< လုကာ 13 >
1 ၁ ထိုအချိန်၌လူအချို့တို့သည်ကိုယ်တော် ၏ထံသို့လာ၍ ပိလတ်မင်းသတ်ဖြတ်လိုက် သည့်ဂါလိလဲအမျိုးသားများအကြောင်း ကိုလျှောက်ထားကြ၏။ ထိုသူတို့သည်ယဇ် ပူဇော်လျက်ရှိနေစဉ်သတ်ဖြတ်ခြင်းကို ခံခဲ့ရကြ၏။-
ಪಿಲಾತನು, ಬಲಿ ಅರ್ಪಿಸುತ್ತಿದ್ದ ಗಲಿಲಾಯದವರ ರಕ್ತವನ್ನೇ ಅವರ ಬಲಿಗಳೊಂದಿಗೆ ಬೆರೆಸಿದ ವಿಷಯವನ್ನು ಯೇಸುವಿಗೆ ತಿಳಿಸಿದ ಕೆಲವರು ಆ ಸಮಯದಲ್ಲಿ ಅಲ್ಲಿದ್ದರು.
2 ၂ ကိုယ်တော်က ``ထိုလူစုသည်ယင်းသို့အသတ် ခံရသဖြင့်အခြားဂါလိလဲအမျိုးသား အပေါင်းတို့ထက်ပို၍ အပြစ်ကူးသူများ ဖြစ်သည်ဟုသင်တို့ထင်မှတ်ကြသလော။ သူ တို့ကားပို၍အပြစ်ကူးသူများမဟုတ် ဟုသင်တို့အားငါဆို၏။-
ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಗೆ ಈಡಾದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ದೋಷಿಗಳೆಂದು ನೀವು ಭಾವಿಸುತ್ತೀರೋ?
3 ၃ သို့ရာတွင်သင်တို့သည်လည်းနောင်တမရ ကြလျှင် ထိုသူတို့နည်းတူသေကျေပျက်စီး ရလိမ့်မည်။-
ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ, ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ.
4 ၄ ရှိလောင်မျှော်စင်ပြိုကျသဖြင့် ပိ၍သေသူ လူတစ်ဆယ့်ရှစ်ယောက်တို့သည် အခြားယေရု ရှလင်မြို့သူမြို့သားများထက်ပို၍အပြစ် ကူးသူများဖြစ်သည်ဟု သင်တို့ထင်မှတ် ကြသလော။-
ಇಲ್ಲವೆ ಸಿಲೋವ ಎಂಬಲ್ಲಿ ಗೋಪುರವು ಬಿದ್ದು ಸತ್ತು ಹೋದ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ದೋಷಿಗಳೆಂದು ಭಾವಿಸುತ್ತೀರೋ?
5 ၅ သူတို့ကားပို၍အပြစ်ကူးသူများမဟုတ် ဟုသင်တို့အားငါဆို၏။ သို့ရာတွင်သင်တို့ သည်လည်းနောင်တမရကြလျှင် ထိုသူတို့ နည်းတူသေကျေပျက်စီးရလိမ့်မည်'' ဟု မိန့်တော်မူ၏။
ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ,” ಎಂದರು.
6 ၆ ကိုယ်တော်သည်လူအပေါင်းတို့အားပုံဥပမာ ဆောင်၍ ``လူတစ်ယောက်၏စပျစ်ဥယျာဉ်ထဲ တွင် စိုက်ပျိုးထားသောသင်္ဘောသဖန်းပင်တစ် ပင်ရှိ၏။ ဥယျာဉ်ရှင်သည်သဖန်းပင်ကိုလာ၍ သဖန်းသီးရှာသော်လည်းတစ်လုံးမျှမတွေ့ရ။-
ಅನಂತರ ಯೇಸು ಈ ಸಾಮ್ಯವನ್ನು ಹೇಳಿದರು: “ಒಬ್ಬ ಮನುಷ್ಯನಿಗೆ ತನ್ನ ದ್ರಾಕ್ಷಿಯ ತೋಟದಲ್ಲಿ ನೆಡಲಾಗಿದ್ದ, ಒಂದು ಅಂಜೂರದ ಮರವಿತ್ತು. ಅವನು ಬಂದು ಅದರಲ್ಲಿ ಫಲವನ್ನು ಹುಡುಕಲು ಒಂದೂ ಸಿಕ್ಕಲಿಲ್ಲ.
7 ၇ ဥယျာဉ်ရှင်က `ငါသည်ဤသဖန်းပင်ကိုလာ၍ သဖန်းသီးရှာသည်မှာသုံးနှစ်ရှိချေပြီ။ သို့ရာ တွင်တစ်လုံးမျှမတွေ့ရ။ ဤသဖန်းပင်ကိုခုတ် ပစ်လော့။ အဘယ်ကြောင့်မြေကိုအကျိုးမဲ့ ဖြစ်စေမည်နည်း' ဟုဥယျာဉ်မှူးအားဆို၏။-
ಆಗ ಅವನು ತನ್ನ ದ್ರಾಕ್ಷಿಯ ತೋಟ ಮಾಡುವವನಿಗೆ, ‘ನೋಡು, ಮೂರು ವರ್ಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕುತ್ತಾ ಬಂದಿದ್ದೇನೆ, ಆದರೆ ಏನೂ ಸಿಕ್ಕಲಿಲ್ಲ. ಇದನ್ನು ಕಡಿದುಹಾಕು! ಇದು ಏಕೆ ನೆಲವನ್ನು ಕೆಡಿಸಬೇಕು?’ ಎಂದು ಹೇಳಿದನು.
8 ၈ ဥယျာဉ်မှူးက `ထိုအပင်ကိုဤနှစ်တစ်နှစ် ထားပါဦး။ အပင်ရင်းပတ်လည်ကိုအကျွန်ုပ် တူးဆွ၍မြေသြဇာထည့်ပါဦးမည်။-
“ಆದರೆ ಅವನು ಉತ್ತರವಾಗಿ ಅವನಿಗೆ, ‘ಒಡೆಯನೇ, ಇನ್ನೊಂದು ವರ್ಷವೂ ಇದನ್ನು ಬಿಡು, ನಾನು ಅದರ ಸುತ್ತಲೂ ಅಗಿದು ಗೊಬ್ಬರ ಹಾಕುವೆನು.
9 ၉ နောင်နှစ်ခါအသီးသီးကောင်းသီးပါလိမ့်မည်။ အကယ်၍အသီးမသီးခဲ့သော်ခုတ်ပစ်ပါ' ဟု ပြန်၍လျှောက်သည်'' ဟုမိန့်တော်မူ၏။
ಮುಂದಿನ ವರ್ಷ ಇದು ಫಲ ಫಲಿಸಿದರೆ, ಸರಿ! ಇಲ್ಲವಾದರೆ, ನೀನು ಇದನ್ನು ಕಡಿದುಹಾಕು, ಎಂದನು.’”
10 ၁၀ ဥပုသ်နေ့တစ်နေ့၌ကိုယ်တော်ဟောပြောသွန် သင်လျက်နေတော်မူရာ တရားဇရပ်တွင်တစ် ဆယ့်ရှစ်နှစ်ပတ်လုံးနတ်မိစ္ဆာပူးဝင်သဖြင့် မသန်မစွမ်းဖြစ်လျက်နေသောအမျိုးသမီး တစ်ယောက်ရှိ၏။ သူသည်ကျောကုန်း၍မိမိ ၏ခါးကိုလုံးဝမဆန့်နိုင်။-
ಯೇಸು ಸಬ್ಬತ್ ದಿನದಲ್ಲಿ ಒಂದು ಸಭಾಮಂದಿರದೊಳಗೆ ಬೋಧಿಸುತ್ತಾ ಇದ್ದರು,
ಆಗ, ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು. ಆಕೆ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
12 ၁၂ သခင်ယေရှုသည်ထိုအမျိုးသမီးကိုမြင် သောအခါ အထံတော်သို့ခေါ်တော်မူလျက် ``အချင်းအမျိုးသမီးသင့်ရောဂါပျောက် ပြီ'' ဟုမိန့်တော်မူ၏။-
ಯೇಸು ಆಕೆಯನ್ನು ಕಂಡು, ಹತ್ತಿರಕ್ಕೆ ಕರೆದು ಆಕೆಗೆ, “ಅಮ್ಮಾ, ನೀನು ಈ ನಿನ್ನ ಬಲಹೀನತೆಯಿಂದ ಬಿಡುಗಡೆಯಾಗಿದ್ದಿ,” ಎಂದು ಹೇಳಿ,
13 ၁၃ သူ၏အပေါ်မှာလက်တော်ကိုတင်တော်မူ သဖြင့် သူသည်ချက်ချင်းပင်ခါးဆန့်သွား၍ ဘုရားသခင်၏ကျေးဇူးတော်ကိုချီးကူး လေ၏။
ಯೇಸು ಆಕೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು, ಕೂಡಲೇ ಆಕೆಯು ನೆಟ್ಟಗಾದಳು ಮತ್ತು ದೇವರನ್ನು ಸ್ತುತಿಸಿದಳು.
14 ၁၄ ထိုအခါယင်းသို့ဥပုသ်နေ့၌အနာရောဂါကို သခင်ယေရှုပျောက်ကင်းစေတော်မူသဖြင့် တရား ဇရပ်မှူးသည်စိတ်ဆိုးလျက် ``အလုပ်လုပ်အပ် သောရက်ခြောက်ရက်ရှိ၏။ ထိုရက်များတွင်လာ၍ ရောဂါပျောက်အောင်အကုခံကြလော့။ ဥပုသ် နေ့၌မူကားလာ၍အကုမခံကြနှင့်'' ဟုလူ ပရိသတ်တို့အားဆို၏။
ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಮಾಡಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ, “ಆರು ದಿವಸಗಳಲ್ಲಿ ಮನುಷ್ಯರು ಕೆಲಸ ಮಾಡತಕ್ಕದ್ದು. ಆದ್ದರಿಂದ ಆ ದಿನಗಳಲ್ಲಿ ನೀವು ಬಂದು ಸ್ವಸ್ಥರಾಗಿರಿ, ಸಬ್ಬತ್ ದಿನದಲ್ಲಿ ಬೇಡ,” ಎಂದನು.
15 ၁၅ သခင်ဘုရားက ``ကြောင်သူတော်တို့၊ သင်တို့ရှိ သမျှသည်ဥပုသ်နေ့၌သင်တို့၏မြည်းများ၊ နွားများအားတင်းကုတ်မှကြိုးကိုဖြေ၍ ရေ တိုက်ရန်ခေါ်ဆောင်သွားတတ်ကြသည်မဟုတ် လော။-
ಅದಕ್ಕೆ ಕರ್ತದೇವರು ಅವನಿಗೆ, “ಕಪಟಿಗಳೇ! ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ, ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವುದಕ್ಕಾಗಿ ಹೋಗುವುದಿಲ್ಲವೇ?
16 ၁၆ အာဗြဟံ၏သမီးဖြစ်သူဤအမျိုးသမီး သည် တစ်ဆယ့်ရှစ်နှစ်ပတ်လုံးစာတန်၏အနှောင် အဖွဲ့ကိုခံခဲ့ရ၏။ သူ့အားဥပုသ်နေ့၌ထို အနှောင်အဖွဲ့မှမလွှတ်အပ်သလော'' ဟုမိန့် တော်မူ၏။-
ಅಬ್ರಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರ್ಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೇ?” ಎಂದರು.
17 ၁၇ ဤသို့မိန့်တော်မူလိုက်သောအခါကိုယ်တော် ကိုရန်ဘက်ပြုသူများသည်အရှက်ရသွား ကြ၏။ လူပရိသတ်အပေါင်းတို့သည်ကား ကိုယ်တော်ပြုတော်မူသောအံ့သြဖွယ်ရာ များကြောင့်ရွှင်လန်းဝမ်းမြောက်ကြ၏။
ಯೇಸು ಇದನ್ನು ಹೇಳುತ್ತಿರುವಾಗ, ಅವರ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು, ಆದರೆ ಇತರರು, ಅವರಿಂದ ನಡೆದ ಎಲ್ಲಾ ಮಹಿಮೆಯುಳ್ಳ ಕಾರ್ಯಗಳಿಗಾಗಿ ಸಂತೋಷಪಟ್ಟರು.
18 ၁၈ သခင်ယေရှုက ``ဘုရားသခင်၏နိုင်ငံတော် သည်အဘယ်အရာနှင့်တူသနည်း။ အဘယ် အရာနှင့်နှိုင်းယှဉ်ရမည်နည်း။-
ಅನಂತರ ಯೇಸು, “ದೇವರ ರಾಜ್ಯವು ಯಾವುದಕ್ಕೆ ಹೋಲಿಕೆಯಾಗಿದೆ? ನಾನು ಯಾವುದಕ್ಕೆ ಅದನ್ನು ಹೋಲಿಸಲಿ?
19 ၁၉ နိုင်ငံတော်သည်ဤဖြစ်ပျက်ပုံနှင့်တူ၏။ မုန် ညင်းစေ့ကိုလူတစ်ယောက်သည်ယူ၍မိမိ၏ ဥယျာဉ်တွင်စိုက်၏။ ထိုအစေ့မှအပင်ပေါက် ၍ကြီးမားလာသဖြင့် ထိုအပင်၏အကိုင်း အခက်များတွင်ငှက်များနားနေရကြ၏'' ဟုမိန့်တော်မူ၏။
ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಬಿತ್ತಲು, ಅದು ಬೆಳೆದು ಒಂದು ದೊಡ್ಡ ಮರವಾಯಿತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡಿದವು,” ಎಂದರು.
20 ၂၀ တစ်ဖန်ကိုယ်တော်က ``ဘုရားသခင်၏နိုင်ငံ တော်ကိုအဘယ်အရာနှင့်နှိုင်းယှဉ်ရမည်နည်း။-
ಪುನಃ ಯೇಸು, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸಲಿ?
21 ၂၁ နိုင်ငံတော်သည်ဤဖြစ်ပျက်ပုံနှင့်တူ၏။ တဆေး ကိုအမျိုးသမီးတစ်ယောက်သည်ယူပြီးလျှင် မုန့်ညက်သုံးစိတ်တွင်ထည့်၍မုန့်ညက်အားလုံး ကိုဖောင်းကြွလာစေသည်'' ဟုမိန့်တော်မူ၏။
ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು,” ಎಂದರು.
22 ၂၂ ကိုယ်တော်သည်ယေရုရှလင်မြို့သို့ခရီးပြု တော်မူရာလမ်းတွင်ဟောပြောသွန်သင်လျက် တစ်မြို့မှတစ်မြို့၊ တစ်ရွာမှတစ်ရွာကိုဖြတ် ၍ကြွတော်မူ၏။-
ಯೇಸು ಪಟ್ಟಣಗಳನ್ನೂ ಹಳ್ಳಿಗಳನ್ನೂ ಸಂಚರಿಸಿ, ಅಲ್ಲೆಲ್ಲಾ ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣಮಾಡಿದರು.
23 ၂၃ လူတစ်ယောက်က ``အရှင်၊ ကယ်တင်ခြင်းခံရ သူများသည်အရေအတွက်အားဖြင့်နည်းပါ သလော'' ဟုမေးလျှောက်၏။
ಒಬ್ಬನು ಯೇಸುವಿಗೆ, “ಸ್ವಾಮಿ, ರಕ್ಷಣೆ ಹೊಂದುವವರು ಕೆಲವರೋ?” ಎಂದು ಕೇಳಲು, ಯೇಸು ಅವರಿಗೆ,
24 ၂၄ ကိုယ်တော်က ``သင်တို့သည်ကျဉ်းမြောင်းသော တံခါးပေါက်ကိုဝင်ရန်ကြိုးစားအားထုတ်ကြ လော့။ လူအများပင်ထိုတံခါးပေါက်ကိုဝင်ရန် ကြိုးစားကြလိမ့်မည်။ သို့သော်ဝင်နိုင်စွမ်းရှိကြ လိမ့်မည်မဟုတ်ဟုသင်တို့အားငါဆို၏။-
“ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಪ್ರವೇಶಿಸುವುದಕ್ಕೆ ಪ್ರಯಾಸಪಡಿರಿ, ಅನೇಕರು ಒಳಗೆ ಪ್ರವೇಶಿಸುವುದಕ್ಕೆ ಪ್ರಯತ್ನಿಸಿದರೂ ಆಗುವುದಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
25 ၂၅ အိမ်ရှင်သည်ထလျက်တံခါးကိုပိတ်လိုက်၍ သင် တို့သည်အိမ်ပြင်မှာရောက်ရှိနေရသောအဖြစ် နှင့်တွေ့ကြုံလိမ့်မည်။ ထိုအခါသင်တို့က `အရှင်၊ အရှင်၊ အကျွန်ုပ်တို့အားတံခါးကိုဖွင့်ပေးတော် မူပါ' ဟုဆို၍တံခါးကိုခေါက်သော်လည်း အိမ်ရှင်က `သင်တို့အဘယ်မှလာသည်ကိုငါ မသိ' ဟုဆိုလိမ့်မည်။-
ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.
26 ၂၆ ထိုအခါသင်တို့က `အကျွန်ုပ်တို့သည်အရှင် နှင့်အတူစားသောက်ခဲ့သူများဖြစ်ပါ၏။ အရှင် သည်အကျွန်ုပ်တို့၏မြို့ရွာတွင်ဟောပြောသွန်သင် ခဲ့ပါ၏' ဟုလျှောက်ကြလိမ့်မည်။-
“ಆಗ ನೀವು, ‘ನಿಮ್ಮೊಂದಿಗೆ ನಾವು ಊಟಮಾಡಿದೆವು, ಪಾನಮಾಡಿದೆವು, ನೀವು ನಮ್ಮ ಬೀದಿಗಳಲ್ಲಿ ಬೋಧಿಸಿದಿರಿ,’ ಎಂದು ಹೇಳಲಾರಂಭಿಸುವಿರಿ.
27 ၂၇ သို့သော်လည်းအိမ်ရှင်က `သင်တို့အဘယ်မှလာ သည်ကိုငါမသိ။ ဆိုးညစ်သောသူတို့၊ ငါ့ထံမှ ထွက်သွားကြလော့' ဟူ၍ပြန်ပြောပေအံ့။-
“ಅದಕ್ಕೆ ಆತನು, ‘ನೀವು ಎಲ್ಲಿಯವರೋ ನಾನರಿಯೆ, ಅನೀತಿಯನ್ನು ಮಾಡುವವರಾದ ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳುವರು.
28 ၂၈ သင်တို့သည်ဘုရားသခင်၏နိုင်ငံတော်ထဲတွင် အာဗြဟံ၊ ဣဇာက်၊ ယာကုပ်နှင့်ပရောဖက်အပေါင်း တို့ရောက်ရှိကြသည်ကိုမြင်လျက် မိမိတို့ကိုယ် တိုင်ကမူနိုင်ငံတော်၏ပြင်ပသို့နှင်ထုတ်ခြင်း ခံရကြသောအခါအဘယ်မျှငိုကြွေးမြည် တမ်းခြင်း၊ အံသွားကြိတ်ခြင်းရှိကြလိမ့်မည်နည်း။-
“ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ಕಾಣುವಾಗ, ಅಲ್ಲಿ ನಿಮಗೆ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
29 ၂၉ လူတို့သည်အရှေ့အနောက်တောင်မြောက်အရပ် လေးမျက်နှာမှလာကြပြီးလျှင် ဘုရားသခင် ၏နိုင်ငံတော်ပွဲတွင်ဝင်ကြလိမ့်မည်။-
ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಜನರು ಬಂದು, ದೇವರ ರಾಜ್ಯದಲ್ಲಿ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.
30 ၃၀ ထိုအခါ၌ယခုနောက်ဆုံးသို့ရောက်နေသော သူတို့သည် ရှေ့ဆုံးသို့ရောက်ကြလိမ့်မည်။ ယခု ရှေ့ဆုံးသို့ရောက်နေသူတို့သည် နောက်ဆုံးသို့ရောက် ကြလိမ့်မည်'' ဟုမိန့်တော်မူ၏။
ಆಗ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು.
31 ၃၁ ထိုအချိန်၌ဖာရိရှဲအချို့တို့သည်ကိုယ်တော် ၏ထံကိုလာပြီးလျှင် ``ဤအရပ်မှထွက်ခွာ၍ အခြားအရပ်သို့ကြွတော်မူပါ။ ဟေရုဒ်မင်း သည်အရှင့်အားသတ်ရန်အကြံရှိပါ၏'' ဟု လျှောက်ကြ၏။
ಅದೇ ಸಮಯದಲ್ಲಿ ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು, “ನೀವು ಇಲ್ಲಿಂದ ಹೊರಟು ಹೋಗಿರಿ. ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿರುವನು,” ಎಂದು ಅವರಿಗೆ ಹೇಳಿದರು.
32 ၃၂ ကိုယ်တော်က ``ငါသည်ယနေ့နှင့်နက်ဖြန်နေ့တို့၌ နတ်မိစ္ဆာများကိုနှင်ထုတ်၍ အနာရောဂါများကို ပျောက်ကင်းစေမည်။ တတိယနေ့တွင်မူငါ၏ အလုပ်ကိုအဆုံးသတ်မည်ဖြစ်ကြောင်းကိုထို မြေခွေးကိုပြောကြလော့။-
ಅದಕ್ಕೆ ಯೇಸು ಅವರಿಗೆ, “ಇಗೋ, ‘ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಓಡಿಸುತ್ತೇನೆ ಸ್ವಸ್ಥಮಾಡುತ್ತೇನೆ, ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ,’ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
33 ၃၃ သို့ရာတွင်ယနေ့၊ နက်ဖြန်နေ့၊ နောက်တစ်နေ့၌ ငါခရီးပြုရဦးမည်။ ပရောဖက်ဟူသည်ယေရု ရှလင်မြို့မှအပအခြားအရပ်တွင်အသတ် ခံရန်မသင့်။
ಆದರೂ ಈ ದಿವಸ ಮತ್ತು ನಾಳೆ ಮತ್ತು ನಾಡಿದ್ದು ನಾನು ಪ್ರಯಾಣ ಮಾಡಲೇಬೇಕು. ಏಕೆಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲೆಗೀಡಾಗಬಾರದು!
34 ၃၄ ``အို ယေရုရှလင်မြို့၊ ယေရုရှလင်မြို့၊ ပရောဖက် များကိုသတ်သည့်မြို့၊ ဘုရားသခင်စေလွှတ်သော တမန်များကိုခဲနှင့်ပေါက်သည့်မြို့၊ ကြက်မသည် ကြက်ကလေးများကိုမိမိ၏အတောင်အောက် တွင်စုသိမ်းထားသကဲ့သို့ ငါသည်သင်၏သား သမီးများကိုစုသိမ်းထားလိုသည်မှာကြိမ်ဖန် များလှလေပြီ။ သို့ရာတွင်သင်မူကားငါ့ကို ဤသို့မပြုစေလို။-
“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.
35 ၃၅ သို့ဖြစ်၍သင်၏ဗိမာန်တော်ကိုဘုရားသခင် စွန့်တော်မူလိမ့်မည်။ သင့်အားငါဆိုသည်ကား `ဘုရားသခင်၏နာမတော်နှင့်ကြွလာတော် မူသောအရှင်သည်မင်္ဂလာရှိစေသတည်း' ဟု သင်မြွက်ဆိုရာနေ့မတိုင်မီသင်သည်ငါ့ကို မြင်ရလိမ့်မည်မဟုတ်'' ဟုမိန့်တော်မူ၏။
ನೋಡಿರಿ, ನಿಮ್ಮ ದೇವಾಲಯವು ನಿಮಗೆ ಬರಿದಾಗಿ ಹಾಳುಬೀಳುವುದು. ಏಕೆಂದರೆ, ‘ಕರ್ತದೇವರ ಹೆಸರಿನಲ್ಲಿ ಬರುವವರು ಧನ್ಯರು,’ ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ಕಾಣುವುದೇ ಇಲ್ಲ, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.