< ဟဂ္ဂဲ 1 >
1 ၁ ပေရသိပြည်ဧကရာဇ်ဒါရိမင်းနန်းစံ ဒုတိယနှစ်ဆဋ္ဌမလတစ်ရက်နေ့၌ ထာဝရ ဘုရားသည်ပရောဖက်ဟ္ဂဲအားဗျာဒိတ် ပေးတော်မူပါ၏။ ထိုဗျာဒိတ်တော်သည်ယုဒ ဘုရင်ခံရှာလသေလ၏သားဇေရုဗဗေလ နှင့် ယဇ်ပုရောဟိတ်မင်းယောဇဒတ်၏သား ယောရှုတို့အတွက်ဖြစ်၏။
೧ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.
2 ၂ အနန္တတန်ခိုးရှင်ထာဝရဘုရားကဟ္ဂဲအား``ဤ အချိန်အခါသည် ဗိမာန်တော်ကိုပြန်လည် တည်ဆောက်သင့်သည့်အချိန်အခါမဟုတ် ဟု ဤသူတို့ပြောဆိုကြပေသည်။-''
೨ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರಲ್ಲಾ.
3 ၃ ဟုမိန့်တော်မူပြီးနောက်ပရောဖက်ဟ္ဂဲမှ တစ်ဆင့် ထာဝရဘုရား၏နှုတ်ကပတ်တော် ကပြည်သူတို့အား၊-
೩ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಹೇಳಿದನು,
4 ၄ ``ငါ၏လူမျိုးတော်၊ သင်တို့သည်အိမ်ရာ ကောင်းကောင်းများတွင်နေထိုင်နေကြသော် လည်း ငါ၏ဗိမာန်တော်သည်ယိုယွင်းပျက် စီးလျက်နေပါသည်တကား။-''
೪“ಈ ನನ್ನ ಆಲಯವು ಹಾಳು ಬಿದ್ದಿರುವಾಗ, ನೀವು ನಿಮ್ಮ ಒಳಗೋಡೆಗೆಲ್ಲಾ ಸುಂದರ ಹಲಿಗೆ ಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವುದಕ್ಕೆ ಈ ಸಮುಯವು ತಕ್ಕದ್ದೋ?”
5 ၅ အနန္တတန်ခိုးရှင်ထာဝရဘုရားက``မိမိ တို့ကြုံတွေ့နေရသည့်အဖြစ်အပျက်ကို သင်တို့မသိမမြင်ကြသလော။-
೫ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.
6 ၆ သင်တို့သည်ဂျုံစပါးအမြောက်အမြားကို စိုက်ပျိုးပါသော်လည်း အနည်းငယ်မျှသာ ရိတ်သိမ်းရကြပေသည်။ သင်တို့တွင်အစာ ရေစာရှိသော်လည်းဝစွာစားရန်မလုံ လောက်၊ စပျစ်ရည်ရှိသော်လည်းမူးယစ်အောင် သောက်ရန်မလုံလောက်၊ အဝတ်အစားများ ရှိသော်လည်း နွေးထွေးအောင်ဝတ်ဆင်ရန် မလုံလောက်၊ အလုပ်သမားသည်လည်းစား ဝတ်နေရေးအတွက် လုံလောက်အောင်လုပ်ခ ကိုမရရှိ။-
೬ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”
7 ၇ အဘယ်ကြောင့်ဤသို့ဖြစ်ပျက်ရသည်ကို သင်တို့မသိမမြင်နိုင်ကြပါသလော။-''
೭ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ; “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.
8 ၈ အနန္တတန်ခိုးရှင်ထာဝရဘုရားက``ယခု ပင်တောင်ကုန်းများပေါ်သို့တက်၍သစ်များ ကိုယူဆောင်လာကာ ဗိမာန်တော်ကိုပြန်လည် တည်ဆောက်ကြလော့၊ ထိုအခါငါသည်နှစ် သက်အားရလာလိမ့်မည်။ ပြီးလျှင်ငါ့အား ထိုက်သင့်သည့်အတိုင်းဝတ်ပြုကိုးကွယ် နိုင်ကြလိမ့်မည်ဟုအနန္တတန်ခိုးရှင် ထာဝရဘုရားမိန့်တော်မူ၏။''
೮ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು” ಇದು ಯೆಹೋವನ ನುಡಿ.
9 ၉ ``သင်တို့သည်အသီးအနှံအမြောက်အမြား ကို ရိတ်သိမ်းရလိမ့်မည်ဟုမျှော်လင့်ခဲ့သော် လည်း အနည်းငယ်မျှသာရကြ၏။ အိမ်သို့ ယူဆောင်လာကြသောအခါ၌လည်း ငါ သည်ယင်းတို့ကိုလေတွင်လွင့်စင်သွား စေခဲ့၏။ အဘယ်ကြောင့်ဤသို့ငါပြုရ သနည်းဆိုသော်သင်တို့အားလုံးပင် မိမိ တို့နေအိမ်များကိုတည်ဆောက်မှုဖြင့်အလုပ် ရှုပ်ကာ၊ ငါ၏ဗိမာန်တော်ကိုမူယိုယွင်းပျက် စီးလျက်သာရှိနေစေကြသောကြောင့်ဖြစ် ၏ဟုအနန္တတန်ခိုးရှင်ထာဝရဘုရား မိန့်တော်မူ၏။-''
೯ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”
10 ၁၀ ဤအကြောင်းကြောင့်ပင်လျှင်မိုးသည်ခေါင် လျက် အဘယ်အသီးအနှံကိုမျှသင်တို့ သည်စိုက်ပျိုး၍မရကြ။-
೧೦ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ;
11 ၁၁ ငါသည်ဤပြည်ကိုခြောက်သွေ့၍နေစေခဲ့ ၏။ ဤပြည်ရှိတောင်ကုန်းများ၊ လယ်ယာများ၊ စပျစ်ဥယျာဉ်များနှင့်သံလွင်ခြံများပေါ် ၌လည်းကောင်း၊ မြေကြီးကထွက်သည့်သီးနှံ မှန်သမျှပေါ်၌လည်းကောင်း၊ လူနှင့်တိရစ္ဆာန် များပေါ်၌လည်းကောင်း၊ သင်တို့ကြိုးစား စိုက်ပျိုးသည့်သီးနှံမှန်သမျှအပေါ်၌ လည်းကောင်းမိုးကိုခေါင်စေခဲ့၏'' ဟုမိန့် တော်မူပါ၏။
೧೧ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ ಇವುಗಳಿಗೆಲ್ಲಾ ಕ್ಷಾಮವನ್ನು ತಂದಿದ್ದೇನೆ.
12 ၁၂ ထိုအခါရှာလသေလ၏သားဇေရုဗ ဗေလ၊ ယဇ်ပုရောဟိတ်မင်းယောဇဒတ်၏ သားယောရှုနှင့်ကျန်ကြွင်းသောပြည်သူ အပေါင်းတို့သည် မိမိတို့ဘုရားသခင် ထာဝရဘုရားမိန့်မှာစေခိုင်းတော်မူသည့် အမှုတို့ကိုပြုကြ၏။ သူတို့သည်ကြောက် လန့်သဖြင့် ထာဝရဘုရား၏စေလွှတ် တော်မူသောတမန်တော်ပရောဖက်ဟ္ဂဲ ပြောဆိုသည့်စကားကိုနားထောင်ကြ၏။-
೧೨ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.
13 ၁၃ ထိုအခါထာဝရဘုရား၏တမန်တော်ဟ္ဂဲ သည်``ထာဝရဘုရားကငါသည်သင်တို့နှင့် အတူရှိတော်မူမည်'' ဟုမိန့်တော်မူကြောင်း လူတို့အားဆင့်ဆိုပြောကြား၏။-
೧೩ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.”
14 ၁၄ ထာဝရဘုရားသည်ယုဒဘုရင်ခံရှာလ လေလ၏သားဇေရုဗဗေလ၊ ယဇ်ပုရော ဟိတ်မင်းယောဇဒတ်၏သားယောရှုနှင့် ပြည် နှင်ဒဏ်သင့်ရာမှပြန်လာကြသူအပေါင်း တို့အား ဗိမာန်တော်တည်ဆောက်မှုတွင်စိတ် အားထက်သန်၍လာစေတော်မူ၏။ သူတို့ သည်မိမိတို့၏ဘုရားသခင်အနန္တတန် ခိုးရှင်ထာဝရဘုရား၏ဗိမာန်တော် တည်ဆောက်မှုကို၊-
೧೪ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,
15 ၁၅ ဧကရာဇ်မင်းဒါရိနန်းစံဒုတိယနှစ်၊ ဆဋ္ဌမလ၊ နှစ်ဆယ့်လေးရက်နေ့၌ စတင်ဆောင်ရွက်ကြလေသည်။
೧೫ಅವರು ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಬಂದು ತಮ್ಮ ದೇವರಾದ ಯೆಹೋವನ ಆಲಯದ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು.