< ၂ ဓမ္မရာဇဝင် 14 >
1 ၁ ဇေရုယာ၏သားယွာဘသည် အဗရှလုံကို ဒါဝိဒ်မင်းလွန်စွာလွမ်းဆွတ်တသလျက်နေ ကြောင်းသိ၏။-
ಅರಸನಾದ ದಾವೀದನ ಹೃದಯವು ಅಬ್ಷಾಲೋಮನ ಕಡೆಗೆ ಇರುವುದನ್ನು ಚೆರೂಯಳ ಮಗ ಯೋವಾಬನಿಗೆ ತಿಳಿಯಿತು.
2 ၂ ထို့ကြောင့်သူသည်တေကောမြို့နေအသိ အလိမ္မာရှိသူအမျိုးသမီးတစ်ယောက်ကို အခေါ်ခိုင်းပြီးလျှင် ထိုအမျိုးသမီးအား``သင် သည်ငိုကြွေးမြည်တမ်းဟန်ပြုလော့။ ဝမ်းနည်း ပူဆွေးသည့်အနေဖြင့်ဝတ်စား၍ခေါင်းမဖီး ဘဲ ကာလကြာမြင့်စွာငိုကြွေးမြည်တမ်းနေ သူအမျိုးသမီးတစ်ဦးကဲ့သို့ပြုမူလော့။-
ಆದುದರಿಂದ ಯೋವಾಬನು ತೆಕೋವಗೆ ಮನುಷ್ಯರನ್ನು ಕಳುಹಿಸಿ, ಅಲ್ಲಿಂದ ಒಬ್ಬ ಜ್ಞಾನವುಳ್ಳ ಸ್ತ್ರೀಯನ್ನು ಕರಿಸಿ ಅವಳಿಗೆ, “ನೀನು ಗೋಳಾಡುವವಳ ಹಾಗೆ ನಟಿಸಿ, ದುಃಖ ವಸ್ತ್ರಗಳನ್ನು ಧರಿಸಿಕೋ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳದೆ, ಸತ್ತವನಿಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು,
3 ၃ ထိုနောက်ဘုရင်၏ထံတော်သို့သွား၍ငါပြော သည့်အတိုင်းလျှောက်ထားလော့'' ဟုဆိုပြီး နောက်မင်းကြီးအားမည်သို့လျှောက်ထားရ မည်ကိုသင်ကြားပေး၏။
ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು,” ಎಂದು ಹೇಳಿ ಯೋವಾಬನು ಅವಳಿಗೆ ಕಲಿಸಿಕೊಟ್ಟನು.
4 ၄ ထိုအမျိုးသမီးသည်ဘုရင့်ထံသို့သွား၍ ပျပ်ဝပ်ရှိခိုးလျက်``အရှင်မင်းကြီးကျွန်တော် မအားကယ်တော်မူပါ'' ဟုလျှောက်၏။
ಹಾಗೆಯೇ ತೆಕೋವದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿದಳು. ಮೋರೆ ಕೆಳಗಾಗಿ ನೆಲಕ್ಕೆ ಬಿದ್ದು ವಂದಿಸಿ, “ಅರಸನೇ, ಸಹಾಯಮಾಡು,” ಎಂದಳು.
5 ၅ မင်းကြီးက``သင်သည်အဘယ်အရာကို အလိုရှိသနည်း'' ဟုမေးတော်မူလျှင်၊ အမျိုးသမီးက``ကျွန်တော်မသည်ဆင်းရဲ သူမုဆိုးမဖြစ်ပါ၏။ ကျွန်တော်မ၏ခင်ပွန်း သည်သေပါပြီ။-
ಅರಸನು ಅವಳಿಗೆ, “ನಿನಗೆ ಏನಾಯಿತು?” ಎಂದನು. ಅದಕ್ಕವಳು, “ನಾನು ನಿಶ್ಚಯವಾಗಿ ವಿಧವೆಯಾದ ಸ್ತ್ರೀಯು. ನನ್ನ ಗಂಡನು ಸತ್ತುಹೋಗಿದ್ದಾನೆ.
6 ၆ ကျွန်တော်မတွင်သားနှစ်ယောက် ရှိပါ၏။ တစ်နေ့ သောအခါသူတို့သည်ဖျန်ဖြေပေးမည့်သူတစ် ဦးတစ်ယောက်မျှမရှိသည့်လယ်ကွင်းထဲ၌ရန် ဖြစ်ကြသဖြင့် တစ်ယောက်ကအခြားတစ် ယောက်ကိုသတ်ဖြတ်လိုက်ပါ၏။-
ಆದರೆ ನಿನ್ನ ಸೇವಕಳಿಗೆ ಇಬ್ಬರು ಪುತ್ರರಿದ್ದರು. ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು. ಅವರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ, ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.
7 ၇ သို့ဖြစ်၍အရှင်၊ ယခုအခါကျွန်တော်မ၏ ဆွေမျိုးတို့သည်ကျွန်တော်မအားရန်ဘက်ပြု ကာ ကျွန်တော်မ၏သားငယ်ကိုသူ၏အစ်ကို အားသတ်သည့်အတွက်သေစားသေစေရန် အပ်ရမည်ဟုတောင်းဆိုနေကြပါ၏။ ဤ အတိုင်းသာထိုသူတို့ပြုကြပါမူကျွန် တော်မ၏နောက်ဆုံးမျှော်လင့်အားထားရာ သားတစ်ယောက်မျှကျန်ရှိတော့မည်မဟုတ် ပါ။ ကျွန်တော်မခင်ပွန်း၏မျိုးဆက်သည် လည်းပြတ်သွားပါလိမ့်မည်'' ဟုလျှောက် လေ၏။
ಆದ್ದರಿಂದ ಕುಟುಂಬದವರೆಲ್ಲರು ನಿನ್ನ ಸೇವಕಿಯ ವಿರೋಧವಾಗಿ ಎದ್ದು, ‘ತನ್ನ ಸಹೋದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ಅವನನ್ನು ಒಪ್ಪಿಸಿಕೊಡು, ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಎನ್ನುತ್ತಾರೆ. ಹೀಗೆಯೇ ಅವರು ನನಗೆ ಉಳಿದಿರುವ ಒಂದು ಕೆಂಡವನ್ನು ಆರಿಸಿ, ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಅಳಿಸಬೇಕೆಂದಿದ್ದಾರೆ,” ಎಂದಳು.
8 ၈ မင်းကြီးက``ဤအမှုကိုငါဆောင်ရွက်ပေး မည်။ သင်အိမ်သို့ပြန်လော့'' ဟုဆိုလျှင်၊
ಆಗ ಅರಸನು ಆ ಸ್ತ್ರೀಗೆ, “ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ,” ಎಂದನು.
9 ၉ အမျိုးသမီးက``အရှင်မင်းကြီး၊ အရှင် အဘယ်သို့ပင်ပြုသည်မဆိုကျွန်တော်မ နှင့်မိသားစုတို့အပေါ်အပြစ်ရောက်ပါ စေသော။ အရှင်နှင့်အရှင့်ဆွေတော်မျိုးတော် တို့သည်အပြစ်ကင်းကြပါစေသော'' ဟု လျှောက်၏။
ಆದರೆ ತೆಕೋವದ ಸ್ತ್ರೀಯು ಅರಸನಿಗೆ, “ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ, ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಅರಸನೂ, ಅವನ ಸಿಂಹಾಸನವೂ ನಿರಪರಾಧವಾಗಿರಲಿ,” ಎಂದಳು.
10 ၁၀ မင်းကြီးက``အကယ်၍သင့်အားခြိမ်းခြောက် သူရှိလျှင်သူ့အားငါ့ထံသို့ခေါ်ခဲ့လော့။ သူ သည်သင့်ကိုနောက်တစ်ဖန်မနှောင့်ယှက်ရ'' ဟု ဆို၏။
ಅದಕ್ಕೆ ಅರಸನು, “ಯಾವನಾದರೂ ನಿನಗೆ ಏನಾದರೂ ಹೇಳಿದರೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದೆ ಇರುವನು,” ಎಂದನು.
11 ၁၁ အမျိုးသမီးကလည်း``အရှင်မင်းကြီး၊ ကျွန် တော်မ၏သားကြီးအတွက်လက်စားချေရန် ကြံစည်နေကြသောဆွေမျိုးတို့သည် ကျွန်တော် မ၏သားငယ်ကိုသတ်ခြင်းအားဖြင့် ပိုမိုကြီး လေးသည့်ရာဇဝတ်မှုကိုမပြုကြစေရန် အရှင်၏ဘုရားသခင်ထာဝရဘုရားအား ဆုတောင်းပတ္ထနာပြုတော်မူပါ'' ဟုလျှောက်၏။ ထိုအခါဒါဝိဒ်က``သင်၏သားငယ်သည်စိုး စဉ်းမျှဘေးဥပဒ်မဖြစ်စေရန် အသက်ရှင် တော်မူသောထာဝရဘုရားကိုတိုင်တည်၍ ငါကတိပြု၏'' ဟုဆို၏။
ಆಕೆ, “ಹಾಗಾದರೆ ನನ್ನ ಮಗನು ಸಾಯದಂತೆ ನಾಶನಕ್ಕೆ ನಾಶನವನ್ನು ಕೂಡಿಸುವ ಸೇಡುತೀರಿಸುವವರನ್ನು ತಡೆಯಲು ಅರಸನು ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಲಿ,” ಎಂದಳು. ಅದಕ್ಕೆ ದಾವೀದನು, “ಯೆಹೋವ ದೇವರ ಜೀವದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ,” ಎಂದನು.
12 ၁၂ အမျိုးသမီးက``အရှင်မင်းကြီးကျွန်တော် မအားစကားတစ်ခွန်းထပ်မံလျှောက်ထား ခွင့်ပြုတော်မူပါ'' ဟုတောင်းပန်သောအခါ၊ မင်းကြီးက``လျှောက်လော့'' ဟုဆို၏။
ಆಗ ಆ ಸ್ತ್ರೀಯು, “ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವುದಕ್ಕೆ ಅಪ್ಪಣೆ ಆಗಬೇಕು,” ಎಂದಳು. ಆಗ ಅವನು, “ಹೇಳು,” ಎಂದನು.
13 ၁၃ အမျိုးသမီးက``အရှင်မင်းကြီး၊ အရှင်သည် ဘုရားသခင်၏လူမျိုးတော်အား အဘယ် ကြောင့်မတရားပြုတော်မူပါသနည်း။ ပြည် နှင်ဒဏ်သင့်သူသားတော်ကိုပြန်လာခွင့်ပေး တော်မမူသဖြင့် အရှင်သည်ယခုပင်မိန့်ကြား တော်မူခဲ့သည့်စကားအရ မိမိကိုယ်ကို ပြန်၍အပြစ်ဒဏ်သင့်စေတော်မူပါပြီ။-
ಆಗ ಆ ಸ್ತ್ರೀಯು, “ಹಾಗಾದರೆ, ಏಕೆ ದೇವಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನಡೆಸುವುದೇನು? ಅರಸನು ತಾನು ಬಹಿಷ್ಕರಿಸಿದ ಮಗನನ್ನು ತಿರುಗಿ ಸೇರಿಸಿಕೊಳ್ಳದೆ ಹೋದದ್ದರಿಂದ, ತನ್ನನ್ನು ತಾನೇ ಅಪರಾಧಿ ಎಂದು ತೀರ್ಪುಮಾಡಿದ ಹಾಗಾಯಿತು.
14 ၁၄ ကျွန်တော်မတို့အားလုံးပင်သေရကြမည့် သူများဖြစ်ပါ၏။ ကျွန်တော်မတို့သည်မြေ ပေါ်သို့ဖိတ်ကျသွားသောရေနှင့်တူပါ၏။ ယင်းရေကိုနောက်တစ်ဖန်ကျုံး၍မယူနိုင် တော့ပါ။ ဘုရားသခင်ပင်လျှင်သေသူကို ပြန်၍ရှင်စေတော်မမူပါ။ သို့ရာတွင်ဘုရင် သည်ပြည်နှင်ဒဏ်သင့်သူတစ်ဦးကိုပြန် လည်ခေါ်ယူနိုင်ပါ၏။-
ನಾವೆಲ್ಲರೂ ಸಾಯುವುದು ಅವಶ್ಯವೇ. ನಾವು ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಹಾಗೆ ಯಾರ ಪ್ರಾಣವನ್ನೂ ತೆಗೆಯ ಬಯಸುವವರಲ್ಲ. ಅದಕ್ಕೆ ಬದಲಾಗಿ ಬಹಿಷ್ಕಾರವಾದವವರನ್ನು ತಿರುಗಿ ತಮ್ಮ ಬಳಿಗೆ ಬರುವಂತೆ ದೇವರು ಸದುಪಾಯಗಳನ್ನು ಕಲ್ಪಿಸುವವರಾಗಿದ್ದಾರೆ.
15 ၁၅ အရှင်မင်းကြီး၊ အရှင့်ထံသို့ကျွန်တော် မလာရောက်လျှောက်ထားရသည့်အကြောင်း မှာ လူတို့သည်ကျွန်တော်မအားခြိမ်းခြောက် ကြသောကြောင့်ဖြစ်ပါ၏။ သို့ဖြစ်၍ကျွန် တော်မ၏ပြန်ကြားချက်အတိုင်းပြုတော် မူလိမ့်မည်ဟုမျှော်လင့်လျက်ကျွန်တော်မ သည်အရှင့်အားလျှောက်ထားရသော်ကောင်း အံ့ဟုတစ်ကိုယ်တည်းပြောဆိုနေမိပါ၏။-
“ಆದ್ದರಿಂದ ಈಗ ಜನರು ನನ್ನನ್ನು ಭಯಪಡಿಸಿದ್ದರಿಂದ, ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತಾನಾಡುವುದಕ್ಕೆ ಬಂದೆನು. ‘ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ. ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು.
16 ၁၆ မင်းကြီးသည်ကျွန်တော်မ၏သားကိုသတ် ၍မိမိလူမျိုးတော်အား ဘုရားသခင်ပေး တော်မူသည့်ပြည်မှပယ်ရှားရန်ကြိုးစား သူတို့၏လက်မှကျွန်တော်မကိုကယ်တော် မူမည်ဖြစ်ကြောင်းကျွန်တော်မသည်တွေး တောမိပါ၏။-
ಏಕೆಂದರೆ ಅರಸನು ಕೇಳಿ ನನ್ನನ್ನೂ, ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕೆಂದಿರುವ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು,’ ಎಂದುಕೊಂಡೆನು.
17 ၁၇ အရှင်မင်းကြီးသည်ဘုရားသခင်၏ကောင်း ကင်တမန်ကဲ့သို့ ကောင်းမကောင်းကိုပိုင်းခြား သိမြင်တော်မူပါ၏။ သို့ဖြစ်၍ကျွန်တော်မ သည်အရှင်၏ကတိတော်အတိုင်း အသက် ချမ်းသာရာရလိမ့်မည်ဟုတစ်ကိုယ်တည်း ပြောဆိုနေမိပါ၏။ အရှင်၏ဘုရားသခင် ထာဝရဘုရားသည်အရှင်နှင့်အတူရှိ တော်မူပါစေသော'' ဟုလျှောက်၏။
“ನಿನ್ನ ದಾಸಿಯು, ‘ಅರಸನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ. ಏಕೆಂದರೆ ಒಳ್ಳೆಯದನ್ನೂ, ಕೆಟ್ಟದ್ದನ್ನೂ ಕೇಳುವುದಕ್ಕೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ ಮತ್ತು ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರಲಿ,’ ಎಂದಳು.”
18 ၁၈ မင်းကြီးက``သင့်အားမေးခွန်းတစ်ခုကိုငါ မေးမည်။ သင်သည်မှန်သည့်အတိုင်းပွင့်လင်း စွာဖြေကြားရမည်'' ဟုဆိုသော်၊ အမျိုးသမီးက``အရှင်မင်းကြီးမေးလိုရာ မေးတော်မူပါ'' ဟုလျှောက်၏။
ಆಗ ಅರಸನು ಉತ್ತರವಾಗಿ ಆ ಸ್ತ್ರೀಗೆ, “ನಾನು ನಿನ್ನಿಂದ ಕೇಳುವುದನ್ನು ನನಗೆ ಮರೆಮಾಡಬೇಡ,” ಎಂದನು. ಅದಕ್ಕವಳು, “ಅರಸನಾದ ನನ್ನ ಒಡೆಯನು ಮಾತನಾಡಲಿ,” ಎಂದಳು.
19 ၁၉ မင်းကြီးက``ဤသို့ငါ့အားလျှောက်ထားရန် သင့်အားစေခိုင်းသူမှာယွာဘပေလော'' ဟု မေးတော်မူ၏။ အမျိုးသမီးက``အရှင်မင်းကြီး၊ အရှင်၏မေး ခွန်းကိုဖြေကြားရန်လွှဲဖယ်၍မဖြစ်နိုင်ကြောင်း ကျွန်တော်မကျိန်ဆိုလျှောက်ထားပါ၏။ မည်သို့ ပြုရမည်ကိုလည်းကောင်း၊ မည်သို့လျှောက်ထား ရမည်ကိုလည်းကောင်း သင်ကြားပေးသူမှာ ကိုယ်တော့်ကျွန်ယွာဘပင်ဖြစ်ပါ၏။-
ಅದಕ್ಕೆ ಅರಸನು, “ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ?” ಎಂದು ಕೇಳಿದನು. ಆ ಸ್ತ್ರೀಯು ಉತ್ತರವಾಗಿ, “ನಿನ್ನ ಜೀವದಾಣೆ, ಅರಸನಾದ ನನ್ನ ಒಡೆಯನೇ, ನೀನು ಒಂದು ಮಾತು ಹೇಳಿದರೆ, ನಾವು ಅದನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ಏಕೆಂದರೆ ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ, ಈ ಎಲ್ಲಾ ಮಾತುಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
20 ၂၀ သူသည်ယင်းသို့ပြုရခြင်းမှာဤအမှု၏ အခြေအနေကိုပြောင်းလဲစေရန်ပင်ဖြစ် ပါ၏။ အရှင်မင်းကြီးသည်ဘုရားသခင်၏ ကောင်းကင်တမန်ကဲ့သို့ ဉာဏ်ပညာရှိ၍ဖြစ် ပျက်သည့်အမှုအရာမှန်သမျှကိုသိတော် မူပါ၏'' ဟုလျှောက်ထား၏။
ಈ ಮಾತನ್ನು ರೂಪಕವಾಗಿ ತಿರುಗಿಸುವುದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿಯಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ದೇವದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ,” ಎಂದಳು.
21 ၂၁ ထိုနောက်မင်းကြီးသည်ယွာဘအား``သင်အလို ရှိသည့်အတိုင်းပြုရန်ငါဆုံးဖြတ်ပြီးပြီ။ ထို သူငယ်အဗရှလုံကိုသွား၍ခေါ်လော့'' ဟု မိန့်တော်မူ၏။
ಆದ್ದರಿಂದ ಅರಸನು ಯೋವಾಬನಿಗೆ, “ನಾನು ಈ ಕಾರ್ಯವನ್ನು ಮಾಡಿದೆನು. ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ತಿರುಗಿ ಕರೆದುಕೊಂಡು ಬಾ,” ಎಂದನು.
22 ၂၂ ယွာဘသည်ဒါဝိဒ်၏ရှေ့တော်၌ပျပ်ဝပ်ပြီး လျှင်``အရှင်မင်းကြီး၊ အရှင့်အားဘုရားသခင် ကောင်းချီးပေးတော်မူပါစေသော။ အရှင်သည် အကျွန်ုပ်အားနှစ်သက်တော်မူကြောင်းယခု အကျွန်ုပ်သိရှိရပါပြီ။ အဘယ်ကြောင့်ဆို သော်အရှင်သည်အကျွန်ုပ်ပန်ကြားသည့် အတိုင်းပြုတော်မူသောကြောင့်ဖြစ်ပါ၏'' ဟုလျှောက်လေ၏။-
ಆಗ ಯೋವಾಬನು ಮೋರೆ ಕೆಳಗಾಗಿ ನೆಲದ ಮೇಲೆ ಬಿದ್ದು ವಂದಿಸಿದನು. ಯೋವಾಬನು, “ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ, ನನ್ನ ಒಡೆಯನಾದ ಅರಸನೇ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂಬುದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು,” ಎಂದನು.
23 ၂၃ ထိုနောက်သူသည်ထ၍ဂေရှုရမြို့သို့သွား၍ အဗရှလုံအားယေရုရှလင်မြို့သို့ပြန်လည် ခေါ်ခဲ့၏။-
ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.
24 ၂၄ သို့ရာတွင်မင်းကြီးသည်အဗရှလုံအား နန်းတော်တွင်း၌နေထိုင်ခွင့်မပြုရန်အမိန့် ထုတ်ဆင့်တော်မူ၏။ မင်းကြီးက``ငါသည်သူ့ ကိုမတွေ့မမြင်လို'' ဟုဆို၏။ ထို့ကြောင့် အဗရှလုံသည်ကိုယ်ပိုင်အိမ်တော်တွင်နေ ထိုင်ရသော်လည်းမင်းကြီး၏ရှေ့တော်သို့ ဝင်ရောက်ခွင့်မရချေ။
ಆದರೆ ಅರಸನು, “ಅವನು ತನ್ನ ಮನೆಗೆ ತಿರುಗಿ ಹೋಗಲಿ. ಅವನು ನನ್ನ ಮುಖವನ್ನು ನೋಡಬಾರದು,” ಎಂದನು. ಆದ್ದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿಹೋದನು.
25 ၂၅ ဣသရေလပြည်တွင်ရုပ်ရည်ချောမောမှု ကြောင့်အဗရှလုံကဲ့သို့ ထင်ပေါ်ကျော်ကြား သူတစ်ဦးတစ်ယောက်မျှမရှိ။ သူသည်ဦး ခေါင်းမှခြေဖျားတိုင်ခြောက်ပြစ်ကင်းသူ ဖြစ်၏။-
ಸಮಸ್ತ ಇಸ್ರಾಯೇಲಿನಲ್ಲಿ ಬಹಳ ಹೊಗಳಿಕೆಗೆ ಪಾತ್ರನಾದ ಅಬ್ಷಾಲೋಮನಂಥ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.
26 ၂၆ သူ၏ဆံပင်သည်အလွန်ကောင်း၍ရှည်လွန်း လေးလွန်းသဖြင့် ယင်းကိုတစ်နှစ်လျှင်တစ် ကြိမ်ဖြတ်ပစ်ရလေသည်။ ဖြတ်လိုက်သည့် ဆံပင်သည်တော်ဝင်စံမီအလေးချိန်အား ဖြင့်ငါးပေါင်ခန့်ရှိ၏။-
ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರ್ಷದ ಕೊನೆಯಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ರಾಜರ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗಿರುತ್ತಿತ್ತು.
27 ၂၇ အဗရှလုံတွင်သားသုံးယောက်နှင့်တာမာမည် သောသမီးတစ်ယောက်ရှိ၏။ ထိုအမျိုးသမီး သည်အလွန်အဆင်းလှ၏။
ಅಬ್ಷಾಲೋಮನಿಗೆ ಮೂರು ಮಂದಿ ಪುತ್ರರೂ, ತಾಮಾರ್ ಎಂಬ ಒಬ್ಬ ಪುತ್ರಿಯೂ ಹುಟ್ಟಿದರು. ತಾಮಾರಳು ಸೌಂದರ್ಯವುಳ್ಳ ಸ್ತ್ರೀ ಆಗಿದ್ದಳು.
28 ၂၈ အဗရှလုံသည်မင်းကြီး၏ရှေ့တော်သို့မဝင် ရဘဲ ယေရုရှလင်မြို့တွင်နှစ်နှစ်ပတ်လုံးနေ ထိုင်လေသည်။-
ಅಬ್ಷಾಲೋಮನು ಅರಸನ ಮುಖವನ್ನು ಕಾಣದೆ, ಪೂರ್ಣವಾಗಿ ಎರಡು ವರ್ಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
29 ၂၉ သူသည်ယွာဘအားမိမိ၏အတွက်မင်းကြီး ထံစေလွှတ်လိုသဖြင့်ခေါ်စေရာ ယွာဘသည် မလာဘဲနေ၏။ နောက်တစ်ကြိမ်ခေါ်စေသော် လည်းယွာဘမလာဘဲနေပြန်၏။-
ಆದ್ದರಿಂದ ಅಬ್ಷಾಲೋಮನು ಅರಸನ ಬಳಿಗೆ ತನ್ನನ್ನು ಕಳುಹಿಸುವುದಕ್ಕೆ ಯೋವಾಬನನ್ನು ಕರೆಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲೊಲ್ಲದೆ ಹೋದನು. ಎರಡನೆಯ ಸಾರಿ ಅವನನ್ನು ಕರೆಕಳುಹಿಸಿದನು. ಅವನು ಬರಲೊಲ್ಲದೆ ಹೋದನು.
30 ၃၀ ထို့ကြောင့်အဗရှလုံသည်မိမိ၏အစေခံ တို့အား``ကြည့်လော့၊ ယွာဘ၏လယ်သည်ငါ့ လယ်နှင့်ကပ်လျက်နေ၏။ ထိုလယ်တွင်မုယော စပါးခင်းများရှိ၏။ ယင်းတို့ကိုမီးရှို့ပစ် လော့'' ဟုဆိုလျှင်အစေခံတို့သည်ထို လယ်ကိုသွား၍မီးရှို့ကြ၏။
ಆದ್ದರಿಂದ ಅವನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲಕ್ಕೆ ಸಮೀಪವಾಗಿ ಯೋವಾಬನ ಹೊಲವಿದೆ. ಅದರಲ್ಲಿ ಜವೆಗೋಧಿ ಇದೆ. ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ,” ಎಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
31 ၃၁ ယွာဘသည်အဗရှလုံ၏အိမ်သို့သွား၍``အရှင် ၏အစေခံတို့သည်အဘယ်ကြောင့်အကျွန်ုပ်၏ လယ်ကိုမီးရှို့ကြပါသနည်း'' ဟုမေး၏။
ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ, “ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟಿದ್ದೇಕೆ?” ಎಂದು ಕೇಳಿದನು.
32 ၃၂ အဗရှလုံက``ငါ့အတွက်လျှောက်ထားပေးရန် သင့်အားဘုရင့်ထံသို့စေလွှတ်လိုသဖြင့် အခေါ် ခိုင်းခဲ့ပါ၏။ ငါသည်အဘယ်ကြောင့်ဂေရှုရမြို့ မှထွက်ခွာ၍ဤအရပ်သို့လာရောက်မိပါသ နည်း။ ထိုမြို့တွင်နေရသည်ကငါ့အတွက်ပို ၍ပင်ကောင်းမည်။ ဘုရင်နှင့်တွေ့ဆုံခွင့်ရရန် ငါ့အတွက်စီစဉ်ပေးစေလိုပါသည်။ အကယ် ၍ငါ့မှာအပြစ်ရှိခဲ့လျှင်မင်းကြီးသည်ငါ့ ကိုအဆုံးစီရင်တော်မူပါစေ'' ဟုယွာဘ အားပြော၏။
ಅಬ್ಷಾಲೋಮನು ಯೋವಾಬನಿಗೆ, “ನಾನು ಗೆಷೂರಿನಿಂದ ಏಕೆ ಬಂದೆನೆಂದು ಅರಸನಿಗೆ ಹೇಳುವುದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ‘ಇಲ್ಲಿಗೆ ಬಾ’ ಎಂದು ನಿನ್ನನ್ನು ಕರೆಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು. ನನ್ನಲ್ಲಿ ಅಕ್ರಮ ಇದ್ದರೆ, ಅವನು ನನ್ನನ್ನು ಕೊಂದು ಹಾಕಲಿ,” ಎಂದನು.
33 ၃၃ သို့ဖြစ်၍ယွာဘသည်မင်းကြီးထံသို့သွား၍ ထိုအကြောင်းကိုလျှောက်ထား၏။ မင်းကြီးသည် အဗရှလုံအားအခေါ်ခိုင်းသဖြင့် အဗရှလုံ သည်လာရောက်၍ရှေ့တော်၌ဦးညွှတ်ပျပ်ဝပ် လေ၏။ မင်းကြီးသည်သူ့အားနမ်းရှုပ်လေ၏။
ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ, ಅರಸನು ಅಬ್ಷಾಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರಮಾಡಿದನು. ಆಗ ಅರಸನು ಅಬ್ಷಾಲೋಮನಿಗೆ ಮುದ್ದಿಟ್ಟನು.