< ၁ ရာဇဝင်ချုပ် 19 >
1 ၁ ထိုနောက်ကာလအနည်းငယ်ကြာသော အခါ အမ္မုန်ဘုရင်နာဟတ်ကွယ်လွန်၍ သူ၏သားဟာနုန်မင်းဖြစ်လေ၏။-
೧ಇದಾದನಂತರ ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗನು ಅರಸನಾದನು.
2 ၂ ဒါဝိဒ်က``ဟာနုန်၏အဖနာဟတ်သည်သစ္စာ ရှိသောမိတ်ဆွေဖြစ်ကြောင်း ငါ့အားပြသခဲ့ သည့်နည်းတူငါသည်လည်းဟာနုန်အားပြသ ရပေမည်'' ဟုဆိုလျက်သူ၏ထံသို့ဝမ်းနည်း ကြေကွဲကြောင်းသဝဏ်လွှာကိုစေတမန်များ နှင့်ပေးပို့တော်မူလိုက်၏။ ထိုသူတို့အမ္မုန်ပြည်သို့ရောက်ရှိကြသော အခါ ဟာနုန်မင်း၏ရှေ့သို့ဝင်ကြ၏။-
೨ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು” ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವುದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದರು.
3 ၃ အမ္မုန်အမျိုးသားခေါင်းဆောင်များက``ဒါဝိဒ် သည်အရှင်မင်းကြီး၏ခမည်းတော်ကိုဂုဏ်ပြု သည့်အနေဖြင့် ဤစေတမန်များကိုစေလွှတ် ၍ဝမ်းနည်းကြေကွဲကြောင်းသဝဏ်လွှာကို ပေးပို့ခြင်းဖြစ်သည်ဟုမှတ်တော်မူပါ သလော။ အဘယ်နည်းနှင့်မျှမဟုတ်ပါ။ ဤ နိုင်ငံကိုချင်းနင်းဝင်ရောက်သိမ်းပိုက်နိုင်ရန် အခြေအနေကိုလေ့လာစုံစမ်းရန် ထိုသူ တို့အားသူလျှိုများအဖြစ်ဖြင့်စေလွှတ် လိုက်ခြင်းသာလျှင်ဖြစ်ပါသည်'' ဟု လျှောက်ထားကြ၏။
೩ಆಗ ಅಮ್ಮೋನ್ ಪ್ರಭುಗಳು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ, ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ” ಎಂದು ಹೇಳಿದರು.
4 ၄ ဟာနုန်သည်ဒါဝိဒ်၏ စေတမန်တို့ကိုဖမ်း ဆီးကာမုတ်ဆိတ်များကိုရိတ်၍ အဝတ်များ ကိုတင်ပါးအထိဖြတ်ပြီးလျှင်သူတို့ အားပြန်၍လွှတ်လိုက်၏။-
೪ಆದುದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.
5 ၅ သူတို့သည်အလွန်ပင်ရှက်သဖြင့်မိမိတို့ တိုင်းပြည်သို့မပြန်ဘဲနေကြ၏။ ဤအဖြစ် အပျက်ကိုဒါဝိဒ်ကြားသိသောအခါသူ တို့အား``သင်တို့သည်ယေရိခေါမြို့တွင်နေ ကြလော့။ မုတ်ဆိတ်များပြန်၍မရှည်မချင်း မိမိတို့ပြည်သို့မပြန်ခဲ့ကြနှင့်'' ဟု အကြောင်းကြားတော်မူ၏။
೫ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದಾಗ ಅವನು ಬಹಳ ಅವಮಾನಹೊಂದಿ ಅವರಿಗೆ ಆಳುಗಳ ಮುಖಾಂತರವಾಗಿ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿದ್ದು ಅನಂತರ ಬನ್ನಿರಿ” ಎಂದು ಹೇಳಿಸಿದನು.
6 ၆ ဟာနုန်မင်းနှင့်အမ္မုန်အမျိုးသားတို့သည် ဒါဝိဒ်မင်းအား မိမိတို့ရန်ဖက်ပြုမိကြ ကြောင်းသိရှိလာကြသောအခါမေသော ပေါတာမိပြည်အထက်ပိုင်းနှင့် ရှုရိပြည် ဖြစ်ကြသောမာခါပြည်၊ ဇောဘပြည်တို့ မှစစ်တပ်တစ်တပ်ကိုငွေတန်ချိန်လေး ဆယ်မျှပေး၍ငှားရမ်းကြ၏။-
೬ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಮತ್ತು ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ, ಮಾಕದಿಂದಲೂ, ಚೋಬಾ ರಾಜ್ಯದಿಂದಲೂ ರಥಗಳನ್ನೂ, ರಾಹುತರನ್ನು ತರಿಸುವುದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನೂ ಕಳುಹಿಸಿದರು.
