< ၄ ဓမ္မရာဇဝင် 19 >
1 ၁ ထိုသူတို့၏အစီရင်ခံချက်ကိုကြားလျှင် ကြားချင်းဟေဇကိမင်းသည် မိမိ၏အဝတ် တော်ကိုဆုတ်ပြီးလျှင်လျှော်တေကိုဝတ်၍ ထာဝရဘုရား၏ဗိမာန်တော်သို့ကြွတော် မူ၏။-
ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.
2 ၂ မင်းကြီးသည်နန်းတော်အုပ်ဧလျာကိမ်၊ နန်း တော်အတွင်းဝန်ရှေဗနနှင့်အသက်ကြီးသူ ယဇ်ပုရောဟိတ်များကို အာမုတ်၏သားဟေရှာ ယထံသို့စေလွှတ်တော်မူ၏။ ထိုသူတို့သည် လည်းလျှော်တေကိုဝတ်ဆင်ထားကြ၏။-
ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.
3 ၃ မင်းကြီးက``ယနေ့သည်ဒုက္ခရောက်ရာနေ့ဖြစ် ပါ၏။ အကျွန်ုပ်တို့သည်အပြစ်ဒဏ်ကိုခံရ၍ အရှက်ကွဲလျက်ရှိကြပါ၏။ အကျွန်ုပ်တို့သည် သားဖွားချိန်စေ့သော်လည်း သားဖွားနိုင်ရန် အားမရှိသည့်အမျိုးသမီးနှင့်တူပါ၏။-
ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.
4 ၄ အာရှုရိဧကရာဇ်ဘုရင်သည်မိမိ၏ဗိုလ်ချုပ် ကိုစေလွှတ်၍ အသက်ရှင်တော်မူသောဘုရားသခင်အားစော်ကားသည့်စကားကိုပြောဆို စေပါ၏။ သင်၏ဘုရားသခင်ထာဝရဘုရား သည်ထိုစကားကိုကြားတော်မူ၍ယင်းသို့ ပြောဆိုသူတို့အားအပြစ်ဒဏ်စီရင်တော် မူပါစေသော။ သို့ဖြစ်၍အသက်မသေဘဲ ကျန်ရှိနေသေးသောသူတို့အတွက်ဘုရားသခင်ထံတော်သို့ဆုတောင်းပတ္ထနာပြုပါ လော့'' ဟုဟေရှာယထံလျှောက်ထားစေ၏။
ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು,’” ಎಂದರು.
5 ၅ ဟေဇကိမင်း၏စကားကိုကြားသောအခါ ဟေရှာယက``ထာဝရဘုရားဤသို့မိန့်တော် မူ၏။ အာရှုရိမင်း၏ကျွန်တို့သည် ငါ့ကိုပြစ် မှား၍ပြောဆိုသည့်စကားကိုသင်တို့ကြား ရသောအခါမကြောက်နှင့်။-
ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದು ಹೇಳಿದಾಗ,
ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
7 ၇ ငါသည်ဧကရာဇ်မင်းအားမိမိ၏တိုင်းပြည် သို့ပြန်စေရန် သတင်းတစ်စုံတရာကိုကြား စေတော်မူမည်။ ထိုနောက်သူ့ကိုထိုပြည်၌ပင် လုပ်ကြံခြင်းကိုခံရစေလတ္တံ့'' ဟုပြန်ကြား လိုက်၏။
ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’” ಎಂದು ಹೇಳಿದನು.
8 ၈ ဧကရာဇ်မင်းသည်လာခိရှမြို့မှထွက်ခွာပြီး လျှင် အနီးအနားရှိလိဗနမြို့ကိုတိုက်ခိုက် လျက်ရှိကြောင်းကို အာရှုရိအရာရှိကြားသိ သောအခါ မင်းကြီးနှင့်ဆွေးနွေးတိုင်ပင်ရန် ထိုအရပ်သို့သွားလေသည်။-
ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.
9 ၉ ထိုအခါအာရှုရိအမျိုးသားတို့သည် မိမိ တို့အားတိုက်ခိုက်ရန်ဆူဒန်ဘုရင်တိရက္ကဦး စီးခေါင်းဆောင်သည့် အီဂျစ်တပ်မတော်ချီ တက်လာနေကြောင်းကိုသတင်းရရှိကြ၏။-
ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ, ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ ಅವರಿಗೆ,
10 ၁၀ ထိုသတင်းကိုကြားသောအခါဧကရာဇ်မင်း သည် ယုဒဘုရင်ဟေဇကိထံသို့အမှာတော် စာပေးပို့လိုက်လေသည်။ ထိုအမှာတော်စာ တွင်``သင်ကိုးစားသည့်ဘုရားကသင်သည် ငါ ၏လက်တွင်းသို့ကျရောက်လိမ့်မည်မဟုတ် ကြောင်းမိန့်တော်မူသောစကားကြောင့်နား မယောင်နှင့်။-
“ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನೆಂದರೆ: ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.
11 ၁၁ အာရှုရိဧကရာဇ်မင်းသည်မိမိဖျက်ဆီးရန် ဆုံးဖြတ်ထားသည့်တိုင်းနိုင်ငံကိုအဘယ်သို့ ပြုတော်မူတတ်ကြောင်းသင်ကြားသိရပြီ ဖြစ်၏။ သင်သည်ငါ၏လက်မှလွတ်မြောက် နိုင်လိမ့်မည်ဟုထင်မှတ်ပါသလော။-
ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?
12 ၁၂ ငါ၏ဘိုးဘေးတို့သည်ဂေါဇန်မြို့၊ ခါရန် မြို့၊ ရေဇပ်မြို့တို့ကိုဖျက်ဆီးပြီးလျှင် တေလ သာမြို့တွင်နေထိုင်သူဘေသေဒင်အမျိုးသား တို့အားသုတ်သင်သတ်ဖြတ်ခဲ့ကြ၏။ သူတို့၏ ဘုရားများအနက်အဘယ်ဘုရားမျှသူ တို့ကိုမကယ်နိုင်ကြ။-
ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?
13 ၁၃ ဟာမတ်မြို့၊ အာပဒ်မြို့၊ သေဖရဝိမ်မြို့၊ ဟေန မြို့နှင့်ဣဝါမြို့တို့တွင်စိုးစံခဲ့သောဘုရင် များသည်အဘယ်မှာနည်း'' ဟုဖော်ပြပါ ရှိ၏။
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.
14 ၁၄ ဟေဇကိမင်းသည်ထိုအမှာတော်စာကိုစေ တမန်များထံမှယူ၍ဖတ်ပြီးလျှင် ဗိမာန်တော် သို့သွား၍ထာဝရဘုရား၏ရှေ့တော်၌ချ ထား၏။-
ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.
15 ၁၅ ထိုနောက်ဤသို့ပတ္ထနာပြု၏။ ``ခမ်းနားတင့် တယ်သည့်ပလ္လင်ပေါ်တွင်စံတော်မူသော အို ဣသ ရေလအမျိုးသားတို့၏ဘုရားသခင်ထာဝရ ဘုရား၊ ကိုယ်တော်တစ်ပါးတည်းသာလျှင်ကမ္ဘာ နိုင်ငံအရပ်ရပ်ကိုအစိုးရသောဘုရားဖြစ် တော်မူပါ၏။ ကိုယ်တော်သည်မိုးမြေကိုဖန် ဆင်းတော်မူပါ၏။-
ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.
16 ၁၆ အို ထာဝရဘုရား၊ ယခုအကျွန်ုပ်တို့တွေ့ကြုံ နေရကြသောအမှုကိုကြည့်ရှုတော်မူပါ။ အသက်ရှင်တော်မူသောဘုရားတည်းဟူ သော ကိုယ်တော်အားသနာခရိပ်စော်ကား ပြောဆိုသောစကားကိုကြားတော်မူပါ။-
ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.
17 ၁၇ အို ထာဝရဘုရား၊ အာရှုရိဧကရာဇ်မင်း များသည် လူမျိုးတကာတို့ကိုပျက်ပြုန်း စေ၍ သူတို့၏ပြည်များကိုလူသူဆိတ် ငြိမ်ရာဖြစ်စေလျက်၊-
“ಯೆಹೋವ ದೇವರೇ, ಅಸ್ಸೀರಿಯದ ಅರಸರು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.
18 ၁၈ သူတို့၏ဘုရားများကိုလည်းမီးရှို့ဖျက်ဆီး ကြသည်ကို အကျွန်ုပ်တို့သိကြပါ၏။ ထိုဘုရား တို့သည်ဘုရားအစစ်မဟုတ်။ လူ့လက်ဖြင့် လုပ်သည့်သစ်သားရုပ်၊ ကျောက်ရုပ်များသာ ဖြစ်ပါ၏။-
ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.
19 ၁၉ အို အကျွန်ုပ်တို့၏ဘုရားသခင်ထာဝရဘုရား၊ ကိုယ်တော်တစ်ပါးတည်းသာလျှင်ဘုရားသခင် ဖြစ်တော်မူကြောင်း ကမ္ဘာပေါ်ရှိလူမျိုးအပေါင်း တို့သိရှိကြစေရန် ယခုပင်အကျွန်ုပ်တို့အား အာရှုရိအမျိုးသားတို့၏လက်မှကယ်တော် မူပါ။''
ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.
20 ၂၀ ထိုနောက်မင်းကြီး၏ပတ္ထနာကိုထာဝရ ဘုရားနားညောင်းတော်မူသဖြင့် ဟေဇကိ မင်းအတွက် ဟေရှာယမှတစ်ဆင့်ရောက် လာသောဗျာဒိတ်တော်မှာ၊-
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ: “ಇಸ್ರಾಯೇಲಿನ ಯೆಹೋವ ದೇವರ ಮಾತಿದು: ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು ಮಾಡಿದ ಪ್ರಾರ್ಥನೆಯನ್ನು ಕೇಳಿದ್ದೇನೆ.
21 ၂၁ ``အချင်းသနာခရိပ်၊ ယေရုရှလင်မြို့သည် သင့်ကိုကြည့်၍ပြုံးကာပြက်ရယ်ပြုလေပြီ။-
ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “‘ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.
22 ၂၂ သင်သည်အဘယ်သူအားစော်ကားကဲ့ရဲ့လျက် နေသည်ကို သင်သိပါသလော။ သင်သည်ဣသ ရေလအမျိုးသားတို့၏သန့်ရှင်းမြင့်မြတ် တော်မူသော ငါဘုရားအားမလေးမခန့် ပြု၍ နေပါသည်တကား။-
ನೀನು ಯಾರನ್ನು ನಿಂದಿಸಿ, ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?
23 ၂၃ သင်သည်မိမိ၏စစ်ရထားအပေါင်းဖြင့် လေဗနုန် ပြည်ရှိအမြင့်ဆုံးတောင်များကိုနှိမ်နင်းအောင်မြင် ခဲ့ကြောင်း ငါ့အားကြွားဝါရန်သံတမန်များကို စေလွှတ်ခဲ့၏။ သင်သည်ထိုအရပ်ရှိအမြင့်ဆုံး သစ်ကတိုးပင်များနှင့် အလှဆုံးထင်းရှူးပင် များကိုခုတ်လှဲကာ တောနက်ကြီးများသို့ ရောက်ရှိခဲ့ကြောင်းကြွားဝါခဲ့၏။-
ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿದ್ದೀ, “ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ, ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ, ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಗಡಿಸ್ಥಳಗಳಲ್ಲಿಯೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.
24 ၂၄ သင်သည်ရေတွင်းများကိုတူး၍တိုင်းတစ်ပါး မှရေကိုသောက်ခဲ့သည်ဟူ၍လည်းကောင်း၊ သင် ၏တပ်မတော်သားတို့သည် ခြေဖြင့်နင်း၍နိုင်း မြစ်ရေကိုခန်းခြောက်စေခဲ့သည်ဟူ၍လည်း ကောင်းကြွားခဲ့၏။
ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ.”
25 ၂၅ ``ရှေးမဆွကပင်လျှင်ဤအမှုအရာများ ကို ငါစီမံခဲ့ကြောင်းသင်အဘယ်အခါ၌မျှ မကြားဘူးသလော။ ယခုထိုအမှုအရာ များကိုငါဖြစ်ပွားစေပြီ။ ခံတပ်မြို့များကို အမှိုက်ပုံဖြစ်စေနိုင်သောတန်ခိုးကိုသင့် အားငါပေးအပ်ခဲ့၏။-
“‘ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ.
26 ၂၆ ထိုမြို့များတွင်နေထိုင်သူတို့သည်စွမ်းရည် မရှိ၊ ထိတ်လန့်ကြောက်ရွံ့လျက်အရှေ့အရပ်မှ လေပူတိုက်၍ ညှိုးနွမ်းသွားသည့်စားကျက် မြက်၊ အိမ်ခေါင်မိုးပေါ်ရှိပေါင်းပင်များနှင့် တူကြ၏။
ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.
27 ၂၇ ``သို့ရာတွင်သင်၏အကြောင်းကိုအကုန်အစင် ငါသိ၏။ သင်အဘယ်အမှုကိုပြု၍အဘယ် အရပ်သို့သွားသည်ကိုလည်းကောင်း၊ ငါ့အား အဘယ်မျှအမျက်ထွက်လျက်နေသည်ကို လည်းကောင်းငါသိ၏။-
“‘ಆದರೆ ನೀನು ಎಲ್ಲಿ ವಾಸಿಸುವೆಯೆಂಬುದನ್ನು ನೀನು ಯಾವಾಗ ಬರುವೆ ಹೋಗುವೆ ಎಂಬುದನ್ನು ನೀನು ನನ್ನ ಮೇಲೆ ಹೇಗೆ ಕೋಪಿಸಿಕೊಳ್ಳುವೆ? ಎಂಬುದನ್ನು ನಾನು ಬಲ್ಲೆನು.
28 ၂၈ သင်အမျက်ထွက်ပုံ၊ မာန်မာနကြီးပုံတို့ကို ငါကြားသိရပြီ။ သို့ဖြစ်၍ငါသည်သင့်ကို နှာကွင်းတပ်၍ဇက်ခွံ့ပြီးလျှင် လာလမ်းအတိုင်း ပြန်စေမည်'' ဟူ၍တည်း။
ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ, ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ, ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.’
29 ၂၉ ထိုနောက်ဟေရှာယသည်ဟေဇကိမင်း အား``နောင်အခါဖြစ်ပျက်မည့်အမှုအရာ များ၏ရှေ့ပြေးနိမိတ်ကားဤသို့တည်း။ သင်သည်ယခုနှစ်နှင့်နောင်နှစ်ခါ၌ စပါး ရိုင်းကိုသာလျှင်စားရလိမ့်မည်။ သို့ရာတွင် တတိယနှစ်၌မူဂျုံစပါးကိုစိုက်ပျိုး ရိတ်သိမ်းရလိမ့်မည်။ စပျစ်ပင်များကိုလည်း စိုက်၍ စပျစ်သီးများကိုစားရလိမ့်မည်။-
“ಹಿಜ್ಕೀಯನೇ, ಇದು ನಿಮಗೆ ಸಂಕೇತವಾಗಿರುವದು, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವಿರಿ.
30 ၃၀ ယုဒပြည်တွင်အသက်မသေဘဲကျန်ရှိ နေသူတို့သည် မြေတွင်နက်စွာအမြစ်စွဲ ၍သီးနှံများကိုဆောင်သည့်အပင်များ ကဲ့သို့တိုးတက်ဖွံ့ဖြိုးကြလိမ့်မည်။-
ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.
31 ၃၁ ယေရုရှလင်မြို့နှင့်ဇိအုန်တောင်ပေါ်တွင်လူ တို့သည် အသက်မသေဘဲကျန်ရှိကြလိမ့်မည်။ အဘယ်ကြောင့်ဆိုသော်ယင်းသို့ဖြစ်ပျက်စေ ရန်ထာဝရဘုရားသန္နိဋ္ဌာန်ချမှတ်ထား တော်မူသောကြောင့်ဖြစ်၏။
ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.
32 ၃၂ ``အာရှုရိဧကရာဇ်မင်း၏အကြောင်းနှင့်ပတ် သက်၍ ထာဝရဘုရားက`သူသည်ဤမြို့သို့ ဝင်ရမည်မဟုတ်။ မြို့ထဲသို့လည်းမြားတစ် လက်မျှပစ်လွှတ်ရမည်မဟုတ်။ မြို့ကိုဝိုင်းရံ တိုက်ခိုက်ရန်မြေကတုတ်များကိုလည်းဖို့ လုပ်ရမည်မဟုတ်။-
“ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “‘ಅವನು ಈ ಪಟ್ಟಣದೊಳಗೆ ಬರುವುದಿಲ್ಲ; ಅಲ್ಲಿ ಬಾಣವನ್ನು ಎಸೆಯುವುದಿಲ್ಲ; ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು; ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.
33 ၃၃ သူသည်မြို့ထဲသို့မဝင်ရဘဲလာလမ်းဖြင့်ပြန် ရမည်။ ဤကားငါထာဝရဘုရားမိန့်တော်မူ သောစကားဖြစ်၏။-
ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.
34 ၃၄ ငါသည်ငါ၏ဂုဏ်တော်ကိုလည်းကောင်း၊ ငါ ၏အစေခံဒါဝိဒ်အားပေးခဲ့သည့်ကတိ တော်ကိုလည်းကောင်းထောက်၍ ဤမြို့ကိုကာ ကွယ်မည်' ဟုမိန့်တော်မူ၏'' ဟူ၍ဗျာဒိတ် တော်ကိုပြန်ကြားလေသည်။
ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.’”
35 ၃၅ ထိုည၌ထာဝရဘုရား၏ကောင်းကင်တမန်သည် အာရှုရိတပ်စခန်းသို့ဝင်၍တပ်သားတစ်သိန်း ရှစ်သောင်းငါးထောင်ကိုဒဏ်ခတ်သဖြင့် နောက် တစ်နေ့အရုဏ်တက်ချိန်၌ထိုသူအပေါင်း တို့သည်သေလျက်နေကြ၏။-
ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.
36 ၃၆ ထိုအခါအာရှုရိဧကရာဇ်မင်းသည် တပ် ခေါက်၍နိနေဝေမြို့သို့ပြန်တော်မူ၏။-
ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
37 ၃၇ တစ်နေ့သ၌သူသည်မိမိဘုရားနိသရုတ် ၏ဗိမာန်တော်တွင် ဝတ်ပြုနေစဉ်သားတော်များ ဖြစ်သောအာဒြမ္မေလက်နှင့်ရှရေဇာတို့သည် မင်း ကြီးအားဋ္ဌားဖြင့်လုပ်ကြံပြီးလျှင်အာရရတ် ပြည်သို့ထွက်ပြေးကြ၏။ အခြားသားတော် တစ်ပါးဖြစ်သူဧသရဟဒ္ဒုန်သည် ခမည်း တော်၏အရိုက်အရာကိုဆက်ခံ၍နန်းတက် လေသည်။
ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.