< ယေဇကျေလ 29 >
1 ၁ ငါတို့ပြည်နှင်ဒဏ်ခံသောဆယ်နှစ်မြောက်၊ ဒသမလ၊ လဆန်းတစ်ဆယ့်နှစ်ရက်နေ့၌ ထာဝရဘုရား၏နှုတ်ကပတ်တော်သည် ငါ့ထံသို့ရောက်လာ၏။-
೧ಹತ್ತನೆಯ ವರ್ಷದ, ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2 ၂ ကိုယ်တော်က``အချင်းလူသား၊ အီဂျစ်ဘုရင် ကိုရှုတ်ချလော့။ သူနှင့်တကွအီဂျစ်တစ် ပြည်လုံးအပြစ်ဒဏ်ခံရမည်ဖြစ်ကြောင်း ဆင့်ဆိုလော့။-
೨“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನ ವಿಷಯದಲ್ಲಿಯೂ, ಐಗುಪ್ತ್ಯರೆಲ್ಲರ ವಿಷಯದಲ್ಲಿಯೂ ಹೀಗೆ ಪ್ರವಾದಿಸು.
3 ၃ အရှင်ထာဝရဘုရားအဘယ်သို့မိန့်တော် မူသည်ကို အီဂျစ်ဘုရင်ဖာရောမင်းအား ဆင့်ဆိုရမည်မှာ မြစ်ထဲရှိခွန်အားကြီးမား သောအချင်းမိကျောင်း၊ ငါသည်သင်၏ရန်သူ ဖြစ်၏။ နိုင်းမြစ်ကိုသင်ပိုင်သည်၊ ထိုမြစ်ကား သင်ဖန်ဆင်းထားသောအရာဖြစ်သည်ဟု သင်ဆို၏။-
೩“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.
4 ၄ ငါသည်သင်၏မေးရိုးကိုသံချိတ်ဖြင့်ချိတ် ၍ သင်၏မြစ်ထဲမှငါးတို့ကိုသင့်ကိုယ်တွင် ကပ်၍နေစေမည်။-
೪“ನಾನು ನಿನ್ನ ದವಡೆಗಳಿಗೆ ಗಾಳ ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ, ಆ ಮೀನುಗಳ ಸಹಿತ ನಿನ್ನನ್ನು ನೈಲ್ ನದಿಯ ಮಧ್ಯದೊಳಗಿಂದ ಹೊರಗೆ ಎಳೆದು ಹಾಕುವೆನು.
5 ၅ ထိုနောက်ယင်းသို့ကပ်နေသည့်ငါးများနှင့် တကွ သင့်အားနိုင်းမြစ်ထဲမှဆွဲထုတ်ကာ၊ တောကန္တာရ၌ပစ်ထားမည်။ သင်၏အလောင်း သည်မြေပေါ်သို့ကျလိမ့်မည်။ သင်္ဂြိုဟ်ခြင်း ကိုခံရမည်မဟုတ်။ ငှက်များ၊ တိရစ္ဆာန် များ၏အစာဖြစ်စေမည်။-
೫ನಿನ್ನನ್ನೂ, ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಅರಣ್ಯದ ಪಾಲು ಮಾಡುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಹೂಣಿಡುವುದೂ ಇಲ್ಲ, ಸೇರಿಸುವುದೂ ಇಲ್ಲ; ನಾನು ನಿನ್ನನ್ನು ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.
6 ၆ ထိုအခါငါသည်ထာဝရဘုရားဖြစ် တော်မူကြောင်း အီဂျစ်ပြည်သားအပေါင်း တို့သိရှိကြလိမ့်မည်'' ဟုမိန့်တော်မူ၏။ ထာဝရဘုရားက``ဣသရေလအမျိုးသား တို့အတွက် သင်သည်ကူရိုးမျှသာဖြစ်၏။-
೬ಆಗ ಐಗುಪ್ತದ ಸಕಲ ನಿವಾಸಿಗಳು ನಾನೇ ಯೆಹೋವನು ಎಂದು ತಿಳಿಯವರು. ಅವರು ಇಸ್ರಾಯೇಲ್ ವಂಶದವರಿಗೆ ದಂಟಿನ ಊರುಗೋಲಾಗಿದ್ದರು.
7 ၇ သူတို့သည်သင်၏အပေါ်သို့အားပြုလိုက် သောအခါ သင်သည်ကျိုးပြတ်၍သူတို့၏ ပခုံးများကိုထိရှကာသူတို့၏ခါးများ ကိုလိမ်ဆွဲစေ၏။-
೭ಇಸ್ರಾಯೇಲರು ನಿನ್ನ ಮೇಲೆ ಕೈಯಿಡಲು, ನೀನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದೆ; ಅವರು ನಿನ್ನ ಮೇಲೆ ಆತುಕೊಳ್ಳುವಾಗ, ನೀನು ಅವರನ್ನು ಒಡೆದು, ಅವರ ಕಾಲುಗಳಿಗೆ ಮತ್ತು ನಡುವಿಗೆ ನಡುಕವನ್ನು ಉಂಟುಮಾಡಿದೆ.
8 ၈ သို့ဖြစ်၍ယခုငါအရှင်ထာဝရဘုရား မိန့်တော်မူသည်ကား ငါသည်ဋ္ဌားလက်နက်စွဲ ကိုင်သူတို့အားသင့်ကိုတိုက်ခိုက်ရန်စေလွှတ် မည်။ သူတို့သည်သင်၏လူများ၊ တိရစ္ဆာန်များ ကိုသတ်ဖြတ်ကြလိမ့်မည်။-
೮“ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ, ಜನರನ್ನೂ, ಪಶುಗಳನ್ನೂ ನಿನ್ನೊಳಗಿಂದ ನಿರ್ಮೂಲ ಮಾಡುವೆನು.
9 ၉ အီဂျစ်ပြည်သည်လူသူဆိတ်ငြိမ်ရာအရပ် ဖြစ်လိမ့်မည်။ ထိုအခါငါသည်ဘုရားသခင် ဖြစ်တော်မူသည်ကိုသင်တို့သိရှိရလိမ့် မည်။'' ``နိုင်းမြစ်သည်သင်၏ကိုယ်ပိုင်ပစ္စည်း၊ သင်ဖန် ဆင်းသောအရာဖြစ်သည်ဟုဆိုသဖြင့်၊-
೯ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಐಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.
10 ၁၀ ငါသည်သင်၏ရန်သူ၊ နိုင်းမြစ်၏ရန်သူ ဖြစ်၏။ မြောက်ဘက်ရှိမိဂဒေါလမြို့မှသည် တောင်ဘက်သုဏေမြို့တိုင်အောင်၊ ဆူဒန်နယ် စပ်အထိအီဂျစ်ပြည်တစ်ပြည်လုံးကို လူသူဆိတ်ငြိမ်ရာအရပ်ဖြစ်စေမည်။-
೧೦‘ಇಗೋ, ನಾನು ನಿನಗೂ, ನಿನ್ನ ನದಿಗೂ ವಿರುದ್ಧವಾಗಿ ಐಗುಪ್ತ ದೇಶವನ್ನು ಮಿಗ್ದೋಲಿನಿಂದ ಸೆವೇನಿಯ ತನಕ, ಹೌದು, ಕೂಷಿನ ಮೇರೆಯವರೆಗೂ ತೀರಾ ಹಾಳು ಮಾಡುವೆನು.
11 ၁၁ မည်သည့်လူနှင့်တိရစ္ဆာန်မျှထိုပြည်ကို ဖြတ်သန်းသွားလာလိမ့်မည်မဟုတ်။ အနှစ် လေးဆယ်တိုင်တိုင်ထိုပြည်တွင်နေသူရှိ လိမ့်မည်မဟုတ်။-
೧೧“‘ಯಾವ ಮನುಷ್ಯನ ಪಾದವೂ ಅದರಲ್ಲಿ ಹಾದುಹೋಗುವುದಿಲ್ಲ; ಯಾವ ಪಶುವಿನ ಪಾದವೂ ಅದರಲ್ಲಿ ದಾಟಿಹೋಗುವುದಿಲ್ಲ; ನಲ್ವತ್ತು ವರ್ಷ ನಿರ್ಜನವಾಗಿರುವುದು.
12 ၁၂ ငါသည်အီဂျစ်ပြည်ကိုကမ္ဘာပေါ်တွင်လူသူ အဆိတ်ငြိမ်ဆုံးအရပ်ဖြစ်စေမည်။ အနှစ် လေးဆယ်တိုင်တိုင်အီဂျစ်ပြည်မှမြို့များ သည်အခြားအဘယ်မြို့နှင့်မျှမတူအောင် ပျက်စီးယိုယွင်း၍နေလိမ့်မည်။ ငါသည် အီဂျစ်ပြည်သားတို့အားဒုက္ခသည်များ ဖြစ်စေမည်။ သူတို့သည်အတိုင်းတိုင်း အပြည်ပြည်သို့ထွက်ပြေးကာလူမျိုး ခြားတို့ထံတွင်နေထိုင်ရကြလိမ့်မည်'' ဟုမိန့်တော်မူ၏။
೧೨ಹಾಳು ಬಿದ್ದಿರುವ ದೇಶಗಳ ಮಧ್ಯದಲ್ಲಿ ಐಗುಪ್ತ ದೇಶವನ್ನೂ ಹಾಳುಮಾಡುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲ್ವತ್ತು ವರ್ಷ ಹಾಗೆಯೇ ಇರುವುದು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ, ದೇಶದೇಶಗಳಲ್ಲಿ ಚದುರಿಸುವೆನು.’”
13 ၁၃ အရှင်ထာဝရဘုရားက``အနှစ်လေးဆယ် ကြာသောအခါ အီဂျစ်ပြည်သားတို့အား ငါပျံ့နှံ့စေရာအရပ်များမှပြန်လည် ခေါ်ဆောင်ကာ၊-
೧೩“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಲ್ವತ್ತು ವರ್ಷಗಳ ಮೇಲೆ ನಾನು ಐಗುಪ್ತ್ಯರನ್ನು ಅವರು ಚದುರಿ ಹೋಗಿದ್ದ ಜನಾಂಗಗಳೊಳಗಿಂದ ಅವರನ್ನು ಒಟ್ಟುಗೂಡಿಸುವೆನು.
14 ၁၄ သူတို့၏မူရင်းဌာနေဖြစ်သောအီဂျစ် ပြည်တောင်ပိုင်းတွင်နေထိုင်စေမည်။ သူတို့ ၏နိုင်ငံသည်သိမ်ငယ်သောနိုင်ငံဖြစ်လိမ့် မည်။-
೧೪ಐಗುಪ್ತದ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮ ಭೂಮಿಯಾದ ಪತ್ರೋಸ್ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ಕನಿಷ್ಠ ರಾಜ್ಯದವರಾಗಿರುವರು.
15 ၁၅ နိုင်ငံတကာတွင်အသိမ်ငယ်ဆုံးဖြစ်၍ အခြားနိုင်ငံများကို အဘယ်အခါ၌မျှ အုပ်စိုးရလိမ့်မည်မဟုတ်။ ငါသည်သူတို့ အားအလွန်သိမ်ဖျင်းစေမည်ဖြစ်၍ သူတို့ သည်အဘယ်လူမျိုးအပေါ်တွင်မျှသြ ဇာအာဏာလွှမ်းမိုးနိုင်ကြလိမ့်မည်မ ဟုတ်။-
೧೫ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಸ್ಥಿತಿಗೆ ತರುವೆನು.
16 ၁၆ ဣသရေလအမျိုးသားတို့သည်သူတို့ အား နောင်အဘယ်အခါ၌မျှမှီခိုအား ကိုးကြတော့မည်မဟုတ်။ ယင်းသို့အား ကိုးမိခဲ့သည့်အတွက်မိမိတို့အဘယ် မျှမှားကြောင်းကိုဣသရေလအမျိုး သားတို့အား အီဂျစ်ပြည်ကြုံတွေ့ရသည့် ကံကြမ္မာကပြန်လည်သတိရစေလိမ့် မည်။ ထိုအခါငါသည်အရှင်ထာဝရ ဘုရားဖြစ်တော်မူကြောင်းသူတို့သိ ရှိကြလိမ့်မည်'' ဟုမိန့်တော်မူ၏။
೧೬ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲರಲ್ಲಿ ಐಗುಪ್ತದಿಂದ ಇನ್ನು ಹುಟ್ಟುವುದಿಲ್ಲ. ನಾನೇ ಯೆಹೋವನು’” ಎಂದು ಅವರಿಗೆ ತಿಳಿಯುವುದು.
17 ၁၇ ငါတို့ပြည်နှင်ဒဏ်ခံသောနှစ်ဆယ့်ခုနစ် နှစ်မြောက်ပထမလ၊ လဆန်းတစ်ရက်နေ့ ၌ထာဝရဘုရား၏နှုတ်ကပတ်တော်သည် ငါ့ထံသို့ရောက်လာ၏။-
೧೭ಇಪ್ಪತ್ತೇಳನೆಯ ವರ್ಷದ, ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
18 ၁၈ ကိုယ်တော်က``အချင်းလူသား၊ ဗာဗုလုန် ဘုရင်နေဗုခဒ်နေဇာသည်တုရုမြို့ကို တိုက်ခိုက်ခဲ့၏။ သူသည်မိမိ၏စစ်သူရဲ တို့အားအလွန်လေးလံသောဝန်တို့ကို ထမ်းစေသည်ဖြစ်၍ သူတို့၏ခေါင်းပြောင် ၍ပခုံးများသည်လည်းပေါက်ပြဲကုန်၏။ ယင်းသို့ဒုက္ခခံသော်လည်းစစ်သူရဲနှင့် ဘုရင်သည်အဘယ်အကျိုးကိုမျှ မခံစားရကြ။-
೧೮“ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಅತಿ ಕ್ರೂರವಾಗಿ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಸುಲಿದು ಹೋಗಿದೆ. ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ, ಅವನ ಸೈನಿಕರಿಗಾಗಲಿ ತೂರಿನಿಂದ ಪ್ರತಿಫಲವೇನೂ ಸಿಕ್ಕಲಿಲ್ಲ.”
19 ၁၉ သို့ဖြစ်၍ငါအရှင်ထာဝရဘုရားမိန့်တော် မူသည်မှာ အီဂျစ်ပြည်ကိုဗာဗုလုန်ဘုရင် နေဗုခဒ်နေဇာမင်း၏လက်သို့ငါအပ်မည်။ သူသည်လုယက်တိုက်ခိုက်ကာအီဂျစ်ပြည် ၏ဥစ္စာဋ္ဌနရှိသမျှကို မိမိ၏တပ်မတော် အတွက်သိမ်းယူသွားလိမ့်မည်။-
೧೯ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು.
20 ၂၀ သူသည်မိမိ၏တပ်မတော်ဖြင့်ငါ၏အမှု တော်ကိုထမ်းဆောင်ခဲ့သည်ဖြစ်၍ ငါသည် သူ့အားအီဂျစ်ပြည်ကိုပေးမည်။ ဤကား ငါအရှင်ထာဝရဘုရားမိန့်တော်မူ သောစကားဖြစ်၏။
೨೦ಅವನು ಸೈನ್ಯ ಸಮೇತನಾಗಿ ನನಗೋಸ್ಕರ ಸೇವೆ ಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಐಗುಪ್ತ ದೇಶವನ್ನು ಅವನಿಗೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.
21 ၂၁ ``ထိုအမှုအရာများဖြစ်ပျက်လာသော အခါ ငါသည်ဣသရေလအမျိုးသားတို့ အားဦးချိုတည်းဟူသောခွန်အားကြီးစေ မည်။ ထိုနောက်အချင်းယေဇကျေလ၊ ငါ သည်ထာဝရဘုရားဖြစ်တော်မူကြောင်း လူအပေါင်းတို့သိရှိကြစေရန်သင့်အား ဟောပြောစေမည်''ဟုမိန့်တော်မူ၏။
೨೧“ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.”