्षा आणि सोने व चांदीपेक्षा प्रीतीयुक्त कृपा निवडणे उत्तम आहे.
ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ; ಬೆಳ್ಳಿಬಂಗಾರಕ್ಕಿಂತಲೂ ಗೌರವದಿಂದಿರುವುದು ಉತ್ತಮ.
2 गरीब आणि श्रीमंत यांच्यात हे सामाईक आहे, त्या सर्वांचा निर्माणकर्ता परमेश्वर आहे.
ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು: ಇವರೆಲ್ಲರನ್ನು ಸೃಷ್ಟಿಸಿದಾತ ಯೆಹೋವ ದೇವರೇ.
3 शहाणा मनुष्य संकट येताना पाहून लपतो, पण भोळे पुढे जातात आणि त्यामुळे दुःख सोसतात.
ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.
4 परमेश्वराचे भय नम्रता आणि संपत्ती, मान आणि जीवन आणते.
ಯೆಹೋವ ದೇವರ ಭಯವೂ ದೀನತೆಯೂ ಕೊಡುವ ಪ್ರತಿಫಲ, ಐಶ್ವರ್ಯವೂ ಮಾನವೂ ಜೀವವೂ ಆಗಿದೆ.
5 कुटिलाच्या मार्गात काटे आणि पाश असतात; जो कोणी आपल्या जिवाची काळजी करतो तो त्यापासून दूर राहतो.
ದುಷ್ಟರ ದಾರಿಯಲ್ಲಿ ಮುಳ್ಳುಗಳೂ, ಉರುಲುಗಳೂ ಇವೆ; ತನ್ನ ಜೀವವನ್ನು ಕಾಪಾಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
6 मुलाने ज्या मार्गात चालावे त्याचे शिक्षण त्यास दे, आणि जेव्हा तो मोठा होईल तेव्हा त्या मार्गांपासून तो मागे फिरणार नाही.
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣವನ್ನು ಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದರಿಂದ ದೂರ ಹೋಗುವುದಿಲ್ಲ.
7 श्रीमंत गरीबावर अधिकार गाजवितो, आणि जो कोणी एक उसने घेतो तो कोणा एका उसने देणाऱ्यांचा गुलाम आहे.
ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ; ಸಾಲಗಾರನು ಸಾಲಕೊಟ್ಟವನಿಗೆ ಗುಲಾಮನು.
8 जो कोणी वाईट पेरतो तो संकटाची कापणी करतो, आणि त्याच्या क्रोधाची काठी तूटून जाईल.
ಕೆಟ್ಟತನವನ್ನು ಬಿತ್ತುವವನು ಕೇಡನ್ನು ಕೊಯ್ಯುವನು; ಅವನ ಕೋಪದ ಬೆತ್ತವು ಮುರಿದು ಹೋಗುವುದು.
9 जो उदार दृष्टीचा आहे तो आशीर्वादित होईल कारण तो आपले अन्न गरिबांबरोबर वाटून खातो.
ಉದಾರವಾಗಿ ಕೊಡುವವನು ಆಶೀರ್ವಾದವನ್ನು ಹೊಂದುವನು, ಏಕೆಂದರೆ ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
10 १० निंदकाला घालवून दे म्हणजे भांडणे मिटतात, मतभेद आणि अप्रतिष्ठा संपून जातील.
ಪರಿಹಾಸ್ಯ ಮಾಡುವವನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವುದು; ವಿವಾದವೂ ನಿಂದೆಯೂ ನಿಂತುಹೋಗುವುವು.
11 ११ ज्याला मनाची शुद्धता आवडते, आणि ज्याची वाणी कृपामय असते; अशांचा मित्र राजा असतो.
ಶುದ್ಧ ಹೃದಯವನ್ನು ಪ್ರೀತಿಸಿ, ಕೃಪೆಯಿಂದ ಮಾತನಾಡುವವನಿಗೆ ಅರಸನು ಸ್ನೇಹಿತನಾಗಿರುವನು.
12 १२ परमेश्वराचे नेत्र ज्ञानाचे रक्षक आहेत, परंतु तो विश्वासघातक्यांची वचने उलथून टाकतो.
ಯೆಹೋವ ದೇವರ ಕಣ್ಣುಗಳು ತಿಳುವಳಿಕೆಯನ್ನು ಕಾಯುತ್ತವೆ; ಅವರು ದ್ರೋಹಿಯ ಮಾತುಗಳನ್ನು ಕೆಡವಿ ಹಾಕುತ್ತಾರೆ.
13 १३ आळशी म्हणतो, “बाहेर रस्त्यावर सिंह आहे! मी उघड्या जागेवर ठार होईल.”
ಸೋಮಾರಿಯು, “ಹೊರಗೆ ಸಿಂಹವಿದೆ! ಅದು ನನ್ನನ್ನು ಬೀದಿಗಳಲ್ಲಿ ಕೊಂದುಹಾಕುತ್ತದೆ,” ಎಂದು ಹೇಳುತ್ತಾನೆ.
14 १४ व्यभिचारी स्त्रियांचे तोंड खोल खड्डा आहे; ज्या कोणाच्याविरूद्ध परमेश्वराचा कोप भडकतो तो त्यामध्ये पडतो.
ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಯೆಹೋವ ದೇವರಿಗೆ ಸಿಟ್ಟನ್ನು ಎಬ್ಬಿಸುವವನು ಅದರಲ್ಲಿ ಬೀಳುವನು.
15 १५ बालकाच्या हृदयात मूर्खता जखडलेली असते, पण शिक्षेची काठी ती त्याच्यापासून दूर करील.
ಮೂರ್ಖತನ ಯುವಕನ ಹೃದಯದಲ್ಲಿ ಬಂಧಿಸಲಾಗಿದೆ; ಆದರೆ ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವುದು.
16 १६ जो कोणी आपली संपत्ती वाढविण्यासाठी गरीबावर जुलूम करतो, किंवा जो धनवानाला भेटी देतो, तोही गरीब होईल.
ತನ್ನ ಸಂಪತ್ತನ್ನು ವೃದ್ಧಿಗೊಳಿಸುವುದಕ್ಕೆ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ದಾನ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
17 १७ ज्ञानाची वचने ऐकून घे आणि त्याकडे लक्ष दे, आणि आपले मन माझ्या ज्ञानाकडे लाव.
ಜ್ಞಾನಿಗಳ ಮಾತುಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ನಿನ್ನ ಹೃದಯವು ಅನ್ವಯಿಸಲಿ.
18 १८ कारण ती जर तू आपल्या अंतर्यामात ठेवशील, आणि ती सर्व तुझ्या ओठावर तयार राहतील. तर किती बरे होईल.
ಏಕೆಂದರೆ ಅವುಗಳನ್ನು ನಿನ್ನ ಹೃದಯದಲ್ಲಿ ಇಟ್ಟು ಕಾಪಾಡು, ಅವು ನಿನ್ನ ತುಟಿಗಳ ಮೇಲೆ ಸಿದ್ಧವಿದ್ದರೆ ಮೆಚ್ಚುಗೆಯಾಗಿವೆ.
19 १९ परमेश्वरावर तुम्ही विश्वास ठेवावा, म्हणून मी तुला ती वचने आज शिकवली आहेत.
ನಿನ್ನ ಭರವಸೆಯು ಯೆಹೋವ ದೇವರಲ್ಲಿ ಇರುವಂತೆ ಈ ದಿವಸ ನಿನಗೇ ತಿಳಿಯಪಡಿಸಿದ್ದೇನೆ.
20 २० मी तुझ्यासाठी शिक्षण व ज्ञान ह्यातल्या तीस म्हणी लिहिल्या नाहीत काय?
ನಾನು ನಿಮಗಾಗಿ ಮೂವತ್ತು ಹೇಳಿಕೆಗಳನ್ನು ಬರೆದಿಲ್ಲವೋ? ಸಲಹೆ ಮತ್ತು ಪರಿಜ್ಞಾನದ ಹೇಳಿಕೆಗಳು,
21 २१ या सत्याच्या वचनाचे विश्वासूपण तुला शिकवावे, ज्याने तुला पाठवले त्यास विश्वासाने उत्तरे द्यावीत म्हणून नाहीत काय?
ಪ್ರಾಮಾಣಿಕವಾಗಿರಲು ಮತ್ತು ಸತ್ಯವನ್ನು ಮಾತನಾಡಲು ನಿಮಗೆ ಕಲಿಸುವುದು, ಆದ್ದರಿಂದ ನೀವು ಸೇವೆ ಸಲ್ಲಿಸುವವರಿಗೆ ಸತ್ಯವಾದ ವರದಿಗಳನ್ನು ಹಿಂತಿರುಗಿಸುವಂತೆ ನಾನು ನಿಮಗೆ ಬರೆದಿದ್ದೇನೆ.
22 २२ गरीब मनुष्यास लुटू नको, कारण तो गरीबच आहे, किंवा गरजवंतावर वेशीत जुलूम करू नकोस.
ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆಮಾಡಬೇಡ; ನ್ಯಾಯಾಲಯದಲ್ಲಿ ದರಿದ್ರರನ್ನು ತುಳಿಯಬೇಡ.
23 २३ कारण परमेश्वर त्यांचा कैवार घेईल, आणि ज्या कोणी त्यांना लुटले त्यांचे जिवन तो लुटेल.
ಏಕೆಂದರೆ ಯೆಹೋವ ದೇವರು ಅವರ ವ್ಯಾಜ್ಯವನ್ನು ನಡೆಸಿ, ಸೂರೆ ಮಾಡಿದವರ ಪ್ರಾಣವನ್ನು ಸೂರೆ ಮಾಡುವರು.
24 २४ जो कोणी एक व्यक्ती रागाने राज्य करतो त्याची मैत्री करू नकोस, आणि जो कोणी संतापी आहे त्याच्याबरोबर जाऊ नकोस.
ಮುಂಗೊಪಿಯೊಂದಿಗೆ ಸ್ನೇಹ ಬೆಳೆಸಬೇಡ; ಸುಲಭವಾಗಿ ಕೋಪಗೊಳ್ಳುವವರೊಂದಿಗೆ ಸಹವಾಸ ಮಾಡಬೇಡ;
25 २५ तुम्ही त्याचे मार्ग शिकाल, आणि गेलात तर तुम्ही स्वतःला जाळ्यात अडकवून घ्याल.
ಹಾಗೆ ಮಾಡಿದರೆ ನೀನು ಅವನ ನಡತೆಗಳನ್ನು ಕಲಿತು, ನಿನ್ನನ್ನೇ ಉರುಲಿಗೆ ಸಿಕ್ಕಿಸಿಕೊಳ್ಳುವೆ.
26 २६ दुसऱ्याच्या कर्जाला जे जामीन होतात, आणि हातावर हात मारणारे त्यांच्यातला तू एक होऊ नको.
ಬೇರೆಯವರ ಸಾಲವನ್ನು ಖಾತರಿಪಡಿಸಲೂ ಬೇರೊಬ್ಬರಿಗೆ ಭದ್ರತೆಯನ್ನು ನೀಡಲು ಒಪ್ಪಬೇಡ.
27 २७ जर तुझ्याकडे कर्ज फेडण्यास काही नसले, तर त्याने तुमच्या अंगाखालून तुझे अंथरुण का काढून घ्यावे?
ಸಾಲ ತೀರಿಸಲು ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದುಕೊಂಡು ಹೋಗುವನಲ್ಲವೇ?
28 २८ तुझ्या वडिलांनी जी प्राचीन सीमा घालून ठेवली आहे, तो दगड दूर करू नकोस.
ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ.
29 २९ जो आपल्या कामात तरबेज अशा मनुष्यास तू पाहिले आहे का? तो राजासमोर उभा राहील; तो सामान्य लोकांसमोर उभा राहणार नाही.
ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ಸೇವೆ ಸಲ್ಲಿಸುವನು.

< नीतिसूत्रे 22 >