< ၁ ဓမ္မရာဇဝင် 11 >
1 ၁ နောက်တစ်လခန့်ကြာသောအခါ အမ္မုန်ဘုရင် နာဟတ်သည်စစ်သည်အလုံးအရင်းနှင့်ဂိလဒ် ပြည်ယာဗက်မြို့သို့ချီတက်လာ၏။ သူတို့သည် မြို့ကိုဝိုင်းရံထားသဖြင့် ယာဗက်မြို့သားတို့ ကနာဟတ်အား``အကျွန်ုပ်တို့နှင့်မဟာမိတ် စာချုပ်ချုပ်ဆိုပါက အကျွန်ုပ်တို့သည်အရှင် ၏သစ္စာတော်ကိုခံယူပါမည်'' ဟုလျှောက် ထားကြ၏။
ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ಮುತ್ತಿಗೆಹಾಕಿದನು. ಆಗ ಯಾಬೇಷಿನ ಜನರೆಲ್ಲರು ನಾಹಾಷನಿಗೆ, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿದರೆ, ನಾವು ನಿನಗೆ ಅಧೀನರಾಗಿರುವೆವು,” ಎಂದರು.
2 ၂ နာဟတ်က``ဣသရေလအမျိုးသားတစ် ရပ်လုံးအသရေပျက်စေရန် သင်တို့၏ညာ မျက်စိရှိသမျှကိုဖောက်ပစ်ခွင့်ပေးမှသာ ငါသည်သင်တို့နှင့်မဟာမိတ်စာချုပ်ချုပ် ဆိုနိုင်မည်'' ဟုဆို၏။
ಅಮ್ಮೋನ್ಯನಾದ ನಾಹಾಷನು ಅವರಿಗೆ, “ಇಸ್ರಾಯೇಲರಿಗೆ ಅವಮಾನಪಡಿಸುವುದಕ್ಕಾಗಿ ನಿಮ್ಮೆಲ್ಲರ ಬಲಗಣ್ಣುಗಳನ್ನು ಕಿತ್ತು ಹಾಕುವ ಒಂದೇ ನಿಬಂಧನೆಯಿಂದ, ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ,” ಎಂದನು.
3 ၃ ယာဗက်မြို့သားခေါင်းဆောင်များက``ဣသရေလ ပြည်တစ်လျှောက်လုံးသို့တမန်များစေလွှတ်၍ သတင်းပေးပို့နိုင်ရန်အကျွန်ုပ်တို့အားခုနစ် ရက်မျှအခွင့်ပေးပါ။ အကယ်၍အကျွန်ုပ်တို့ အားကူမမည့်သူမရှိပါကအရှင့်ထံတွင် အညံ့ခံပါမည်'' ဟုလျှောက်ကြ၏။
ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ, “ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಅವಕಾಶವನ್ನು ಕೊಡು. ನಮ್ಮನ್ನು ರಕ್ಷಿಸುವವರು ಯಾರೂ ಇಲ್ಲದೆ ಹೋದರೆ, ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು,” ಎಂದರು.
4 ၄ စေတမန်တို့သည်ရှောလုနေထိုင်ရာဂိဗာ မြို့သို့ရောက်ရှိလာလျက် ထိုသတင်းကိုပြော ကြားကြသောအခါ လူတို့သည်စိတ်ပျက် အားလျော့လျက်ငိုကြွေးကြကုန်၏။-
ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರಿಗೆ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಸ್ವರವನ್ನೆತ್ತಿ ಅತ್ತರು.
5 ၅ ထိုအချိန်၌ရှောလုသည်မိမိ၏နွားများ နှင့်အတူ လယ်တောမှပြန်လည်ရောက်ရှိလာ ကာ``အကြောင်းကားအဘယ်သို့နည်း။ လူ အပေါင်းတို့သည်အဘယ်ကြောင့်ငိုကြွေး နေကြပါသနည်း'' ဟုမေး၏။ လူတို့သည် ယာဗက်မြို့မှစေတမန်တို့ယူဆောင်လာ သောသတင်းကိုသူ့အားပြောကြားကြ၏။-
ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು, “ಜನರು ಅಳುವುದೇಕೆ?” ಎಂದು ಕೇಳಿದನು. ಅವರು ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
6 ၆ ထိုသတင်းကိုရှောလုကြားရချိန်၌ ထာဝရဘုရား၏ဝိညာဉ်တော်သည် သူ ၏အပေါ်သို့သက်ရောက်တော်မူသဖြင့် သူသည်ပြင်းစွာအမျက်ထွက်ကာ၊-
ಸೌಲನು ಈ ಮಾತುಗಳನ್ನು ಕೇಳಿದಾಗ, ದೇವರ ಆತ್ಮವು ಬಹಳ ಸಾಮರ್ಥ್ಯದಿಂದ ಅವನ ಮೇಲೆ ಬಂದು, ಅವನು ಬಹು ಕೋಪೋದ್ರೇಕಗೊಂಡನು. ಅನಂತರ ಅವನು ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು,
7 ၇ နွားနှစ်ကောင်ကိုယူ၍အပိုင်းပိုင်းခုတ်ဖြတ် လျက် စေတမန်တို့အားဣသရေလပြည် တစ်လျှောက်လုံးသို့ယူဆောင်သွားစေပြီး လျှင်``စစ်ပွဲဝင်ရန်ရှောလုနှင့်ရှမွေလတို့ နောက်သို့မလိုက်သူမှန်သမျှ၏နွားများ သည် ဤနည်းအတိုင်းခုတ်ဖြတ်ခြင်းကို ခံရကြလိမ့်မည်'' ဟုသတိပေးစေ၏။ ဣသရေလအမျိုးသားတို့သည်ထာဝရ ဘုရားကိုကြောက်သဖြင့် တညီတညွတ် တည်းထွက်လာကြ၏။-
ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ, ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿ, “ಯಾರು ಸೌಲ ಮತ್ತು ಸಮುಯೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದನು. ಯೆಹೋವ ದೇವರಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ, ಅವರು ಒಬ್ಬ ಮನುಷ್ಯನಂತೆ ಹೊರಟು ಬಂದರು.
8 ၈ ရှောလုသည်သူတို့အားဗေဇက်မြို့တွင် စုရုံးစေရာ ဣသရေလပြည်မှလူသုံး သိန်းနှင့်ယုဒပြည်မှလူသုံးသောင်းရရှိ သတည်း။-
ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ, ಇಸ್ರಾಯೇಲರು ಮೂರು ಲಕ್ಷ ಜನರೂ, ಯೆಹೂದ್ಯರಲ್ಲಿ ಮೂವತ್ತು ಸಾವಿರ ಜನರೂ ಆಗಿದ್ದರು.
9 ၉ ထိုသူတို့ကယာဗက်မြို့မှလာသောစေ တမန်တို့အား``ငါတို့သည်နက်ဖြန်မွန်း မတည့်မီသင်တို့မြို့သားများအားကယ် ဆယ်မည်ဖြစ်ကြောင်း သူတို့အားပြောကြား ကြလော့'' ဟုမှာကြားလိုက်၏။ ထိုသတင်း ကိုရသောအခါယာဗက်မြို့သားတို့သည် အတိုင်းထက်အလွန်ဝမ်းမြောက်ကြကုန်၏။-
ಆಗ ಅವರು ಬಂದ ದೂತರಿಗೆ, “ನೀವು ಗಿಲ್ಯಾದಿನಲ್ಲಿರುವ ಯಾಬೇಷಿನ ಜನರಿಗೆ, ‘ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವುದು,’ ಎಂದು ಹೇಳಿರಿ,” ಎಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ, ಅವರು ಸಂತೋಷಪಟ್ಟರು.
10 ၁၀ သူတို့သည်နာဟတ်အား``အကျွန်ုပ်တို့သည် အရှင့်ထံတွင် နက်ဖြန်အညံ့ခံကြပါမည်။ အကျွန်ုပ်တို့အားအရှင်ပြုလိုရာပြုနိုင် ပါသည်'' ဟုလျှောက်ကြ၏။
ತರುವಾಯ ಯಾಬೇಷಿನ ಜನರು ನಹಾಷನಿಗೆ, “ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನೀನು ನಿನಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡು,” ಎಂದರು.
11 ၁၁ နောက်တစ်နေ့နံနက်၌ရှောလုသည်မိမိ ၏လူတို့ကိုသုံးတပ်ခွဲပြီးလျှင် အရုဏ် တက်ချိန်၌ ရန်သူတပ်စခန်းကိုအတင်း ဝင်၍တိုက်ခိုက်ရာမွန်းတည့်ချိန်ရောက်သော် အမ္မုန်အမျိုးသားတို့ကျဆုံးကြကုန်၏။ မသေဘဲကြွင်းကျန်နေသူတို့သည်လည်း တကွဲတပြားကိုယ်လွတ်ရုန်း၍ထွက်ပြေး ကြလေသည်။
ಮಾರನೆಯ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ, ಬೆಳಗಿನ ಜಾವದಲ್ಲಿ ಪಾಳೆಯದಲ್ಲಿ ಬಂದು, ಬಿಸಿಲೇರುವವರೆಗೆ ಅಮ್ಮೋನಿಯರನ್ನು ಸಂಹರಿಸಿದನು. ಉಳಿದವರು ಚದರಿಹೋದರು. ಅವರಲ್ಲಿ ಒಬ್ಬರು ಕೂಡ ಇರಲಿಲ್ಲ.
12 ၁၂ ထိုအခါဣသရေလအမျိုးသားတို့က ရှမွေလအား``ရှောလုသည်အကျွန်ုပ်တို့၏ ဘုရင်မဖြစ်ထိုက်ဟုဆိုသောသူတို့အဘယ် မှာရှိပါသနည်း။ သူတို့ကိုအကျွန်ုပ်တို့လက် သို့ပေးအပ်ပါ။ သူတို့အားအကျွန်ုပ်တို့ အဆုံးစီရင်ကြပါမည်'' ဟုလျှောက်ကြ၏။
ಆಗ ಜನರು ಸಮುಯೇಲನಿಗೆ, “ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರ್ಯಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ, ಅವರನ್ನು ಕೊಂದು ಹಾಕುತ್ತೇವೆ,” ಎಂದರು.
13 ၁၃ သို့ရာတွင်ရှောလုက``ဤနေ့သည်ဣသရေလ အမျိုးသားတို့အား ထာဝရဘုရားကယ်ဆယ် တော်မူသောနေ့ဖြစ်၏။ ယနေ့အဘယ်သူကို မျှမသတ်ရ'' ဟုဆို၏။-
ಆಗ ಸೌಲನು, “ಯೆಹೋವ ದೇವರು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನು ಉಂಟುಮಾಡಿದ್ದರಿಂದ, ಈ ಹೊತ್ತು ಯಾರನ್ನೂ ಕೊಲ್ಲಬಾರದು,” ಎಂದನು.
14 ၁၄ ရှမွေလကလည်း``ငါတို့အပေါင်းသည်ဂိလ ဂါလမြို့သို့သွား၍ရှောလုအား ငါတို့ ဘုရင်အဖြစ်ဖြင့်ထပ်မံကြွေးကြော်တင် မြှောက်ကြကုန်အံ့'' ဟုဆို၏။-
ಆಗ ಸಮುಯೇಲನು ಜನರಿಗೆ, “ನಾವು ಗಿಲ್ಗಾಲಿಗೆ ಹೋಗಿ, ಅಲ್ಲಿ ರಾಜ್ಯತ್ವವನ್ನು ದೃಢೀಕರಿಸೋಣ ಬನ್ನಿರಿ,” ಎಂದನು.
15 ၁၅ သို့ဖြစ်၍သူတို့အားလုံးပင်ဂိလဂါလ မြို့သို့သွားပြီးလျှင် သန့်ရှင်းရာဌာနတော် တွင်ရှောလုအားဘုရင်အဖြစ်ကြွေးကြော် တင်မြှောက်ကြလေသည်။ သူတို့သည်မိတ် သဟာယယဇ်ကိုပူဇော်ကြ၏။ ရှောလုနှင့် ဣသရေလအမျိုးသားတစ်ရပ်လုံးသည် လည်းပျော်ပွဲရွှင်ပွဲကိုဆင်နွှဲကြ၏။
ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ, ಆ ಸ್ಥಳದಲ್ಲಿ ಯೆಹೋವ ದೇವರ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ, ಯೆಹೋವ ದೇವರಿಗೆ ಸಮಾಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲರೂ ಬಹಳವಾಗಿ ಸಂತೋಷಪಟ್ಟರು.