< रोम. 8 >
1 १ म्हणून ख्रिस्त येशूमध्ये असणाऱ्यांना दंडाज्ञा नाही. ते देहाप्रमाणे नाही तर आत्म्याप्रमाणे चालतात.
ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.
2 २ कारण, ख्रिस्त येशूतील जीवनाच्या पवित्र आत्म्याच्या नियमाने मला पापाच्या व मरणाच्या नियमातून मुक्त केले.
ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.
3 ३ कारण देहामुळे नियमशास्त्र दुर्बळ झाल्याने त्यास जे अशक्य झाले, त्यासाठी देवाने आपल्या स्वतःच्या पुत्राला पापासाठी पापमय देहाचे रूप देऊन पाठवले व पापाला देहात दंडाज्ञा ठरविली.
ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.
4 ४ म्हणजे आपण जे देहाला अनुसरून नाही पण आत्म्याला अनुसरून चालणारे आहोत त्या आपल्यात नियमशास्त्राची आज्ञा पूर्ण व्हावी.
ಹೀಗೆ ನಾವು ಮಾಂಸಭಾವದವರಾಗಿ ಬಾಳದೆ ಪವಿತ್ರಾತ್ಮರಿಗನುಸಾರವಾಗಿ ಬಾಳುವ ನಮ್ಮಲ್ಲಿ ನಿಯಮದ ಅಗತ್ಯವು ನೆರವೇರುವುದಕ್ಕೆ ಆಸ್ಪದವಾಯಿತು.
5 ५ कारण देहाला अनुसरून चालणारे दैहिक गोष्टींवर मन ठेवतात; पण आत्म्याला अनुसरून चालणारे आत्मिक गोष्टींवर मन ठेवतात.
ಮಾಂಸಭಾವದವರಾಗಿ ಬಾಳುವವರ ಮನಸ್ಸು ಅದಕ್ಕೆ ಸಂಬಂಧಪಟ್ಟವುಗಳ ಮೇಲಿರುತ್ತದೆ. ಆದರೆ ಪವಿತ್ರಾತ್ಮ ದೇವರಿಗೆ ಅನುಸಾರವಾಗಿ ಬಾಳುವವರ ಮನಸ್ಸು ಪವಿತ್ರಾತ್ಮ ದೇವರಿಗೆ ಸಂಬಂಧಪಟ್ಟವುಗಳ ಮೇಲಿರುತ್ತದೆ.
6 ६ देहस्वभावाचे चिंतन हे मरण आहे पण आत्मिक मनाचे होणे म्हणजे जीवन व शांती.
ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ.
7 ७ कारण देहस्वभावाचे चिंतन हे देवाशी वैर आहे; कारण ते देवाच्या नियमाला अंकित होत नाही आणि त्यास खरोखर, होता येत नाही.
ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.
8 ८ म्हणून जे देहाचे आहेत ते देवाला संतोषवू शकत नाहीत.
ಮಾಂಸಭಾವಕ್ಕೆ ಒಳಗಾದವರು ದೇವರನ್ನು ಮೆಚ್ಚಿಸಲಾರರು.
9 ९ पण तुमच्यात जर देवाचा आत्मा वास करतो, तर तुम्ही देहाचे नाही, पण आत्म्याचे आहात कारण ख्रिस्ताचा आत्मा जर कोणात नसेल तर तो त्याचा नाही.
ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ.
10 १० पण जर तुमच्यात ख्रिस्त आहे, तर शरीर पापामुळे मरण पावलेले आहे, पण नीतिमत्त्वामुळे आत्मा जीवन आहे.
ಆದರೆ ಕ್ರಿಸ್ತ ಯೇಸು ನಿಮ್ಮಲ್ಲಿ ಇರುವುದಾದರೆ, ನಿಮ್ಮ ಶರೀರವು ಪಾಪದ ನಿಮಿತ್ತ ಸತ್ತಿದ್ದರೂ ನಿಮ್ಮ ಆತ್ಮವು ನೀತಿಯ ನಿಮಿತ್ತ ಜೀವಿಸುತ್ತದೆ.
11 ११ पण ज्याने येशूला मरण पावलेल्यातून उठवले त्याचा आत्मा जर तुमच्यात वास करतो, तर ज्याने ख्रिस्त येशूला मरण पावलेल्यातून उठवले तो तुमच्यात राहणार्या, आपल्या आत्म्याच्याद्वारे तुमचीही मरणाधीन शरीरे जिवंत करील.
ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು.
12 १२ म्हणून बंधूंनो आपण देणेकरी आहोत; पण देहानुसार जगण्यास देहाचे नाही
ಆದ್ದರಿಂದ, ಪ್ರಿಯರೇ, ನಾವು ಮಾಂಸಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬದುಕಲು ಋಣಸ್ಥರಲ್ಲ.
13 १३ कारण तुम्ही जर देहानुसार जगाल तर तुम्ही मराल, पण तुम्ही आत्म्याच्या योगे शरीराच्या कृती मारून टाकल्या तर तुम्ही जिवंत रहाल.
ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.
14 १४ कारण देवाचा आत्मा जितक्यांना चालवतो ते देवाचे पुत्र आहेत.
ಯಾರು ದೇವರ ಆತ್ಮರಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಪುತ್ರರಾಗಿರುತ್ತಾರೆ.
15 १५ कारण तुम्हास पुन्हा भय धरण्यास दासपणाचा आत्मा मिळाला नाही; पण आपण ज्यायोगे ‘अब्बा-पित्या’ अशी हाक मारतो असा दत्तकपणाचा आत्मा तुम्हास मिळाला आहे.
ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುತ್ತೇವೆ.
16 १६ तो पवित्र आत्मा स्वतः आपल्या आत्म्याबरोबर साक्ष देतो की, आपण देवाची लेकरे आहोत.
ನಾವು ದೇವರ ಮಕ್ಕಳಾಗಿದ್ದೇವೆ ಎಂಬುದಕ್ಕೆ ದೇವರ ಆತ್ಮರು ನಮ್ಮ ಆತ್ಮದೊಂದಿಗೆ ಸಾಕ್ಷಿಕೊಡುತ್ತಾರೆ.
17 १७ आणि, जर मुले तर वारीस, देवाचे वारीस, ख्रिस्ताबरोबर जोडीचे वारीस आहोत. म्हणजे, त्याच्याबरोबर आपले गौरवही व्हावे, म्हणून त्याच्याबरोबर आपण दुख तर सोसले वारीस आहोत.
ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
18 १८ कारण मी मानतो की, या चालू काळातील दुःखे ही आपल्यासाठी जे गौरव प्रकट होईल, त्याच्यापुढे काही किमतीची नाहीत.
ನಮಗೆ ಮುಂದೆ ಪ್ರಕಟವಾಗಲಿರುವ ಮಹಿಮೆಯೊಂದಿಗೆ ಹೋಲಿಸುವಾಗ ಈಗಿನ ಸಂಕಟಗಳು ಅಲ್ಪವೆಂದು ನಾನು ಎಣಿಸುತ್ತೇನೆ.
19 १९ कारण, सृष्टीची उत्कट अपेक्षा देवाच्या पुत्रांच्या प्रकट होण्याची प्रतीक्षा करीत आहे.
ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ.
20 २० कारण सृष्टी व्यर्थतेच्या अधीन राहिली ती स्वेच्छेने नाही, पण ज्याने तिला आशेने अधीन ठेवले त्याच्यामुळे राहिली;
ಸೃಷ್ಟಿಯು ನಾಶಕ್ಕೆ ಒಳಗಾಯಿತು. ಆದರೆ ಸ್ವಂತ ಇಚ್ಛೆಯಿಂದಲ್ಲ. ಅದನ್ನು ನಿರೀಕ್ಷೆಯಿಂದ ಒಳಪಡಿಸಿದ ದೇವರಿಂದಲೇ ಆಯಿತು. ಆದರೂ ಸೃಷ್ಟಿಗೂ ನಿರೀಕ್ಷೆಯಿದೆ.
