< ယေဇကျေလ 39 >
1 ၁ အရှင်ထာဝရဘုရားက``အချင်းလူသား၊ မေရှက်နှင့်တုဗလလူမျိုးတို့၏အကြီး ဆုံးမင်းဖြစ်သူဂေါဂအားရှုတ်ချလော့။ ငါသည်သူ၏ရန်သူဖြစ်ကြောင်းဆင့်ဆို လော့။-
೧ಈಗ, “ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ.
2 ၂ ငါသည်သူ့အားလှည့်စေ၍ဆွဲခေါ်လာမည်။ ဣသရေလတောင်များသို့ရောက်သည့်တိုင် အောင်မြောက်မျက်နှာစွန်းမှခေါ်ဆောင်လာ မည်။-
೨ನಾನು ನಿನ್ನನ್ನು ಪರಿವರ್ತಿಸಿ, ಮುಂದುವರಿಸಿ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,
3 ၃ ထို့နောက်သူ၏လက်ဝဲလက်မှလေးနှင့် လက်ယာလက်မှမြားတို့ကိုပုတ်ချမည်။-
೩ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆದು ಹಾಕಿ, ನಿನ್ನ ಬಲಗೈಯಲ್ಲಿರುವ ಬಾಣಗಳನ್ನು ಬೀಳುವಂತೆ ಮಾಡುವೆನು.
4 ၄ ဂေါဂနှင့်စစ်သည်အလုံးအရင်းတို့သည် လည်းကောင်း၊ သူ၏မဟာမိတ်တို့သည်လည်း ကောင်းဣသရေလတောင်များပေါ်တွင်ကျ ဆုံးကြလိမ့်မည်။ ငါသည်သင့်အားငှက်ရဲ များနှင့်တောတိရစ္ဆာန်တို့၏အစာဖြစ်စေ မည်။-
೪ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.
5 ၅ သင်သည်ကွင်းပြင်ထဲတွင်ကျဆုံးလိမ့်မည်။ ဤကားငါအရှင်ထာဝရဘုရားမိန့်တော် မူသောစကားဖြစ်၏။-
೫ನೀನು ತೆರೆದ ಬಯಲಿನಲ್ಲಿ ಬೀಳುವಿ. ಏಕೆಂದರೆ ನಾನೇ ಅಪ್ಪಣೆ ಕೊಟ್ಟಿದ್ದೇನೆ’ ಎಂದು ಕರ್ತನಾದ ಯೆಹೋವನ ನುಡಿಯುತ್ತಾನೆ.
6 ၆ ငါသည်မာဂေါဂပြည်နှင့်လူတို့ငြိမ်းချမ်း စွာနေထိုင်လျက်ရှိသည့်ပင်လယ်ကမ်းရိုး တန်းတစ်လျှောက်ကိုမီးသင့်လောင်စေမည်။ ထိုအခါငါသည်ထာဝရဘုရားဖြစ် တော်မူကြောင်းလူတိုင်းသိရှိကြလိမ့်မည်။-
೬ನಾನು ಮಾಗೋಗ್ ದೇಶದ ಮೇಲೂ, ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.
7 ၇ ငါသည်ငါ၏သန့်ရှင်းမြင့်မြတ်သောနာမ တော်ကို ငါ့လူမျိုးတော်ဣသရေလအမျိုး သားတို့သိရှိကြစေရန်ငါပြုမည်။ သူတို့ သည်ထိုသန့်ရှင်းသောနာမတော်ကိုနောက် တစ်ဖန်မရှုတ်ချရ။ ထိုအခါငါထာဝရ ဘုရားသည် ဣသရေလအမျိုးသားတို့ ၏သန့်ရှင်းမြင့်မြတ်တော်မူသောဘုရားသခင်ဖြစ်တော်မူကြောင်းလူမျိုးတကာ တို့သိရှိကြလိမ့်မည်'' ဟုမိန့်တော်မူ၏။
೭“ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”
8 ၈ အရှင်ထာဝရဘုရားက``ငါဖော်ပြခဲ့ သည့်နေ့ရက်ကာလသည်ဧကန်မုချ ကျရောက်အံ့။-
೮ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.
