< ၄ ဓမ္မရာဇဝင် 7 >
1 ၁ ဧလိရှဲက``ထာဝရဘုရားမိန့်တော်မူသော စကားကိုနားထောင်တော်မူပါ။ နက်ဖြန်ဤ အချိန်ရောက်သော် ရှမာရိမြို့စျေးထဲတွင် အကောင်းဆုံးဂျုံဆန်ဆယ်ပေါင် သို့မဟုတ် မုရောဆန်ပေါင်နှစ်ဆယ်ကိုငွေသားတစ်ကျပ် ဖြင့်ဝယ်ယူနိုင်လိမ့်မည်'' ဟုပြန်လည်လျှောက် ထား၏။
ಆಗ ಎಲೀಷನು, “ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಿಲಲ್ಲಿ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಆರು ಕಿಲೋಗ್ರಾಂ ಜವೆಗೋಧಿ ಒಂದು ಬೆಳ್ಳಿ ನಾಣ್ಯಕ್ಕೆ ಮಾರಲಾಗುವುದು,” ಎಂದನು.
2 ၂ မင်းကြီး၏သက်တော်စောင့်အဖြစ်ဖြင့် လိုက်ပါ လာသည့်တပ်မှူးက``အကယ်၍ထာဝရဘုရား ကိုယ်တော်တိုင်ပင်လျှင်မိုးကိုချက်ချင်းရွာစေ ကာမူ ဤသို့ဖြစ်နိုင်လိမ့်မည်မဟုတ်'' ဟုပြော၏။ ဧလိရှဲက``သင်သည်ဤသို့ဖြစ်ပျက်သည်ကို တွေ့မြင်ရမည်ဖြစ်သော်လည်း စားရလိမ့်မည် မဟုတ်'' ဟုပြန်ပြောလေ၏။
ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೆ, ಈ ಕಾರ್ಯ ಸಂಭವಿಸುವುದೋ?” ಎಂದನು. ಅದಕ್ಕವನು, “ನೀನು ನಿನ್ನ ಕಣ್ಣುಗಳಿಂದ ಅದನ್ನು ನೋಡುವೆ, ಆದರೆ ಅದರಲ್ಲಿ ಯಾವುದನ್ನೂ ತಿನ್ನುವುದಿಲ್ಲ,” ಎಂದನು.
3 ၃ အရေပြားရောဂါစွဲကပ်သူလူလေးယောက်တို့ သည် မြို့တံခါးပြင်တွင်ထိုင်လျက်``ငါတို့သည် မသေမချင်းဤအရပ်တွင်အဘယ်ကြောင့် စောင့်နေရကြမည်နည်း။-
ಆಗ ಊರು ಬಾಗಿಲ ದ್ವಾರದಲ್ಲಿ ನಾಲ್ಕು ಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರು, “ನಾವು ಸಾಯುವವರೆಗೂ ಇಲ್ಲಿ ಕುಳಿತುಕೊಂಡಿರುವುದೇನು?
4 ၄ မြို့ထဲသို့ဝင်လျှင်ငါတို့အစာငတ်၍သေရ မည်။ ဤအရပ်တွင်နေလျှင်လည်းသေရကြမည်။ ထို့ကြောင့်ရှုရိတပ်စခန်းသို့ငါတို့သွားကြ ကုန်အံ့။ သူတို့ထားလျှင်ရှင်ရမည်။ သတ်လျှင် သေရမည်'' ဟုအချင်းချင်းပြောဆိုကြ၏။-
ನಾವು ಇಲ್ಲಿಯೇ ಇದ್ದರೆ, ಪಟ್ಟಣದಲ್ಲಿ ಬರವಿರುವುದರಿಂದ ಅಲ್ಲಿ ಸಾಯುತ್ತೇವೆ. ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯುತ್ತೇವೆ. ಆದ್ದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಅವರಿಗೆ ಶರಣಾಗೋಣ. ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಅವರು ನಮ್ಮನ್ನು ಕೊಲ್ಲುವುದಾದರೆ ಕೊಲ್ಲಲಿ,” ಎಂದುಕೊಂಡರು.
5 ၅ ထိုနောက်သူတို့သည်မှောင်စပြုချိန်၌ရှုရိတပ် စခန်းသို့သွားကြ၏။ သို့ရာတွင်ထိုအရပ်သို့ ရောက်သောအခါ လူတစ်စုံတစ်ယောက်ကိုမျှ မတွေ့ရကြ။-
ಹಾಗೆಯೇ ಸಂಜೆಯಲ್ಲಿ ಎದ್ದು, ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ, ಅಲ್ಲಿ ಯಾರೂ ಇರಲಿಲ್ಲ.
6 ၆ ထာဝရဘုရားသည်ရှုရိအမျိုးသားတို့ အားမြင်းစီးသူရဲများ၊ စစ်ရထားများဖြင့် တပ်မတော်ကြီးချီတက်လာသောအသံကို ကြားစေတော်မူသဖြင့် ရှုရိအမျိုးသားတို့ က``ငါတို့ကိုတိုက်ခိုက်ရန်ဣသရေလဘုရင် သည် ဟိတ္တိဘုရင်နှင့်အီဂျစ်ဘုရင်တို့ကိုစစ် ကူတောင်းလေပြီ'' ဟုအချင်းချင်းပြောဆို ကြ၏။-
ಏಕೆಂದರೆ ಯೆಹೋವ ದೇವರು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ, ಕುದುರೆಗಳ ಮತ್ತು ಮಹಾ ಸೈನ್ಯದ ಶಬ್ದವೂ ಕೇಳಿಸುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊಬ್ಬರು, “ಇಸ್ರಾಯೇಲಿನ ಅರಸನು ಹಿತ್ತಿಯರ ಅರಸರನ್ನೂ, ಈಜಿಪ್ಟಿನ ಅರಸರನ್ನೂ ನಮ್ಮ ಮೇಲೆ ದಾಳಿಮಾಡಲು ಅವರನ್ನು ಕೂಲಿಗೆ ಕರೆದಿದ್ದಾನೆ,” ಎಂದುಕೊಂಡರು.
7 ၇ သို့ဖြစ်၍ထိုညဦး၌သူတို့သည်မိမိတို့၏ တဲများ၊ မြင်းများနှင့်မြည်းတို့ကိုစွန့်ကာ အ သက်ဘေးမှလွတ်ရန်ထွက်ပြေးကြကုန်၏။ သူ တို့၏တပ်စခန်းကိုမူရှိမြဲအတိုင်းထားခဲ့ ကြ၏။
ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ, ತಮ್ಮ ಕುದುರೆಗಳನ್ನೂ, ತಮ್ಮ ಕತ್ತೆಗಳನ್ನೂ ಬಿಟ್ಟುಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋಗಿದ್ದರು.
8 ၈ ထိုသူလေးယောက်တို့သည်တပ်စခန်းအစပ် သို့ရောက်သောအခါ တဲတစ်ခုကိုဝင်၍ထို တဲတွင်ရှိသောအစားအစာများကိုစား သောက်ကြ၏။ ထိုနောက်မိမိတို့တွေ့ရှိသည့် ရွှေ၊ ငွေ၊ အဝတ်အစားများကိုယူ၍ထွက်သွား ပြီးလျှင် ထိုပစ္စည်းများကိုဝှက်ထားကြ၏။ သူ တို့သည်နောက်တစ်ဖန်ပြန်လာ၍ အခြားတဲ တစ်ခုသို့ဝင်ကာရှေးနည်းတူပြုကြပြန်၏။-
ಆ ಕುಷ್ಠರೋಗಿಗಳು ದಂಡಿನ ಅಂಚಿನವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ, ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿಬಂಗಾರವನ್ನೂ, ವಸ್ತ್ರಗಳನ್ನೂ ತೆಗೆದುಕೊಂಡುಹೋಗಿ ಬಚ್ಚಿಟ್ಟರು. ತಿರುಗಿಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ, ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡುಹೋಗಿ ಬಚ್ಚಿಟ್ಟರು.
9 ၉ သို့ရာတွင်သူတို့က``ငါတို့ဤသို့ပြုနေကြ ရန်မသင့်။ ငါတို့မှာသတင်းကောင်းရှိသည် ဖြစ်၍ ထိုသတင်းကိုမျိုသိပ်မထားသင့်ကြ။ အကယ်၍ငါတို့သည်ထိုသတင်းကိုမိုး လင်းချိန်တိုင်အောင်မပြောဘဲနေလျှင် ဧကန် မုချအပြစ်ဒဏ်သင့်ရကြပေမည်။ သို့ဖြစ် ၍ယခုပင်မင်းကြီး၏မှူးမတ်တို့ထံသွား ရောက်ပြောကြားကုန်အံ့'' ဟုအချင်းချင်း ပြောဆိုကြ၏။-
ಅನಂತರ ಅವರು, “ಇದು ಶುಭವಾರ್ತೆಯ ದಿವಸ, ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ, ಶಿಕ್ಷೆಗೆ ಪಾತ್ರರಾಗಬಹುದು. ಆದ್ದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ,” ಎಂದು ಮಾತನಾಡಿಕೊಂಡರು.
10 ၁၀ ထိုနောက်သူတို့သည်ရှုရိတပ်စခန်းမှထွက် ခွာ၍မြို့သို့သွားပြီးလျှင် မြို့တံခါးရှိအစောင့် တပ်သားတို့အား``ငါတို့သည်ရှုရိတပ်စခန်း သို့သွားရောက်ရာလူတစ်စုံတစ်ယောက်ကိုမျှ မမြင်ခဲ့ပါ။ လူသံကိုလည်းမကြားခဲ့ပါ။ မြင်းများနှင့်မြည်းများသည်ချည်လျက်ပင် ရှိပါသည်။ တဲများမှာလည်းရှုရိအမျိုးသား တို့ထားခဲ့သည့်အတိုင်းပင်ရှိနေပါသည်'' ဟု အော်ဟစ်၍ပြောကြားကြ၏။
ಹಾಗೆಯೇ ಅವರು ಬಂದು ಪಟ್ಟಣದ ಬಾಗಿಲು ಕಾಯುವವನನ್ನು ಕರೆದು ಅವನಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು, ಅಲ್ಲಿ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ,” ಎಂದರು.
11 ၁၁ တံခါးစောင့်တို့သည်ထိုသတင်းကိုကြေညာ ၍ နန်းတော်သို့သတင်းရောက်ရှိသွား၏။-
ಅವನು ಬಾಗಿಲು ಕಾಯುವವರನ್ನು ಕರೆದನು. ಅವರು ಒಳಗಿರುವ ಅರಸನ ಮನೆಯವರಿಗೆ ತಿಳಿಸಿದರು.
12 ၁၂ ထိုအချိန်၌မိုးမလင်းသေးသော်လည်း မင်းကြီး သည်အိပ်ယာမှထ၍မှူးမတ်တို့အား``ရှုရိ အမျိုးသားတို့၏ပရိယာယ်ကိုငါပြောမည်။ ဤမြို့တွင်ငါတို့အစာငတ်လျက်နေကြ ကြောင်းသိသဖြင့်သူတို့သည် မိမိတို့တပ် စခန်းမှထွက်ခွာ၍တပ်ပုန်းချထားလေပြီ။ မြို့ပြင်သို့ငါတို့ထွက်၍အစားအစာရှာဖွေ ကြသောအခါမှ ငါတို့အားလက်ရဖမ်းဆီး ကာမြို့ကိုသိမ်းယူကြလိမ့်မည်'' ဟုဆို၏။
ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಅರಾಮ್ಯರ ಹಂಚಿಕೆಯನ್ನು ಹೇಳುತ್ತೇನೆ ಕೇಳಿ. ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುದನ್ನು ಅವರು ಬಲ್ಲರು. ಆದ್ದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೇ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ.”
13 ၁၃ အမတ်တစ်ဦးက``ဤမြို့ရှိလူတို့သည်သေ ဆုံးသွားကြသူတို့နည်းတူသေရကြမည် ဖြစ်ပါသည်။ သို့ဖြစ်၍အဖြစ်မှန်ကိုသိရှိ နိုင်ရန် အကျွန်ုပ်တို့တွင်ကျန်ရှိနေသေးသော မြင်းငါးကောင်နှင့်လူအချို့ကိုစေလွှတ် တော်မူပါ'' ဟုလျှောက်၏။-
ಆಗ ಅವನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತೆಗೆದುಕೊಂಡು ಹೋಗಲಿ. ಅವು ಇಸ್ರಾಯೇಲಿನ ಸಮಸ್ತ ಸಮೂಹದಲ್ಲಿ ಉಳಿದವುಗಳ ಹಾಗೆ ಇವೆ. ಅಂದರೆ ಇಸ್ರಾಯೇಲಿನ ಸಮಸ್ತ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ, ನಾವು ಕಳುಹಿಸಿ ನೋಡೋಣ,” ಎಂದನು.
14 ၁၄ ထို့နောက်သူတို့သည်လူအချို့ကိုရွေးချယ် ကြ၏။ မင်းကြီးသည်ထိုသူတို့အားရှုရိတပ် မတော်၏ဖြစ်ရပ်ကို စုံစမ်းရန်စစ်ရထားနှစ် စီးနှင့်စေလွှတ်တော်မူ၏။-
ಆದ್ದರಿಂದ ಅವರು ಎರಡು ಜೋಡಿ ಕುದುರೆಗಳೊಂದಿಗೆ ಎರಡು ರಥಗಳನ್ನು ಆರಿಸಿಕೊಂಡರು ಮತ್ತು ಅರಸನು ಅರಾಮ್ಯರ ಸೈನ್ಯದ ಹಿಂದೆ ಅವರನ್ನು ಕಳುಹಿಸಿ, “ಹೋಗಿ ಏನಾಯಿತು ಎಂದು ತಿಳಿದುಕೊಳ್ಳಿ” ಎಂದು ಅವನು ರಾಹುತರಿಗೆ ಆಜ್ಞಾಪಿಸಿದನು.
15 ၁၅ သူတို့သည်ယော်ဒန်မြစ်တိုင်အောင်သွားရောက် ကြရာ ရှုရိအမျိုးသားတို့ထွက်ပြေးစဉ်အခါ က စွန့်ထားခဲ့သည့်အဝတ်အစားများနှင့်လက် နက်ပစ္စည်းများကို လမ်းတစ်လျှောက်လုံးတွင်တွေ့ မြင်ရကြ၏။ ထိုနောက်သူတို့သည်မင်းကြီး ထံပြန်၍အစီရင်ခံကြ၏။-
ಅವರು ಅವರ ಹಿಂದೆ ಯೊರ್ದನಿನವರೆಗೆ ಹೋದರು. ಮಾರ್ಗದಲ್ಲೆಲ್ಲಾ ಅರಾಮ್ಯರು ಅವಸರದಿಂದ ಬಿಸಾಡಿದ ವಸ್ತ್ರಗಳೂ, ಪಾತ್ರೆಗಳೂ ತುಂಬಿದ್ದವು. ದೂತರು ತಿರುಗಿಬಂದು ಅರಸನಿಗೆ ತಿಳಿಸಿದರು.
16 ၁၆ ရှမာရိမြို့သားတို့သည်ပြေး၍ထွက်လာပြီး လျှင် ရှုရိတပ်စခန်းကိုလုယက်ကြကုန်၏။ ထို့ နောက်ထာဝရဘုရားမိန့်တော်မူခဲ့သည်အတိုင်း အကောင်းဆုံးဂျုံဆန်ဆယ်ပေါင်သို့မဟုတ် မုယောဆန်ပေါင်နှစ်ဆယ်ကို ငွေသားတစ်ကျပ် ဖြင့်ရောင်းချကြလေသည်။
ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲಿದುಕೊಂಡರು. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರವೇ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೂ, ಆರು ಕಿಲೋಗ್ರಾಂ ಜವೆಗೋಧಿಯು ಒಂದು ಬೆಳ್ಳಿ ನಾಣ್ಯಕ್ಕೂ ಮಾರಲಾಯಿತು.
17 ၁၇ မင်းကြီး၏သက်တော်စောင့်အဖြစ်ဆောင်ရွက် ခဲ့သူတပ်မှူးသည် ထိုအချိန်၌မြို့တံခါး အစောင့်တပ်ကိုကြီးကြပ်အုပ်ချုပ်နေရစဉ် လူတို့တိုးကြိတ်ထွက်ဝင်ရာတွင် သူ့အားနင်း မိကြသဖြင့်သေလေ၏။ ဧလိရှဲအားတွေ့ဆုံ ရန်မင်းကြီးလာရောက်စဉ်အခါက ဧလိရှဲ ကြိုတင်ဟောကြားခဲ့သည်အတိုင်းဖြစ်ပျက် လေသည်။-
ಆದರೆ ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಿಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ, ದೇವರ ಮನುಷ್ಯನು ಹೇಳಿದ್ದ ಪ್ರಕಾರವೇ ಜನರು ಆ ಅಧಿಕಾರಿಯನ್ನು ಪಟ್ಟಣದ ಬಾಗಿಲಲ್ಲಿ ತುಳಿದುಹಾಕಿದ್ದರಿಂದ ಅವನು ಮರಣಹೊಂದಿದನು.
18 ၁၈ ဧလိရှဲက``နောက်တစ်နေ့ဤအချိန်ရောက် လျှင် ရှမာရိမြို့စျေးထဲတွင်အကောင်းဆုံး ဂျုံဆန်ဆယ်ပေါင် သို့မဟုတ်မုယောဆန်ပေါင် နှစ်ဆယ်ကိုငွေသားတစ်ကျပ်နှင့်ရောင်းချ ကြလိမ့်မည်'' ဟုမင်းကြီးအားလျှောက်ထား သောအခါ၊-
ಹಾಗೆಯೇ, “ಆರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಜವೆಗೋಧಿ ಹನ್ನೆರಡು ಕಿಲೋಗ್ರಾಂ ಒಂದು ಬೆಳ್ಳಿ ನಾಣ್ಯಕ್ಕೆ ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಮಾರಲಾಗುವುದು,” ಎಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.
19 ၁၉ ထိုတပ်မှူးက``ထာဝရဘုရားကိုယ်တော်တိုင်ပင် မိုးကိုချက်ချင်းရွာစေကာမူဤသို့ဖြစ်နိုင် လိမ့်မည်မဟုတ်ပါ'' ဟုပြောကြားခဲ့လေသည်။ ထိုအခါဧလိရှဲက``သင်သည်ဤသို့ဖြစ်ပျက် သည်ကိုတွေ့မြင်ရမည်ဖြစ်သော်လည်းစားရ လိမ့်မည်မဟုတ်'' ဟုဆိုခဲ့၏။-
ಆ ಅಧಿಕಾರಿ ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ, ಸಂಭವಿಸುವುದೋ?” ಎಂದು ನುಡಿದಿದ್ದನು. ಅದಕ್ಕವನು, “ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವೆ, ಆದರೆ ನೀನು ಅದನ್ನು ತಿನ್ನುವುದಿಲ್ಲ,” ಎಂದು ಪ್ರವಾದಿಯು ಹೇಳಿದ್ದನು.
20 ၂၀ ဧလိရှဲပြောကြားခဲ့သည့်အတိုင်းပင်တပ် မှူးသည် မြို့တံခါးဝတွင်လူတို့နင်းမိကြ သဖြင့်သေလေသတည်း။
ಆ ಪ್ರಕಾರವೇ ಅವನಿಗೆ ಸಂಭವಿಸಿತು. ಬಾಗಿಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಮರಣಹೊಂದಿದನು.