< အာမုတ် 1 >
1 ၁ ဤသည်မှာတေကောရွာမှ သိုးထိန်းအာမုတ် ဟောသောစကားများဖြစ်သည်။ ယုဒဘုရင် သြဇိမင်းလက်ထက်၊ ဣသရေလနိုင်ငံတွင် ဘုရင်ယောရှ၏သားယေရောဗောင်မင်းအုပ် စိုးစဉ်ကာလ၊ မြေငလျင်မလှုပ်မီနှစ်နှစ် အထက်ကထာဝရဘုရားသည် အာမုတ် အားဣသရေလတို့နှင့်ပတ်သက်သော ဤ အကြောင်းအရာတို့ကိုဖော်ပြဖွင့်ဆို တော်မူခဲ့သည်။
ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗ ಯಾರೊಬ್ಬಾಮನ ದಿವಸಗಳಲ್ಲಿಯೂ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ಕಂಡ ದರ್ಶನಗಳು.
2 ၂ အာမုတ်က၊ ``ဇိအုန်တောင်မှထာဝရဘုရား၏ကြုံးဝါး သံကို ကြားရလေပြီ။ ယေရုရှလင်မြို့အတွင်းမှထစ်ချုန်းလာသော အသံတော်ကိုကြားရစေပြီ။ သိုးစားကျက်တို့သည်သွေ့ခြောက်ကုန်၍ ကရမေလတောင်ပေါ်မှမြက်ပင်တို့သည် နွမ်းရလေပြီဟုဆို၏။''
ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”
3 ၃ ထာဝရဘုရားက``ဒမာသက်မြို့သားတို့ သည်တစ်ကြိမ်ပြီးတစ်ကြိမ်ပြစ်မှားခဲ့သဖြင့် ငါသည်သူတို့ကိုအမှန်ပင်ဒဏ်ပေးရတော့ မည်။ သူတို့သည်ဂိလဒ်ပြည်သူတို့အပေါ် ရိုင်းစိုင်းရက်စက်ကြမ်းကြုတ်ခဲ့လေပြီ။-
ಯೆಹೋವ ದೇವರು ಹೀಗೆ ಹೇಳುತ್ತಾರೆ: ದಮಸ್ಕದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ, ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.
4 ၄ ထို့ကြောင့်ငါသည်ဟာဇေလမင်းမျိုး အပေါ်သို့မီးမိုးရွာစေပြီး ဗင်ဟာဒဒ် မင်း၏ရဲတိုက်များကိုပြာချလိုက်မည်။-
ಆದರೆ ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೆನ್ಹದದನ ಕೋಟೆಗಳನ್ನು ದಹಿಸಿಬಿಡುವುದು.
5 ၅ ငါသည်ဒမာသက်မြို့တံခါးများကိုချေ မှုန်း၍ အာဝင်ချိုင့်နှင့်ဗေသေဒင်မြို့တွင်ကြီး စိုးနေသူတို့ကိုရှင်းပစ်မည်။ ရှုရိပြည်သား တို့သည်ကိရပြည်သို့သုံ့ပန်းအဖြစ်နှင့် လိုက်ပါသွားရမည်'' ဟုမိန့်တော်မူ၏။
ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ.
6 ၆ ထာဝရဘုရားက``ဂါဇမြို့သားတို့သည် တစ်ကြိမ်ပြီးတစ်ကြိမ်ပြစ်မှားခဲ့သဖြင့် ငါသည်သူတို့ကိုအမှန်ပင်ဒဏ်ပေးရ တော့မည်။ သူတို့သည်လူတစ်မျိုးလုံးကို ဧဒုံပြည်သားများလက်ဝယ်သို့ ကျွန် အဖြစ်နှင့်ရောင်းစားခဲ့ပြီ။-
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಗಾಜದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಎಲ್ಲಾ ಸಮುದಾಯಗಳನ್ನು ಸೆರೆಹಿಡಿದು ಎದೋಮಿಗೆ ಮಾರಿಬಿಟ್ಟರು.
7 ၇ သို့ကြောင့်ငါသည်ဂါဇမြို့ရိုးများ အပေါ်သို့မီးမိုးရွာစေပြီး ဂါဇ ရဲတိုက်များကိုပြာချလိုက်မည်။-
ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ದಹಿಸಿಬಿಡುವುದು.
8 ၈ အာဇုတ်နှင့်အာရှကေလုန်မြို့များ၌ကြီး စိုးနေသူတို့ကိုရှင်းပစ်မည်။ ဧကြုန်မြို့ ကိုလည်းငါဒဏ်ခတ်မည်။ ကျန်ကြွင်းနေ သူဖိလိတ္တိမှန်သမျှလည်းသေရလိမ့် မည်'' ဟုမိန့်တော်မူ၏။
ಅಷ್ಡೋದಿನಿಂದ ನಿವಾಸಿಯನ್ನು ಮತ್ತು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು. ಫಿಲಿಷ್ಟಿಯರಲ್ಲಿ ಕೊನೆಯವರು ಸಾಯುವವರೆಗೂ ನಾನು ಎಕ್ರೋನಿನ ವಿರುದ್ಧ ನನ್ನ ಕೈಯನ್ನು ತಿರುಗಿಸುವೆನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
9 ၉ ထာဝရဘုရားက``တုရုမြို့သားတို့သည် တစ်ကြိမ်ပြီးတစ်ကြိမ်ပြစ်မှားကြသဖြင့် ငါသည်သူတို့ကိုအမှန်ပင်ဒဏ်ပေးရ တော့မည်။ သူတို့သည်လူတစ်မျိုးလုံးကို ဧဒုံပြည်သို့ပြည်နှင်ဒဏ်ပေးခဲ့ပြီ။ ကိုယ် တိုင်ချုပ်ဆိုခဲ့သောမဟာမိတ်စာချုပ်ကို ချိုးဖောက်ခဲ့ပြီ။-
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.
10 ၁၀ ထို့ကြောင့်ငါသည်တုရုမြို့ရိုးများအပေါ် သို့မီးမိုးရွာစေပြီး တုရုရဲတိုက်များကို ပြာချလိုက်မည်ဟုမိန့်တော်မူ၏။
ಆದರೆ ನಾನು ಟೈರ್ ಪಟ್ಟಣದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅಲ್ಲಿಯ ಕೋಟೆಗಳನ್ನು ದಹಿಸಿಬಿಡುವುದು.”
11 ၁၁ ထာဝရဘုရားက``ဧဒုံပြည်သားတို့သည် တစ်ကြိမ်ပြီးတစ်ကြိမ်ပြစ်မှားကြသဖြင့် ငါသည်သူတို့ကိုအမှန်ပင်ဒဏ်ပေးရ တော့မည်။ သူတို့သည်ညီအစ်ကိုချင်း ဣသရေလတို့ကိုမရမကလိုက်၍ မညှာမတာညှင်းဆဲခဲ့ပြီ။ သူတို့၏ အမျက်ဒေါသကိုဘယ်အခါမျှ မပြေစေဘဲကမ်းကုန်လောက်အောင် ပင်ပြင်းထန်စေခဲ့သည်။-
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎದೋಮಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ತನ್ನ ಸಹೋದರನನ್ನು ಖಡ್ಗವನ್ನು ಹಿಂಬಾಲಿಸಿದನು. ಮತ್ತು ದೇಶದ ಸ್ತ್ರೀಯರನ್ನು ಕೊಂದುಹಾಕಿದನು. ಏಕೆಂದರೆ ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು. ಆತನು ರೌದ್ರವನ್ನು ನಿತ್ಯವಾಗಿ ಇಟ್ಟುಕೊಂಡನು.
12 ၁၂ ထို့ကြောင့်ငါသည်တေမန်မြို့ပေါ်သို့မီးမိုး ရွာစေပြီး ဗောဇရရဲတိုက်များကိုပြာချ လိုက်မည်'' ဟုမိန့်တော်မူ၏။
ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೊಚ್ರದ ಕೋಟೆಗಳನ್ನು ದಹಿಸಿಬಿಡುವುದು.”
13 ၁၃ ထာဝရဘုရားက``အမ္မုန်ပြည်သားတို့ သည်တစ်ကြိမ်ပြီးတစ်ကြိမ်ပြစ်မှားကြ သဖြင့် ငါသည်သူတို့ကိုအမှန်ပင်ဒဏ် ပေးရတော့မည်။ သူတို့၏နယ်ချဲ့လိုသော လောဘကြောင့် နယ်ချဲ့စစ်ပွဲများ၌ဂိလဒ် ပြည်သူကိုယ်ဝန်ဆောင်တို့၏ဝမ်းကိုပင် ဖောက်ခွဲကာသတ်ဖြတ်ခဲ့လေပြီ။-
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ.
14 ၁၄ ထို့ကြောင့်ငါသည်ရဗ္ဗာမြို့ရိုးများအပေါ် သို့မီးမိုးရွာစေပြီး ရဗ္ဗာရဲတိုက်များကို ပြာချလိုက်မည်။ စစ်တိုက်သောနေ့၌အော် သံဟစ်သံတညံညံကြားရပြီး တိုက်ပွဲ သည်မုန်တိုင်းတမျှပြင်းထန်လိမ့်မည်။-
ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಗಳನ್ನು ದಹಿಸಿಬಿಡುವುದು. ಆಗ ಯುದ್ಧಾರ್ಭಟವೂ, ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.
15 ၁၅ သူတို့ဘုရင်နှင့်မှူးမတ်အပေါင်းတို့သည် ပြည်ပသို့ဖမ်းသွားခြင်းခံရမည်'' ဟု မိန့်တော်မူ၏။
ಅವರ ಅರಸನು ತನ್ನ ರಾಜ್ಯಾಧಿಕಾರರ ಸಂಗಡ ಸೆರೆಗೆ ಹೋಗುವನು” ಎಂದು ಯೆಹೋವ ದೇವರು ಹೇಳುತ್ತಾರೆ.