21 २१ कारण सृष्टीदेखील नाशाच्या दास्यातून मुक्त केली जाऊन देवाच्या मुलांच्या गौरवी स्वातंत्र्यात आणली जाईल.
ಈ ಸೃಷ್ಟಿಯು ಕೂಡ ನಾಶದ ಬಂಧನದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ.
22 २२ कारण आपण जाणतो की, सर्व सृष्टी आतापर्यंत कण्हत व यातना सोशीत आहे.
ಈವರೆಗೂ ಸೃಷ್ಟಿಯೆಲ್ಲ ಪ್ರಸವ ವೇದನೆಯಂಥ ನೋವಿನಿಂದ ನರಳುತ್ತಿದೆ ಎಂದು ನಾವು ಬಲ್ಲೆವು.
23 २३ आणि केवळ इतकेच नाही, पण ज्यांना आत्म्याचे प्रथमफळ मिळाले आहे असे जे आपण ते आपणही, स्वतः दत्तक घेतले जाण्याची, म्हणजे आपले शरीर मुक्त केले जाण्याची प्रतीक्षा करीत असता, अंतर्यामी कण्हत आहोत.
ಅಷ್ಟೇ ಅಲ್ಲದೆ, ಪವಿತ್ರಾತ್ಮ ದೇವರ ಪ್ರಥಮ ಫಲವನ್ನು ಹೊಂದಿದವರಾಗಿರುವ ನಾವು ಕೂಡ, ಮಕ್ಕಳ ಪದವಿಯನ್ನು ಪಡೆಯುವುದಕ್ಕಾಗಿ ನಮ್ಮ ದೇಹಗಳ ಬಿಡುಗಡೆಗಾಗಿ ಎದುರುನೋಡುತ್ತಾ ಆತುರದಿಂದ ನರಳುತ್ತಾ ಇದ್ದೇವೆ.
24 २४ कारण, आपण आशेने तारले गेलो आहो; पण दिसणारी आशाही आशा नाही, कारण जी गोष्ट दिसत आहे तिची कोणी आशा करतो का?
ಈ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ಆದರೆ ಕಣ್ಣಿಗೆ ಕಾಣುವ ನಿರೀಕ್ಷೆಯು ನಿರೀಕ್ಷೆಯೇ ಅಲ್ಲ. ಕಾಣುತ್ತಿರುವುದನ್ನು ಯಾರಾದರೂ ನಿರೀಕ್ಷಿಸುವರೋ?
25 २५ पण जी गोष्ट आपल्याला दिसत नाही तिची आपण आशा केली, तर आपण धीराने प्रतीक्षा करतो.
ಆದರೆ ನಾವು ಇನ್ನು ಕಾಣದಿರುವಂಥದ್ದಕ್ಕಾಗಿ ನಿರೀಕ್ಷಿಸುವುದಾದರೆ ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.
26 २६ त्याचप्रमाणे आपल्या अशक्तपणात पवित्र आत्माही आपल्याला सहाय्य करतो, कारण आपण प्रार्थना केली पाहिजे तशी कशासाठी करावी हे आपण जाणत नाही. पण ज्यांचा उच्चार करता येत नाही अशा कण्हण्यांनी आत्मा स्वतः आपल्यासाठी मध्यस्थी करतो.
ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ.
27 २७ आणि, जो अंतःकरणे शोधून पाहतो तो पवित्र आत्म्याचे मन जाणतो, कारण तो पवित्र जनांसाठी देवाच्या इच्छेस येईल अशी मध्यस्थी करतो.
ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರು ಪವಿತ್ರಾತ್ಮರ ಮನಸ್ಸನ್ನು ಬಲ್ಲವರಾಗಿದ್ದಾರೆ. ಏಕೆಂದರೆ ಪವಿತ್ರಾತ್ಮರು ದೇವಜನರಿಗಾಗಿ ದೇವರ ಚಿತ್ತದ ಪ್ರಕಾರ ವಿಜ್ಞಾಪಿಸುತ್ತಾರೆ.
28 २८ कारण आपण हे जाणतो की, जे देवावर प्रीती करतात, जे त्याच्या योजनेप्रमाणे बोलावलेले आहेत त्यांच्यासाठी सर्व गोष्टी मिळून, त्यांच्या चांगल्यासाठी, सहकार्य करतात.
ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.
29 २९ कारण त्यास ज्यांच्याविषयी पूर्वज्ञान होते ते आपल्या पुत्राच्या प्रतिरूपात प्रकट व्हावेत म्हणून त्याने त्यांना पूर्वनियोजितही केले. म्हणजे त्याने अनेक बंधुंमध्ये ज्येष्ठ व्हावे.
ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು.
30 ३० आणि त्याने ज्यांना पूर्वनियोजित केले त्यांना त्याने पाचारणही केले आणि त्याने ज्यांना पाचारण केले त्यांना त्याने नीतिमानही ठरवले आणि त्याने ज्यांना नीतिमान ठरवले त्यांचे त्याने गौरवही केले.
ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು.
31 ३१ मग या गोष्टींविषयी आपण काय म्हणावे? जर देव आपल्या बाजूला आहे, तर मग आपल्या विरुद्ध कोण?
ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?
32 ३२ आणि ज्याने आपल्या स्वतःच्या पुत्राला राखले नाही, पण आपल्या सर्वांसाठी त्यास दिले, तो आपल्याला त्याच्याबरोबर सर्व गोष्टीही का देणार नाही?
ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?
33 ३३ देवाच्या निवडलेल्यांवर दोषारोप कोण आणील? देव नीतिमान ठरविणारा आहे.
ದೇವರು ತಾವೇ ಆರಿಸಿಕೊಂಡವರ ಮೇಲೆ ದೋಷಾರೋಪಣೆ ಮಾಡುವವರಾರು? ದೇವರೇ ನೀತಿವಂತರೆಂದು ನಿರ್ಣಯ ಮಾಡುವವರಾಗಿರುತ್ತಾರೆ.
34 ३४ दंडाज्ञा ठरविणारा कोण आहे? जो ख्रिस्त येशू मरण पावला, हो, जो मरण पावलेल्यातून उठवला गेला व देवाच्या उजवीकडे बसला आहे, तो तर आपल्यासाठी मध्यस्थी करीत आहे.
ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ.
35 ३५ ख्रिस्ताच्या प्रीतीपासून कोण आपल्याला वेगळे करील? संकट किंवा दुःख, पाठलाग, भूक किंवा नग्नता, आपत्ती किंवा तलवार करील काय?
ಕ್ರಿಸ್ತ ಯೇಸುವಿನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಇಕ್ಕಟ್ಟೋ ಹಿಂಸೆಯೋ ಆಹಾರವಿಲ್ಲದಿರುವುದೋ ಬಟ್ಟೆ ಇಲ್ಲದಿರುವುದೋ ಅಪಾಯವೋ ಖಡ್ಗವೋ? ಇವೆಲ್ಲವೂ ನಮ್ಮನ್ನು ಅಗಲಿಸಲಾರವು.
36 ३६ कारण पवित्र शास्त्रात असे लिहिले आहे की, ‘तुझ्याकरता आम्ही दिवसभर मारले जात आहोत, आम्ही वधाच्या मेंढराप्रमाणे गणलेले आहोत.’
ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ: “ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ; ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ.”
37 ३७ पण ज्याने आपल्यावर प्रीती केली, त्याच्याद्वारे या सर्व गोष्टींत आपण महाविजयी ठरतो.
ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.
38 ३८ कारण माझी खात्री आहे की, मरण किंवा जीवन, देवदूत किंवा सत्ता, आताच्या गोष्टी किंवा येणार्या गोष्टी किंवा बले,
ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ,
39 ३९ किंवा उंची किंवा खोली किंवा दुसरी कोणतीही निर्मिती आपला प्रभू ख्रिस्त येशू ह्याच्याठायी असलेल्या देवाच्या प्रीतीपासून आपल्याला वेगळे करू शकणार नाही.
ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.