< တောလည်ရာ 20 >
1 ၁ ပထမလတွင်ဣသရေလအမျိုးသားတို့ သည် ဇိနဟုခေါ်သောတောကန္တာရသို့ရောက်၍ ကာဒေရှအရပ်၌စခန်းချကြသည်။ ထို အရပ်တွင်မိရိအံသေဆုံးသဖြင့် သူ့အလောင်း ကိုမြှုပ်နှံသင်္ဂြိုဟ်လိုက်ကြ၏။
೧ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.
2 ၂ စခန်းချရာအရပ်တို့တွင်ရေမရှိသောကြောင့် သူတို့သည်မောရှေနှင့်အာရုန်တို့ထံသို့စုရုံး လာကြပြီးလျှင်၊-
೨ಸಮೂಹದವರಿಗೆ ನೀರು ಇಲ್ಲದ ಕಾರಣ ಅವರು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಕೂಡಿಕೊಂಡರು.
3 ၃ ``အကျွန်ုပ်တို့သည်ယခုကဲ့သို့သောဆင်းရဲ ဒုက္ခခံရသည်ထက် အကျွန်ုပ်တို့၏သားချင်း များနှင့်အတူထာဝရဘုရား၏တဲတော် ရှေ့တွင်သေရသည်ကပို၍ကောင်းပါသေး သည်။-
೩ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, “ನಮ್ಮ ಜನರು ಯೆಹೋವನ ಸನ್ನಿಧಿಯಲ್ಲಿ ಸತ್ತುಹೋದಾಗಲೇ ನಾವೂ ಸಹ ಸತ್ತುಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.
4 ၄ အကျွန်ုပ်တို့၏တိရစ္ဆာန်များနှင့်အတူသေ ကြေပျက်စီးစေခြင်းငှာ သင်တို့သည်အကျွန်ုပ် တို့အားဤတောကန္တာရသို့အဘယ်ကြောင့် ခေါ်ဆောင်ခဲ့ပါသနည်း။-
೪ನೀವು ಯೆಹೋವನ ಸಮೂಹದವರಾದ ನಮ್ಮನ್ನೂ, ನಮ್ಮ ಪಶುಗಳನ್ನೂ ಈ ಮರಳುಗಾಡಿಗೆ ಕರೆದುಕೊಂಡು ಬಂದು ಯಾಕೆ ಸಾಯಿಸುತ್ತೀರಿ?
5 ၅ အဘယ်ကြောင့်အကျွန်ုပ်တို့အားအီဂျစ်ပြည်မှ ထုတ်ဆောင်၍ မည်သည့်အပင်မျှမပေါက်သောဤ ခေါင်သည့်အရပ်သို့ခေါ်ဆောင်ခဲ့ပါသနည်း။ ဤ အရပ်တွင်ကောက်ပဲသီးနှံပင်မရှိ၊ သဖန်းပင် မရှိ၊ စပျစ်ပင်မရှိ၊ သလဲပင်မရှိ၊ သောက် စရာရေမရှိ'' ဟုညည်းတွားကြလေသည်။-
೫ನಮ್ಮನ್ನು ಐಗುಪ್ತ ದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರೆದುಕೊಂಡು ಬಂದಿದ್ದೀರಿ? ಈ ನೆಲದಲ್ಲಿ ಧಾನ್ಯವೂ, ಅಂಜೂರವೂ, ದ್ರಾಕ್ಷಿಯೂ, ದಾಳಿಂಬೆಯೂ ಮತ್ತು ಕುಡಿಯುವುದಕ್ಕೆ ನೀರೂ ಸಹ ಸಿಕ್ಕುವುದಿಲ್ಲ” ಎಂದು ಹೇಳುತ್ತಿದ್ದರು.
6 ၆ ထိုအခါမောရှေနှင့်အာရုန်တို့သည်လူအစု အဝေးမှထွက်ခွာ၍ တဲတော်တံခါးဝတွင်ရပ် နေကြ၏။ သူတို့သည်ပျပ်ဝပ်လျက်နေကြစဉ် ထာဝရဘုရား၏တောက်ပသောဘုန်းအသ ရေတော်ထင်ရှားလာ၏။
೬ಮೋಶೆ ಮತ್ತು ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಹೋಗಿ ಬೋರಲುಬಿದ್ದಾಗ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.
7 ၇ ထာဝရဘုရားကမောရှေအား၊-
೭ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ,
8 ၈ ``ပဋိညာဉ်သေတ္တာတော်ရှေ့တွင် ရှိသောတောင်ဝှေး ကိုယူလော့။ ထိုနောက်သင်နှင့်အာရုန်တို့သည် ဣသ ရေလအမျိုးသားအပေါင်းတို့အားစုဝေးစေရန် ဆင့်ဆိုလော့။ သူတို့ရှေ့တွင်ထိုအရပ်၌ရှိသော ကျောက်ဆောင်ကို ရေထွက်စေရန်အမိန့်ပေးလော့။ သူတို့နှင့်သူတို့၏တိရစ္ဆာန်များသောက်ရန် ကျောက်တုံးမှရေပန်းထွက်လိမ့်မည်'' ဟုမိန့် တော်မူ၏။-
೮“ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು.
9 ၉ မောရှေသည်ထာဝရဘုရားမိန့်မှာတော်မူ သည်အတိုင်း တောင်ဝှေးကိုယူခဲ့လေသည်။
೯ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಆ ಕೋಲನ್ನು ಆತನ ಸನ್ನಿಧಿಯಿಂದ ತೆಗೆದುಕೊಂಡನು.
10 ၁၀ သူသည်အာရုန်နှင့်အတူ လူအပေါင်းတို့ကို ကျောက်ဆောင်ရှေ့တွင်စုရုံးစေ၏။ ထိုနောက် မောရှေက``ပုန်ကန်သူတို့၊ နားထောင်လော့။ ဤ ကျောက်ဆောင်ထဲမှသင်တို့အဖို့ရေထွက် ရအောင် ငါတို့ပြုလုပ်ရမည်လော'' ဟုဆိုလျက်၊-
೧೦ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, “ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?”
11 ၁၁ တောင်ဝှေးကိုမြှောက်၍ကျောက်တုံးကိုနှစ်ကြိမ် ရိုက်လေသည်။ ထိုအခါကျောက်ဆောင်မှရေ များစွာပန်းထွက်သဖြင့် လူအပေါင်းတို့နှင့် တိရစ္ဆာန်များရေသောက်ကြရသည်။
೧೧ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.
12 ၁၂ သို့ရာတွင်ထာဝရဘုရားက မောရှေနှင့် အာရုန်တို့အား``သင်တို့သည်ဣသရေလ အမျိုးသားတို့ရှေ့တွင်ငါ့တန်ခိုးတော်ကို ယုံကြည်မှုနည်းသောကြောင့် ကတိထားသော ပြည်သို့သူတို့အားပို့ဆောင်ရကြလိမ့်မည် မဟုတ်'' ဟုဆုံးမတော်မူ၏။
೧೨ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.
13 ၁၃ မေရိဘအရပ်ကား ဣသရေလအမျိုးသား တို့ထာဝရဘုရားအားညည်းတွားသော၊ ထာဝရ ဘုရားကမိမိသည် ထာဝရဘုရားဖြစ်တော်မူ ကြောင်းကိုပြသောအရပ်ဖြစ်သတည်း။
೧೩ಇಸ್ರಾಯೇಲರು ಅಲ್ಲಿ ಯೆಹೋವನ ಸಂಗಡ ವಾದಮಾಡಿದ್ದರಿಂದ ಆ ನೀರು ಬಂದ ಸ್ಥಳಕ್ಕೆ “ಮೆರೀಬಾ” ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಪರಿಶುದ್ಧತೆಯನ್ನು ತೋರಿಸಿದನು.
14 ၁၄ မောရှေသည်ကာဒေရှအရပ်မှဧဒုံဘုရင်ထံ သို့ သံတမန်များကိုစေလွှတ်လိုက်၏။ သံတမန် တို့ကဧဒုံဘုရင်အား``ကိုယ်တော်၏ဆွေမျိုး သားချင်းဖြစ်သောဣသရေလအမျိုးသား တို့ထံမှ သတင်းပါးလိုက်ပါသည်။ အကျွန်ုပ် တို့ဆင်းရဲဒုက္ခမည်မျှခံခဲ့ရကြောင်း ကိုယ်တော်သိပါ၏။-
೧೪ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.
15 ၁၅ အကျွန်ုပ်တို့၏ဘိုးဘေးများသည်အီဂျစ် ပြည်သို့သွားရောက်၍ နှစ်ပေါင်းများစွာနေ ထိုင်ခဲ့ရာအီဂျစ်အမျိုးသားတို့သည်ဘိုး ဘေးများနှင့်အကျွန်ုပ်တို့ကိုညှင်းဆဲနှိပ်စက် ခဲ့ပါ၏။-
೧೫ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತ್ಯರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು.
16 ၁၆ အကျွန်ုပ်တို့သည်ထာဝရဘုရားထံအကူ အညီတောင်းခံလျှောက်ထားသောအခါ ကိုယ် တော်သည်နားညောင်းတော်မူ၍ကောင်းကင် တမန်ကိုစေလွှတ်လျက် ကျွန်ုပ်တို့အားအီဂျစ် ပြည်မှထုတ်ဆောင်တော်မူခဲ့၏။ ယခုအကျွန်ုပ် တို့သည်ကိုယ်တော်၏နယ်စပ်တွင်တည်ရှိ သောကာဒေရှမြို့သို့ရောက်ရှိနေပါသည်။-
೧೬ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.
17 ၁၇ ကိုယ်တော်၏ပြည်ကိုဖြတ်သန်းခွင့်ပေးတော် မူပါ။ အကျွန်ုပ်တို့နှင့်တကွသိုး၊ နွား၊ တိရစ္ဆာန် တို့သည်ကိုယ်တော်၏လယ်များ၊ စပျစ်ဥယျာဉ် များကိုဖြတ်သန်းခြင်းပြုမည်မဟုတ်ပါ။ ရေတွင်းများမှရေကိုလည်းသောက်သုံးမည် မဟုတ်ပါ။ အကျွန်ုပ်တို့သည်ကိုယ်တော်၏ ပိုင်နက်လွန်သည် အထိလမ်းမကြီးအတိုင်း ဖြတ်သန်းသွားပါမည်'' ဟုလျှောက်ထား ကြလေသည်။
೧೭ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.
18 ၁၈ ဧဒုံအမျိုးသားတို့က``သင်တို့အားငါတို့ ၏ပြည်ကိုဖြတ်သန်းခွင့်မပြုနိုင်။ သင်တို့ ဖြတ်သန်းလာလျှင်ငါတို့သည်အလုံး အရင်းနှင့်ချီတက်၍သင်တို့အားတိုက်ခိုက် မည်'' ဟုဖြေကြားကြလေသည်။
೧೮ಆದರೆ ಎದೋಮ್ಯರು, “ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟರು.
19 ၁၉ ဣသရေလအမျိုးသားတို့က``အကျွန်ုပ်တို့ သည်လမ်းမကြီးအတိုင်းသာဖြတ်သန်းသွား ကြပါမည်။ အကျွန်ုပ်တို့နှင့်အကျွန်ုပ်တို့၏ တိရစ္ဆာန်များသည် ကိုယ်တော်၏ပြည်မှရေကို သောက်သုံးမိလျှင်ရေဖိုးကိုပေးပါမည်။ ဖြတ်သန်းခွင့်ကိုသာပေးတော်မူပါ'' ဟု လျှောက်ထားကြလေသည်။
೧೯ಅದಕ್ಕೆ ಇಸ್ರಾಯೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ಮತ್ತು ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆ ಕೊಡುವೆವು. ಬೇರೆ ಏನನ್ನು ಮಾಡದೆ, ಕಾಲ್ನಡೆಯಾಗಿ ದಾಟಿಹೋಗುವುದಕಷ್ಟೇ ನಮಗೆ ಅಪ್ಪಣೆಯಾಗಬೇಕು” ಎಂದು ಹೇಳಿದರು.
20 ၂၀ ဧဒုံအမျိုးသားတို့က``ငါတို့ဖြတ်သန်းခွင့် မပြုနိုင်'' ဟုဆို၍ဣသရေလအမျိုးသား တို့ကိုတိုက်ခိုက်ရန် ဗိုလ်ပါအလုံးအရင်း နှင့်ချီတက်လာကြလေသည်။-
೨೦ಆದರೆ ಎದೋಮ್ಯರು, “ನೀವು ದಾಟಲೇ ಬಾರದು” ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು.
21 ၂၁ ဧဒုံအမျိုးသားတို့ကမိမိတို့ပြည်ကိုဖြတ် သန်းခွင့်မပြုကြသောကြောင့် ဣသရေလ အမျိုးသားတို့သည်လှည့်လည်၍အခြား သောလမ်းဖြင့်ခရီးဆက်ကြလေသည်။
೨೧ಎದೋಮ್ಯರು ಇಸ್ರಾಯೇಲರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ಹೋದುದರಿಂದ ಇಸ್ರಾಯೇಲರು ಅವರ ಕಡೆಯಿಂದ ತಿರುಗಿಕೊಂಡು ಬೇರೊಂದು ಮಾರ್ಗವಾಗಿ ಹೊರಟರು.
22 ၂၂ ဣသရေလအမျိုးသားတို့သည်ကာဒေရှ အရပ်မှထွက်ခွာခဲ့ရာ ဧဒုံပြည်နယ်စပ်ရှိ ဟောရတောင်သို့ရောက်ရှိကြလေသည်။ ထို အရပ်တွင်ထာဝရဘုရားက မောရှေနှင့် အာရုန်တို့အား၊-
೨೨ಆಗ ಇಸ್ರಾಯೇಲರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋರ್ ಎಂಬ ಬೆಟ್ಟಕ್ಕೆ ಬಂದರು.
೨೩ಯೆಹೋವನು ಎದೋಮ್ಯರ ದೇಶದ ಗಡಿಯ ಹತ್ತಿರವಿರುವ ಹೋರ್ ಎಂಬ ಬೆಟ್ಟದ ಬಳಿಯಲ್ಲಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,
24 ၂၄ ``အာရုန်သည်အနိစ္စရောက်လိမ့်မည်။ သူသည် ဣသရေလအမျိုးသားတို့အား ငါကတိ ထားသောပြည်သို့ဝင်ရလိမ့်မည်မဟုတ်။ အဘယ်ကြောင့်ဆိုသော်သင်တို့နှစ်ဦးသည် မေရိဘအရပ်တွင် ငါ၏အမိန့်တော်ကို မနာခံခဲ့သောကြောင့်ဖြစ်သည်။-
೨೪“ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.
25 ၂၅ အာရုန်နှင့်သူ၏သားဧလာဇာကိုဟောရ တောင်ပေါ်သို့ခေါ်ဆောင်ခဲ့ပြီးလျှင်၊-
೨೫ನೀನು ಆರೋನನನ್ನೂ, ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ.
26 ၂၆ အာရုန်၏ယဇ်ပုရောဟိတ်ဝတ်စုံကိုချွတ်၍ ဧလာဇာအားဝတ်ဆင်ပေးလော့။ အာရုန်သည် ထိုအရပ်တွင်အနိစ္စရောက်လိမ့်မည်'' ဟုမိန့် တော်မူ၏။-
೨೬ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಬೇಕು. ಆರೋನನು ಅಲ್ಲಿ ತನ್ನ ಪೂರ್ವಿಕರ ಬಳಿಗೆ ಸೇರಬೇಕು” ಎಂದು ಆಜ್ಞಾಪಿಸಿದನು.
27 ၂၇ ထာဝရဘုရားမိန့်မှာတော်မူသည်အတိုင်း မောရှေဆောင်ရွက်လေသည်။ ဣသရေလအမျိုး သားအပေါင်းတို့ရှေ့တွင် သူတို့သည်ဟောရ တောင်ပေါ်သို့တက်သွားကြ၏။-
೨೭ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಹೀಗೆ ಮಾಡಿದನು. ಸರ್ವಸಮೂಹದವರು ನೋಡುತ್ತಿರಲಾಗಿ ಅವರು ಹೋರ್ ಬೆಟ್ಟವನ್ನು ಹತ್ತಿದರು.
28 ၂၈ တောင်ပေါ်တွင်မောရှေသည်အာရုန်၏ယဇ် ပုရောဟိတ်ဝတ်စုံများကိုချွတ်၍ ဧလာဇာ အားဝတ်ဆင်ပေးလေသည်။ အာရုန်သည်ထို တောင်ပေါ်တွင်အနိစ္စရောက်လေ၏။ မောရှေ နှင့်ဧလာဇာတို့သည်တောင်အောက်သို့ ဆင်းလာကြ၏။-
೨೮ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.
29 ၂၉ ဣသရေလအမျိုးသားအပေါင်းတို့သည် အာရုန်အနိစ္စရောက်ကြောင်းကြားသိရသော အခါ ရက်ပေါင်းသုံးဆယ်ပတ်လုံးဝမ်းနည်း ပူဆွေးကြလေသည်။
೨೯ಆರೋನನು ಸತ್ತುಹೋದ ಸಂಗತಿಯನ್ನು ಇಸ್ರಾಯೇಲ್ ಸಮೂಹದವರು ಕೇಳಿ ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.