< ယောရှု 10 >
1 ၁ ယေရုရှလင်မြို့၏ဘုရင်အဒေါနိဇေဒက် သည်ယေရိခေါမြို့ကိုယောရှုတိုက်ခိုက်သိမ်း ပိုက်၍ ၎င်း၏ဘုရင်ကိုကွပ်မျက်ခဲ့သည့်နည်း တူအာဣမြို့ကိုတိုက်ခိုက်သိမ်းပိုက်၍ ၎င်း၏ ဘုရင်ကိုလည်းကွပ်မျက်ခဲ့ကြောင်းကြား သိရလေသည်။ ထို့အပြင်ဂိဗောင်မြို့သား တို့သည်ဣသရေလအမျိုးသားတို့နှင့် ငြိမ်းချမ်းရေးစာချုပ်ချုပ်၍အတူတကွ နေထိုင်ကြကြောင်းကိုလည်းကြားသိရ လေသည်။-
೧ಯೆಹೋಶುವನು ಆಯಿ ನಗರವನ್ನು, ಅದರ ಅರಸನನ್ನು ಹಿಡಿದು ಯೆರಿಕೋವನ್ನೂ ಅದರ ಅರಸನನ್ನೂ ಹೇಗೆ ಸಂಹರಿಸಿದನೆಂದು ಯೆರೂಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.
2 ၂ ယေရုရှလင်မြို့သားတို့သည်အလွန်ကြောက် လန့်ကြ၏။ အဘယ်ကြောင့်ဆိုသော်ဂိဗောင် မြို့သည်မင်းနေပြည်တော်မြို့များကဲ့သို့ ကြီးကျယ်ခမ်းနားသောမြို့ဖြစ်သောကြောင့် လည်းကောင်း၊ အာဣမြို့ထက်ကြီး၍မြို့သား တို့သည်တိုက်ရည်ခိုက်ရည်ကောင်းသူများ ဖြစ်သောကြောင့်လည်းကောင်းဖြစ်သတည်း။-
೨ಆಯಿ ಎಂಬ ಊರಿಗಿಂತ ದೊಡ್ಡದೂ, ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದ ಉಳಿಯುವುದಕ್ಕೋಸ್ಕರ ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುವುದನ್ನು ಕೇಳಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಬಹಳವಾಗಿ ಭಯಪಟ್ಟನು.
3 ၃ သို့ဖြစ်၍ယေရုရှလင်မြို့ဘုရင်မင်းကြီး အဒေါနိဇေဒက်သည်ဟေဗြုန်ဘုရင်ဟောဟံ၊ ယာမုတ်ဘုရင်ဝိရံ၊ လာခိရှဘုရင်ယာဖျာ၊ ဧဂလုန်ဘုရင်ဒေပိရတို့ထံသို့သံတမန် များကိုစေလွှတ်၍၊-
೩ಆದುದರಿಂದ ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು.
4 ၄ ``ဂိဗောင်မြို့သားတို့သည်ယောရှုနှင့်ဣသ ရေလအမျိုးသားတို့နှင့် ငြိမ်းချမ်းရေးစာ ချုပ်ချုပ်ထားကြသောကြောင့် ဂိဗောင်မြို့ကို တိုက်ခိုက်ရန်ငါ့ထံသို့စစ်ကူပို့ကြပါ'' ဟုပြောစေ၏။-
೪“ನೀವು ಬಂದು ನನಗೆ ಸಹಾಯಮಾಡಿರಿ, ನಾವು ಯೆಹೋಶುವನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿರುವ ಗಿಬ್ಯೋನ್ಯರನ್ನು ಸೋಲಿಸೋಣ” ಎಂದು ಹೇಳಿ ಕಳುಹಿಸಿದನು.
5 ၅ ထိုကြောင့်အာမောရိဘုရင်ငါးပါးဖြစ် သောယေရုရှလင်ဘုရင်၊ ဟေဗြုန်ဘုရင်၊ ယာမုတ်ဘုရင်၊ လာခိရှဘုရင်၊ ဧဂလုန် ဘုရင်တို့သည်စုပေါင်း၍ မိမိတို့၏စစ် သည်အလုံးအရင်းနှင့်ချီတက်လာကြ ပြီးလျှင်ဂိဗောင်မြို့ကိုဝိုင်းရံတိုက်ခိုက် ကြလေသည်။
೫ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ಒಟ್ಟಾಗಿ ಸೇರಿ ದಂಡೆತ್ತಿ ಬಂದರು. ಅವರು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.
