< ၃ ဓမ္မရာဇဝင် 19 >
1 ၁ အာဟပ်မင်းသည်ဧလိယပြုသည့်အမှုအလုံး စုံကိုလည်းကောင်း၊ ဗာလပရောဖက်တို့အသတ် ခံရကြပုံကိုလည်းကောင်းမိဖုရားယေဇ ဗေလအားပြောပြလေသည်။-
೧ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.
2 ၂ ယေဇဗေလသည်ဧလိယအား``အကယ်၍ ငါသည်နက်ဖြန်ဤအချိန်ရောက်မှ ပရောဖက် တို့အားသင်ပြုခဲ့သည့်အတိုင်းသင့်အားမပြု ပါမူ ဘုရားတို့သည်ငါ့ကိုအဆုံးစီရင်ကြ ပါစေသော'' ဟုလူလွှတ်၍ပြောကြားစေ၏။-
೨ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.
3 ၃ ဧလိယသည်ကြောက်သဖြင့် အသက်ဘေးမှ လွတ်ရန်ထွက်ပြေးလေ၏။ သူသည်မိမိ၏ အစေခံကိုခေါ်၍ယုဒပြည်၊ ဗေရရှေဘ မြို့သို့သွား၏။ ထိုမြို့တွင်အစေခံကိုထားခဲ့ပြီးလျှင်၊-
೩ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
4 ၄ တစ်နေ့လုံးတောကန္တာရတွင်ခရီးပြုလေသည်။ သူသည်သစ်ပင်အရိပ်တစ်ခုသို့ရောက်သော အခါထိုင်လျက်သေလျှင်သာ၍ကောင်း၏ဟု ဆို၍``အို ထာဝရဘုရား၊ ဤအဖြစ်ဆိုးလွန်း ပါ၏။ အကျွန်ုပ်၏အသက်ကိုရုပ်သိမ်းတော် မူပါ။ အကျွန်ုပ်သည်သေရသော်သာ၍ကောင်း ပါသေး၏'' ဟူသောဆုကိုတောင်းလေ၏။
೪ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.
5 ၅ သူသည်သစ်ပင်အောက်တွင်လှဲလျက်အိပ်ပျော် လေ၏။ ကောင်းကင်တမန်တစ်ပါးသည်သူ့ အားတို့ပြီးလျှင်``ထ၍စားလော့'' ဟုဆို၏။-
೫ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು.
6 ၆ ဧလိယသည်လှည့်၍ကြည့်လိုက်ရာခေါင်းရင်း၌ မုန့်တစ်လုံးနှင့်ရေတစ်ဘူးကိုတွေ့သဖြင့်စား သောက်ပြီးနောက်အိပ်ပြန်၏။-
೬ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು.
7 ၇ ကောင်းကင်တမန်သည်ဒုတိယအကြိမ်လာပြီး လျှင်``သင်သွားရမည့်ခရီးဝေးသောကြောင့် ထ၍စားဦးလော့'' ဟုဆို၏။-
೭ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ” ಎಂದನು.
8 ၈ ထို့ကြောင့်ဧလိယသည်ထ၍စားပြီးနောက် သန့်ရှင်းမြင့်မြတ်သောသိနာတောင်သို့ ရက်ပေါင်း လေးဆယ်တိုင်တိုင်ခြေလျင်ခရီးပြုနိုင်သော ခွန်အားကိုရရှိလေသည်။-
೮ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ
9 ၉ သူသည်ထိုတောင်သို့ရောက်သောအခါဂူထဲ သို့ဝင်၍အိပ်၏။ ထိုအခါထာဝရဘုရားကသူ့အား``ဧလိယ၊ သင်သည်ဤအရပ်သို့အဘယ်ကြောင့်ရောက်လာ သနည်း'' ဟုမေးတော်မူ၏။
೯ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಯೆಹೋವನಿಂದ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
10 ၁၀ ဧလိယက``အနန္တတန်ခိုးရှင်ထာဝရဘုရားသခင်၊ အကျွန်ုပ်သည်ကိုယ်တော်တစ်ပါးတည်း ကိုသာလျှင် အစဉ်ဝတ်ပြုကိုးကွယ်ပါ၏။ ဣသ ရေလပြည်သူတို့မူကားကိုယ်တော်နှင့်ပြုထား သည့်ပဋိညာဉ်ကိုချိုးဖောက်လျက် ကိုယ်တော် ၏ယဇ်ပလ္လင်များကိုဖြိုဖျက်ကာကိုယ်တော်၏ ပရောဖက်တို့ကိုသတ်ကြပါ၏။ တစ်ဦးတည်း သာမသေဘဲကျန်ရှိသောအကျွန်ုပ်၏အသက် အန္တရာယ်ကိုပင်ရှာကြံလျက်နေကြပါ၏'' ဟု လျှောက်၏။
೧೦ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
11 ၁၁ ထိုအခါထာဝရဘုရားကသူ့အား``ဂူပြင် သို့ထွက်၍တောင်ထိပ်ပေါ်၌ငါ၏အရှေ့မျက် မှောက်တွင်ရပ်နေလော့'' ဟုမိန့်တော်မူ၏။ ထို့ နောက်ထာဝရဘုရားသည်သူ၏အနီးမှ ဖြတ်ကြွတော်မူ၍ လေပြင်းမုန်တိုင်းကိုတိုက် ခတ်စေတော်မူ၏။ သို့ဖြစ်၍တောင်များသည် ပြိုကွဲကြလျက်ကျောက်တို့သည်လည်းကြေ မွသွားလေသည်။ သို့ရာတွင်ထာဝရဘုရား သည်ထိုလေမုန်တိုင်းထဲ၌ရှိတော်မမူ။ လေ အတိုက်ရပ်သောအခါမြေငလျင်လှုပ်လေ ၏။ သို့ရာတွင်ထိုမြေငလျင်ထဲ၌လည်း ထာဝရဘုရားရှိတော်မမူ။-
೧೧ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.
12 ၁၂ မြေငလျင်လှုပ်ပြီးနောက်မီးလျှံတောက် လောင်လေသည်။ သို့ရာတွင်ထိုမီးလျှံထဲ၌ လည်းထာဝရဘုရားရှိတော်မမူ။ မီးလျှံ တောက်လောင်ပြီးနောက်ဖြည်းညှင်းသောအသံ ပေါ်ထွက်လာ၏။
೧೨ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು,
13 ၁၃ ထိုအသံကိုကြားသောအခါ ဧလိယသည် မိမိ၏မျက်နှာကိုဝတ်လုံဖြင့်အုပ်၍ထွက်သွား ပြီးလျှင်ဂူဝတွင်ရပ်နေ၏။ ထိုအခါ``ဧလိယ၊ သင်သည်အဘယ်ကြောင့်ဤအရပ်သို့ရောက်ရှိ လာသနည်း'' ဟုမေးသံကိုကြားရ၏။
೧೩ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
14 ၁၄ ဧလိယက``အနန္တတန်ခိုးရှင်ထာဝရဘုရားသခင်၊ အကျွန်ုပ်သည်ကိုယ်တော်တစ်ပါးတည်း ကိုသာလျှင် အစဉ်ဝတ်ပြုကိုးကွယ်ပါ၏။ ဣသရေလပြည်သူတို့မူကားကိုယ်တော်နှင့် ပြုထားသည့်ပဋိညာဉ်ကိုချိုးဖောက်လျက် ကိုယ်တော်၏ယဇ်ပလ္လင်များကိုဖြိုဖျက်ကာ ကိုယ်တော်၏ပရောဖက်တို့ကိုသတ်ကြပါ၏။ တစ်ဦးတည်းသာလျှင်မသေဘဲ ကျန်ရှိသော အကျွန်ုပ်၏အသက်အန္တရာယ်ကိုရှာကြံနေ ကြပါ၏'' ဟုလျှောက်၏။
೧೪ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
15 ၁၅ ထာဝရဘုရားက``သင်သည်ဒမာသက်မြို့အနီး တောကန္တာရသို့ပြန်သွားပြီးနောက် ထိုမြို့သို့ဝင် ၍ဟာဇေလအားရှုရိဘုရင်အဖြစ်ဘိသိက် ပေးလော့။-
೧೫ಆಗ ಯೆಹೋವನು ಅವನಿಗೆ, “ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು, ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು.
16 ၁၆ နိမ်ရှိ၏သားယေဟုကိုဣသရေလဘုရင် အဖြစ်ဘိသိက်ပေးလော့။ အာဗေလမဟောလ မြို့သားရှာဖတ်၏သားဧလိရှဲကိုသင်၏ အရိုက်အရာဆက်ခံရန်ပရောဖက်အဖြစ် ဘိသိက်ပေးလော့။-
೧೬ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.
17 ၁၇ ဟာဇေလ၏ဋ္ဌားဘေးမှလွတ်မြောက်သူကို ယေဟုသတ်လိမ့်မည်။ ယေဟုလက်မှလွတ် မြောက်သူကိုဧလိရှဲသတ်လိမ့်မည်။-
೧೭ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.
18 ၁၈ သို့ရာတွင်ငါ့အားသစ္စာစောင့်၍ဗာလအားဦး မညွှတ်သူ၊ သူ၏ရုပ်တုကိုမနမ်းရှုပ်သူလူ ပေါင်းခုနစ်ထောင်တို့ကို ဣသရေလပြည်တွင် ကျန်ကြွင်းစေမည်'' ဟုမိန့်တော်မူ၏။
೧೮ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.
19 ၁၉ ဧလိယသည်ထိုအရပ်မှထွက်ခွာသွားသော အခါ နွားတစ်ရှဉ်းနှင့်လယ်ထွန်နေသော ဧလိရှဲ ကိုတွေ့လေသည်။ သူ၏ရှေ့တွင်နွားတစ်ဆယ့် တစ်ရှဉ်းရှိ၍သူသည်နောက်ဆုံးနွားတစ်ရှဉ်း ဖြင့်လယ်ထွန်၍နေသတည်း။ ဧလိယသည် မိမိ၏ဝတ်လုံကိုချွတ်၍ဧလိရှဲ၏အပေါ် တွင်တင်လေသည်။-
೧೯ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
20 ၂၀ ထိုအခါဧလိရှဲသည်မိမိ၏နွားများကို ထားခဲ့၍ ဧလိယ၏နောက်သို့လိုက်ပြီး လျှင်``အကျွန်ုပ်၏မိဘထံသို့သွား၍နှုတ် ဆက်ခွင့်ပြုပါ။ ထို့နောက်အရှင်နှင့်အတူ လိုက်ပါမည်'' ဟုပြော၏။ ဧလိယက``ကောင်းပြီ၊ သွားလော့။ သင့်အား ငါမဆီးတားပါ'' ဟုဆို၏။
೨೦ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.
21 ၂၁ ထိုအခါဧလိရှဲသည် မိမိ၏နွားနှစ်ကောင်ကို သတ်ပြီးလျှင် နွားထမ်းပိုးကိုထင်းလုပ်၍ချက်၏။ ထိုနောက်အမဲသားဟင်းကိုလူတို့အားကျွေး မွေးပြီးလျှင် ဧလိယ၏နောက်သို့တပည့် အဖြစ်လိုက်သွားလေသည်။
೨೧ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.