< မာကု 9 >
1 ၁ ထိုနောက်ကိုယ်တော်က ``အမှန်အကန်သင်တို့အား ငါဆိုသည်ကားတန်ခိုးအာဏာနှင့်တကွ ဘုရား သခင်၏နိုင်ငံတော်တည်သည်ကိုမမြင်မီ ဤ အရပ်ရှိလူအချို့တို့သည်မသေရကြ'' ဟု မိန့်တော်မူ၏။
ಅನಂತರ ಯೇಸು ಅವರಿಗೆ, “ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಶಕ್ತಿಯೊಂದಿಗೆ ಬರುವುದನ್ನು ಕಾಣುವವರೆಗೆ ಮರಣದ ಅನುಭವ ಹೊಂದುವುದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.
2 ၂ ခြောက်ရက်မျှကြာသော်သခင်ယေရှုသည်ပေတရု၊ ယာကုပ်၊ ယောဟန်တို့ကိုမြင့်သောတောင်ပေါ်သို့ ခေါ်ဆောင်သွားတော်မူ၏။ အခြားတစ်စုံတစ် ယောက်မျှမပါချေ။ သူတို့၏ရှေ့တွင်ကိုယ်တော် ၏အဆင်းသဏ္ဌာန်တော်သည်ပြောင်းလဲလေ၏။-
ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಯೋಹಾನನನ್ನೂ ತಮ್ಮೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದರು. ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು.
3 ၃ အဝတ်တော်သည်တောက်ပလျက်လွန်မင်းစွာ ဖြူဖွေးလာ၏။ ဤမျှဖြူဖွေးစေရန်ဤလောက တွင်မည်သည့်ခဝါသည်မျှမတတ်နိုင်ရာ။-
ಯೇಸುವಿನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷ್ಟು ಉಜ್ವಲವಾಗಿ ಹೊಳೆಯುತ್ತಿತ್ತು.
4 ၄ တပည့်တော်သုံးဦးတို့၏ရှေ့တွင် ဧလိယနှင့် မောရှေပေါ်လာ၍သခင်ယေရှုနှင့်စကား ပြောနေကြ၏။-
ಆಗ ಅಲ್ಲಿ ಎಲೀಯನು ಮತ್ತು ಮೋಶೆಯು ಯೇಸುವಿನೊಂದಿಗೆ ಮಾತನಾಡುತ್ತಿರುವುದನ್ನು ಅವರು ಕಂಡರು.
5 ၅ ထိုအခါပေတရုက ``အရှင်ဘုရား၊ ဤအရပ် တွင်နေထိုင်ဖွယ်ကောင်းပါ၏။ ကိုယ်တော်ရှင်အတွက် တဲတစ်ဆောင်၊ မောရှေအတွက်တဲတစ်ဆောင်၊ ဧလိယ အတွက်တဲတစ်ဆောင်၊ တဲသုံးဆောင်ကိုအကျွန်ုပ်တို့ ဆောက်ပါရစေ'' ဟုသခင်ယေရှုအားလျှောက် ထား၏။-
ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ನಾವು ಕಟ್ಟುವೆವು,” ಎಂದು ಹೇಳಿದನು.
6 ၆ တပည့်တော်တို့သည်လွန်မင်းစွာကြောက်လန့်လျက် ရှိကြသဖြင့် ပေတရုသည်မည်သို့လျှောက်ထားရ မည်ကိုမသိ၍ယင်းသို့လျှောက်ထားလိုက်သတည်း။
ತಾನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ. ಏಕೆಂದರೆ ಅವರು ಬಹಳವಾಗಿ ಹೆದರಿದ್ದರು.
7 ၇ ထိုနောက်မိုးတိမ်တိုက်တစ်ခုသည်ပေါ်လာ၍သူတို့ အပေါ်သို့တိမ်ရိပ်ကျလေသည်။ ``ဤသူကားငါ ၏ချစ်သားဖြစ်၏။ သူ၏စကားကိုနားထောင် လော့'' ဟုမိုးတိမ်ကအသံတော်ထွက်ပေါ်လာ၏။-
ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು.
8 ၈ ထိုအခါတပည့်တော်တို့သည်မိမိတို့ပတ်လည် သို့လှည့်ကြည့်ကြသော်လည်း သခင်ယေရှုမှတစ် ပါးအခြားမည်သူ့ကိုမျှမတွေ့ရကြတော့ပေ။
ಕೂಡಲೇ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನೇ ಹೊರತು ಇನ್ನಾರನ್ನೂ ಕಾಣಲಿಲ್ಲ.
9 ၉ ထိုနောက်ကိုယ်တော်နှင့်တပည့်တော်တို့သည် တောင် ပေါ်မှဆင်းကြ၏။ ထိုသို့ဆင်းကြစဉ်ကိုယ်တော် က ``သင်တို့တွေ့မြင်ခဲ့သည့်အခြင်းအရာကို လူသားသေခြင်းမှမထမြောက်မီအဘယ်သူ အားမျှမပြောကြနှင့်'' ဟုတပည့်တော်တို့အား ပညတ်တော်မူ၏။
ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಮನುಷ್ಯಪುತ್ರರಾದ ತಾವು ಸತ್ತವರೊಳಗಿಂದ ಎದ್ದು ಬರುವವರೆಗೆ ಅವರು ಕಂಡದ್ದನ್ನು ಯಾರಿಗೂ ಹೇಳಬಾರದೆಂದು ಯೇಸು ಆಜ್ಞಾಪಿಸಿದರು.
10 ၁၀ သူတို့သည်ဤအမိန့်ကိုလိုက်နာကြသော်လည်း ``သေခြင်းမှထမြောက်သည်ဆိုသည်ကားအဘယ် နည်း'' ဟုအချင်းချင်းဆွေးနွေးလျက်နေကြ၏။-
“ಸತ್ತವರೊಳಗಿಂದ ಎದ್ದು ಬರುವುದೆಂದರೆ ಏನು?” ಅವರು ಒಬ್ಬರಿಗೊಬ್ಬರು ಆ ಮಾತನ್ನು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.
11 ၁၁ ထိုနောက်ကိုယ်တော်အား ``ကျမ်းတတ်ဆရာတို့ က ဦးစွာပထမဧလိယကြွလာလိမ့်မည်ဟု အဘယ်ကြောင့်ဆိုပါသနည်း'' ဟုမေးလျှောက် ကြ၏။
ಇದಲ್ಲದೆ ಅವರು ಯೇಸುವಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು.
12 ၁၂ ကိုယ်တော်က ``အမှုအရာခပ်သိမ်းကိုအသင့် ပြင်ဆင်ရန် ဦးစွာပထမဧလိယကြွလာရ သည်ကားမှန်၏။ သို့ရာတွင်ကျမ်းစာတော်က လူသားသည်များစွာသောဒုက္ခဆင်းရဲကိုလည်း ကောင်း၊ ပစ်ပယ်ခြင်းကိုလည်းကောင်းခံရမည်ဟု အဘယ်ကြောင့်ဆိုသနည်း။-
ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನೂ ಸರಿಪಡಿಸುತ್ತಾನೆಂಬ ಮಾತು ನಿಜವೇ. ಆದರೆ ಮನುಷ್ಯಪುತ್ರನಾದ ನಾನು ಬಹಳ ಯಾತನೆಗಳನ್ನು ಅನುಭವಿಸಿ ತಿರಸ್ಕರಿಸಲಾಗಬೇಕೆಂದು ನನ್ನ ವಿಷಯವಾಗಿ ಬರೆದಿರುವುದು ಹೇಗೆ?
13 ၁၃ ဧလိယသည်ကြွလာခဲ့ပြီ။ ကျမ်းစာလာသည် အတိုင်း လူတို့သည်သူ့အားပြုလိုရာပြုခဲ့ကြ ပြီဟုသင်တို့အားငါဆိုသည်'' ဟုမိန့်တော်မူ၏။
ಆದರೆ, ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಜನರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
14 ၁၄ ကိုယ်တော်နှင့်တပည့်တော်သုံးဦးတို့သည် အခြား တပည့်တော်များရှိရာသို့ရောက်လာကြသောအခါ လူပရိသတ်ကြီးကိုမြင်ကြ၏။ တပည့်တော်တို့ သည်ကျမ်းတတ်ဆရာများနှင့်အခြေအတင် ပြောဆိုနေကြ၏။-
ಯೇಸು ತಮ್ಮ ಶಿಷ್ಯರ ಬಳಿಗೆ ಬಂದಾಗ, ಅವರ ಸುತ್ತಲು ದೊಡ್ಡ ಸಮೂಹವನ್ನೂ ನಿಯಮ ಬೋಧಕರು ಅವರೊಂದಿಗೆ ತರ್ಕಿಸುತ್ತಿರುವುದನ್ನೂ ಕಂಡರು.
15 ၁၅ လူအပေါင်းတို့သည်ကိုယ်တော်ကိုမြင်သောအခါ အံ့သြကြလျက်အထံတော်သို့ပြေး၍နှုတ်ခွန်း ဆက်ကြ၏။-
ಜನರೆಲ್ಲರೂ ಯೇಸುವನ್ನು ಕಂಡಕೂಡಲೇ, ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಯೇಸುವನ್ನು ವಂದಿಸಿದರು.
16 ၁၆ ကိုယ်တော်ကတပည့်တော်တို့အား ``သင်တို့သည် ဤသူတို့နှင့်အဘယ်အကြောင်းအရာများကို အခြေအတင်ပြောဆိုနေကြသနည်း'' ဟုမေး တော်မူ၏။
ಆಗ ಯೇಸು ಅವರಿಗೆ, “ಅವರೊಂದಿಗೆ ನೀವು ಏನು ತರ್ಕಮಾಡುತ್ತಿದ್ದಿರಿ?” ಎಂದು ಕೇಳಿದರು.
17 ၁၇ ပရိသတ်ထဲမှလူတစ်ယောက်က ``ဆရာတော်၊ အကျွန်ုပ်သည်မိမိ၏သားငယ်ကိုအထံတော် သို့ခေါ်ခဲ့ပါသည်။ သူသည်ဆွံ့အသည့်နတ် ပူးဝင်နေသူဖြစ်ပါသည်။-
ಸಮೂಹದಲ್ಲಿದ್ದ ಒಬ್ಬನು, “ಬೋಧಕರೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತೆಗೆದುಕೊಂಡು ಬಂದೆನು.
18 ၁၈ နတ်ပူးဝင်သည့်အခါတိုင်းသူသည်မြေပေါ်မှာ လဲကျတတ်ပါ၏။ ပါးစပ်မှအမြှုပ်များထွက် လျက်အံသွားများကြိတ်တတ်ပါသည်။ ထိုနောက် သူ၏ကိုယ်သည်တောင့်မာလာပါသည်။ အရှင်၏ တပည့်များအားထိုနတ်ကိုနှင်ထုတ်ပေးရန် အကျွန်ုပ်တောင်းပန်ပါသော်လည်းသူတို့သည် မတတ်နိုင်ကြပါ'' ဟုကိုယ်တော်အားလျှောက် ထား၏။
ಅಶುದ್ಧಾತ್ಮವು ಅವನನ್ನು ಹಿಡಿದುಕೊಂಡಾಗಲೆಲ್ಲಾ ಅವನನ್ನು ಒದ್ದಾಡಿಸುತ್ತದೆ. ಅವನು ನೊರೆ ಕಾರುತ್ತಾ ತನ್ನ ಹಲ್ಲು ಕಡಿದು ಸೆಟೆದುಕೊಂಡು ಬೀಳುತ್ತಾನೆ. ಅದನ್ನು ಬಿಡಿಸಬೇಕೆಂದು ನಾನು ನಿನ್ನ ಶಿಷ್ಯರಿಗೆ ಹೇಳಿದೆನು. ಆದರೆ ಅದು ಅವರಿಂದ ಆಗಲಿಲ್ಲ,” ಎಂದು ಹೇಳಿದನು.
19 ၁၉ ကိုယ်တော်က ``သင်တို့သည်ယုံကြည်ခြင်းကင်းမဲ့လှ ပါသည်တကား။ ငါသည်သင်တို့နှင့်မည်မျှကြာ အောင်နေရမည်နည်း။ မည်မျှကြာအောင်သင်တို့အား သည်းခံရမည်နည်း။ သူငယ်ကိုငါ့ထံသို့ခေါ်ခဲ့ကြ လော့'' ဟုမိန့်တော်မူ၏။-
ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.
20 ၂၀ သူတို့သည်ထိုသူငယ်ကိုအထံတော်သို့ခေါ်ခဲ့ ကြ၏။ နတ်သည်ကိုယ်တော်ကိုမြင်လျှင်မြင်ချင်းသူငယ် အား ပြင်းထန်စွာတုန်တက်စေသဖြင့် သူငယ်သည် ပါးစပ်မှအမြှုပ်များထွက်လျက်မြေသို့လဲ ကျလူးလှိမ့်နေ၏။-
ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು.
21 ၂၁ သခင်ယေရှုက ``ဤသို့ဖြစ်ပျက်နေသည်မှာ ကြာပြီလော'' ဟုသူငယ်၏ဖခင်အားမေး တော်မူ၏။ ဖခင်က ``ကလေးအရွယ်မှပင်ဖြစ်ပါသည်။-
ಯೇಸು ಅವನ ತಂದೆಗೆ, “ಇದು ಇವನನ್ನು ಹಿಡಿದು ಎಷ್ಟು ಕಾಲವಾಯಿತು?” ಎಂದು ಕೇಳಲು, ಅವನು, “ಬಾಲ್ಯದಿಂದಲೇ ಹೀಗಿದೆ.
22 ၂၂ နတ်သည်သူငယ်အားသေစေရန်ကြိမ်ဖန်များစွာ မီးထဲသို့ဖြစ်စေ၊ ရေထဲသို့ဖြစ်စေလဲစေတတ်ပါ သည်။ အရှင်တတ်နိုင်တော်မူလျှင် အကျွန်ုပ်တို့အား သနားသဖြင့်ကူမတော်မူပါ'' ဟုပြန်လည် လျှောက်ထား၏။
ಅಶುದ್ಧಾತ್ಮವು ಅವನನ್ನು ಕೊಲ್ಲಬೇಕೆಂದು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು. ಆದರೆ ನೀನು ಏನಾದರೂ ಮಾಡಲು ಸಾಧ್ಯವಿದ್ದರೆ, ಕನಿಕರಿಸಿ ನಮಗೆ ಸಹಾಯಮಾಡು,” ಎಂದನು.
23 ၂၃ သခင်ယေရှုက ``တတ်နိုင်တော်မူလျှင်'' ဟု အဘယ်ကြောင့်ဆိုဘိသနည်း။ ယုံကြည်ခြင်း ရှိသူအဖို့မဖြစ်နိုင်သောအရာမရှိ'' ဟု ထိုသူအားမိန့်တော်မူ၏။-
ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.
24 ၂၄ ချက်ချင်းပင်သူငယ်၏အဖက ``အကျွန်ုပ်အကယ် ပင်ယုံကြည်ပါ၏။ ယုံကြည်ခြင်းမပြည့်စုံသည့် အတွက်အကျွန်ုပ်အားမစတော်မူပါ'' ဟုကျယ် စွာလျှောက်ထား၏။
ತಕ್ಷಣವೇ ಬಾಲಕನ ತಂದೆಯು, “ನಾನು ನಂಬುತ್ತೇನೆ. ನನಗೆ ಅಪನಂಬಿಕೆಯಿದೆ ನನಗೆ ಸಹಾಯಮಾಡು,” ಎಂದು ಮೊರೆಯಿಟ್ಟನು.
25 ၂၅ အထံတော်သို့လူပရိသတ်များပြေးလာကြ သည်ကိုကိုယ်တော်မြင်တော်မူလျှင် ``ဆွံ့အနားပင်း သောနတ်၊ သူငယ်ထံမှထွက်လော့။ အဘယ်အခါမျှ ပြန်၍မပူးမဝင်နှင့်၊ ငါအမိန့်ရှိသည်'' ဟုညစ် ညမ်းသောနတ်အားမိန့်တော်မူ၏။-
ಜನರು ಕೂಡಿಕೊಂಡು ಓಡಿಬರುವುದನ್ನು ಯೇಸು ಕಂಡು, ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ, “ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ, ಇನ್ನೆಂದಿಗೂ ಅವನೊಳಗೆ ಸೇರಬಾರದೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.
26 ၂၆ နတ်သည်အော်ဟစ်ပြီးလျှင် သူငယ်ကိုပြင်းစွာတုန် တက်စေ၏။ ထိုနောက်သူ့ထံမှထွက်သွား၏။ သူငယ် သည်သူသေကဲ့သို့ဖြစ်နေသဖြင့် လူအများ ပင် ``သူငယ်သေပြီ'' ဟုပြောကြ၏။-
ಆಗ ಅಶುದ್ಧಾತ್ಮವು ಕೂಗಿ ಬಾಲಕನನ್ನು ಕ್ರೂರವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂದಿತು. ಅವನು ಸತ್ತವನ ಹಾಗೆ ಬಿದ್ದಿದ್ದರಿಂದ ಅನೇಕರು, “ಅವನು ಸತ್ತಿದ್ದಾನೆ,” ಎಂದರು.
27 ၂၇ သို့ရာတွင်သခင်ယေရှုသည်သူငယ်၏လက်ကို ကိုင်လျက်ထူမတော်မူ၏။ ထိုအခါသူငယ်သည် ထလေ၏။
ಆದರೆ ಯೇಸು ಕೈಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದು ನಿಂತನು.
28 ၂၈ ကိုယ်တော်သည်အိမ်သို့ပြန်ရောက်၍တစ်ကိုယ်တည်း ရှိတော်မူသောအခါ တပည့်တော်တို့က ``အကျွန်ုပ် တို့သည်ထိုနတ်ကိုအဘယ်ကြောင့်နှင်ထုတ်၍ မရပါသနည်း'' ဟုမေးလျှောက်ကြ၏။
ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, “ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.
29 ၂၉ ကိုယ်တော်က ``ဆုတောင်းခြင်းမှတစ်ပါး အခြား အဘယ်နည်းနှင့်မျှဤနတ်မျိုးကိုနှင်ထုတ်၍ မရ'' ဟုမိန့်တော်မူ၏။
ಯೇಸು ಅವರಿಗೆ, “ಈ ತರವಾದದ್ದು ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಹೋಗಲಾರದು,” ಎಂದರು.
30 ၃၀ ကိုယ်တော်နှင့်တပည့်တော်တို့သည်ထိုအရပ်မှ ထွက်ခွာကြပြီးလျှင် ဂါလိလဲပြည်ကိုဖြတ် သွားကြ၏။ ယင်းသို့ဖြတ်သွားကြောင်းကိုကိုယ် တော်သည်မည်သူ့အားမျှသိစေတော်မမူလို။-
ಅವರು ಅಲ್ಲಿಂದ ಹೊರಟು ಗಲಿಲಾಯದ ಮಾರ್ಗವಾಗಿ ಹಾದುಹೋದರು. ತಾವು ಎಲ್ಲಿದ್ದೇವೆ ಎಂಬುದು ಬೇರೆಯವರಿಗೆ ತಿಳಿಯಬಾರದೆಂದು ಯೇಸು ಅಪೇಕ್ಷಿಸಿದರು.
31 ၃၁ အဘယ်ကြောင့်ဆိုသော်ကိုယ်တော်သည် ``လူတို့ ၏လက်တွင်းသို့လူသားကိုအပ်နှံကြလိမ့်မည်။ သူ့ကိုသတ်ကြလိမ့်မည်။ သို့ရာတွင်သုံးရက်ကြာ သော်သူသည်သေခြင်းမှထမြောက်လိမ့်မည်'' ဟု တပည့်တော်တို့အားသွန်သင်တော်မူလျက်ရှိ သောကြောင့်ဖြစ်၏။-
ಏಕೆಂದರೆ ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು. ಅವರು ನನ್ನನ್ನು ಕೊಲ್ಲುವರು. ನನ್ನನ್ನು ಕೊಂದ ತರುವಾಯ ಮೂರನೆಯ ದಿನದಲ್ಲಿ ನಾನು ಜೀವಂತವಾಗಿ ಏಳುವೆನು,” ಎಂದು ಬೋಧಿಸುತ್ತಿದ್ದರು.
32 ၃၂ တပည့်တော်တို့သည်ကိုယ်တော်၏စကားတော်ကို နားမလည်ကြ။ သို့ရာတွင်ကိုယ်တော်အားမမေး မလျှောက်ဝံ့ကြ။
ಆದರೆ ಅವರಲ್ಲಿ ಆ ಮಾತನ್ನು ಯಾರೂ ಗ್ರಹಿಸಲಿಲ್ಲ. ಯೇಸುವನ್ನು ಕೇಳುವುದಕ್ಕೂ ಭಯಪಟ್ಟರು.
33 ၃၃ ကိုယ်တော်နှင့်တပည့်တော်တို့သည်ကပေရ နောင်မြို့သို့ရောက်ကြ၏။ အိမ်ထဲသို့ဝင်ပြီး နောက် ကိုယ်တော်က ``သင်တို့သည်လမ်းတွင် အဘယ်အကြောင်းအရာများကိုဆွေးနွေး ကြသနည်း'' ဟုတပည့်တို့အားမေးတော်မူ၏။-
ಅವರು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ, ಯೇಸು ಅವರಿಗೆ, “ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ?” ಎಂದು ಕೇಳಿದರು.
34 ၃၄ သူတို့သည်ဆိတ်ဆိတ်နေကြ၏။ အဘယ်ကြောင့် ဆိုသော်မိမိတို့အနက် အဘယ်သူသည်အကြီး မြတ်ဆုံးဖြစ်သည်ကိုလမ်းတွင်ဆွေးနွေးငြင်းခုံ ခဲ့ကြသောကြောင့်ဖြစ်၏။-
ಆದರೆ ಅವರು ಸುಮ್ಮನಿದ್ದರು. ಏಕೆಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನು ಎಂದು ದಾರಿಯಲ್ಲಿ ವಾಗ್ವಾದ ಮಾಡಿದ್ದರು.
35 ၃၅ ကိုယ်တော်သည်ထိုင်တော်မူပြီးလျှင်တစ်ကျိပ်နှစ် ပါးတို့ကိုခေါ်တော်မူ၍ ``အမြင့်ဆုံးသို့ရောက် လိုသူသည်အနိမ့်ဆုံးမှာနေရမည်။ လူခပ်သိမ်း တို့၏အစေခံလည်းဖြစ်ရမည်'' ဟုမိန့်တော်မူ၏။-
ಆಗ ಯೇಸು ಕುಳಿತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ, “ಯಾವನಾದರೂ ಮೊದಲಿನವನಾಗಬೇಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು,” ಎಂದರು.
36 ၃၆ ကိုယ်တော်သည်ကလေးသူငယ်တစ်ယောက်ကို ခေါ်၍ တပည့်တော်တို့အလယ်တွင်ထားတော် မူ၏။-
ಯೇಸು ಒಂದು ಮಗುವನ್ನು ತೆಗೆದುಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ, ತಮ್ಮ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ,
37 ၃၇ ထိုနောက်ထိုသူငယ်ကိုပွေ့တော်မူလျက် ``ငါ ၏နာမကိုထောက်၍ ဤသို့သောသူငယ်တစ်စုံ တစ်ယောက်ကိုလက်ခံသူသည်ငါ့ကိုလက်ခံ၏။ ငါ့ကိုလက်ခံသူသည်ငါ့ကိုသာလက်ခံသည် မဟုတ်။ ငါ့ကိုစေလွှတ်တော်မူသောအရှင်ကို လည်းလက်ခံ၏'' ဟုမိန့်တော်မူ၏။
“ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿದರೆ, ಅವನು ನನ್ನನ್ನು ಸ್ವೀಕರಿಸುತ್ತಾನೆ. ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಅಲ್ಲ ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ,” ಎಂದರು.
38 ၃၈ ယောဟန်က ``အရှင်ဘုရား၊ အရှင်၏နာမတော် ကိုအမှီပြု၍နတ်မိစ္ဆာတို့ကိုနှင်ထုတ်နေသူလူ တစ်ယောက်ကို အကျွန်ုပ်တို့တွေ့မြင်ခဲ့ပါသည်။ သူသည်အကျွန်ုပ်တို့နှင့်အတူမလိုက်။ သို့မလိုက် သဖြင့်အကျွန်ုပ်တို့သည် သူ့အားအရှင်၏နာမ တော်ကိုအသုံးမပြုရန်တားမြစ်ခဲ့ပါ၏'' ဟု ကိုယ်တော်အားလျှောက်ထား၏။-
ಆಗ ಯೋಹಾನನು, “ಬೋಧಕರೇ, ನಮ್ಮನ್ನು ಹಿಂಬಾಲಿಸದ ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವ ಓಡಿಸುವುದನ್ನು ನಾವು ಕಂಡೆವು. ಅವನು ನಮ್ಮವನು ಅಲ್ಲದ್ದರಿಂದ ನಾವು ಅವನನ್ನು ತಡೆದೆವು,” ಎಂದು ಹೇಳಿದನು.
39 ၃၉ သခင်ယေရှုက ``သူ့ကိုမတားမြစ်ကြနှင့်၊ ငါ ၏နာမကိုအမှီပြု၍အံ့ဖွယ်သောအမှုကိုပြု ပြီးနောက် ငါ့အားပုတ်ခတ်ပြောဆိုနိုင်မည့်သူ တစ်စုံတစ်ယောက်မျှမရှိ။-
ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ; ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿದವನು, ನನ್ನ ವಿಷಯದಲ್ಲಿ ಕೆಟ್ಟದ್ದನ್ನು ಮಾತನಾಡಲಾರನು.
40 ၄၀ ငါတို့အားမဆန့်ကျင်သူသည်ငါတို့ဘက်သား ဖြစ်၏။-
ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವನಾಗಿದ್ದಾನೆ.
41 ၄၁ အမှန်အကန်သင်တို့အားငါဆိုသည်ကား ငါ၏ တပည့်များဖြစ်သည်ကိုထောက်လျက် သင်တို့အား သောက်ရေတစ်ခွက်ကိုပေးသူသည်မုချအကျိုး ခံစားရလိမ့်မည်။
ಇದಲ್ಲದೆ ನೀವು ಕ್ರಿಸ್ತನಲ್ಲಿ ಸೇರಿದವರಾದ್ದರಿಂದ ಯಾರಾದರೂ ನನ್ನ ಹೆಸರಿನಲ್ಲೆ ನಿಮಗೆ ಒಂದು ಲೋಟ ನೀರನ್ನು ಕೊಟ್ಟರೂ ಅವರು ತಮ್ಮ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.
42 ၄၂ ``ငါ့ကိုယုံကြည်ကိုးစားမှုပျက်ပြားစေရန် ဤ ကလေးသူငယ်တစ်စုံတစ်ယောက်ကိုမှောက်မှား လမ်းလွဲစေသောသူသည် လည်တွင်ကြိတ်ဆုံကျောက် ကိုဆွဲလျက်ပင်လယ်ထဲသို့ပစ်ချခံရလျှင်သူ့ အဖို့သာ၍ကောင်း၏။-
“ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವರಿಗೆ ಲೇಸು.
43 ၄၃ သင်၏လက်သည်သင်၏ယုံကြည်ခြင်းကိုပျက် ပြားစေလျှင် ထိုလက်ကိုဖြတ်ပစ်လော့။- (လောက်ကောင်များမသေ၊ မီးမငြိမ်းရာ) ငရဲမီး ထဲသို့လက်နှစ်ဖက်အစုံအလင်နှင့်ကျရောက် ရသည်ထက်၊ လက်တစ်ဖက်ချို့တဲ့လျက်ထာဝရ အသက်ကိုရခြင်းကသာ၍ကောင်း၏။- (Geenna )
ನಿಮ್ಮ ಕೈ ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಎಂದಿಗೂ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅಂಗಹೀನರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು. (Geenna )
ನರಕದಲ್ಲಿ, “‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’
45 ၄၅ သင်၏ခြေသည်သင်၏ယုံကြည်ခြင်းကိုပျက် ပြားစေလျှင် ထိုခြေကိုဖြတ်ပစ်လော့။- သင်သည်(လောက်ကောင်များမသေ၊ မီးမငြိမ်းရာ) ငရဲသို့ခြေနှစ်ဖက်အစုံအလင်နှင့်ကျရသည် ထက် ခြေတစ်ဖက်ချို့တဲ့လျက်ထာဝရအသက် ကိုရခြင်းကသာ၍ကောင်း၏။- (Geenna )
ನಿಮ್ಮ ಕಾಲು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ನೀವು ಎರಡು ಕಾಲುಳ್ಳವರಾಗಿ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು. (Geenna )
ನರಕದಲ್ಲಿ, “‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’
47 ၄၇ သင်၏မျက်စိသည်သင်၏ယုံကြည်ခြင်းကိုပျက်ပြား စေလျှင် ထိုမျက်စိကိုထုတ်ပစ်လော့၊ မျက်စိတစ်စုံနှင့် ငရဲသို့ကျရသည်ထက် ဘုရားသခင်၏နိုင်ငံတော် သို့မျက်စိတစ်လုံးချို့တဲ့လျက်ဝင်ရသည်ကသာ၍ ကောင်း၏။- (Geenna )
ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ದೇವರ ರಾಜ್ಯದಲ್ಲಿ ಸೇರುವುದು ನಿಮಗೆ ಲೇಸು. (Geenna )
48 ၄၈ ထိုနေရာသည်ဖျက်ဆီးနေသောလောက်ကောင်များ မသေ၊ မီးမငြိမ်းရာနေရာဖြစ်သည်။
ನರಕದಲ್ಲಿ, “‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ, ಮತ್ತು ಬೆಂಕಿಯು ಆರುವುದಿಲ್ಲ.’
49 ၄၉ ``ယဇ်ကောင်ကိုဆားခပ်၍သန့်စင်စေသကဲ့သို့ မီးသည်လူခပ်သိမ်းတို့ကိုသန့်စင်စေလိမ့်မည်။-
ಉಪ್ಪನ್ನು ಪರೀಕ್ಷಿಸುವಂತೆ ಪ್ರತಿಯೊಬ್ಬರು ಬೆಂಕಿಯ ಮೂಲಕ ಪರೀಕ್ಷೆಗೆ ಒಳಪಡಬೇಕಾಗುತ್ತದೆ.
50 ၅၀ ဆားသည်အသုံးဝင်၏။ သို့သော်ဆားမှအငန်ကင်း ပျောက်သွားပါမူ သင်တို့သည်ယင်းကိုအဘယ်သို့ ပြန်၍ငန်အောင်ပြုနိုင်ပါမည်နည်း။ ``သင်တို့၌မိတ်ဖွဲ့ခြင်းတည်းဟူသောဆားရှိစေ ပြီးလျှင် အချင်းချင်းငြိမ်းချမ်းစွာနေကြလော့'' ဟုမိန့်တော်မူ၏။
“ಉಪ್ಪು ಒಳ್ಳೆಯದು. ಆದರೆ ಉಪ್ಪೇ ಸಪ್ಪಗಾದರೆ, ಇನ್ನಾವುದರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರುವಂತೆ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ,” ಎಂದರು.