6 ၆ ထိုအခါဂိဗောင်မြို့သားတို့သည်ဂိလ ဂါလစခန်းတွင်ရှိသောယောရှုထံသို့ လူစေလွှတ်၍``ကိုယ်တော်၏ကျွန်တို့ကိုစွန့်ပစ် ထားတော်မမူပါနှင့်။ အလျင်အမြန်ကြွ ၍အကျွန်ုပ်တို့အားကယ်တင်တော်မူပါ။ တောင်ကုန်းဒေသမှအာမောရိမင်းအပေါင်း တို့သည်စုပေါင်း၍အကျွန်ုပ်တို့အားတိုက် ခိုက်ပါပြီ'' ဟုအကြောင်းကြားလျှောက် ထားလေသည်။
೬ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡದೆ, ಬೇಗನೆ ಬಂದು ಸಹಾಯಮಾಡಿ ನಮಗೆ ವಿರೋಧವಾಗಿ ಸೇರಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿರಿ” ಎಂದು ಬೇಡಿಕೊಂಡರು.
7 ၇ ထို့ကြောင့်ယောရှုသည်လက်ရွေးစင်စစ်သူရဲ များပါဝင်သော ဣသရေလတပ်မတော်တစ် တပ်လုံးနှင့်ဂိလဂါလမြို့မှချီတက်လာ လေသည်။-
೭ಆಗ ಯೆಹೋಶುವನು ಎಲ್ಲಾ ಭಟರ ಮತ್ತು ಯುದ್ಧವೀರರ ಸಹಿತವಾಗಿ ಗಿಲ್ಗಾಲಿನಿಂದ ಹೊರಟನು.
8 ၈ ထာဝရဘုရားသည်ယောရှုအား``သူတို့ကို မကြောက်နှင့်။ ငါသည်သူတို့ကိုသင့်လက်သို့ အပ်ပြီ။ မည်သူမျှသင့်ကိုမခုခံနိုင်'' ဟူ၍ မိန့်တော်မူ၏။-
೮ಯೆಹೋವನು ಯೆಹೋಶುವನಿಗೆ, ಅವರಿಗೆ “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ” ಎಂದನು
9 ၉ ယောရှုသည်ဂိလဂါလမြို့မှဂိဗောင်မြို့ သို့တစ်ညလုံးချီတက်လာ၍ အာမောရိတပ် များကိုရုတ်တရက်တိုက်ခိုက်လေသည်။-
೯ಯೆಹೋಶುವನು ಗಿಲ್ಗಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣಮಾಡಿ ತಟ್ಟನೆ ಅವರ ಮೇಲೆ ಬಿದ್ದನು.
10 ၁၀ ထာဝရဘုရားသည်ရန်သူတို့အားဖရို ဖရဲထွက်ပြေးစေတော်မူ၏။ ထိုအခါ ဣသရေလတပ်သားတို့သည်ဂိဗောင်မြို့ တွင်ရန်သူအမြောက်အမြားကိုသတ်ဖြတ် ၍ ဗေသောရုံတောင်ကြားကိုလွန်လျက်တောင် ဘက်အဇေကာမြို့နှင့်မက္ကဒါမြို့များသို့ တိုင်အောင်လိုက်လံတိုက်ခိုက်ကြလေသည်။-
೧೦ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.
11 ၁၁ ဣသရေလတပ်သားများတိုက်ခိုက်သဖြင့် အာမောရိတပ်သားတို့သည် တောင်ကြားလမ်း သို့ဆင်းပြေးကြစဉ်အဇေကာမြို့အထိ လမ်းတစ်လျှောက်လုံးတွင်ကောင်းကင်မှမိုးသီး လုံးကြီးများကိုသူတို့အပေါ်သို့ထာဝရ ဘုရားရွာကျစေတော်မူ၏။ မိုးသီးဒဏ် ကြောင့်သေသူတို့သည် ဣသရေလအမျိုး သားတို့၏လက်ချက်ကြောင့်သေသူတို့ ထက်ပို၍များသတည်း။
೧೧ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.
12 ၁၂ အာမောရိတပ်သားများကိုဣသရေလ အမျိုးသားတို့လက်သို့ ထာဝရဘုရား အပ်တော်မူသောနေ့၌ယောရှုက၊ ``အသင်နေမင်း၊ဂိဗောင်မြို့ပေါ်တွင်ရပ် တန့်၍နေလော့။ အသင်လမင်း၊အာဂလုန်မြို့ချိုင့်ဝှမ်းတွင် ရပ်တန့်၍နေလော့'' ဟု ဣသရေလအမျိုးသားတို့ရှေ့၌မြွက်ဆို၏။
೧೨ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.
13 ၁၃ ဣသရေလအမျိုးသားတို့ကရန်သူများ ကိုအောင်မြင်စွာနှိမ်နင်းပြီးသည်အထိ နေ နှင့်လတို့သည်မရွေ့လျားဘဲရပ်တန့်၍နေ ကြ၏။ ထိုအကြောင်းကိုယာရှာ၏စာစောင် တွင်ဖော်ပြထားလေသည်။ တစ်နေ့လုံးနေ သည်မဝင်ဘဲကောင်းကင်အလယ်တွင်ရပ် တန့်၍နေ၏။-
೧೩ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವ ತನಕ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್ ಗ್ರಂಥದಲ್ಲಿ ಬರೆದಿದೆಯಲ್ಲವೆ? ಹೀಗೆ ಸೂರ್ಯನು ಮುಳುಗಲು ಆತುರ ಪಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿಯೇ ನಿಂತನು.
14 ၁၄ ထာဝရဘုရားသည်လူသားတစ်ယောက် ၏စကားကိုထိုနေ့၌နားထောင်ခဲ့တော် မူ၏။ ယင်းသို့တစ်ခါမျှမဖြစ်စဖူး၊ နောင် အခါ၌လည်းဖြစ်လိမ့်မည်မဟုတ်။ ထာဝရ ဘုရားသည်ဣသရေလအမျိုးသားတို့ ဘက်မှစစ်ကူ၍တိုက်ခိုက်တော်မူပါသည် တကား။
೧೪ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿನವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.
15 ၁၅ ထိုနောက်ယောရှုနှင့်ဣသရေလတပ်သားတို့ သည် ဂိလဂါလစခန်းသို့ပြန်လာကြလေ သည်။
೧೫ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಗಿಲ್ಗಾಲಿನ ಪಾಳೆಯಕ್ಕೆ ಹಿಂದಿರುಗಿದನು.
16 ၁၆ အာမောရိမင်းငါးပါးတို့သည်ကားလွတ် မြောက်၍ မက္ကဒါလိုဏ်ဂူထဲတွင်ပုန်းအောင်း လျက်ရှိကြ၏။-
೧೬ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದ ಗುಹೆಯಲ್ಲಿ ಅಡಗಿಕೊಂಡರು.
17 ၁၇ တစ်စုံတစ်ယောက်သောသူသည်ထိုမင်းများ ပုန်းအောင်းနေသည်ကိုတွေ့သဖြင့် ယောရှု ထံသို့အကြောင်းကြားလေသည်။-
೧೭ಜನರು ಯೆಹೋಶುವನಿಗೆ “ಆ ಐದು ಮಂದಿ ನಮಗೆ ಸಿಕ್ಕಿದ್ದಾರೆ. ಅವರು ಮಕ್ಕೇದದ ಗವಿಯಲ್ಲಿ ಅಡಗಿಕೊಂಡಿದ್ದಾರೆ” ಎಂದು ತಿಳಿಸಿದರು.
18 ၁၈ ယောရှုက``လိုဏ်ဂူဝကိုကျောက်တုံးကြီး များဖြင့်ပိတ်ထားလော့။ အစောင့်လည်းချ ထားလော့။-
೧೮ಆಗ ಯೆಹೋಶುವನು ಅವರಿಗೆ “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕಾವಲುಗಾರರನ್ನು ಇಡಿರಿ. ನೀವಾದರೂ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದೆ ಬರುವ ಶತ್ರುಗಳನ್ನು ಹತಮಾಡುತ್ತಾ ಹೋಗಿರಿ.
19 ၁၉ သင်တို့မူကားထိုအရပ်တွင်စောင့်၍မနေနှင့်။ ရန်သူများနောက်သို့လိုက်လံ၍နောက်ဆွယ်မှ တိုက်ခိုက်လော့။ မြို့များထဲသို့မဝင်စေနှင့်။ သင် တို့၏ဘုရားသခင်ထာဝရဘုရားသည် ရန်သူကိုသင်တို့လက်သို့အပ်တော်မူပြီ'' ဟုဣသရေလအမျိုးသားတို့အားမှာ ကြားလေသည်။-
೧೯ಅವರನ್ನು ಅವರ ಪಟ್ಟಣಗಳಲ್ಲಿ ಸೇರುವುದಕ್ಕೆ ಬಿಡಬೇಡಿರಿ. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನಲ್ಲಾ?” ಎಂದನು.
20 ၂၀ ယောရှုနှင့်ဣသရေလအမျိုးသားတို့သည် ရန်သူမြောက်မြားစွာတို့ကိုသတ်ဖြတ်ကြ၏။ သို့ရာတွင်ရန်သူအချို့တို့သည်လွတ်မြောက် ၍တံတိုင်းကာရံထားသောမြို့များထဲသို့ ဝင်ရောက်ခိုအောင်းသဖြင့်အသက်ချမ်းသာ ရာရကြ၏။-
೨೦ಈ ರೀತಿಯಾಗಿ ಯೆಹೋಶುವನೂ ಹಾಗೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆ ಕೊತ್ತಲುಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು.
21 ၂၁ ထိုနောက်ဣသရေလတပ်သားအားလုံးတို့ သည် ဘေးကင်းစွာယောရှုရှိရာမက္ကဒါစခန်း သို့ပြန်လာကြလေသည်။ ထိုပြည်တွင်မည်သူမျှဣသရေလအမျိုး သားတို့အား အပြစ်တင်သောစကားကိုပင် မပြောဝံ့ချေ။
೨೧ಇಸ್ರಾಯೇಲ್ಯರಾದರೋ ಮಕ್ಕೇದದಲ್ಲಿ ಇಳುಕೊಂಡಿದ್ದ ಯೆಹೋಶುವನ ಬಳಿಗೆ ಸುರಕ್ಷಿತರಾಗಿ ಬಂದರು. ಇಸ್ರಾಯೇಲ್ಯರಿಗೆ ವಿರೋಧವಾಗಿ ಒಬ್ಬನೂ ಮಾತನಾಡಲಿಲ್ಲ.
22 ၂၂ ထိုနောက်ယောရှုက``လိုဏ်ဂူဝကိုဖွင့်၍ မင်းငါးပါးကိုငါ့ထံသို့ထုတ်ဆောင်ခဲ့ ကြလော့'' ဟုအမိန့်ပေးလေ၏။-
೨೨ಅನಂತರ ಯೆಹೋಶುವನು ಜನರಿಗೆ “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿರಿ” ಎಂದನು.
23 ၂၃ သူတို့သည်ယေရုရှလင်ဘုရင်၊ ဟေဗြုန် ဘုရင်၊ ယာမုတ်ဘုရင်၊ လာခိရှဘုရင်၊ ဧဂလုန်ဘုရင်တို့ကိုလိုဏ်ဂူထဲမှထုတ်၍၊-
೨೩ಅವರು ಹೋಗಿ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅರಸರನ್ನು ಗವಿಯಿಂದ ಎಳೆದು ಕೊಂಡು ಅವನ ಬಳಿಗೆ ತಂದರು.
24 ၂၄ ယောရှုထံသို့ခေါ်ဆောင်ခဲ့ကြလေသည်။ ထို အခါယောရှုသည်ဣသရေလအမျိုးသား အပေါင်းတို့နှင့် မိမိနှင့်အတူစစ်ချီတိုက် ခိုက်ခဲ့သောဗိုလ်မှူးများကိုမိမိထံသို့ဆင့် ခေါ်၏။ ဗိုလ်မှူးတို့အား``ထိုမင်းတို့၏လည်ပင်း ကိုခြေဖြင့်နင်းကြ'' ဟုအမိန့်ပေးသည့် အတိုင်းသူတို့သည်ခြေဖြင့်နင်းကြ၏။-
೨೪ಅವರನ್ನು ತನ್ನ ಬಳಿಗೆ ತಂದನಂತರ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ “ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ” ಎಂದು ಹೇಳಿದನು. ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.
25 ၂၅ ယောရှုကဗိုလ်မှူးတို့အား``ထာဝရဘုရား သည်သင်တို့၏ရန်သူဟူသမျှကို ဤသို့ပြု တော်မူမည်ဖြစ်သောကြောင့်မကြောက်ကြ နှင့်။ စိတ်မပျက်ကြနှင့်။ အားမာန်တင်း၍ရဲ ရင့်ခြင်းရှိကြလော့'' ဟူ၍ဆိုလေ၏။-
೨೫ಆಗ ಅವನು ಅವರಿಗೆ “ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು” ಎಂದು ಹೇಳಿದನು.
26 ၂၆ ထိုနောက်ယောရှုသည်မင်းငါးပါးတို့ကိုဋ္ဌား ဖြင့် ကွပ်မျက်၍အလောင်းများကိုသစ်ပင် ငါးပင်ပေါ်တွင် ညနေခင်းတိုင်အောင်ချိတ် ဆွဲထားလေသည်။-
೨೬ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.
27 ၂၇ နေဝင်ချိန်သို့ရောက်သော်ယောရှုကအလောင်း များကိုသစ်ပင်ပေါ်မှဖြုတ်ချ၍ သူတို့ပုန်း အောင်းနေခဲ့သောလိုဏ်ဂူထဲသို့ပစ်သွင်းရန် အမိန့်ပေးလေသည်။ ထိုနောက်လိုဏ်ဂူဝကို ကျောက်တုံးကြီးများဖြင့်ပိတ်ထားစေရာ ယနေ့တိုင်ကျောက်တုံးကြီးများကိုတွေ့ မြင်နိုင်သည်။
೨೭ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲಿಯೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇರುತ್ತವೆ.
28 ၂၈ ထိုနေ့၌ပင်ယောရှုသည်မက္ကဒါမြို့ကိုတိုက်ခိုက် သိမ်းပိုက်၍ မက္ကဒါမင်းကိုလက်ရဖမ်းဆီးခဲ့ လေသည်။ မြို့သူမြို့သားအားလုံးကိုလည်း တစ်ယောက်မကျန်သတ်ဖြတ်သုတ်သင်ခဲ့လေ သည်။ ယေရိခေါမင်းကိုအဆုံးစီရင်သကဲ့ သို့မက္ကဒါမင်းကိုလည်းအဆုံးစီရင်သည်။-
೨೮ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು.
29 ၂၉ ထိုနောက်ယောရှုနှင့်ဣသရေလတပ်သား တို့သည် မက္ကဒါမြို့မှလိဗနာမြို့သို့ချီတက် တိုက်ခိုက်ကြသည်။-
೨೯ಯೆಹೋಶುವನು ಜನರೆಲ್ಲರ ಸಹಿತವಾಗಿ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.
30 ၃၀ ထာဝရဘုရားသည်ထိုမြို့နှင့်ထိုမြို့၏ မင်းကိုလည်း ဣသရေလအမျိုးသားတို့ ၏လက်သို့အပ်တော်မူ၏။ သူတို့သည်မြို့ သူမြို့သားတို့ကိုတစ်ယောက်မကျန် သတ် ဖြတ်သုတ်သင်ခဲ့လေသည်။ ယေရိခေါမင်း ကိုအဆုံးစီရင်ခဲ့သကဲ့သို့လိဗနာ မင်းကိုလည်းအဆုံးစီရင်ကြသည်။
೩೦ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈವಶಮಾಡಿದನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು.
31 ၃၁ ထိုနောက်ယောရှုနှင့်သူ၏တပ်သားတို့သည် လိဗနာမြို့မှ လာခိရှမြို့သို့ချီတက်၍ မြို့ကိုဝိုင်းရံတိုက်ခိုက်ကြလေသည်။-
೩೧ಅಲ್ಲಿಂದ ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಾಕೀಷಿಗೆ ಹೋಗಿ ಮುತ್ತಿಗೆಹಾಕಿ ಯುದ್ಧಮಾಡಿದನು.
32 ၃၂ ထာဝရဘုရားသည်တိုက်ပွဲဒုတိယနေ့ ၌လာခိရှမြို့ကို ဣသရေလအမျိုးသား တို့၏လက်သို့အပ်တော်မူ၏။ သူတို့သည် လိဗနာမြို့သူမြို့သားတို့ကိုပြုသကဲ့ သို့ လာခိရှမြို့သူမြို့သားအပေါင်းတို့ ကိုလည်းတစ်ယောက်မကျန်သတ်ဖြတ် သုတ်သင်ကြသည်။-
೩೨ಯೆಹೋವನು ಅದನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದರಿಂದ, ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ನದವರಿಗಾದ ಗತಿಯೇ ಇವರಿಗೂ ಆಯಿತು.
33 ၃၃ ဂေဇာမင်းဟောရံသည်လာခိရှမင်းဘက် မှစစ်ကူ၍တိုက်ခိုက်သော်လည်း ယောရှုသည် သူနှင့်သူ၏တပ်ကိုတိုက်ခိုက်အောင်မြင်၍ တစ်ယောက်မကျန်သတ်ဖြတ်သုတ်သင်လေ သည်။
೩೩ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ.
34 ၃၄ ထိုနောက်ယောရှုနှင့်ဣသရေလတပ်သား တို့သည် လာခိရှမြို့မှဧဂလုန်မြို့သို့ချီ တက်၍မြို့ကိုဝိုင်းရံတိုက်ခိုက်ကြလေသည်။-
೩೪ತರುವಾಯ ಯೆಹೋಶುವನು ಲಾಕೀಷನ್ನು ಬಿಟ್ಟು ಇಸ್ರಾಯೇಲ್ಯರೆಲ್ಲರ ಸಹಿತವಾಗಿ ಎಗ್ಲೋನಿಗೆ ಬಂದು ಮುತ್ತಿಗೆಹಾಕಿ ಯುದ್ಧಮಾಡಿದನು.
35 ၃၅ သူတို့သည်ထိုနေ့၌ပင်မြို့ကိုတိုက်ခိုက်သိမ်း ပိုက်နိုင်သဖြင့် လာခိရှမြို့သားတို့အားပြု သကဲ့သို့ ဧဂလုန်မြို့သူမြို့သားတို့ကို လည်းတစ်ယောက်မကျန်သတ်ဖြတ်သုတ် သင်ကြလေသည်။
೩೫ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನವರಿಗೆ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕತ್ತಿಯಿಂದ ಸಂಹರಿಸಿಬಿಟ್ಟರು.
36 ၃၆ ထိုနောက်ယောရှုနှင့်ဣသရေလတပ်သား တို့သည် ဧဂလုန်မြို့မှတောင်ကုန်းဒေသတွင် တည်ရှိသော ဟေဗြုန်မြို့သို့ချီတက်၍မြို့ကို တိုက်ခိုက်၊-
೩೬ಅನಂತರ ಯೆಹೋಶುವನೂ, ಇಸ್ರಾಯೇಲರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ
37 ၃၇ သိမ်းပိုက်ကြလေသည်။ သူတို့သည်ဟေဗြုန် မင်းနှင့်မြို့သူမြို့သားအပေါင်းတို့ကိုလည်း ကောင်း၊ အနီးအနားမြို့များမှမြို့သူမြို့ သားအပေါင်းတို့ကိုလည်းကောင်း သတ်ဖြတ် သုတ်သင်ကြလေသည်။ ယောရှုသည်ဧဂလုန် မြို့ကိုလုံးလုံးလျားလျားဖျက်ဆီးခဲ့သည့် နည်းတူ ဟေဗြုန်မြို့ကိုလည်းဖျက်ဆီးလေ သည်။ မည်သူတစ်ယောက်မျှအသက်ရှင်၍ မကျန်ရစ်ချေ။
೩೭ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ; ಪಟ್ಟಣವನ್ನೂ ಜನರನ್ನೂ ನಾಶಮಾಡಿದರು.
38 ၃၈ ထိုနောက်ယောရှုနှင့်ဣသရေလတပ်သား တို့သည် ဒေဗိရမြို့သို့ပြန်လာ၍ထိုမြို့ကို တိုက်ခိုက်ကြသည်။-
೩೮ಅಲ್ಲಿಂದ ಯೆಹೋಶುವನೂ ಎಲ್ಲಾ ಇಸ್ರಾಯೇಲರೂ ದೆಬೀರಿಗೆ ಬಂದು ಅಲ್ಲಿಯವರೊಡನೆ ಯುದ್ಧಮಾಡಿದರು.
39 ၃၉ သူတို့သည်မင်းနှင့်တကွမြို့ကိုလည်းကောင်း၊ ပတ်ဝန်းကျင်ရှိမြို့ရှိသမျှကိုလည်းကောင်း သိမ်းပိုက်၍ ထိုမြို့များတွင်နေထိုင်သောမြို့ သူမြို့သားအားလုံးကိုသတ်ဖြတ်သုတ်သင် ကြသည်။ ယောရှုသည်ဟေဗြုန်မြို့၊ လိဗနာ မြို့နှင့်၎င်းတို့၏မင်းများကိုပြုသကဲ့သို့ ဒေဗိရမြို့နှင့်၎င်း၏မင်းကိုပြုလေသည်။
೩೯ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.
40 ၄၀ ယောရှုသည်တိုင်းပြည်တစ်ခုလုံးကိုတိုက် ခိုက်အောင်မြင်လေသည်။ သူသည်တောင်ပေါ် ဒေသရှိမင်းများ၊ အရှေ့ဘက်တောင်စောင်း နှင့်အနောက်ဘက်တောင်ခြေရှိမင်းများနှင့် တောင်ဘက်ခြောက်သွေ့သောဒေသရှိမင်း အပေါင်းတို့ကိုတိုက်ခိုက်အောင်မြင်လေသည်။ ၎င်းတို့၏ပြည်သူပြည်သားအားလုံးတို့ကို တစ်ယောက်မကျန်သတ်ဖြတ်သုတ်သင်ခဲ့လေ သည်။ ဣသရေလအမျိုးသားတို့၏ဘုရားသခင်ထာဝရဘုရား၏အမိန့်တော်အရ ဤသို့ပြုခြင်းဖြစ်သည်။-
೪೦ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.
41 ၄၁ ယောရှုသည်တောင်ဘက်ကာဒေရှဗာနာမြို့ မှပင်လယ်ကမ်းခြေအနီးရှိဂါဇမြို့တိုင် အောင်လည်းကောင်း၊ ဂေါရှင်ပြည်မှမြောက်ဘက် ဂိဗောင်မြို့သို့တိုင်အောင်လည်းကောင်းစစ်ချီ တိုက်ခိုက်ခဲ့လေသည်။-
೪೧ಕಾದೇಶ್ ಬರ್ನೇಯದಿಂದ ಗಾಜಾ ಊರಿನ ವರೆಗೂ ಗೋಷೆನ್ ಪ್ರಾಂತ್ಯದಿಂದ ಗಿಬ್ಯೋನಿನವರೆಗೂ ಎಲ್ಲರನ್ನೂ ಸೋಲಿಸಿದನು.
42 ၄၂ ဣသရေလအမျိုးသားတို့၏ဘုရားသခင် ထာဝရဘုရားသည် ဣသရေလအမျိုးသား တို့ဘက်မှကူညီတိုက်ခိုက်သောကြောင့် ယောရှု သည်ထိုမင်းအပေါင်းတို့နှင့်သူတို့၏တိုင်း ပြည်များကိုဆက်တိုက်နှိမ်နင်းအောင်မြင် ခဲ့သည်။-
೪೨ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.
43 ၄၃ ထိုနောက်ယောရှုနှင့်ဣသရေလတပ်သား အပေါင်းတို့သည် ဂိလဂါလစခန်းသို့ပြန် လာကြလေသည်။
೪೩ತರುವಾಯ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರೊಡನೆ ಗಿಲ್ಗಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು.