< ၃ ဓမ္မရာဇဝင် 2 >
1 ၁ ဒါဝိဒ်သည်မိမိကွယ်လွန်ချိန်နီးသောအခါ သားတော်ရှောလမုန်ကိုခေါ်၍နောက်ဆုံးညွှန် ကြားချက်များကိုပေးလေသည်။-
ಆದರೆ ದಾವೀದನ ಸಾಯುವ ಕಾಲ ಸಮೀಪಿಸಿದ್ದರಿಂದ ಅವನು ತನ್ನ ಮಗ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ,
2 ၂ မင်းကြီးက``ငါသေရမည့်အချိန်ရောက်ပြီ။ သင်သည်မိမိအစွမ်းကိုယုံ၍ဇွဲသတ္တိရှိစွာ၊-
“ಭೂಮಿಯಲ್ಲಿರುವವರೆಲ್ಲರು ಹೋಗುವ ಮಾರ್ಗವಾಗಿ ನಾನು ಹೋಗುತ್ತೇನೆ. ನೀನು ಬಲಗೊಂಡು ಶೂರನಾಗಿರು.
3 ၃ သင်၏ဘုရားသခင်ထာဝရဘုရား စေခိုင်း သည့်အတိုင်းပြုလော့။ မောရှေ၏ပညတ်ကျမ်း တွင်ဖော်ပြပါရှိသည့်အတိုင်း ကိုယ်တော်၏ ပညတ်တော်များနှင့်အမိန့်တော်မှန်သမျှကို လိုက်နာလော့။ သို့မှသာသင်ပြုလေရာရာ၊ သွားလေရာရာ၌အောင်မြင်လိမ့်မည်။-
ನಿನ್ನ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಅನುಸರಿಸಿ ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ನಿಯಮದಲ್ಲಿ ಬರೆದಿರುವ ಅವರ ಆಜ್ಞಾನಿಯಮಗಳಿಗೂ, ವಿಧಿನಿರ್ಣಯಗಳಿಗೂ ವಿಧೇಯನಾಗಿರು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ, ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿಯೂ ಯಶಸ್ವಿಯಾಗುವೆ.
4 ၄ သင်သည်ထာဝရဘုရားကိုနာခံလျှင် ကိုယ် တော်သည်ငါ့အားပေးတော်မူသောကတိ တော်ကိုတည်စေတော်မူလိမ့်မည်။ ကိုယ်တော် က`သင်၏သားမြေးတို့သည်ငါ၏အမိန့် တော်တို့ကိုကိုယ်စွမ်းစိတ်စွမ်းရှိသမျှနှင့် တစ်သဝေမတိမ်းလိုက်နာရန်သတိပြု သမျှကာလပတ်လုံး ငါသည်သူတို့အား ဣသရေလပြည်ကိုအုပ်စိုးစေတော်မူ မည်'' ဟုမိန့်တော်မူခဲ့၏။
ಯೆಹೋವ ದೇವರು, ‘ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನನ್ನ ಮುಂದೆ ನಂಬಿಗಸ್ತರಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಅವರು ಇಸ್ರಾಯೇಲಿನ ಸಿಂಹಾಸನದ ಮೇಲೆ ತಪ್ಪದೇ ಕುಳಿತುಕೊಳ್ಳುವರು,’ ಎಂದು ನನಗೆ ಹೇಳಿದ ತಮ್ಮ ವಾಕ್ಯವನ್ನು ಸ್ಥಿರಪಡಿಸುವರು.
5 ၅ ``ထို့ပြင်သင့်အားမှာကြားရန်ကိစ္စတစ်ခု ရှိသေး၏။ ယွာဘသည်ဣသရေလတပ်မ တော်ဗိုလ်ချုပ်နှစ်ဦးဖြစ်သောနေရ၏သား အာဗနာနှင့်ယေသာ၏သားအာမသတို့ ကိုသတ်ခြင်းအားဖြင့် ငါ့အားအဘယ်သို့ ပြုခဲ့ကြောင်းသင်မှတ်မိပါလိမ့်မည်။ စစ် ဖြစ်ချိန်ကသတ်ဖြတ်မှုများအတွက် လက်စားချေသည့်အနေဖြင့် သူသည်ထို သူတို့အားငြိမ်းချမ်းနေချိန်၌အဘယ် သို့သတ်ဖြတ်ခဲ့သည်ကိုလည်းသင်မှတ်မိ ပါလိမ့်မည်။ သူသည်အပြစ်မဲ့သူများ အားသတ်ခဲ့သည်။ သူပြုခဲ့သည့်အမှု အတွက်ယခုငါ့မှာတာဝန်ရှိသဖြင့် သူ၏ဆိုးမွေကိုငါခံရ၏။-
“ಇದಲ್ಲದೆ ಚೆರೂಯಳ ಮಗ ಯೋವಾಬನು ನನಗೂ, ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗ ಅಬ್ನೇರನಿಗೂ, ಯೆತೆರನ ಮಗ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಅವನು ಅವರನ್ನು ಕೊಂದು, ಸಮಾಧಾನ ಕಾಲದಲ್ಲಿ ಯುದ್ಧದ ರಕ್ತವನ್ನು ಚೆಲ್ಲಿ, ತನ್ನ ನಡುವಲ್ಲಿರುವ ನಡುಕಟ್ಟಿನ ಮೇಲೆಯೂ, ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.
6 ၆ သင်သည်မိမိပြုရမည့်အမှုကိုသိပေသည်။ သူ့အားသဘာဝအလျောက်မသေစေနှင့်။ (Sheol )
ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರಮಾಡಿ, ಅವನ ನರೆತಲೆಯನ್ನು ಸಮಾಧಾನದಿಂದ ಸಮಾಧಿ ಸೇರದಂತೆ ಮಾಡು. (Sheol )
7 ၇ ``ဂိလဒ်ပြည်သားဗာဇိလဲ၏သားများကို မူ ကရုဏာထား၍ကြည့်ရှုစောင့်ရှောက်လော့။ အဘယ်ကြောင့်ဆိုသော်သင်၏အစ်ကိုအဗ ရှလုံ၏ဘေးမှငါထွက်ပြေးရစဉ်အခါက သူတို့သည်ငါ့အားကျေးဇူးပြုခဲ့ကြ သောကြောင့်ဖြစ်၏။
“ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ದಯೆತೋರಿಸು. ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಏಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.
8 ၈ ``ဗင်္ယာမိန်ပြည်၊ ဗာဟုရိမ်မြို့သားဂေရ၏ သားရှိမိတစ်ယောက်လည်းရှိသေး၏။ မဟာနိမ် မြို့သို့ငါသွားသည့်နေ့ကသူသည်ငါ့ကို ကြမ်းတမ်းစွာကျိန်ဆဲသော်လည်း ယော်ဒန် မြစ်သို့လာ၍ငါ့အားခရီးဦးကြိုပြုသော အခါ၌ ငါသည်သူ့အားကွပ်မျက်မည်မ ဟုတ်ကြောင်းထာဝရဘုရား၏နာမ တော်ကိုတိုင်တည်၍ကျိန်ဆိုကတိပြု ခဲ့သည်။-
“ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾಮೀನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನ್ ನದಿ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದ್ದರಿಂದ, ‘ನಾನು ನಿನ್ನನ್ನು ಖಡ್ಗದಿಂದ ಕೊಲ್ಲುವುದಿಲ್ಲ,’ ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆಯಿಟ್ಟೆನು.
9 ၉ သို့ရာတွင်သင်သည်သူ့ကိုအပြစ်ဒဏ်မစီ ရင်ဘဲမနေနှင့်။ ပြုရမည့်အမှုကိုသင်သိ သည်အတိုင်းသူ့အားသေဒဏ်စီရင်ရမည်'' ဟုမှာကြားတော်မူ၏။ (Sheol )
ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ನೀನು ಬುದ್ಧಿವಂತನಾಗಿರುವುದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ. ಆದರೆ ಅವನ ನರೆತಲೆಯನ್ನು ರಕ್ತದಿಂದ ಸಮಾಧಿ ಸೇರುವಂತೆ ಮಾಡು,” ಎಂದನು. (Sheol )
10 ၁၀ ဒါဝိဒ်ကွယ်လွန်သောအခါ သူ့ကိုယေရုရှလင် မြို့တွင်သင်္ဂြိုဟ်ကြ၏။-
ಹೀಗೆಯೇ ದಾವೀದನು ಮರಣಹೊಂದಿ ತನ್ನ ಪಿತೃಗಳ ಜೊತೆ ಸೇರಿದನು. ದಾವೀದನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು.
11 ၁၁ သူသည်ဟေဗြုန်မြို့၌ခုနစ်နှစ်၊ ယေရုရှလင် မြို့၌သုံးဆယ့်သုံးနှစ်၊ စုစုပေါင်းအနှစ်လေး ဆယ်ဣသရေလဘုရင်အဖြစ်ဖြင့်နန်းစံ တော်မူ၏။-
ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರ್ಷಗಳು. ಏಳು ವರ್ಷ ಹೆಬ್ರೋನಿನಲ್ಲಿ ಆಳಿದನು. ಮೂವತ್ತಮೂರು ವರ್ಷ ಯೆರೂಸಲೇಮಿನಲ್ಲಿ ಆಳಿದನು.
12 ၁၂ ရှောလမုန်သည်ခမည်းတော်၏အရိုက်အရာ ကိုဆက်ခံ၍နန်းတက်လေသည်။ သူ၏တန်ခိုး အာဏာသည်လည်းတည်တံ့ခိုင်မြဲ၍ လာ၏။
ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ಕುಳಿತನು. ಅವನ ರಾಜ್ಯವು ಬಹು ಸ್ಥಿರವಾಗಿತ್ತು.
13 ၁၃ ထိုနောက်ဟ္ဂိတ်၏သားအဒေါနိယသည် ရှောလမုန်၏မယ်တော်ဗာသရှေဘထံသို့ သွား၏။ ဗာသရှေဘက``သင်ယခုလာသည် မှာမိတ်ဆွေအနေနှင့်လော့'' ဟုမေး၏။ အဒေါနိယက``ဟုတ်ပါသည်'' ဟု ပြန်ပြော ပြီးနောက်၊-
ಆದರೆ ಹಗ್ಗೀತಳ ಮಗ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಬತ್ಷೆಬೆಳು ಅವನಿಗೆ, “ಸಮಾಧಾನವಾಗಿ ಬರುತ್ತೀಯೋ?” ಎಂದಳು. ಅದಕ್ಕೆ ಅವನು, “ಸಮಾಧಾನವೇ,” ಎಂದನು.
14 ၁၄ ``အကျွန်ုပ်မှာမယ်တော်အားပန်ကြားစရာ တစ်ခုရှိပါသည်'' ဟုဆို၏။ မယ်တော်က``အဘယ်အရာနည်း'' ဟုမေး၏။
ಅವನು, “ನಿನಗೆ ಹೇಳತಕ್ಕ ಮಾತಿದೆ,” ಎಂದನು. ಬತ್ಷೆಬೆಳು, “ಹೇಳು,” ಎಂದಳು.
15 ၁၅ အဒေါနိယက``အကျွန်ုပ်သည်ဘုရင်ဖြစ် သင့်သည်။ ယင်းသို့ဖြစ်လိမ့်မည်ဟုလည်း ဣသရေလအမျိုးသားတိုင်းမျှော်လင့်ခဲ့ သည်ကိုမယ်တော်သိပါ၏။ သို့ရာတွင် ထာဝရဘုရား၏အလိုတော်အရ အကျွန်ုပ် သည်ဘုရင်မဖြစ်ဘဲအကျွန်ုပ်၏ညီတော် ကဘုရင်ဖြစ်လာပါ၏။-
ಆಗ ಅವನು, “ರಾಜ್ಯವು ನನ್ನದಾಗಿತ್ತೆಂದೂ, ನಾನು ಆಳುವ ಸಮಸ್ತ ಇಸ್ರಾಯೇಲರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದೂ ನೀನು ಬಲ್ಲೆ. ಆದರೆ ಎಲ್ಲವೂ ಬದಲಾಗಿ, ರಾಜ್ಯವು ನನ್ನ ಸಹೋದರನಿಗೆ ದೊರಕಿತು. ಏಕೆಂದರೆ ಅದು ಅವನಿಗೆ ಯೆಹೋವ ದೇವರಿಂದ ಉಂಟಾಯಿತು.
16 ၁၆ ယခုကျွန်ုပ်တွင်မယ်တော်အားပန်ကြား စရာရှိပါသည်။ ကျေးဇူးပြု၍မငြင်း ပယ်ပါနှင့်'' ဟုပြန်ပြော၏။ ဗာသရှေဘက``အဘယ်အရာနည်း'' ဟု မေး၏။
ಆದರೆ ಈಗ ನನಗೆ ಒಂದು ಬಿನ್ನಹವಿದೆ. ಅದನ್ನು ತಿರಸ್ಕರಿಸಬೇಡ,” ಎಂದನು. ಬತ್ಷೆಬೆಳು ಅವನಿಗೆ, “ಅದೇನು ಹೇಳು,” ಎಂದಳು.
17 ၁၇ အဒေါနိယက``ရှုနင်မြို့သူအဘိရှက်ကို အကျွန်ုပ်နှင့်ပေးစားထိမ်းမြားရန်ရှောလမုန် မင်းအားကျေးဇူးပြု၍လျှောက်ထားပေးပါ။ သူသည်မယ်တော်၏စကားကိုငြင်းပယ်လိမ့် မည်မဟုတ်ကြောင်း အကျွန်ုပ်သိပါသည်'' ဟု ပြန်ပြော၏။
ಆಗ ಅವನು, “ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು. ಏಕೆಂದರೆ ಅವನು ನಿನಗೆ ಆಗುವುದಿಲ್ಲವೆಂದು ಹೇಳುವುದಿಲ್ಲ,” ಎಂದನು.
18 ၁၈ ဗာသရှေဘကလည်း``ကောင်းပြီ။ သင်၏ အတွက်မင်းကြီးအားငါလျှောက်ထား မည်'' ဟုဆို၏။
ಅದಕ್ಕೆ ಬತ್ಷೆಬೆಳು, “ಒಳ್ಳೆಯದು, ನಿನಗೋಸ್ಕರ ಅರಸನ ಸಂಗಡ ಮಾತನಾಡುವೆನು,” ಎಂದಳು.
19 ၁၉ ဗာသရှေဘသည်အဒေါနိယအတွက် လျှောက်ထားရန် မင်းကြီးထံသို့သွားလေ၏။ မင်းကြီးသည်လည်းမယ်တော်ကိုခရီးဦး ကြိုပြုအံ့သောငှာ ထ၍ဦးညွှတ်ပြီးလျှင် ရာဇပလ္လင်ပေါ်တွင်ထိုင်တော်မူ၏။ ထို့နောက် အခြားပလ္လင်တစ်ခုခုကိုယူခဲ့စေ၍ မယ် တော်အားမိမိ၏လက်ယာဘက်တွင်ထိုင်စေ တော်မူ၏။-
ಆದ್ದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವುದಕ್ಕೆ ಅರಸನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು, ಅವಳಿಗೆ ಅಡ್ಡಬಿದ್ದು, ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜಮಾತೆಗೋಸ್ಕರ ಆಸನವನ್ನು ಹಾಕಿಸಿದನು. ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.
20 ၂၀ မယ်တော်က``သေးငယ်သောဆုကျေးဇူးတစ် ခုတောင်းလိုပါသည်။ မငြင်းပါနှင့်'' ဟု လျှောက်၏။ မင်းကြီးက``မယ်တော်၊ တောင်းပါ၊ အကျွန်ုပ် မငြင်းပါ'' ဟုမိန့်တော်မူ၏။
ಅವಳು ಅವನಿಗೆ, “ನಿನ್ನಿಂದ ಒಂದು ಚಿಕ್ಕ ಬಿನ್ನಹವಿದೆ, ಆಗುವುದಿಲ್ಲವೆಂದು ಹೇಳಬೇಡ,” ಎಂದಳು. ಅರಸನು ಅವಳಿಗೆ, “ನನ್ನ ತಾಯಿಯೇ ಕೇಳು. ಏಕೆಂದರೆ ನಾನು ನಿನ್ನ ಮಾತಿಗೆ ಆಗುವುದಿಲ್ಲವೆಂದು ಹೇಳುವುದಿಲ್ಲ,” ಎಂದನು.
21 ၂၁ ထိုအခါမယ်တော်က``အဘိရှက်ကိုနောင်တော် အဒေါနိယအားပေးစားတော်မူပါ'' ဟု တောင်းလေ၏။
ಅದಕ್ಕವಳು, “ಶೂನೇಮ್ಯಳಾದ ಅಬೀಷಗಳನ್ನು ನಿನ್ನ ಅಣ್ಣ ಅದೋನೀಯನಿಗೆ ಹೆಂಡತಿಯಾಗಲು ಅಪ್ಪಣೆಯಾಗಲಿ,” ಎಂದಳು.
22 ၂၂ မင်းကြီးက``မယ်တော်သည်အဘယ်ကြောင့် သူ၏အတွက် အဘိရှက်ကိုသာလျှင်တောင်း ပါသနည်း။ ထီးနန်းကိုပါတောင်းခံပါလော့။ အမှန်ကိုဆိုရလျှင်သူသည်အကျွန်ုပ်၏ နောင်တော်ဖြစ်၍ အဗျာသာနှင့်ယွာဘတို့ သည်လည်းသူ၏ဘက်တော်သားများဖြစ် ကြပါသည်'' ဟုမိန့်တော်မူ၏။-
ಅರಸನಾದ ಸೊಲೊಮೋನನು ತನ್ನ ತಾಯಿಗೆ ಉತ್ತರವಾಗಿ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನೀನು ಕೇಳುವುದೇಕೆ? ರಾಜ್ಯವನ್ನೂ ಕೇಳು. ಏಕೆಂದರೆ ಅವನು ನನ್ನ ಅಣ್ಣನಾಗಿದ್ದಾನೆ. ಯಾಜಕ ಅಬಿಯಾತರನಿಗೋಸ್ಕರವೂ, ಚೆರೂಯಳ ಮಗ ಯೋವಾಬನಿಗೋಸ್ಕರವೂ ಕೇಳು,” ಎಂದನು.
23 ၂၃ ထို့နောက်ရှောလမုန်က``ဤအမှုကိုပြုသည့် အတွက် အဒေါနိယအားငါအသက်မသေ စေလျှင် ဘုရားသခင်သည်ငါ့အားအဆုံး စီရင်တော်မူပါစေသော။-
ತರುವಾಯ ಅರಸನಾದ ಸೊಲೊಮೋನನು, “ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ, ನನಗೆ ದೇವರು ಹಾಗೆಯೂ, ಅದಕ್ಕಿಂತಲೂ ಅಧಿಕವಾಗಿಯೂ ಮಾಡಲಿ,” ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆ ಇಟ್ಟನು.
24 ၂၄ ထာဝရဘုရားသည်ငါ့အားခမည်းတော် ဒါဝိဒ်၏ရာဇပလ္လင်ပေါ်တွင် တည်မြဲစွာတည် ၍ထားတော်မူလေပြီ။ ကိုယ်တော်သည်မိမိ ၏ကတိတော်ရှိသည့်အတိုင်း ငါနှင့်ငါ၏ သားမြေးတို့အားနိုင်ငံတော်ကိုပေးတော် မူလေပြီ။ အဒေါနိယသည်ယနေ့ပင်လျှင် သေရမည်ဖြစ်ကြောင်း အသက်ရှင်တော်မူ သောထာဝရဘုရားကိုတိုင်တည်၍ငါ ကျိန်ဆိုပါ၏'' ဟုအလေးအနက်အဋ္ဌိ ဋ္ဌာန်ပြုတော်မူ၏။
“ಹಾಗಾದರೆ ನನ್ನನ್ನು ಸ್ಥಿರಪಡಿಸಿ, ನನ್ನ ತಂದೆ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡಿಸಿ, ತಾವು ಮಾತುಕೊಟ್ಟ ಪ್ರಕಾರ ನನಗೆ ಮನೆತನ ಕಟ್ಟಿಸಿದ ಯೆಹೋವ ದೇವರ ಜೀವದಾಣೆ, ಈ ಹೊತ್ತು ಅದೋನೀಯನು ಸಾಯಬೇಕು,” ಎಂದನು.
25 ၂၅ ထို့ကြောင့်ရှောလမုန်မင်းအမိန့်ပေးတော်မူ သဖြင့် ဗေနာယသည်သွား၍အဒေါနိယ အားကွပ်မျက်လေသည်။
ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನನ್ನು ಕಳುಹಿಸಿದನು. ಇವನು ಹೋಗಿ ಅದೋನೀಯನನ್ನು ಕೊಂದುಹಾಕಿದನು.
26 ၂၆ ထို့နောက်ရှောလမုန်မင်းသည် ယဇ်ပုရောဟိတ် အဗျာသာအား``အာနသုတ်မြို့ရှိသင်၏ ကျေးလက်နေအိမ်သို့သွားလော့။ သင်သည် သေဒဏ်ခံထိုက်သူဖြစ်ပေသည်။ သို့ရာတွင် သင်သည်ငါ၏ခမည်းတော်ဒါဝိဒ်လက်ထက်၌ ထာဝရဘုရား၏ပဋိညာဉ်သေတ္တာတော်ကို တာဝန်ယူစောင့်ထိန်းရသူ၊ မင်းကြီးနှင့်အတူ ဆင်းရဲဒုက္ခအပေါင်းကိုခံခဲ့သူဖြစ်သဖြင့် ယခုသင့်အားငါမသတ်လိုပြီ'' ဟု မိန့်တော်မူ၏။-
ಯಾಜಕನಾದ ಅಬಿಯಾತರನಿಗೆ ಅರಸನು, “ನೀನು ಅನಾತೋತಿನಲ್ಲಿರುವ ನಿನ್ನ ಹೊಲಗಳಿಗೆ ಹೋಗು. ಏಕೆಂದರೆ ನೀನು ಸಾವಿಗೆ ಪಾತ್ರನಾಗಿದ್ದೀಯೆ. ಆದರೆ ನೀನು ಸಾರ್ವಭೌಮ ಯೆಹೋವ ದೇವರ ಮಂಜೂಷವನ್ನು ನನ್ನ ತಂದೆ ದಾವೀದನ ಮುಂದೆ ಹೊತ್ತದ್ದರಿಂದಲೂ, ನನ್ನ ತಂದೆಯ ಎಲ್ಲಾ ಕಷ್ಟಗಳಲ್ಲಿ ನೀನು ಪಾಲುಗಾರನಾಗಿದ್ದರಿಂದಲೂ, ನಾನು ಈಗ ನಿನ್ನನ್ನು ಸಾಯಿಸುವುದಿಲ್ಲ,” ಎಂದನು.
27 ၂၇ ထို့နောက်ရှောလမုန်သည်အဗျာသာအား ထာဝရဘုရား၏အမှုတော်ဆောင်ယဇ် ပုရောဟိတ်ရာထူးမှထုတ်ပယ်တော်မူ၏။ ဤသို့ဖြင့်မင်းကြီးသည်ရှိလောမြို့၌ ယဇ်ပုရောဟိတ်ဧလိနှင့်သားမြေးတို့ကို အကြောင်းပြု၍ ထာဝရဘုရားမိန့်တော် မူသောစကားတော်တို့ကိုအကောင် အထည်ပေါ်စေတော်မူသတည်း။
ಹೀಗೆಯೇ ಯೆಹೋವ ದೇವರು ಶೀಲೋವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವುದಕ್ಕೆ ಸೊಲೊಮೋನನು ಅಬಿಯಾತರನನ್ನು ಯೆಹೋವ ದೇವರಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.
28 ၂၈ ဤအဖြစ်အပျက်ကိုယွာဘကြားသိ သောအခါ ထာဝရဘုရားစံတော်မူရာ တဲတော်သို့ထွက်ပြေးပြီးလျှင်ယဇ်ပလ္လင် ထောင့်စွယ်များ ကိုဆုပ်ကိုင်၍ထား၏။ (သူသည်အဒေါနိယ အားကူညီခဲ့သော်လည်းအဗရှလုံကိုမူ မကူညီခဲ့၊-)
ಆಗ ಈ ಸುದ್ದಿ ಯೋವಾಬನಿಗೆ ಬಂತು. ಏಕೆಂದರೆ ಯೋವಾಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ, ಅದೋನೀಯನ ಹಿಂದೆ ಹೋದನು. ಆದ್ದರಿಂದ ಯೋವಾಬನು ಯೆಹೋವ ದೇವರ ಮಂದಿರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.
29 ၂၉ သူသည်အဒေါနိယစံတော်မူရာတဲတော် သို့ထွက်ပြေးပြီးလျှင် ယဇ်ပလ္လင်အနီးတွင် ရပ်လျက်နေကြောင်းသတင်းရရှိသောအခါ ရှောလမုန်မင်းသည်ယွာဘအားအဘယ် ကြောင့်ယဇ်ပလ္လင်သို့ထွက်ပြေးရသည်ကိုလူ လွှတ်၍မေးတော်မူ၏။ ထိုအခါယွာဘက မိမိသည်ရှောလမုန်ကိုကြောက်သဖြင့် ထာ ဝရဘုရားထံတော်သို့ထွက်ပြေးရခြင်း ဖြစ်ကြောင်းပြန်ကြားလျှောက်ထားလေသည်။ ထို့ကြောင့်ရှောလမုန်မင်းသည်ဗေနာယ ကိုစေလွှတ်၍ယွာဘအားကွပ်မျက်စေ တော်မူ၏။-
ಯೋವಾಬನು ಯೆಹೋವ ದೇವರ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಬಳಿಯಲ್ಲಿ ಇದ್ದಾನೆ, ಎಂಬ ಸುದ್ದಿ ಅರಸನಾದ ಸೊಲೊಮೋನನಿಗೆ ತಿಳಿಯಿತು. ಆಗ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ, “ನೀನು ಹೋಗಿ ಅವನನ್ನು ಕೊಂದುಹಾಕು,” ಎಂದನು.
30 ၃၀ ဗေနာယသည်ထာဝရဘုရားစံတော်မူ ရာတဲတော်သို့သွား၍ ယွာဘအား``အပြင် သို့ထွက်ခဲ့လော့။ မင်းကြီးအမိန့်တော်ရှိ သည်'' ဟုဆို၏။ ယွာဘက``ငါမလာလို။ ဤအရပ်တွင်ပင် အသေခံမည်'' ဟုပြန်ပြော၏။ ဗေနာယသည်လည်းမင်းကြီးထံပြန်သွား ပြီးလျှင် ယွာဘပြောသည့်စကားကိုပြန် ကြားလျှောက်ထားလေသည်။
ಬೆನಾಯನು ಯೆಹೋವ ದೇವರ ಗುಡಾರಕ್ಕೆ ಬಂದು ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ,” ಎಂದನು. ಅದಕ್ಕವನು, “ಇಲ್ಲ, ಇಲ್ಲಿಯೇ ಸಾಯುತ್ತೇನೆ,” ಎಂದನು. ಬೆನಾಯನು ಅರಸನ ಬಳಿಗೆ ತಿರುಗಿ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.
31 ၃၁ ရှောလမုန်မင်းကလည်း``ယွာဘပြောသည် အတိုင်းပြုလော့။ သူ့ကိုကွပ်မျက်၍သင်္ဂြိုဟ် လိုက်လော့။ ထိုအခါအပြစ်မဲ့သူများအား ယွာဘသတ်ဖြတ်ခဲ့သည့်အပြစ်အတွက် ငါ ၌သော်လည်းကောင်း၊ ဒါဝိဒ်၏အခြားသား မြေးများ၌သော်လည်းကောင်းတာဝန်ရှိ တော်မူမည်မဟုတ်။-
ಅರಸನು ಬೆನಾಯನಿಗೆ, “ಅವನು ಹೇಳಿದ ಪ್ರಕಾರ ಮಾಡು. ಯೋವಾಬನು ನಿನ್ನ ಹಾಗೂ ನನ್ನ ತಂದೆಯ ಮನೆಯವರ ನಿರಪರಾಧ ರಕ್ತವನ್ನು ಚೆಲ್ಲಿದ ದೋಷವನ್ನು ತೊಲಗಿಸುವ ಹಾಗೆ ಅವನನ್ನು ಕೊಂದು, ಅವನ ಶವವನ್ನು ಸಮಾಧಿಮಾಡು.
32 ၃၂ ငါ၏ခမည်းတော်မသိဘဲကူးလွန်ခဲ့သည့် လူသတ်မှုများအတွက် ထာဝရဘုရားသည် ယွာဘအားအပြစ်ဒဏ်စီရင်တော်မူလိမ့်မည်။ ယွာဘသည်မိမိထက်သာလွန်ကောင်းမြတ် သည့်ဣသရေလတပ်မတော်ဗိုလ်ချုပ်အာဗနာ နှင့်ယုဒတပ်မတော်ဗိုလ်ချုပ်အာမသတည်း ဟူသောအပြစ်မဲ့သူနှစ်ဦးအားသတ်ဖြတ် ခဲ့ပေသည်။-
ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.
33 ၃၃ ထိုလူသတ်မှုများအတွက်ယွာဘနှင့်သူ၏ သားမြေးတို့သည် ထာဝစဉ်အပြစ်ဒဏ်ခံရ ကြလတ္တံ့။ သို့ရာတွင်ဒါဝိဒ်၏အရိုက်အရာ ဆက်ခံကြသောသားမြေးတို့ကိုမူကား ထာဝရဘုရားသည်အစဉ်အမြဲအောင်ပွဲ ခံစေတော်မူလိမ့်မည်'' ဟုမိန့်တော်မူ၏။
ಆದ್ದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆಯೂ, ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವುದು. ಆದರೆ ದಾವೀದನ ಮೇಲೆಯೂ, ಅವನ ಸಂತಾನದವರ ಮೇಲೆಯೂ, ಅವನ ಮನೆಯ ಮೇಲೆಯೂ, ಅವನ ಸಿಂಹಾಸನದ ಮೇಲೆಯೂ ಯೆಹೋವ ದೇವರಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವುದು,” ಎಂದನು.
34 ၃၄ ထို့ကြောင့်ဗေနာယသည်ထာဝရဘုရား စံတော်မူရာတဲတော်သို့သွား၍ယွာဘ အားသတ်ပြီးလျှင် ကျေးလက်ရှိသူ၏ နေအိမ်တွင်သင်္ဂြိုဟ်လိုက်လေသည်။-
ಹಾಗೆಯೇ ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದುಹಾಕಿದನು. ಅವನ ಶವಕ್ಕೆ ಮರುಭೂಮಿಯಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.
35 ၃၅ မင်းကြီးသည်ဗေနာယကိုယွာဘ၏နေရာ တွင်တပ်မတော်ဗိုလ်ချုပ်အဖြစ်ခန့်ထား တော်မူ၍ ယဇ်ပုရောဟိတ်ဇာဒုတ်ကိုလည်း အဗျာသာ၏နေရာတွင်ခန့်ထားတော်မူ၏။
ಆಗ ಅರಸನು ಯೆಹೋಯಾದಾವನ ಮಗ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಅಬಿಯಾತರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
36 ၃၆ ထို့နောက်မင်းကြီးသည် ရှိမိကိုဆင့်ခေါ်တော် မူပြီးလျှင်``သင်သည်ယေရုရှလင်မြို့တွင် အိမ်တစ်လုံးဆောက်၍နေထိုင်လော့။ ဤမြို့ မှမထွက်မခွာနှင့်။-
ಆಗ ಅರಸನು ಶಿಮ್ಮಿಯನ್ನು ಕರೆಯಿಸಿ ಅವನಿಗೆ, “ನೀನು ಯೆರೂಸಲೇಮಿನಲ್ಲಿ, ನಿನಗೆ ಮನೆಯನ್ನು ಕಟ್ಟಿಸಿಕೊಂಡು, ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು.
37 ၃၇ အကယ်၍ကေဒြုန်ချောင်းလွန်အောင်ထွက်လာ လျှင်သင်သည်မုချသေဒဏ်ခံရမည်။ ထိုအခါ မိမိကိုယ်ကိုသာလျှင်အပြစ်တင်ရလိမ့်မည်'' ဟုမိန့်တော်မူ၏။
ಯಾವ ದಿವಸದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವೆಯೋ, ಆ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ ಎಂದು ಖಂಡಿತ ತಿಳಿದುಕೋ ಮತ್ತು ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವುದು,” ಎಂದನು.
38 ၃၈ ရှိမိကလည်း``ကောင်းပါပြီ။ အရှင်မင်းကြီး။ အရှင်မိန့်တော်မူသည့်အတိုင်းအကျွန်ုပ် လိုက်နာပါမည်'' ဟုပြန်၍လျှောက်ထားပြီး လျှင်ယေရုရှလင်မြို့တွင်ကာလကြာ မြင့်စွာနေထိုင်လေ၏။
ಶಿಮ್ಮಿ ಅರಸನಿಗೆ, “ನಿಮ್ಮ ಮಾತು ಒಳ್ಳೆಯದು. ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ, ನಿನ್ನ ಸೇವಕನು ಮಾಡುವನು,” ಎಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು.
39 ၃၉ သို့ရာတွင်သုံးနှစ်ကြာသောအခါရှိမိ၏ ကျွန်နှစ်ယောက်သည်မာခါ၏သား၊ ဂါသ ဘုရင်အာခိတ်ထံသို့ထွက်ပြေးကြ၏။ ရှိမိ သည်ဂါသမြို့တွင်ထိုသူတို့ရှိနေကြောင်း သတင်းကြားသောအခါ၊-
ಮೂರು ವರ್ಷಗಳ ಅಂತ್ಯದಲ್ಲಿ ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್ನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆ, “ನಿನ್ನ ಸೇವಕರು ಗತ್ನಲ್ಲಿ ಇದ್ದಾರೆ” ಎಂದು ತಿಳಿಸಿದರು.
40 ၄၀ မြည်းကိုကုန်းနှီးတင်ပြီးလျှင်ကျွန်များကို ရှာရန်အာခိတ်မင်းထံသို့သွားလေသည်။ သူ သည်မိမိ၏ကျွန်တို့ကိုတွေ့ရှိသဖြင့်အိမ် သို့ပြန်၍ခေါ်ခဲ့၏။-
ಆದ್ದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ, ತನ್ನ ಸೇವಕರನ್ನು ಹುಡುಕಲು ಗತ್ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್ನಿಂದ ತನ್ನ ಸೇವಕರನ್ನು ಕರೆದುಕೊಂಡು ಬಂದನು.
41 ၄၁ ရှိမိပြုသောအမှုကိုရှောလမုန်မင်းကြား တော်မူလျှင်သူ့အားဆင့်ခေါ်တော်မူ၍``ငါ သည်သင့်အားယေရုရှလင်မြို့မှမထွက်ခွာ ရန် ထာဝရဘုရားကိုတိုင်တည်လျက်ကတိ ပြုစေခဲ့၏။ အကယ်၍ထွက်ခွာခဲ့သော်သင် သည်ဧကန်မုချသေဒဏ်ခံရမည်ဟုလည်း ကြိုတင်သတိပေးခဲ့၏။ သင်ကလည်းဤ အတိုင်းသဘောတူသဖြင့် ငါ၏စကား ကိုနားထောင်ပါမည်ဟုဝန်ခံခဲ့သည် မဟုတ်လော။-
ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್ ಊರಿಗೆ ಹೋಗಿ, ತಿರುಗಿ ಬಂದಿದ್ದಾನೆಂದು ಸೊಲೊಮೋನನಿಗೆ ತಿಳಿಯಿತು.
ಆಗ ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ, “ನೀನು ಯಾವ ದಿವಸದಲ್ಲಿ ಹೊರಟು ಎಲ್ಲಿಗಾದರೂ ಹೋದರೆ, ಅದೇ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ, ಎಂದು ಖಂಡಿತವಾಗಿ ತಿಳಿದುಕೋ, ಎಂಬುದಾಗಿ ನಾನು ನಿನಗೆ ದೃಢವಾಗಿ ಹೇಳಿ, ಯೆಹೋವ ದೇವರ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ಮಾಡಿಸಲಿಲ್ಲವೋ? ನಾನು ಹೇಳಿದ ಮಾತುಒಳ್ಳೆಯದೆಂದು ನೀನು ಹೇಳಲಿಲ್ಲವೋ?
43 ၄၃ သို့ပါလျက်အဘယ်ကြောင့်မိမိ၏ကတိ ကိုဖျက်၍ ငါ၏အမိန့်တော်ကိုလွန်ဆန်ပါ သနည်း။-
ನೀನು ಯೆಹೋವ ದೇವರ ಆಣೆಯನ್ನೂ, ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಗೊಳ್ಳದೆ ಇದ್ದದ್ದೇನು?” ಎಂದನು.
44 ၄၄ သင်သည်ခမည်းတော်အားပြစ်မှားခဲ့သည့် အမှုအပေါင်းကိုကောင်းစွာသိပေသည်။ ထို အမှုများအတွက်သင့်အားထာဝရဘုရား သည်အပြစ်ဒဏ်စီရင်တော်မူလိမ့်မည်။-
ಅರಸನು ಶಿಮ್ಮಿಗೆ, “ನೀನು ನನ್ನ ತಂದೆ ದಾವೀದನಿಗೆ ಮಾಡಿದ ಕೇಡನ್ನು ನಿನ್ನ ಹೃದಯವು ತಿಳಿದಿದೆ. ಯೆಹೋವ ದೇವರು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವರು.
45 ၄၅ ငါ့ကိုမူကားကောင်းချီးပေး၍ဒါဝိဒ်၏ နိုင်ငံတော်ကိုထာဝစဉ်တည်တံ့ခိုင်မြဲစေ တော်မူလိမ့်မည်'' ဟုမိန့်တော်မူ၏။
ಆದರೆ ಅರಸನಾದ ಸೊಲೊಮೋನನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವ ದೇವರ ಮುಂದೆ ಯುಗಯುಗಾಂತರಕ್ಕೂ ಸ್ಥಿರವಾಗಿರುವುದು,” ಎಂದನು.
46 ၄၆ ထိုနောက်ဗေနာယသည် မင်းကြီးအမိန့်ပေး တော်မူသည်အတိုင်း အပြင်သို့ထွက်ပြီးလျှင် ရှိမိကိုကွပ်မျက်လေ၏။ ရှောလမုန်မင်းသည် ယခုအခါ၌မိမိ၏နိုင်ငံတော်ကိုပိုင်နိုင် စွာအုပ်စိုးတော်မူရ၏။
ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ ಆಜ್ಞಾಪಿಸಿದ್ದರಿಂದ, ಅವನು ಹೊರಟು ಹೋಗಿ ಶಿಮ್ಮಿಯ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರವಾಯಿತು.