< ၂ ရာဇဝင်ချုပ် 32 >
1 ၁ ဤသို့ဟေဇကိသည်ထာဝရဘုရားအား သစ္စာနှင့်ဆည်းကပ်ကိုးကွယ်လျက်နေသည့် နောက်ပိုင်း၌ အာရှုရိဧကရာဇ်သနာခရိပ် သည် ယုဒပြည်သို့ချင်းနင်းဝင်ရောက်လာ လေသည်။ သူသည်တံတိုင်းကာရံထားသည့် မြို့များကိုဝိုင်းရံတိုက်ခိုက်ကာ မြို့ရိုးများ ကိုချိုးဖောက်ဝင်ရောက်ရန်မိမိ၏တပ်မ တော်အားအမိန့်ပေးတော်မူ၏။-
ಹಿಜ್ಕೀಯನು ಇಷ್ಟು ನಂಬಿಗಸ್ತಿಕೆಯಿಂದ ಎಲ್ಲವನ್ನೂ ಮಾಡಿದ ತರುವಾಯ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿಸಿ, ಅವುಗಳನ್ನು ತನಗಾಗಿ ಜಯಿಸಬೇಕೆಂದು ಮುತ್ತಿಗೆಹಾಕಿದನು.
2 ၂ သနာခရိပ်သည်ယေရုရှလင်မြို့ကိုလည်း တိုက်ခိုက်ရန်ကြံစည်လျက်ရှိကြောင်း ဟေဇကိ သိမြင်သောအခါ၊-
ಸನ್ಹೇರೀಬನು ಬಂದದ್ದನ್ನೂ, ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ನಿಶ್ಚಯಿಸಿದ್ದನ್ನೂ ಹಿಜ್ಕೀಯನು ಕಂಡಾಗ,
3 ၃ မိမိ၏မှူးမတ်များနှင့်တိုင်ပင်၍အာရှုရိ အမျိုးသားတို့ရောက်လာချိန်၌ ရေမရအောင် မြို့ပြင်သို့ရေလွှတ်မြောင်းများကိုဖြတ်တောက် စေတော်မူ၏။ မှူးမတ်တို့သည်လူအမြောက် အမြားကိုစုရုံးလျက်စမ်းရေတွင်းရှိသမျှ တို့ကိုပိတ်ဆို့လိုက်ကြ၏။-
ಅವನು ಪಟ್ಟಣದ ಹೊರಗಿರುವ ನೀರಿನ ಬುಗ್ಗೆಗಳನ್ನು ಮುಚ್ಚಿಸುವುದಕ್ಕೆ ತನ್ನ ಪ್ರಧಾನರ ಮತ್ತು ತನ್ನ ಪರಾಕ್ರಮಶಾಲಿಗಳ ಸಂಗಡ ಯೋಚಿಸಿಕೊಂಡನು. ಅವರು ಅವನಿಗೆ ಸಹಾಯ ಕೊಟ್ಟರು.
ಆದ್ದರಿಂದ ಅನೇಕ ಜನರು ಕೂಡಿಕೊಂಡು, “ನೀರು ಬುಗ್ಗೆಗಳನ್ನೂ, ದೇಶದ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟು, ಅಸ್ಸೀರಿಯದ ಅರಸರು ಬಂದು ಬಹಳ ನೀರು ದೊರಕಿಸಿಕೊಳ್ಳುವುದು ಏಕೆ?” ಎಂದರು.
5 ၅ မင်းကြီးသည်မြို့တော်ကာကွယ်ရေးအတွက် ခိုင်ခံ့စေရန် မြို့ရိုးများကိုပြန်လည်ပြုပြင် ခြင်း၊ ပြအိုးများကိုဆောက်လုပ်ခြင်း၊ အပြင် မြို့ရိုးတစ်ထပ်ကိုတည်ဆောက်ခြင်းတို့ကို ပြုတော်မူ၏။ ထို့ပြင်ယေရုရှလင်မြို့ဟောင်း အရှေ့ပိုင်း၌ရှိသောမြေကတုတ်များကို ပြုပြင်၍ လှံနှင့်ဒိုင်းလွှားအမြောက်အမြား ကိုပြုလုပ်စေတော်မူ၏။-
ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು, ಬಿದ್ದುಹೋಗಿದ್ದ ಗೋಡೆಯನ್ನೆಲ್ಲಾ ಕಟ್ಟಿಸಿ, ಗೋಪುರಗಳ ಪರ್ಯಂತರ ಅದನ್ನು ಎತ್ತರಮಾಡಿ, ಅದರ ಹೊರಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ, ದಾವೀದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತಿ ಮಾಡಿ ಈಟಿಗಳನ್ನೂ, ಗುರಾಣಿಗಳನ್ನೂ ಬಹಳವಾಗಿ ಮಾಡಿಸಿದನು.
6 ၆ မင်းကြီးသည်မြို့သားအပေါင်းတို့အား တပ်မတော်အရာရှိများ၏အောက်တွင် ထားရှိကာမြို့တံခါးဝရှိကွက်လပ်တွင် စုဝေးစေပြီးလျှင်၊-
ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿಗಳನ್ನು ಇರಿಸಿ, ಪಟ್ಟಣದ ಬಾಗಿಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು, ಈ ಮಾತುಗಳಿಂದ ಅವರನ್ನು ಪ್ರೋತ್ಸಾಹಿಸಿದರು:
7 ၇ ``အားမာန်တင်း၍ရဲစွမ်းသတ္တိရှိကြလော့။ အာရှုရိဧကရာဇ်ကိုသော်လည်းကောင်း၊ သူ ဦးစီးခေါင်းဆောင်ပြုသည့်တပ်မတော်ကို သော်လည်းကောင်းမကြောက်ကြနှင့်။ သူ၏ တန်ခိုးစွမ်းရည်ထက်ပိုမိုကြီးမားသော တန်ခိုးစွမ်းရည်ငါတို့တွင်ရှိ၏။-
“ಬಲಗೊಳ್ಳಿರಿ, ಧೈರ್ಯವಾಗಿರಿ, ಅಸ್ಸೀರಿಯದ ಅರಸನ ನಿಮಿತ್ತವೂ, ಅವನ ಸಂಗಡ ಕೂಡಿರುವ ಮಹಾ ಗುಂಪಿನ ನಿಮಿತ್ತವೂ ಭಯಪಡಬೇಡಿರಿ, ನಿರಾಶರಾಗಬೇಡಿರಿ. ಏಕೆಂದರೆ ಅವನ ಸಂಗಡ ಇರುವವರಿಗಿಂತ ಮಿಗಿಲಾದದ್ದು ನಮ್ಮ ಸಂಗಡ ಇದೆ.
8 ၈ သူ၏ဘက်၌လူသားတို့၏တန်ခိုးစွမ်းရည် သာလျှင်ရှိပေသည်။ ငါတို့ဘက်၌မူကား ကူမတော်မူ၍စစ်ပွဲများတွင်ပါဝင်တိုက် ခိုက်တော်မူသောငါတို့၏ဘုရားသခင် ထာဝရဘုရားရှိတော်မူ၏'' ဟုမိန့်တော် မူလေသည်။ ဤသို့မင်းကြီးမိန့်တော်မူ သောစကားကြောင့်လူတို့သည်အား တက်လာကြကုန်၏။
ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.
9 ၉ ကာလအနည်းငယ်ကြာသောအခါသနာ ခရိပ်သည် မိမိတပ်မတော်နှင့်အတူလာခိရှ မြို့၌ပင်ရှိနေစဉ် ဟေဇကိနှင့်ယေရုရှလင် မြို့တွင်ရှိနေကြသောယုဒပြည်သူတို့ထံ သို့စေတမန်လွှတ်၍၊-
ಇದರ ತರುವಾಯ ಅಸ್ಸೀರಿಯದ ಅರಸನಾದ ಸನ್ಹೇರೀಬನೂ, ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ, ಅವನು ಯೆರೂಸಲೇಮಿನಲ್ಲಿರುವ ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ, ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳುಹಿಸಿದನು.
10 ၁၀ ``သင်တို့ယေရုရှလင်မြို့သားများသည်အဝိုင်း ခံလျက်နေရချိန်၌ပင်အဘယ်သို့လျှင် စိတ် ချလက်ချနေနိုင်ကြပါသနည်းဟုငါ အာရှုရိဧကရာဇ်မေးမြန်းလိုက်၏။-
“ಅಸ್ಸೀರಿಯದ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ಉಳಿದಿರುವಿರಿ?
11 ၁၁ ဟေဇကိကသင်တို့၏ဘုရားသခင်ထာဝရ ဘုရားသည် သင်တို့အားငါ၏လက်မှကယ်တော် မူမည်ဟုဆိုချေသည်။ သို့ရာတွင်ဟေဇကိ သည်သင်တို့အစာရေစာငတ်မွတ်၍သေကြ စေရန်လှည့်စားပြောဆိုနေခြင်းဖြစ်၏။-
‘ನಮ್ಮ ದೇವರಾದ ಯೆಹೋವ ದೇವರು ಅಸ್ಸೀರಿಯದ ಅರಸನ ಕೈಯಿಂದ ನಮ್ಮನ್ನು ಬಿಡಿಸುವರು,’ ಎಂದು ಹಿಜ್ಕೀಯನು ಹೇಳಿ, ನಿಮ್ಮನ್ನು ಹಸಿವೆ ಮತ್ತು ದಾಹದಿಂದ ಸಾಯಿಸುವುದಕ್ಕೆ ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
12 ၁၂ ထာဝရဘုရားအားဝတ်ပြုကိုးကွယ်ရာဌာန များနှင့်ယဇ်ပလ္လင်များကိုဖြိုဖျက်ကာ ယုဒ ပြည်သူများနှင့် ယေရုရှလင်မြို့သူမြို့သား တို့အားယဇ်ပလ္လင်တစ်ခုတည်းတွင်နံ့သာ ပေါင်းကိုမီးရှို့ပူဇော်၍ဝတ်ပြုကိုးကွယ် ရန်ပြောကြားသူကားဟေဇကိပင်ဖြစ်သည်။-
ಈ ಹಿಜ್ಕೀಯನು ಅವನ ಪೂಜಾಸ್ಥಳಗಳನ್ನೂ, ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ, ‘ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು, ಅದರ ಮೇಲೆ ಧೂಪವನ್ನರ್ಪಿಸಬೇಕು,’ ಎಂದು ಹೇಳಿದ್ದಾನಲ್ಲವೇ?
13 ၁၃ ငါနှင့်ငါ၏ဘိုးဘေးများသည်အတိုင်းတိုင်း အပြည်ပြည်မှလူတို့အားအဘယ်သို့ပြု ခဲ့သည့်ကိုသင်တို့မသိကြပါသလော။ အခြားအဘယ်တိုင်းနိုင်ငံ၏ဘုရားများ သည်မိမိတို့လူများအားအာရှုရိဧကရာဇ် ၏လက်မှကယ်ခဲ့ကြပါသနည်း။-
“ನಾನೂ, ನನ್ನ ಪಿತೃಗಳು ದೇಶಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವಿತ್ತೋ?
14 ၁၄ ထိုနိုင်ငံများရှိအဘယ်မည်သောဘုရားသည် မိမိ၏လူတို့အားငါ၏လက်မှကယ်ခဲ့ဖူး ပါသနည်း။ သို့ဖြစ်ပါလျက်သင်တို့၏ဘုရား သည်သင်တို့ကိုကယ်တော်မူနိုင်သည်ဟု အဘယ်ကြောင့်သင်တို့ထင်မှတ်ကြပါ သနည်း။-
ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವರುಗಳಲ್ಲಿ ನನ್ನ ಕೈಯಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವುದು? ಹಾಗಾದರೆ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?
15 ၁၅ ယခုသင်တို့အားဟေဇကိမလှည့်စားမဖြား ယောင်းစေနှင့်။ သူ၏စကားကိုသင်တို့မယုံ ကြစေနှင့်။ အဘယ်တိုင်းနိုင်ငံ၏ဘုရားမျှ မိမိ၏လူတို့အားအာရှုရိဧကရာဇ်၏လက် မှကယ်နိုင်ခဲ့ဘူးသည်မရှိ။ သို့ဖြစ်၍သင်တို့ ၏ဘုရားသည်လည်းအမှန်ပင်သင်တို့အား မကယ်နိုင်'' ဟုပြောကြားစေလေသည်။
ಆದ್ದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ನಿಮ್ಮನ್ನು ದಾರಿತಪ್ಪಿಸಲು ಬಿಡಬೇಡಿರಿ. ಅವನ ಮಾತು ನಂಬಬೇಡಿರಿ. ನನ್ನ ಕೈಯೊಳಗಿಂದಲೂ, ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು? ಅನ್ನುತ್ತಾನೆ,” ಎಂದು ಹೇಳಿದರು.
16 ၁၆ အာရှုရိတပ်မှူးသည်လည်းထာဝရအရှင် ဘုရားသခင်အားလည်းကောင်း၊ ထာဝရဘုရား ၏အစေခံဟေဇကိအားလည်းကောင်းထို ထက်ပင်ပိုမိုရှုတ်ချပြောဆိုကြသေး၏။-
ಹೀಗೆ ಅವನ ಸೇವಕರು ಇನ್ನೂ ದೇವರಾದ ಯೆಹೋವ ದೇವರಿಗೆ ವಿರೋಧವಾಗಿಯೂ, ಅವರ ಸೇವಕನಾದ ಹಿಜ್ಕೀಯನಿಗೆ ವಿರೋಧವಾಗಿಯೂ ಮಾತನಾಡಿದರು.
17 ၁၇ ဧကရာဇ်မင်းသည်ဣသရေလအမျိုးသား တို့၏ဘုရားသခင်ကိုအာခံလျက် ပေးပို့ သောအမှာတော်စာတွင်``အတိုင်းတိုင်းအပြည် ပြည်မှဘုရားများသည်မိမိတို့၏လူများ အားငါ၏လက်မှမကယ်နိုင်ခဲ့ကြ။ ဟေဇကိ ၏ဘုရားသည်လည်းမိမိ၏လူတို့ကိုငါ ၏လက်မှကယ်နိုင်လိမ့်မည်မဟုတ်'' ဟု ဖော်ပြထားသတည်း။-
ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ನಿಂದಿಸುವುದಕ್ಕೂ, ಅವರಿಗೆ ವಿರೋಧವಾಗಿ ಮಾತನಾಡುವುದಕ್ಕೂ ಪತ್ರಗಳನ್ನು ಬರೆದನು. ಅದರಲ್ಲಿ, “ಇತರ ದೇಶಗಳ ಜನಾಂಗಗಳ ದೇವರುಗಳು, ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ, ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸನು,” ಎಂದು ಬರೆದಿತ್ತು.
18 ၁၈ တပ်မှူးတို့သည်မြို့ရိုးပေါ်ရှိယေရုရှလင်မြို့ သားတို့အားခြိမ်းခြောက်ကာစိတ်ပျက်အား လျော့အောင်ပြု၍ မြို့ကိုအလွယ်တကူသိမ်း ပိုက်နိုင်စေရန်ဟေဗြဲဘာသာစကားဖြင့် အော်ဟစ်ပြောဆိုကြလေသည်။-
ಇದಲ್ಲದೆ ಅವರು ಪಟ್ಟಣವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವುದಕ್ಕೂ, ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ದೊಡ್ಡ ಶಬ್ದದಿಂದ ಅವರನ್ನು ಕೂಗಿದರು.
19 ၁၉ သူတို့သည်ယေရုရှလင်မြို့သားတို့၏ဘုရားသခင်ကိုလူတို့လက်ဖြင့်ပြုလုပ်သောရုပ်တု များဖြစ်သည့်အခြားလူမျိုးတို့၏ဘုရား များနှင့်တန်းတူထား၍ပြောဆိုကြ၏။
ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
20 ၂၀ ထိုအခါဟေဇကိမင်းနှင့်အာမုတ်၏သား ပရောဖက်ဟေရှာယသည် ဘုရားသခင်ထံ တော်သို့ကယ်မတော်မူရန်ဟစ်လျက်ပတ္ထနာ ပြုကြလေသည်။-
ಇದರ ನಿಮಿತ್ತ ಅರಸನಾದ ಹಿಜ್ಕೀಯನೂ, ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
21 ၂၁ ထာဝရဘုရားသည်ကောင်းကင်တမန်ကို စေလွှတ်၍ အာရှုရိတပ်သားများနှင့်တပ်မ တော်အရာရှိများအားသုတ်သင်ပယ်ရှင်း စေတော်မူ၏။ ဧကရာဇ်မင်းသည်အရှက်ကွဲ လျက်အာရှုရိပြည်သို့ပြန်တော်မူ၏။ တစ် နေ့သ၌သူသည်မိမိဘုရား၏ဗိမာန် တော်၌ရှိနေစဉ် သားတော်အချို့တို့သည် သူ့အားဋ္ဌားဖြင့်လုပ်ကြံကြလေသည်။
ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.
22 ၂၂ ဤနည်းအားဖြင့်ထာဝရဘုရားသည်ဟေ ဇကိနှင့်ယေရုရှလင်မြို့သူမြို့သားတို့ အား အာရှုရိဧကရာဇ်သနာခရိပ်၏လက် မှလည်းကောင်း၊ အခြားရန်သူများ၏လက် မှလည်းကောင်းကယ်တော်မူ၍ပတ်ဝန်းကျင် နိုင်ငံများနှင့်ငြိမ်းချမ်းမှုကိုပေးတော်မူ၏။-
ಹೀಗೆ ಯೆಹೋವ ದೇವರು ಹಿಜ್ಕೀಯನನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ, ಅಸ್ಸೀರಿಯದ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ, ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ, ಸಮಸ್ತ ಕಡೆಯಿಂದ ಅವರನ್ನು ನಡೆಸಿದರು.
23 ၂၃ လူအမြောက်အမြားပင်ထာဝရဘုရား အတွက်ပူဇော်သကာများနှင့် ဟေဇကိ မင်းအတွက်လက်ဆောင်များကိုယေရုရှလင် မြို့သို့ယူဆောင်လာကြ၏။ ထိုကာလမှ အစပြု၍ဟေဇကိသည်နိုင်ငံတကာ တို့၏ရှေ့တွင်ဂုဏ်အသရေကြီးမြင့်လေ၏။
ಅನೇಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರಿಗೆ ಅರ್ಪಣೆಗಳನ್ನೂ, ಯೆಹೂದದ ಅರಸನಾದ ಹಿಜ್ಕೀಯನಿಗೆ ಕಾಣಿಕೆಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಮುಂದೆ ಉನ್ನತವಾಗಿದ್ದನು.
24 ၂၄ ထိုအချိန်ကာလလောက်၌ပင်ဟေဇကိသည် သေလုနီးပါးဖျားနာသဖြင့် ဆုတောင်းပတ္ထ နာပြုတော်မူ၏။ ထာဝရဘုရားသည်သူပြန် လည်ကျန်းမာလာမည့်နိမိတ်ကိုပြတော်မူ၏။-
ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಅವನು ಯೆಹೋವ ದೇವರನ್ನು ಪ್ರಾರ್ಥಿಸಲು, ದೇವರು ಅವನ ಸಂಗಡ ಮಾತನಾಡಿ ಅವನಿಗೆ ಒಂದು ಅದ್ಭುತವಾದ ಗುರುತನ್ನು ಕೊಟ್ಟರು.
25 ၂၅ သို့ရာတွင်ဟေဇကိမင်းသည်မာန်မာနရှိ သဖြင့် ခံစားရသောကျေးဇူးတော်အတွက် ကျေးဇူးတော်ကိုမချီးမွမ်း။ ထိုကြောင့်ယုဒ ပြည်သူများနှင့်ယေရုရှလင်မြို့သားတို့ သည်အမျက်တော်ဒဏ်ကိုခံရကြလေသည်။-
ಆದರೆ ಹಿಜ್ಕೀಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಹೋದನು. ಏಕೆಂದರೆ ಅವನ ಹೃದಯವು ಅಹಂಕಾರದಿಂದ ತುಂಬಿತ್ತು. ಆದ್ದರಿಂದ ಅವನ ಮೇಲೆಯೂ, ಯೆಹೂದ ಮತ್ತು ಯೆರೂಸಲೇಮಿನ ಮೇಲೆಯೂ ಯೆಹೋವ ದೇವರ ರೌದ್ರ ಉಂಟಾಯಿತು.
26 ၂၆ နောက်ဆုံးတွင်ဟေဇကိနှင့်ယေရုရှလင်မြို့ သူမြို့သားတို့သည်နှိမ့်ချသောစိတ်ရှိလာ ကြသဖြင့် ထာဝရဘုရားသည်ဟေဇကိ ၏လက်ထက်ကာလတွင်ပြည်သူတို့အား အပြစ်ဒဏ်ခတ်တော်မမူ။
ಅನಂತರ ಹಿಜ್ಕೀಯನೂ, ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯದಲ್ಲಿ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ, ಹಿಜ್ಕೀಯನ ದಿವಸಗಳಲ್ಲಿ ಯೆಹೋವ ದೇವರ ರೌದ್ರವು ಅವರ ಮೇಲೆ ಬರಲಿಲ್ಲ.
27 ၂၇ ဟေဇကိသည်လွန်စွာချမ်းသာကြွယ်ဝလာ ပြီးလျှင် လူအပေါင်းတို့၏ရှေ့တွင်ဂုဏ်အသ ရေကြီးမြင့်လေ၏။ သူသည် ရွှေ၊ ငွေ၊ ကျောက်မျက် ရတနာများ၊ နံ့သာမျိုးများ၊ ဒိုင်းလွှားများ နှင့်အခြားအဖိုးတန်ပစ္စည်းများသိုလှောင် ရန်တိုက်များကိုတည်ဆောက်တော်မူ၏။-
ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ, ಘನವೂ ಇದ್ದುದರಿಂದ, ಅವನು ಬೆಳ್ಳಿಗೋಸ್ಕರವೂ, ಬಂಗಾರಕ್ಕೋಸ್ಕರವೂ, ರತ್ನಗಳಿಗೋಸ್ಕರವೂ, ಸುಗಂಧ ದ್ರವ್ಯಗಳಿಗೋಸ್ಕರವೂ, ಗುರಾಣಿಗಳಿಗೋಸ್ಕರವೂ, ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಉಗ್ರಾಣಗಳನ್ನು ಮಾಡಿಸಿದನು.
28 ၂၈ စပါး၊ စပျစ်ရည်နှင့်သံလွင်ဆီအတွက်ကုန် လှောင်ရုံများ၊ မိမိ၏ကျွဲနွားများအတွက် တင်းကုပ်များ၊ သိုးများအတွက်ခြံများ ကိုလည်းတည်ဆောက်တော်မူ၏။-
ಇದಲ್ಲದೆ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನೂ, ಸಕಲ ವಿಧವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ, ಕುರಿಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.
29 ၂၉ ထာဝရဘုရားသည်သူ့အားဤအရာ များအပြင်သိုးနွားများနှင့်အခြားပစ္စည်း ဥစ္စာအမြောက်အမြားကိုလည်းပေးသနား တော်မူသဖြင့် သူသည်မြောက်မြားစွာသော မြို့တို့ကိုတည်ထောင်တော်မူ၏။-
ಇದಲ್ಲದೆ ತನಗೆ ಪಟ್ಟಣಗಳನ್ನೂ, ದನಕುರಿಗಳ ದೊಡ್ಡ ಹಿಂಡುಗಳನ್ನೂ ಬಹಳವಾಗಿ ಮಾಡಿಕೊಂಡನು. ಏಕೆಂದರೆ ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟರು.
30 ၃၀ ဂိဟုန်စမ်းမှရေစီးကြောင်းကိုပိတ်ဆို့လိုက် ပြီးလျှင်ဥမင်လိုဏ်ခေါင်းတူး၍ ယေရုရှလင် မြို့တံတိုင်းအတွင်းသို့ရေကိုသွယ်သူမှာ ဟေဇကိပင်ဖြစ်၏။ ဟေဇကိသည်ပြုလေ သမျှသောအမှုတို့တွင်အောင်မြင်တော်မူ သည်။-
ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು, ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿದನು.
31 ၃၁ တိုင်းပြည်တွင်ဖြစ်ပွားခဲ့သောအံ့ဖွယ်အမှု ကိုစုံစမ်းရန်ဗာဗုလုန်သံတမန်များလာ ရောက်ချိန်၌ပင်လျှင် ဘုရားသခင်သည်ဟေ ဇကိ၏သဘောကိုစမ်းသပ်သိရှိနိုင်ရန်သူ ပြုလိုသည့်အတိုင်းပြုနိုင်ခွင့်ကိုပေးတော် မူ၏။
ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.
32 ၃၂ ဟေဇကိမင်းလုပ်ဆောင်ခဲ့သောအခြား အမှုအရာရှိသမျှနှင့်ထာဝရဘုရား အားဆည်းကပ်ပုံတို့ကို အာမုတ်၏သား ပရောဖက်ဟေရှာယ၏ဗျာဒိတ်ရူပါရုံ ကျမ်း၊ ယုဒရာဇဝင်နှင့်ဣသရေလရာဇဝင် တွင်ရေးထားသတည်း။-
ಹಿಜ್ಕೀಯನ ಇತರ ಕಾರ್ಯಗಳೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗ ಪ್ರವಾದಿಯಾದ ಯೆಶಾಯನ ದರ್ಶನದ ಪುಸ್ತಕದಲ್ಲಿ ಮತ್ತು ಯೆಹೂದ ಇಸ್ರಾಯೇಲ್ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
33 ၃၃ ဟေဇကိကွယ်လွန်သောအခါသူ၏အလောင်း ကိုဘုရင်များ၏သင်္ချိုင်းအထက်ပိုင်းတွင်သင်္ဂြိုဟ် ကြ၏။ သူကွယ်လွန်ချိန်၌ယုဒပြည်သူများ နှင့်ယေရုရှလင်မြို့သားတို့သည်သူ့အား အထူးဂုဏ်ပြုကြ၏။ သားတော်မနာရှေ သည်ခမည်းတော်၏အရိုက်အရာကို ဆက်ခံ၍နန်းတက်လေသည်။
ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದುದರಲ್ಲಿ ಅವನನ್ನು ಹೂಳಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ, ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.