7 ၇ သူတို့သည်မိမိတို့ငှားရမ်းထားသည့်စစ် ရထားသုံးသောင်းနှစ်ထောင်နှင့် မာခါပြည် ဘုရင်၏တပ်မတော်ကိုခေါ်ဆောင်ကာ မေ ဒဘမြို့အနီးသို့လာ၍စခန်းချလေသည်။ အမ္မုန်အမျိုးသားတို့သည်လည်းမိမိတို့၏ မြို့အပေါင်းမှထွက်၍စစ်တိုက်ရန်အသင့် ပြင်ကြကုန်၏။
೭ಆಗ ಮೂವತ್ತೆರಡು ಸಾವಿರ ರಥಬಲದವರೂ, ಮಾಕದ ಅರಸನೂ ಮತ್ತು ಅವನ ದಂಡಾಳುಗಳು ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.
8 ၈ ဒါဝိဒ်သည်ဤအကြောင်းအရာကိုကြား သောအခါ ယွာဘနှင့်တပ်မတော်ကြီး တစ်ခုလုံးကိုစေလွှတ်တော်မူ၏။-
೮ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.
9 ၉ အမ္မုန်အမျိုးသားတို့သည်လာရောက်၍ မိမိ တို့၏မြို့တော်ရဗ္ဗာမြို့အဝင်တွင်နေရာယူ ကြ၏။ စစ်ကူရောက်ရှိလာကြသောဘုရင် တို့သည်လည်းကွင်းပြင်တွင်နေရာယူ ကြကုန်၏။
೯ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ನಿಂತರು.
10 ၁၀ ယွာဘသည်မိမိအားအရှေ့မှလည်းကောင်း၊ အနောက်မှလည်းကောင်း၊ ရန်သူတပ်သားတို့ တိုက်ခိုက်ကြလိမ့်မည်ကိုသိမြင်သောအခါ ဣသရေလအမျိုးသားတို့တွင်အတော် ဆုံးစစ်သူရဲတို့ကိုရွေးချယ်ကာရှုရိတပ် ကိုမျက်နှာမူ၍နေရာယူစေ၏။-
೧೦ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಎಲ್ಲಾ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.
11 ၁၁ ကြွင်းသောသူတို့ကိုမူမိမိ၏ညီအဘိရှဲ အားကွပ်ကဲစေ၏။ အဘိရှဲသည်လည်းသူ တို့အားအမ္မုန်တပ်သားတို့ကိုမျက်နှာမူ ၍နေရာယူစေ၏။-
೧೧ಉಳಿದ ಜನರನ್ನು ತನ್ನ ತಮ್ಮನಾದ ಅಬ್ಷೈಯ ವಶಕ್ಕೆ ಕೊಟ್ಟು ಅವನಿಗೆ,
12 ၁၂ ယွာဘက``ရှုရိတပ်သားတို့သည်ငါတို့ အားအနိုင်ရလျက်နေပါမူ သင်သည်လာ ၍ငါ့အားကူညီလော့။ အကယ်၍အမ္မုန် တပ်သားတို့ကသင့်ကိုအနိုင်ရလျက် နေပါမူငါသည်လာ၍သင့်ကိုကူညီမည်။-
೧೨“ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ, ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.
13 ၁၃ စွမ်းရည်သတ္တိရှိစေကြလော့။ ငါတို့သည် မိမိတို့၏လူမျိုး၊ မိမိတို့ကိုးကွယ်သော ဘုရားသခင်၏မြို့များအတွက်ကြိုး စား၍တိုက်ခိုက်ကြကုန်အံ့။ ထာဝရ ဘုရားသည်မိမိအလိုတော်ရှိသည် အတိုင်းဖြစ်ပါစေသော'' ဟုအဘိရှဲ အားဆို၏။
೧೩ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ, ನಮ್ಮ ಪೌರುಷವನ್ನು ತೋರಿಸೋಣ. ಯೆಹೋವನು ತನಗೆ ಸರಿಕಾಣುವ ಹಾಗೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರುದ್ಧವಾಗಿ ಕಳುಹಿಸಿದನು.
14 ၁၄ ယွာဘနှင့်သူ၏တပ်သားတို့သည်ရှေ့သို့ ချီတက်တိုက်ခိုက်လျှင် ရှုရိတပ်သားတို့ သည်ထွက်ပြေးကြကုန်၏။-
೧೪ಯೋವಾಬನೂ ಅವನ ಜನರೂ ಅರಾಮ್ಯರಿಗೆ ವಿರುದ್ಧವಾಗಿ ಯುದ್ಧಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.
15 ၁၅ ယင်းသို့ထွက်ပြေးသည်ကိုအမ္မုန်တပ်သား တို့မြင်သောအခါ သူတို့သည်လည်းအဘိရှဲ ၏ရှေ့မှထွက်ပြေးကာမြို့တွင်းသို့ဆုတ် ခွာသွားကြကုန်၏။ ထိုအခါယွာဘသည် ယေရုရှလင်မြို့သို့ပြန်လေ၏။
೧೫ಅವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮನಾದ ಅಬ್ಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಯೆರೂಸಲೇಮಿಗೆ ಹೋದನು.
16 ၁၆ ရှုရိအမျိုးသားတို့သည် ဣသရေလအမျိုး သားတို့အနိုင်ရသွားကြောင်းကိုသိရှိလာ ကြသဖြင့် သူတို့သည်ဥဖရတ်မြစ်အရှေ့ ဘက်ကမ်းရှိရှုရိပြည်နယ်မှစစ်သားတို့ကို ခေါ်ယူကာ ဇောဘပြည်မှဟာဒဒေဇာမင်း တပ်မတော်တပ်မှူးရှောဗက်၏လက်အောက် တွင်ထားရှိကြ၏။-
೧೬ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಅಪಜಯ ಹೊಂದಿದ್ದೇವೆಂದು ಗೊತ್ತಾದಾಗ ಅವರು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಕರೆಕಳುಹಿಸಿದರು. ಹದರೆಜರನ ಸೇನಾಧಿಪತಿಯಾದ ಶೋಫಕನು ಅವರ ನಾಯಕನಾದನು.
17 ၁၇ ဤအကြောင်းကိုဒါဝိဒ်ကြားလေသော် ဣသရေလတပ်သားများကိုစုရုံးစေလျက် ယော်ဒန်မြစ်ကိုဖြတ်ကူးပြီးလျှင် ရှုရိတပ် များကိုမျက်နှာမူ၍နေရာယူစေတော် မူ၏။ စစ်ပွဲကားအစပြုလေပြီ။-
೧೭ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ, ಅರಾಮ್ಯರ ಸಮೀಪಕ್ಕೆ ಬಂದು ಅವರೊಡನೆ ಕಾದಾಡುವುದಕ್ಕೊಸ್ಕರ ವ್ಯೂಹ ಕಟ್ಟಿದನು.
18 ၁၈ ထိုနောက်ဣသရေလအမျိုးသားတို့သည် ရှုရိအမျိုးသားတို့အားတပ်လှန့်ထွက်ပြေး စေကြ၏။ ဒါဝိဒ်နှင့်သူ၏တပ်မတော်သည် ရထားစီးစစ်သူရဲခုနစ်ထောင်နှင့်ခြေလျင် တပ်သားလေးသောင်းတို့ကိုသုတ်သင်ပစ် လိုက်ကြသတည်း။ သူတို့သည်ရှုရိတပ်မှူး ရှောဗက်အားလည်းသုတ်သင်လိုက်ကြသည်။-
೧೮ಅರಾಮ್ಯರು ಯುದ್ಧಕ್ಕೆ ನಿಂತಾಗ ಇಸ್ರಾಯೇಲರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುಸಾವಿರ ರಥಗಳನ್ನು ಹಾಳುಮಾಡಿ, ನಲ್ವತ್ತು ಸಾವಿರ ಕಾಲಾಳುಗಳನ್ನು ಕೊಂದುಬಿಟ್ಟನು. ಅವನು ಸೇನಾಧಿಪತಿಯಾದ ಶೋಫಕನನ್ನೂ ಕೊಂದನು.
19 ၁၉ ဟာဒဒေဇာ၏လက်အောက်ခံဘုရင်တို့ သည် မိမိတို့အရေးရှုံးနိမ့်ကြပြီဖြစ် ကြောင်းသိရှိလာသောအခါ ဒါဝိဒ်နှင့် စစ်ပြေငြိမ်းရန်ဆောင်ရွက်ကြလျက် ဒါဝိဒ်၏လက်အောက်ခံများဖြစ်လာ ကြ၏။ ရှုရိအမျိုးသားတို့သည်နောင် အဘယ်အခါ၌မျှ အမ္မုန်အမျိုးသား တို့အားစစ်ကူလိုစိတ်မရှိကြတော့ပေ။
೧೯ಹದರೆಜರನ ದಾಸರು ಇಸ್ರಾಯೇಲರ ಮುಂದೆ ತಮ್ಮ ಕೈ ಸಾಗದೆಂದು ತಿಳಿದು ದಾವೀದನೊಡನೆ ಒಪ್ಪಂದ ಮಾಡಿಕೊಂಡು ಅವನ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಮನಸ್ಸು ಮಾಡಲ್ಲಿಲ್ಲ.