< ယောဟန် 19 >
1 ၁ ထိုနောက်ပိလတ်မင်းသည်သခင်ယေရှုကို ခေါ်သွားစေပြီးလျှင်ကြိမ်ဒဏ်ခတ်စေ၏။-
ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಕೊರಡೆಯಿಂದ ಹೊಡೆಸಿದನು.
2 ၂ စစ်သားများသည်ဆူးခက်ဖြင့်ရက်သောဦးရစ် သရဖူကိုပြုလုပ်၍ ဦးခေါင်းတော်ကိုဆောင်း ပေးကြ၏။ ထိုနောက်နီမောင်းသောဝတ်လုံကို ကိုယ်တော်အားဝတ်ပေးပြီးလျှင်၊-
ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಯ ಮೇಲಿಟ್ಟು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ತೊಡಿಸಿ,
3 ၃ အထံတော်သို့ချဉ်းကပ်၍ ``ယုဒရှင်ဘုရင်၊ သက်တော်ရှည်ပါစေသော'' ဟုဆို၍ပါးတော် ကိုရိုက်ကြ၏။
“ಯೆಹೂದ್ಯರ ಅರಸನೇ, ನಮಸ್ಕಾರ!” ಎಂದು ಹೇಳಿ ಯೇಸುವಿನ ಕೆನ್ನೆಗೆ ಹೊಡೆದರು.
4 ၄ ပိလတ်မင်းသည်အပြင်သို့တစ်ဖန်ထွက်ပြီး လျှင်ပရိသတ်တို့အား ``ထိုသူကိုသေဒဏ်ပေး နိုင်ရန်အကြောင်းတစ်စုံတစ်ရာမျှငါမတွေ့ ကြောင်း သင်တို့သိရှိကြစေရန်သူ့အားသင် တို့ထံသို့ငါထုတ်ခဲ့မည်'' ဟုဆို၏။-
ಆಗ ಪಿಲಾತನು ತಿರುಗಿ ಹೊರಗೆ ಹೋಗಿ ಯೆಹೂದ್ಯರ ಗುಂಪಿಗೆ, “ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವಂತೆ ಆತನನ್ನು ನಿಮ್ಮ ಬಳಿಗೆ ತರುತ್ತೇನೆ,” ಎಂದನು.
5 ၅ သခင်ယေရှုသည်လည်းဆူးဦးရစ်သရဖူကို ဆောင်းလျက်နီမောင်းသောဝတ်လုံကိုဝတ်ဆင် ကာ အပြင်သို့ထွက်ကြွတော်မူ၏။ ပိလတ်မင်း က ``ကြည့်ကြလော့၊ ဤသူပင်ဖြစ်သည်'' ဟု ဆို၏။
ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವರಾಗಿ ಹೊರಗೆ ಬಂದರು. ಪಿಲಾತನು ಅವರಿಗೆ, “ಇಗೋ, ಆ ಮನುಷ್ಯನು ಇವನೇ!” ಎಂದನು.
6 ၆ ယဇ်ပုရောဟိတ်ကြီးများနှင့်အစောင့်တပ်သား များသည်ကိုယ်တော်ကိုမြင်သောအခါ ``သူ့ကို လက်ဝါးကပ်တိုင်တွင်တင်၍သတ်ပါ။ သူ့ကို လက်ဝါးကပ်တိုင်တွင်တင်၍သတ်ပါ'' ဟု ဟစ်အော်ကြ၏။ ပိလတ်မင်းက ``သင်တို့ပင်သူ့ကိုခေါ်ဆောင် ပြီးလျှင်လက်ဝါးကပ်တိုင်တွင်တင်၍သတ် ကြလော့။ သူ့ကိုသေဒဏ်ပေးရန်အကြောင်း တစ်စုံတစ်ရာမျှငါမတွေ့'' ဟုဆို၏။-
ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ನೋಡಿದಾಗ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ಶಿಲುಬೆಗೆ ಹಾಕಿರಿ. ಏಕೆಂದರೆ ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ,” ಎಂದನು.
7 ၇ လူထုက ``ထိုသူသည်မိမိကိုယ်ကိုဘုရား သခင်၏သားတော်ဟုဆိုသောကြောင့် သေဒဏ် ခံထိုက်ကြောင်း အကျွန်ုပ်တို့တရားဥပဒေ ကဆိုပါသည်'' ဟုပြန်၍ဖြေကြား၏။
ಯೆಹೂದ್ಯ ನಾಯಕರು ಅವನಿಗೆ, “ನಮಗೆ ಒಂದು ನಿಯಮವಿದೆ, ಆ ನಿಯಮದ ಪ್ರಕಾರ ಅವನು ಸಾಯಲೇಬೇಕು. ಏಕೆಂದರೆ ಅವನು ತನ್ನನ್ನು ದೇವರ ಪುತ್ರನನ್ನಾಗಿ ಮಾಡಿಕೊಂಡಿದ್ದಾನೆ,” ಎಂದರು.
8 ၈ ထိုသူတို့၏စကားကိုကြားလျှင်ပိလတ် မင်းသည်ပို၍ပင်ကြောက်လန့်လာ၏။-
ಪಿಲಾತನು ಈ ಮಾತನ್ನು ಕೇಳಿದಾಗ ಬಹಳವಾಗಿ ಭಯಪಟ್ಟನು.
9 ၉ သို့ဖြစ်၍အိမ်တော်ထဲသို့ပြန်ဝင်ပြီးနောက် သခင်ယေရှုအား ``သင်သည်အဘယ်မှလာ သနည်း'' ဟုမေး၏။ သို့ရာတွင်သခင်ယေရှုသည်မည်သို့မျှ ဖြေကြားတော်မမူ။-
ತಿರುಗಿ ತನ್ನ ನಿವಾಸದೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರ ಕೊಡಲಿಲ್ಲ.
10 ၁၀ ပိလတ်မင်းက ``သင်သည်ငါနှင့်စကားပြော ရန်ငြင်းဆန်နေပါသလော။ ငါသည်သင့်ကို လွတ်ငြိမ်းချမ်းသာခွင့်ပေးပိုင်သည်ကိုလည်း ကောင်း၊ လက်ဝါးကပ်တိုင်တွင်တင်၍သတ်ပိုင် သည်ကိုလည်းကောင်းသင်မသိပါသလော'' ဟုမေး၏။
ಆಗ ಪಿಲಾತನು ಯೇಸುವಿಗೆ, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವುದಕ್ಕೂ ನಿನ್ನನ್ನು ಶಿಲುಬೆಗೆ ಹಾಕಿಸುವುದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯದೋ?” ಎಂದು ಕೇಳಿದನು.
11 ၁၁ သခင်ယေရှုက ``မင်းကြီးအားဘုရားသခင် အပ်နှင်း၍သာဤသို့သောအခွင့်အာဏာကို ခံယူရရှိသည်။ ထို့ကြောင့်အကျွန်ုပ်အားမင်း ကြီး၏လက်သို့အပ်နှံသူသည်ပို၍အပြစ် ကြီး၏'' ဟုမိန့်တော်မူ၏။-
ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.
12 ၁၂ ဤသို့မိန့်တော်မူသောကြောင့်ပိလတ်မင်းသည် ကိုယ်တော်ကိုလွတ်ငြိမ်းချမ်းသာခွင့်ပေးရန် နည်းလမ်းရှာကြံလေတော့၏။ သို့ရာတွင်လူ ထုက ``ထိုသူအားလွတ်ငြိမ်းချမ်းသာခွင့်ပေး ပါမူအရှင်မင်းကြီးသည်ဧကရာဇ်မင်း၏ အဆွေတော်မဟုတ်တော့ပြီ။ မည်သူမဆို မိမိကိုယ်ကိုရှင်ဘုရင်ဟုဆိုသူသည် ဧကရာဇ်မင်းကိုပုန်ကန်သူဖြစ်ပါ၏'' ဟု ဟစ်အော်ကြ၏။
ಇದನ್ನು ಕೇಳಿದಾಗಿಂದ ಪಿಲಾತನು ಯೇಸುವನ್ನು ಬಿಡಿಸಲು ಪ್ರಯತ್ನಿಸಿದನು. ಆದರೆ ಯೆಹೂದ್ಯ ನಾಯಕರು, “ನೀನು ಈ ಮನುಷ್ಯನನ್ನು ಬಿಡುಗಡೆ ಮಾಡಿದರೆ, ನೀನು ಕೈಸರನ ಮಿತ್ರನಲ್ಲ. ತನ್ನನ್ನು ತಾನೇ ಅರಸನನ್ನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧವಾಗಿ ಮಾತನಾಡುವವನಾಗಿದ್ದಾನೆ,” ಎಂದು ಕೂಗಿ ಹೇಳಿದರು.
13 ၁၃ ဤစကားကိုကြားသောအခါပိလတ်မင်း သည်သခင်ယေရှုကိုအပြင်သို့ထုတ်ဆောင် ခဲ့ပြီးလျှင် ကျောက်ပြားစင်္ကြံပေါ်ရှိတရား ခွင်တွင်ထိုင်လေ၏။ (ထိုစင်္ကြံကိုဟေဗြဲ ဘာသာဖြင့်ဂဗ္ဗသဟုခေါ်၏။)-
ಪಿಲಾತನು ಆ ಮಾತುಗಳನ್ನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದನು. ಹೀಬ್ರೂ ಭಾಷೆಯಲ್ಲಿ “ಗಬ್ಬಥಾ” ಎಂದು ಕರೆಯಲಾದ “ಕಲ್ಲು ಹಾಸಿದ ಕಟ್ಟೆ” ಎಂಬ ಕಟ್ಟೆಯ ಮೇಲಿದ್ದ ನ್ಯಾಯಾಸನದ ಮೇಲೆ ಕುಳಿತುಕೊಂಡನು.
14 ၁၄ ထိုအချိန်ကားပသခါပွဲအကြိုနေ့၊ မွန်းတည့် ခါနီးဖြစ်သတည်း။ ပိလတ်မင်းက ``ကြည့် ကြလော့၊ ဤမှာသင်တို့၏ရှင်ဘုရင်တည်း'' ဟုယုဒအမျိုးသားတို့အားဆို၏။
ಅದು ಪಸ್ಕಹಬ್ಬಕ್ಕೆ ಸಿದ್ಧಮಾಡುವ ದಿನದ ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಯಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು,” ಎಂದನು.
15 ၁၅ ထိုသူတို့က ``သူ့ကိုသတ်ပါ၊ သူ့ကိုသတ်ပါ။ လက်ဝါးကပ်တိုင်တွင်တင်၍သတ်ပါ'' ဟု ပြန်၍ဟစ်အော်ကြ၏။ ပိလတ်မင်းက ``သင်တို့၏ရှင်ဘုရင်ကို လက်ဝါးကပ်တိုင်တွင်တင်၍သတ်စေလို သလော'' ဟုမေး၏။ ယဇ်ပုရောဟိတ်ကြီးများက ``အကျွန်ုပ်တို့ မှာဧကရာဇ်မင်းမှတစ်ပါးအခြားရှင် ဘုရင်မရှိပါ'' ဟုပြန်ပြောကြ၏။
ಆದರೆ ಅವರು, “ಆತನನ್ನು ಕೊಲ್ಲಿಸು ಕೊಲ್ಲಿಸು! ಆತನನ್ನು ಶಿಲುಬೆಗೆ ಹಾಕು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಬೇಕೆ?” ಎಂದು ಕೇಳಿದನು. ಆಗ ಮುಖ್ಯಯಾಜಕರು, “ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.
16 ၁၆ ထိုအခါပိလတ်မင်းသည်ကိုယ်တော်ကို လက်ဝါးကပ်တိုင်တွင်တင်၍သတ်ရန် ထိုသူ တို့လက်သို့အပ်လိုက်လေ၏။ သို့ဖြစ်၍သူတို့သည်ကိုယ်တော်ကိုခေါ်ဆောင် သွားကြ၏။-
ಆಗ ಪಿಲಾತನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕಾಗಿ ಅವರಿಗೆ ಒಪ್ಪಿಸಿದನು. ಅವರು ಯೇಸುವನ್ನು ತಮ್ಮ ವಶಕ್ಕೆ ತೆಗೆದುಕೊಂಡು ಹೋದರು.
17 ၁၇ ကိုယ်တော်သည်ဦးခေါင်းခွံဟုနာမည်တွင်သော အရပ်သို့မိမိ၏လက်ဝါးကပ်တိုင်ကိုထမ်း လျက်ကြွတော်မူ၏။ (ထိုအရပ်ကိုဟေဗြဲ ဘာသာအားဖြင့် ``ဂေါလဂေါသ'' ဟုခေါ် သတည်း။)-
ಯೇಸು ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು “ತಲೆಬುರುಡೆಯ ಸ್ಥಳ” ಎಂಬ ಸ್ಥಳಕ್ಕೆ ಹೋದರು. ಅದು ಅರಮಾಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಅರ್ಥ.
18 ၁၈ ထိုအရပ်မှာကိုယ်တော်ကိုလက်ဝါးကပ်တိုင်တွင် တင်၍သတ်ကြ၏။ ကိုယ်တော်နှင့်အတူအခြား သူနှစ်ယောက်ကိုလည်းကိုယ်တော်၏လက်ယာ ဘက်တွင်တစ်ယောက် လက်ဝဲဘက်တွင်တစ်ယောက် လက်ဝါးကပ်တိုင်တွင်တင်၍သတ်ကြ၏။ ကိုယ်တော်ကိုမူကားအလယ်တွင်ထား သတည်း။-
ಅಲ್ಲಿ ಯೇಸುವನ್ನೂ ಅವರ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಗೂ ಮತ್ತೊಬ್ಬನನ್ನು ಅವರ ಎಡಗಡೆಗೂ ಇಟ್ಟರು.
19 ၁၉ ပိလတ်မင်းသည်ကမ္ပည်းလိပ်စာရေး၍ကိုယ်တော် ၏လက်ဝါးကပ်တိုင်ပေါ်မှာကပ်ထားစေ၏။ ထို ကမ္ပည်းလိပ်စာကား ``ယုဒဘုရင်၊ နာဇရက်မြို့ သားယေရှု'' ဟူ၍ဖြစ်သတည်း။-
ಪಿಲಾತನು ಒಂದು ಫಲಕದ ಮೇಲೆ ಶಿರೋನಾಮವನ್ನು ಬರೆಸಿ, ಅದನ್ನು ಶಿಲುಬೆಯ ಮೇಲಿಟ್ಟಿದ್ದನು. ಅದೇನಂದರೆ: ಯೆಹೂದ್ಯರ ಅರಸನಾದ ನಜರೇತಿನ ಯೇಸು.
20 ၂၀ သခင်ယေရှုကိုလက်ဝါးကပ်တိုင်တွင်တင် ၍သတ်သည့်အရပ်မှာမြို့နှင့်နီးကပ်သဖြင့် လူအများပင်ထိုကမ္ပည်းလိပ်စာကိုဖတ် ကြည့်ကြ၏။ ကမ္ပည်းလိပ်စာကိုယုဒဘာသာ၊ လက်တင်ဘာသာနှင့်ဂရိဘာသာတို့ဖြင့် ရေးသားထားသည်။-
ಈ ಫಲಕವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಗೇರಿಸಿದ ಆ ಸ್ಥಳವು ಪಟ್ಟಣಕ್ಕೆ ಸಮೀಪವಾಗಿತ್ತು. ಇದು ಹೀಬ್ರೂ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.
21 ၂၁ ယဇ်ပုရောဟိတ်ကြီးများက ``ယုဒဘုရင် ဟူ၍ရေးတော်မမူပါနှင့်။ `ဤသူကငါ သည်ယုဒရှင်ဘုရင်ဖြစ်သည်ဟုဆိုသည်' ဟူ၍သာရေးတော်မူပါ'' ဟုပိလတ်မင်း အားလျှောက်ထားကြ၏။
ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “ಯೆಹೂದ್ಯರ ಅರಸನೆಂದು ಬರೆಯಬೇಡ, ‘ತಾನು ಯೆಹೂದ್ಯರ ಅರಸನು ಎಂದು ಹೇಳಿಕೊಂಡವನು’ ಎಂದು ಬರೆ,” ಎಂದರು.
22 ၂၂ ပိလတ်မင်းက ``ငါရေးပြီးသည့်အတိုင်း အတည်ဖြစ်စေရမည်'' ဟုပြန်ပြော၏။
ಪಿಲಾತನು, “ನಾನು ಬರೆದದ್ದು ಬರೆದಾಯಿತು,” ಎಂದು ಉತ್ತರಕೊಟ್ಟನು.
23 ၂၃ စစ်သားတို့သည်သခင်ယေရှုကိုလက်ဝါးကပ် တိုင်တွင်တင်ကြပြီးသောအခါ ကိုယ်တော်၏ အဝတ်တော်တို့ကိုလေးပိုင်းပိုင်း၍တစ်ယောက် တစ်ပိုင်းစီယူကြ၏။ သူတို့သည်အထဲခံ အင်္ကျီကိုလည်းယူကြ၏။ သို့ရာတွင်ထိုအင်္ကျီ မှာချုပ်ရိုးမဲ့ရက်လုပ်ထားသည်ဖြစ်၍၊-
ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಹಂಚಿಕೊಂಡರು. ಅವರ ಒಳ ಅಂಗಿಯನ್ನು ಸಹ ತೆಗೆದುಕೊಂಡರು. ಆ ಒಳ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.
24 ၂၄ စစ်သားများက ``ဤအင်္ကျီကိုမဆုတ်ကြ နှင့်။ မဲချ၍ယူကြကုန်အံ့'' ဟုအချင်း အချင်းပြောဆိုကြ၏။ ဤစစ်သားများ ပြုမူကြခြင်းမှာကျမ်းစာတော်တွင် ``ထိုသူတို့သည်ငါ၏အဝတ်များကိုခွဲဝေ ယူကြ၏။ ငါ၏အင်္ကျီကိုမဲချယူကြ၏'' ဟုပါရှိသည့်အတိုင်းဖြစ်ပျက်စေရန်ပင်တည်း။-
ಆದ್ದರಿಂದ ಅವರು, “ನಾವು ಅದನ್ನು ಹರಿಯುವುದು ಬೇಡ. ಆದರೆ ಅದು ಯಾರಿಗಾಗುವುದೋ ಎಂದು ನೋಡುವುದಕ್ಕಾಗಿ ಚೀಟು ಹಾಕಿಕೊಳ್ಳೋಣ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಹೀಗೆ, “ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿಕೊಂಡರು. ನನ್ನ ಒಳ ಅಂಗಿಗಾಗಿ ಚೀಟುಹಾಕಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆ, ಸೈನಿಕರು ಚೀಟುಹಾಕಿ ಪಾಲುಮಾಡಿಕೊಂಡರು.
25 ၂၅ ထိုအခါကိုယ်တော်၏မယ်တော်နှင့်မယ်တော် ၏ညီမသည်လည်းကောင်း၊ ကလောဖ၏ဇနီး ဖြစ်သူမာရိနှင့်မာဂဒလမြို့သူမာရိ သည်လည်းကောင်း သခင်ယေရှု၏လက်ဝါး ကပ်တိုင်အနီးတွင်ရပ်လျက်နေကြ၏။-
ಯೇಸುವಿನ ಶಿಲುಬೆಯ ಬಳಿಯಲ್ಲಿ ಅವರ ತಾಯಿಯೂ ಅವರ ತಾಯಿಯ ಸಹೋದರಿಯೂ ಕ್ಲೋಪನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.
26 ၂၆ သခင်ယေရှုသည်မယ်တော်နှင့်မယ်တော်၏ အနီးတွင်ကိုယ်တော်ချစ်တော်မူသောတပည့် တော်ရပ်လျက်နေသည်ကိုတွေ့မြင်တော်မူ၏။ သို့ဖြစ်၍ကိုယ်တော်က ``မယ်တော်၊ ဤမှာ မယ်တော်၏သား'' ဟုမြွက်ဆိုတော်မူ၏။
ಯೇಸು ತಮ್ಮ ತಾಯಿಯೂ ತಾವು ಪ್ರೀತಿಸಿದ ಶಿಷ್ಯನೂ ಹತ್ತಿರದಲ್ಲಿ ನಿಂತಿರುವುದನ್ನು ಕಂಡು ತಮ್ಮ ತಾಯಿಗೆ, “ಅಮ್ಮಾ, ಇಗೋ, ನಿನ್ನ ಮಗನು,” ಎಂದರು.
27 ၂၇ ထိုနောက်တပည့်တော်အား ``ဤမှာသင်၏ အမိ'' ဟုမိန့်မြွက်တော်မူ၏။ ထိုအခါမှ စ၍ထိုတပည့်တော်သည်မယ်တော်အား မိမိ၏အိမ်တွင်ပြုစုစောင့်ရှောက်ထားလေ သည်။
ಆಮೇಲೆ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿಯು,” ಎಂದರು. ಆ ಸಮಯದಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಇರಿಸಿಕೊಂಡನು.
28 ၂၈ ထိုအချိန်၌အမှုခပ်သိမ်းပြီးစီးပြီဖြစ် ကြောင်းကိုသခင်ယေရှုသိတော်မူသဖြင့် ကျမ်းစာတော်လာသည်အတိုင်းဖြစ်ပျက် စေရန်ကိုယ်တော်က ``ငါရေငတ်သည်'' ဟု မိန့်တော်မူ၏။
ಇದಾದ ಮೇಲೆ ಯೇಸು ಈಗ ಎಲ್ಲವೂ ಪೂರ್ತಿಯಾಗಿದೆಯೆಂದು ತಿಳಿದು, ಪವಿತ್ರ ವೇದದ ವಾಕ್ಯವು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದರು.
29 ၂၉ ထိုနေရာတွင်ပုန်းရည်အပြည့်ထည့်ထား သောအိုးတစ်လုံးရှိ၏။ ထိုသူတို့သည်ရေ မြှုပ်တစ်ခုကိုပုန်းရည်တွင်နှစ်၍ဟုဿုပ်ပင် အကိုင်းအဖျား၌တပ်ပြီးလျှင်ကိုယ်တော် ၏ခံတွင်းတော်သို့ကမ်းပေးကြ၏။-
ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಹೀರುವ ಪದಾರ್ಥವನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಯೇಸುವಿನ ಬಾಯಿಗೆ ಇಟ್ಟರು.
30 ၃၀ သခင်ယေရှုသည်ထိုပုန်းရည်ကိုသောက်တော် မူပြီးမှ ``အမှုပြီးပြီ'' ဟုမိန့်တော်မူကာ ဦးခေါင်းတော်ကိုငိုက်လျက်အသက်ချုပ် တော်မူ၏။
ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.
31 ၃၁ ယုဒအာဏာပိုင်တို့သည်လက်ဝါးကပ်တိုင် တွင်တင်ထားသူများ၏ခြေတို့ကိုချိုး၍ အလောင်းများကိုယူဆောင်သွားခွင့်ပြုရန် ပိလတ်မင်းအားတောင်းလျှောက်ကြ၏။ သူတို့ ဤသို့တောင်းလျှောက်ကြရခြင်းမှာထိုနေ့ သည်အဖိတ်နေ့ဖြစ်၍ဥပုသ်နေ့၌ အလောင်း များကိုလက်ဝါးကပ်တိုင်တွင်မရှိစေလို သောကြောင့်လည်းကောင်း၊ ထိုဥပုသ်နေ့သည် လည်းနေ့ထူးနေ့မြတ်ဖြစ်သောကြောင့် လည်းကောင်းဖြစ်ပေသည်။-
ಅದು ಪಸ್ಕಹಬ್ಬದ ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯ ನಾಯಕರು ಪಿಲಾತನನ್ನು ಕೇಳಿಕೊಂಡರು.
32 ၃၂ ထို့ကြောင့်စစ်သားများသည်လာ၍သခင်ယေရှု နှင့်အတူလက်ဝါးကပ်တိုင်တွင်အတင်ခံရသော ပထမလူ၏ခြေများကိုချိုးပြီးလျှင် အခြား တစ်ယောက်၏ခြေများကိုလည်းချိုးကြ၏။-
ಅದರಂತೆ ಸೈನಿಕರು ಬಂದು ಯೇಸುವಿನ ಜೊತೆಯಲ್ಲಿ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.
33 ၃၃ ကိုယ်တော်ထံသို့ရောက်ကြသောအခါအသက် ချုပ်တော်မူပြီးကြောင်းကိုတွေ့ရှိသဖြင့် ခြေ တော်တို့ကိုမချိုးကြတော့ချေ။-
ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಯೇಸು ಆಗಲೇ ಸತ್ತಿರುವುದನ್ನು ಕಂಡು ಅವರ ಕಾಲುಗಳನ್ನು ಮುರಿಯಲಿಲ್ಲ.
34 ၃၄ သို့ရာတွင်စစ်သားတစ်ယောက်သည်ကိုယ်တော် ၏နံတော်ကိုလှံဖြင့်ထိုးလိုက်ရာချက်ချင်း ပင်သွေးနှင့်ရေထွက်လာ၏။-
ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಯೇಸುವಿನ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಹೊರಗೆ ಬಂದವು.
35 ၃၅ (ဤအဖြစ်အပျက်ကိုသင်တို့သည်လည်းယုံ ကြည်ကြစေရန်မျက်မြင်သက်သေတစ်ဦး ကဖော်ပြပါ၏။ ထိုသူ၏ဖော်ပြချက်သည် မှန်ကန်ပါ၏။ ထိုသူကိုယ်တိုင်ပင်မိမိစကား မှန်ကန်ကြောင်းကိုသိပါ၏။)-
ಇದನ್ನು ಕಣ್ಣಾರೆ ಕಂಡವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವಾದದ್ದು, ನೀವು ಸಹ ನಂಬುವಂತೆ ತಾನು ಹೇಳಿರುವುದು ಸತ್ಯವೆಂದು ಅವನು ಬಲ್ಲನು.
36 ၃၆ ဤသို့ဖြစ်ပျက်ရခြင်းမှာ ``သူ၏အရိုးတစ် ချောင်းမျှမကျိုးစေရ'' ဟုကျမ်းစာတော် တွင်ပါရှိသည့်အတိုင်းပင်တည်း။-
ಏಕೆಂದರೆ, “ಯೇಸುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆಯೇ ಇವೆಲ್ಲಾ ಸಂಭವಿಸಿದವು.
37 ၃၇ အခြားကျမ်းစာတစ်ပုဒ်တွင်လည်း ``ထိုသူ တို့သည်မိမိလှံဖြင့်ထိုးဖောက်သောသူကို ရှုကြည့်ကြရလိမ့်မည်'' ဟုပါရှိသေး၏။
ಮತ್ತೊಂದು ಪವಿತ್ರ ವೇದದ ವಾಕ್ಯವು, “ತಾವು ಇರಿದವನನ್ನು ಅವರು ನೋಡುವರು,” ಎಂದು ಹೇಳುತ್ತದೆ.
38 ၃၈ ထိုနောက်အရိမဿဲမြို့သားယောသပ်သည် သခင်ယေရှု၏အလောင်းတော်ကိုယူခွင့်ပြု ရန်ပိလတ်မင်းအားတောင်းလျှောက်၏။ (ယောသပ် ကားယုဒအာဏာပိုင်တို့ကိုကြောက်သဖြင့် မထင်မရှားသခင်ယေရှု၏တပည့်တော်ဖြစ် သတည်း။) ပိလတ်မင်းခွင့်ပြုတော်မူသဖြင့် ယောသပ်သည်အလောင်းတော်ကိုလာယူ၏။-
ತರುವಾಯ ಯೆಹೂದ್ಯರ ಭಯದ ನಿಮಿತ್ತದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.
39 ၃၉ ယခင်သခင်ယေရှုကိုညအခါလာရောက် တွေ့ဆုံသူနိကောဒင်သည်လည်း မုရန်နှင့် အကျော်ရောနှောသောဆီမွှေးနံ့သာပေါင်း အချိန်နှစ်ဆယ့်ငါးပိဿာခန့်ကိုယူ၍ ယော သပ်နှင့်အတူလိုက်သွား၏။-
ಇದಲ್ಲದೆ ಮೊದಲು ಒಂದು ಸಾರಿ ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ, ಅಗರುಗಳನ್ನು, ಸುಗಂಧದ್ರವ್ಯ ಬೆರೆಸಿದ ಮಿಶ್ರಣವನ್ನು, ಮೂವತ್ತು ಕಿಲೋಗ್ರಾಮಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.
40 ၄၀ သူတို့သည်သခင်ယေရှု၏အလောင်းတော်ကို ယူ၍ယုဒအမျိုးသားတို့၏သင်္ဂြိုဟ်ခြင်းဆိုင် ရာဋ္ဌလေ့ထုံးစံအတိုင်း နံ့သာပေါင်းနှင့်အတူ ပိတ်ဖြင့်ရစ်ပတ်ကြ၏။-
ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಳುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರುಬಟ್ಟೆಗಳಲ್ಲಿ ಸುತ್ತಿದರು.
41 ၄၁ ကိုယ်တော်ကိုလက်ဝါးကပ်တိုင်တွင်တင်၍သတ် သည့်အရပ်၌ဥယျာဉ်တစ်ခုရှိ၏။ ထိုဥယျာဉ် တွင်မည်သူကိုမျှမသင်္ဂြိုဟ်ဘူးသေးသည့် သင်္ချိုင်းဂူတစ်ခုရှိ၏။-
ಯೇಸು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಹೊಸ ಸಮಾಧಿಯಿತ್ತು.
42 ၄၂ ထိုနေ့သည်ယုဒအမျိုးသားတို့၏အဖိတ် နေ့ဖြစ်သောကြောင့် အလောင်းတော်ကိုအနီး တွင်ရှိသည့်ထိုဂူ၌ပင်သင်္ဂြိုဟ်ကြ၏။
ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದಲೂ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವನ್ನು ಅಲ್ಲಿಯೇ ಸಮಾಧಿಮಾಡಿದರು.