9 ၉ ဣသရေလမြို့များတွင်နေထိုင်သူတို့သည် မြို့ပြင်သို့ထွက်၍ ရန်သူများစွန့်ပစ်ထား ခဲ့သည့်လက်နက်များကိုထင်းအဖြစ်စု သိမ်းကြလိမ့်မည်။ သူတို့သည်ခုနစ်နှစ်တိုင် တိုင်မီးဆိုက်နိုင်လောက်အောင် ဒိုင်းလွှား၊ လေး၊ မြား၊ တင်းပုတ်နှင့်လှံများကိုရရှိကြလိမ့် မည်။-
೯“ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು ಶತ್ರುವಿನ ಆಯುಧಗಳಿಗೆ ಬೆಂಕಿಯಿಟ್ಟು ಸುಟ್ಟುಬಿಡುವರು. ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.
10 ၁၀ ရန်သူတို့စွန့်ပစ်ထားခဲ့သည့်လက်နက်များ ကိုရရှိကြမည်ဖြစ်၍သူတို့သည်လွင်ပြင် ၌ထင်းခွေရန်၊ တော၌သစ်ပင်များခုတ်လှဲ ရန်လိုလိမ့်မည်မဟုတ်။ သူတို့သည်မိမိတို့ အားလုယက်သတ်ဖြတ်ကြသူတို့ကိုပြန် ၍တိုက်ခိုက်လုယက်ကြလိမ့်မည်'' ဟုမိန့် တော်မူ၏။ ဤကားအရှင်ထာဝရဘုရား မိန့်တော်မူသောစကားဖြစ်၏။
೧೦ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ.
11 ၁၁ ထာဝရဘုရားက``ဤအမှုအရာအပေါင်း ဖြစ်ပျက်လာသောအခါဂေါဂအား ဣသရေလ ပြည်ပင်လယ်သေအရှေ့ဘက်တွင်ရှိသော ခရီးသည် ချိုင့်ဝှမ်းတွင်သင်္ချိုင်းမြေယာ တစ်ကွက်ကိုငါပေးမည်။ ထိုအရပ်တွင် ဂေါဂနှင့်သူ၏တပ်မတော်တစ်ခုလုံးကို မြှုပ်နှံရသဖြင့် ခရီးသွားရန်လမ်းပိတ် နေလိမ့်မည်။ သို့ဖြစ်၍ထိုချိုင့်ဝှမ်းသည် ဂေါဂတပ်မတော်ချိုင့်ဝှမ်းဟုနာမည် တွင်လိမ့်မည်။-
೧೧“ಆ ದಿನದಲ್ಲಿ ಗೋಗನಿಗೆ ನಾನು ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಏರ್ಪಡಿಸುವೆನು; ಲವಣ ಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯೇ. ಅಲ್ಲಿ ಪ್ರಯಾಣ ಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಮತ್ತು ಅವನ ಸಮೂಹವೆಲ್ಲವನ್ನೂ ಸಮಾಧಿ ಮಾಡುವರು; ಅ ಕಣಿವೆಯನ್ನು ‘ಗೋಗನ ಸಮೂಹದ ಕಣಿವೆ’ ಎಂದು ಕರೆಯುವರು.
12 ၁၂ ဣသရေလအမျိုးသားတို့သည်ပြည်ရွာ သန့်ရှင်းမှုအတွက် လူသေအလောင်းများ ကိုခုနစ်လပတ်လုံးသင်္ဂြိုဟ်ရကြလိမ့်မည်။-
೧೨ಇಸ್ರಾಯೇಲರು ದೇಶವನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಸಮಾಧಿ ಮಾಡುತ್ತಲೇ ಇರುವರು.
13 ၁၃ ပြည်သူပြည်သားအပေါင်းတို့သည်ကူညီ ၍သင်္ဂြိုဟ်ကြလိမ့်မည်။ သို့ဖြစ်၍သူတို့သည် ငါ၏ဘုန်းတော်ထင်ရှားသည့်နေ့၌ ဂုဏ်ပြု ချီးမြှင့်ခြင်းကိုခံရကြလိမ့်မည်။ ဤကား ငါအရှင်ထာဝရဘုရားမိန့်တော်မူသော စကားဖြစ်၏။-
೧೩ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಸಮಾಧಿ ಮಾಡುವರು. ಹೀಗೆ ನಾನು ಮಹಿಮೆಯನ್ನು ಹೊಂದುವ ದಿನವು ನನ್ನ ಜನರಿಗೆ ಸ್ಮರಣೆಯ ದಿನವಾಗಿರುವುದು” ಇದು ಕರ್ತನಾದ ಯೆಹೋವನ ನುಡಿ.
14 ၁၄ ခုနစ်လကာလကုန်ဆုံးသွားသောအခါ အရပ်ရပ်သို့လှည့်လည်၍ ကြွင်းကျန်နေသေး သောလူသေအလောင်းများကိုရှာဖွေသင်္ဂြိုဟ် စေရန်အတွက် လူတို့ကိုရွေးချယ်ခန့်ထား ကြလိမ့်မည်။ ဤနည်းအားဖြင့်ပြည်ရွာကို စင်ကြယ်စေကြလိမ့်မည်။-
೧೪ತರುವಾಯ ಅವರು ದೇಶವನ್ನು ಶುದ್ಧಿ ಮಾಡುವುದಕ್ಕೆ ತಕ್ಕವರನ್ನು ಆರಿಸಿ, ದೇಶದಲ್ಲಿ ತಿರುಗುತ್ತಾ ನೆಲದ ಮೇಲೆ ಉಳಿದಿರುವವರನ್ನು ಸಮಾಧಿ ಮಾಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಏಳು ತಿಂಗಳಾದ ಮೇಲೆ ಇವರು ಈ ಹುಡುಕುವ ಕೆಲಸದಲ್ಲಿ ತೊಡಗುವರು.
15 ၁၅ ထိုသူတို့သည်ပြည်ရွာကိုအစုန်အဆန် သွားလာလျက်လူရိုးများကိုတွေ့ရှိသည့် အခါတိုင်း ဂေါဂတပ်မတော်ချိုင့်ဝှမ်းတွင် မြှုပ်နှံမည့်သူများရောက်ရှိလာချိန်တိုင် အောင်မှတ်တိုင်များကိုစိုက်ထားကြလိမ့် မည်။-
೧೫ಪ್ರಯಾಣಿಕರಲ್ಲಿ ಯಾರೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ನೋಡಿದರೆ, ಅಲ್ಲಿ ಒಂದು ಗುರುತನ್ನು ನಿಲ್ಲಿಸುವರು; ಸಮಾಧಿ ಮಾಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಸಮಾಧಿ ಮಾಡುವ ತನಕ ಆ ಗುರುತು ಹಾಗೆಯೇ ನಿಂತಿರುವುದು.
16 ၁၆ (ထိုချိုင့်ဝှမ်းအနီးတွင်တပ်မတော်နာမည် ကိုယူ၍မှည့်ခေါ်ထားသည့်မြို့ရှိသတည်း။) သို့ဖြစ်၍ပြည်ရွာပြန်လည်စင်ကြယ်လာ လိမ့်မည်'' ဟုမိန့်တော်မူ၏။
೧೬ಆ ಪಟ್ಟಣಕ್ಕೆ ‘ಹಮೇನ್’ “ಸಮೂಹಪುರ” ಎಂದು ಹೆಸರಾಗುವುದು. ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.
17 ၁၇ အရှင်ထာဝရဘုရားကငါ့အား``အချင်း လူသား၊ ပတ်ဝန်းကျင်အရပ်ရပ်မှငှက်များ နှင့်တိရစ္ဆာန်များအား သူတို့အတွက်ငါပြင် ဆင်ပေးမည့်ယဇ်ပူဇော်ပွဲသို့လာ၍စား သောက်ကြရန်ခေါ်ဖိတ်လော့။ ဣသရေလ တောင်ပေါ်မှကြီးမြတ်သောယဇ်ပူဇော်ပွဲ ကြီးဖြစ်၏။-
೧೭ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, ‘ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.
18 ၁၈ ထိုပွဲသည်ကြီးကျယ်သောစားသောက်ပွဲ ဖြစ်၍သူတို့သည် စစ်သူရဲတို့၏အသား ကိုစား၍ပြည်ရှင်မင်းတို့၏သွေးကိုသောက် ရကြလိမ့်မည်။ ထိုစစ်သူရဲများနှင့်ပြည် ရှင်မင်းတို့သည်ဘာရှန်ပြည်မှဆူဖြိုးသော တိရစ္ဆာန်များဖြစ်သည့် သိုးထီး၊ သိုးငယ်၊ ဆိတ် များ၊ နွားများကဲ့သို့အသတ်ခံရကြ လိမ့်မည်။-
೧೮ಟಗರುಗಳ, ಕುರಿಗಳ, ಹೋತಗಳ, ಹೋರಿಗಳ ಅಂತು ಬಾಷಾನಿನ ಕೊಬ್ಬಿದ ಪಶುಗಳ ರಕ್ತವನ್ನು ಕುಡಿಯುವಿರಿ. ನೀವು ಬಲಿಷ್ಠರ ಮತ್ತು ಭೂಪತಿಗಳ ಮಾಂಸವನ್ನು ತಿನ್ನುವಿರಿ.
19 ၁၉ ထိုသူတို့သည်ယင်းသို့ယဇ်ကောင်များ သဖွယ်အသတ်ခံရကြသောအခါ ငှက် နှင့်တိရစ္ဆာန်များသည်အဆီကိုဝစွာစား ၍သွေးကိုမူးယစ်သည့်တိုင်အောင်သောက် ရကြလိမ့်မည်။-
೧೯ನಾನು ನಿಮಗೋಸ್ಕರ ಅರ್ಪಿಸುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬಾ ತಿನ್ನುವಿರಿ, ರಕ್ತವನ್ನು ಅಮಲೇರುವವರೆಗೂ ಕುಡಿಯುವಿರಿ.
20 ၂၀ ငါပြင်ဆင်သောစားပွဲတွင်သူတို့သည် မြင်းများနှင့်မြင်းစီးသူရဲများ၊ တပ်မ တော်သားများနှင့်စစ်ပွဲဝင်သူတို့၏အ သားကိုစားရကြလိမ့်မည်။ ဤကားငါ အရှင်ထာဝရဘုရားမြွက်ဟတော်မူ သောစကားဖြစ်၏'' ဟုမိန့်တော်မူ၏။
೨೦ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ, ಶೂರ ಸಕಲ ವಿಧವಾದ ಸೈನಿಕರನ್ನು ಬೇಕಾದಷ್ಟು ಭಕ್ಷಿಸುವಿರಿ’” ಇದು ಕರ್ತನಾದ ಯೆಹೋವನ ನುಡಿ.
21 ၂၁ ထာဝရဘုရားက``လူမျိုးတကာတို့သည် ငါ၏ဘုန်းအသရေတော်ကိုမြင်ရကြလိမ့် မည်။ ငါ၏တရားမျှတသောစီရင်ချက်များ ကိုအကောင်အထည်ဖော်ရာတွင် ငါသည် မိမိ၏တန်ခိုးတော်ကိုအဘယ်သို့အသုံး ပြုတော်မူကြောင်းသူတို့အားပြမည်။-
೨೧“ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.
22 ၂၂ ထိုအချိန်မှအစပြု၍ဣသရေလအမျိုး သားတို့သည် မိမိတို့၏ဘုရားသခင်ထာဝရ ဘုရားကားငါပင်ဖြစ်သည်ကိုသိရှိကြ လိမ့်မည်။-
೨೨ಹೀಗೆ ಇಸ್ರಾಯೇಲ್ ವಂಶದವರು ನಾನೇ ಅವರ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.
23 ၂၃ ဣသရေလအမျိုးသားတို့သည်ငါ့အား ပြစ်မှားသည့်အပြစ်များကြောင့်ပြည်နှင် ဒဏ်သင့်ရကြကြောင်းကိုလည်း လူမျိုး တကာတို့သိရှိကြလိမ့်မည်။ ငါသည်သူ တို့အားကျောခိုင်းတော်မူ၍ရန်သူတို့ ၏လက်သို့ရောက်စေလျက်စစ်ပွဲတွင်ကျ ဆုံးစေတော်မူခဲ့၏။-
೨೩“ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವುದು.
24 ၂၄ ငါသည်သူတို့အားမိမိတို့၏ဆိုးညစ် ယုတ်မာမှုများနှင့်ထိုက်လျောက်သည့် အတိုင်းစီရင်တော်မူပြီးလျှင်ကျော ခိုင်းနေတော်မူ၏'' ဟုမိန့်တော်မူ၏။
೨೪ಅವರ ಪಾಪಕ್ಕೂ, ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ನನ್ನ ಮುಖವನ್ನು ಅವರಿಗೆ ಮರೆಮಾಡಿದ್ದೇನೆ.”
25 ၂၅ အရှင်ထာဝရဘုရားက``သို့ဖြစ်၍ယခု ငါသည် ယာကုပ်၏သားမြေးဖြစ်သူ ဣသရေလအမျိုးသားတို့အားကရုဏာ သက်၍ တစ်ဖန်ပြန်လည်ကောင်းစားလာ စေမည်။ ငါ၏သန့်ရှင်းမြင့်မြတ်သောနာမ တော်ကိုကာကွယ်မည်။-
೨೫ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.
26 ၂၆ သူတို့သည်မိမိတို့၏ပြည်တွင်ခြိမ်းခြောက် မည့်သူမရှိဘဲဘေးမဲ့လုံခြုံစွာနေထိုင်ရ ကြသောအခါ ငါ့အားသစ္စာဖောက်ခြင်း ကြောင့်အသရေပျက်ခဲ့ရကြောင်းကိုမေ့ ပျောက်နိုင်ကြလိမ့်မည်။-
೨೬ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
27 ၂၇ ငါသည်သန့်ရှင်းမြင့်မြတ်တော်မူသောဘုရား ဖြစ်သည်ကိုလူမျိုးတကာတို့သိရှိကြစေ ရန် ငါ၏လူမျိုးတော်အားရန်သူတို့နေထိုင် ရာတိုင်းပြည်နိုင်ငံအသီးသီးမှငါပြန် လည်ခေါ်ဆောင်ခဲ့မည်။-
೨೭ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು.
28 ၂၈ ထိုအခါငါ၏လူမျိုးတော်သည်ငါ့အား မိမိတို့၏ဘုရားသခင်ထာဝရဘုရား ဖြစ်တော်မူကြောင်းသိရှိကြလိမ့်မည်။ အ ဘယ်ကြောင့်ဆိုသော်ငါသည်ယခင်ကသူ တို့အားဖမ်းဆီးခေါ်ဆောင်ခြင်းကိုခံစေ တော်မူခဲ့သော်လည်း ယခုအခါ၌တစ် ယောက်မကျန်ပြန်လည်စုသိမ်းကာမိမိ တို့ပြည်သို့ပို့ဆောင်တော်မူသောကြောင့် တည်း။-
೨೮“ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.
29 ၂၉ ငါသည်မိမိ၏လူမျိုးတော်ဣသရေလအမျိုး သားတို့အပေါ်သို့ ငါ၏ဝိညာဉ်တော်ကိုသွန်း လောင်းမည်။ သူတို့အားနောင်အဘယ်အခါ ၌မျှငါကျောခိုင်းမည်မဟုတ်။ ဤကားငါ အရှင်ထာဝရဘုရားမိန့်တော်မူသော စကားဖြစ်၏'' ဟုမိန့်တော်မူ၏။
೨೯ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.