< တောလည်ရာ 21 >
1 ၁ ခါနာန်ပြည်တောင်ပိုင်းတွင်အာရဒ်မြို့ကိုအုပ် စိုးသောမင်းသည် ဣသရေလအမျိုးသားများ အသရိမ်လမ်းဖြင့်လာနေကြောင်းသိရလျှင် သူတို့ကိုစစ်ချီတိုက်ခိုက်ရာအချို့ကိုသုံ့ပန်း အဖြစ်ဖမ်းမိလေသည်။-
ನೆಗೆವನಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಇಸ್ರಾಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ಕೇಳಿ, ಅವರ ಸಂಗಡ ಯುದ್ಧಮಾಡಿ, ಅವರಲ್ಲಿ ಕೆಲವರನ್ನು ಸೆರೆಹಿಡಿದನು.
2 ၂ ထိုအခါဣသရေလအမျိုးသားတို့က``ကိုယ် တော်သည်အကျွန်ုပ်တို့အားဤသူတို့ကိုတိုက် ခိုက်အောင်မြင်စေတော်မူလျှင် သူတို့နှင့်သူတို့ ၏မြို့များကိုကိုယ်တော်အားအပြီးအပိုင် ဆက်ကပ်သောပူဇော်သကာအဖြစ်ဖျက်ဆီး ပစ်ပါမည်'' ဟုထာဝရဘုရားအားသစ္စာ ကတိပြုကြလေသည်။-
ಆಗ ಇಸ್ರಾಯೇಲರು ಯೆಹೋವ ದೇವರಿಗೆ ಪ್ರಮಾಣಮಾಡಿ, “ನೀನು ಈ ಜನರನ್ನು ನಮ್ಮ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ, ನಾವು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆವು,” ಎಂದರು.
3 ၃ ထာဝရဘုရားသည်သူတို့လျှောက်ထားသည် အတိုင်းခါနာန်အမျိုးသားတို့ကိုတိုက်ခိုက် အောင်မြင်စေတော်မူ၏။ ထိုကြောင့်ဣသရေလ အမျိုးသားတို့သည်သူတို့၏မြို့များကို လုံးဝဖျက်ဆီးပစ်ပြီးလျှင် ထိုအရပ်ကို ဟော်မာဟူ၍နာမည်မှည့်ခေါ်လေသည်။
ಆಗ ಯೆಹೋವ ದೇವರು ಇಸ್ರಾಯೇಲರ ಧ್ವನಿಯನ್ನು ಕೇಳಿ ಕಾನಾನ್ಯರನ್ನು ಒಪ್ಪಿಸಿಕೊಟ್ಟನು. ಇಸ್ರಾಯೇಲರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.
4 ၄ ထိုနောက်ဣသရေလအမျိုးသားတို့သည် ဟောရ တောင်မှထွက်ခွာ၍ဧဒုံပြည်ကိုရှောင်ကွင်းသွားရန် အကွာဘာပင်လယ်ကွေ့သို့သွားရာလမ်းအတိုင်း ချီတက်ကြလေသည်။ သို့ရာတွင်သူတို့သည် လမ်းခုလတ်တွင် စိတ်ပျက်အားလျော့လာကြ ပြီးလျှင်၊-
ಅವರು ಹೋರ್ ಎಂಬ ಬೆಟ್ಟದಿಂದ ಹೊರಟು, ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಆದರೆ ಜನರು ಈ ಪ್ರಯಾಣದಿಂದ ಆಯಾಸವಾಗಿ ಬಹಳ ಕುಂದಿಹೋದರು.
5 ၅ ဘုရားသခင်နှင့်မောရှေတို့အားပြစ်တင်ပြော ဆိုကြလေသည်။ သူတို့က``အစာရေစာမရှိ သည့်ဤတောကန္တာရတွင်သေစေရန် အဘယ် ကြောင့် အကျွန်ုပ်တို့ကိုအီဂျစ်ပြည်မှခေါ် ဆောင်လာပါသနည်း။ ဤပေါ့ပျက်သော အစားအစာကိုလည်း အကျွန်ုပ်တို့ငြီး ငွေ့လာပါပြီ'' ဟုညည်းညူကြ၏။-
ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.
6 ၆ ထိုအခါထာဝရဘုရားသည်ဣသရေလ အမျိုးသားတို့ရှိရာသို့မြွေဆိုးများကိုစေ လွှတ်သဖြင့် လူပေါင်းများစွာတို့သည်မြွေ ကိုက်ခံရ၍သေဆုံးကြ၏။-
ಆಗ ಯೆಹೋವ ದೇವರು ಜನರೊಳಗೆ ವಿಷಸರ್ಪಗಳನ್ನು ಕಳುಹಿಸಿದರು. ಅವು ಜನರನ್ನು ಕಚ್ಚಿದ್ದರಿಂದ, ಇಸ್ರಾಯೇಲರಲ್ಲಿ ಬಹುಜನರು ಸತ್ತುಹೋದರು.
7 ၇ ထိုကြောင့်လူများသည်မောရှေထံသို့လာ ၍``အကျွန်ုပ်တို့သည်ထာဝရဘုရားနှင့်ကိုယ် တော်ကို ဆန့်ကျင်ပြောဆို၍ပြစ်မှားမိပါပြီ။ ဤမြွေများကိုဖယ်ရှားပစ်ရန်ထာဝရဘုရား ထံဆုတောင်းပေးပါလော့'' ဟုတောင်းပန်ကြ၏။ သို့ဖြစ်၍မောရှေသည် သူတို့အတွက်ထာဝရ ဘုရားထံဆုတောင်းလေ၏။-
ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.
8 ၈ ထိုအခါထာဝရဘုရားကမောရှေအား သတ္တု မြွေရုပ်ကိုပြုလုပ်၍တိုင်ထိပ်တွင်တင်ထားရန် ခိုင်းစေတော်မူ၏။ မြွေကိုက်ခံရသောသူသည် မြွေရုပ်ကိုကြည့်လျှင် အသက်ချမ်းသာရာရ မည်ဖြစ်ကြောင်းဆင့်ဆိုစေတော်မူ၏။-
ಯೆಹೋವ ದೇವರು ಮೋಶೆಗೆ, “ನೀನು ಕಂಚಿನಿಂದ ಒಂದು ಸರ್ಪವನ್ನು ಮಾಡಿಸಿಕೊಂಡು, ಒಂದು ಕಂಬದ ಮೇಲೆ ಇಡು. ಆಗ ಕಚ್ಚಿಸಿಕೊಂಡವರೆಲ್ಲರೂ ಅದರ ಮೇಲೆ ದೃಷ್ಟಿ ಇಟ್ಟರೆ ಅವರು ಬದುಕುವರು,” ಎಂದರು.
9 ၉ ထို့ကြောင့်မောရှေသည်ကြေးဝါမြွေရုပ်ကိုပြု လုပ်၍ တိုင်ထိပ်တွင်တင်ထားရာမြွေကိုက်ခံ ရသောသူသည် မြွေရုပ်ကိုကြည့်လျှင်အသက် ချမ်းသာရာရလေ၏။
ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು.
10 ၁၀ တစ်ဖန်ဣသရေလအမျိုးသားတို့သည် ခရီး ဆက်ခဲ့ကြရာသြဗုတ်အရပ်တွင်စခန်းချ ကြ၏။-
ಇಸ್ರಾಯೇಲರು ಹೊರಟು ಓಬೋತಿನಲ್ಲಿ ಇಳಿದುಕೊಂಡರು.
11 ၁၁ ထိုအရပ်မှတစ်ဖန်သူတို့သည်ခရီးထွက်၍ မောဘပြည်အရှေ့ဘက်တောကန္တာရရှိယို ယွင်းပျက်စီးနေသော ဗာရိမ်မြို့တွင်စခန်းချ ကြလေသည်။-
ಓಬೋತಿನಿಂದ ಹೊರಟು ಮೋವಾಬ್ ದೇಶಕ್ಕೆದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಮರುಭೂಮಿಯಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
12 ၁၂ ထိုနောက်သူတို့သည်ဇာရက်မြစ်ဝှမ်းတွင် စခန်းချကြသည်။-
ಅಲ್ಲಿಂದ ಅವರು ಹೊರಟು ಜೆರೆದ್ ಎಂಬ ಹಳ್ಳದ ಬಳಿಯಲ್ಲಿ ಇಳಿದುಕೊಂಡರು.
13 ၁၃ ထိုအရပ်မှတစ်ဖန်သူတို့သည်ခရီးထွက်လာ ခဲ့ကြရာ အာနုန်မြစ်မြောက်ဘက်အာမောရိပြည် တောကန္တာရနှင့်တစ်ဆက်တည်းရှိသောတော ကန္တာရတွင်စခန်းချကြ၏။ (အာနုန်မြစ်သည် မောဘပြည်နှင့်အာမောရိပြည်တို့၏နယ်ခြား ဖြစ်၏။-)
ಅಲ್ಲಿಂದ ಹೊರಟು ಅಮೋರಿಯರ ಪ್ರದೇಶದಿಂದ ಹೊರಗೆ ಬರುವ ಮರುಭೂಮಿಯಲ್ಲಿರುವ ಅರ್ನೋನ್ ಹೊಳೆಯ ಈಚೆಯಲ್ಲಿ ಇಳಿದುಕೊಂಡರು. ಏಕೆಂದರೆ ಅರ್ನೋನ್ ಮೋವಾಬರಿಗೂ ಅಮೋರಿಯರಿಗೂ ಮಧ್ಯದ ಮೋವಾಬಿನ ಗಡಿಯಾಗಿದೆ.
14 ၁၄ ထို့ကြောင့်ထာဝရဘုရား၏စစ်ပွဲများစာ စောင်တွင်``သုပဒေသတွင်တည်သောဝါဟက် မြို့နှင့်ချိုင့်ဝှမ်းများအာနုန်မြစ်နှင့်၊-
ಆದಕಾರಣ ಯೆಹೋವ ದೇವರ ಯುದ್ಧಗಳ ಪುಸ್ತಕದಲ್ಲಿ ಹೀಗೆಂದು ಬರೆದಿದೆ: “ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್
15 ၁၅ မောဘပြည်နယ်စပ်အာရမြို့သို့တိုင်အောင် လျှောဆင်းသောချိုင့်ဝှမ်းများ'' ဟူ၍ဖော်ပြ ပါရှိလေသည်။
ಹೊಳೆಗೆ ಸೇರುವ ಹಳ್ಳಗಳನ್ನು, ಆರ್ ಪಟ್ಟಣದ ತನಕ ಮೋವಾಬಿನ ಎಲ್ಲೆಯಾಗಿರುವ ಕೊರಕಲನ್ನು.”
16 ၁၆ ဣသရေလအမျိုးသားတို့သည်ထိုအရပ်မှ ရေတွင်းဟုအနက်ရှိသောဗေရစခန်းသို့ ရောက်ကြလေသည်။ ထိုစခန်းတွင်ထာဝရ ဘုရားကမောရှေအား``လူအပေါင်းတို့ကို စုရုံးစေလော့။ ငါသည်သူတို့အားရေပေး မည်'' ဟုမိန့်တော်မူ၏။-
ಅವರು ಅಲ್ಲಿಂದ ಬೇರ್ ಎಂಬಲ್ಲಿಗೆ ಬಂದರು. ಯೆಹೋವ ದೇವರು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು,” ಎಂದು ಯೆಹೋವ ದೇವರು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯನ್ನು ಕುರಿತೇ.
17 ၁၇ ထိုအခါဣသရေလအမျိုးသားတို့စပ်ဆို ကြသောသီချင်းသည်ကား၊- ``ရေတွင်းတို့ရေထွက်ကြလော့။ ငါတို့သည်သီချင်းဆို၍ကြိုဆိုမည်။
ಆಗ ಇಸ್ರಾಯೇಲರು ಈ ಹಾಡನ್ನು ಹಾಡಿದರು: “ಬಾವಿಯೇ, ಉಕ್ಕು, ಜನರೇ, ಅದರ ಬಗ್ಗೆ ನೀವು ಹಾಡಿರಿ.
18 ၁၈ မင်းညီမင်းသားနှင့်ခေါင်းဆောင်တို့တူးဖော် သော ရေတွင်း၊ရာဇလှံတံနှင့်တောင်ဝှေးများဖြင့် တူးဖော်သောရေတွင်းပေတည်း'' ဟူ၍ဖြစ် သည်။ သူတို့သည်ထိုတောကန္တာရမှမတ္တနာစခန်း သို့လည်းကောင်း၊-
ಪ್ರಭುಗಳು ಈ ಬಾವಿಯನ್ನು ಅಗೆದರು. ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು.” ಆಮೇಲೆ ಅವರು ಮರುಭೂಮಿಯಿಂದ ಮತ್ತಾನಕ್ಕೆ ಬಂದರು.
19 ၁၉ ထိုမှတစ်ဖန်နဟာလျေလစခန်းသို့လည်း ကောင်း၊ နဟာလျေလစခန်းမှဗာမုတ်စခန်း သို့လည်းကောင်း၊-
ಇದಲ್ಲದೆ ಅವರು ಮತ್ತಾನದಿಂದ ನಹಲಿಯೇಲಕ್ಕೆ ಬಂದರು. ನಹಲಿಯೇಲದಿಂದ ಬಾಮೋತಿಗೆ ಬಂದರು.
20 ၂၀ ဗာမုတ်စခန်းမှသဲကန္တာရကိုမျက်နှာမူနေသော ပိသဂါတောင်ခြေရှိမောဘချိုင့်ဝှမ်းသို့လည်း ကောင်းခရီးဆက်ကြလေသည်။
ಬಾಮೋತಿನಿಂದ ಮೋವಾಬ್ ದೇಶದಲ್ಲಿರುವ ಕಣಿವೆಯಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಮರಳುಗಾಡು ಕಾಣಿಸುತ್ತದೆ.
21 ၂၁ ဣသရေအမျိုးသားတို့သည် အာမောရိဘုရင် ရှိဟုန်ထံသို့သံတမန်များစေလွှတ်လျက်၊-
ಆಗ ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,
22 ၂၂ ``အကျွန်ုပ်တို့အားမင်းကြီး၏ပြည်ကိုဖြတ် သွားခွင့်ပြုပါ။ အကျွန်ုပ်တို့နှင့်အကျွန်ုပ်တို့ ၏သိုးနွားတိရစ္ဆာန်တို့သည် လမ်းမကြီးအတိုင်း သွားပါမည်။ မင်းကြီး၏လယ်ယာများနှင့် စပျစ်ဥယျာဉ်များကိုဖြတ်ကျော်သွားမည် မဟုတ်ပါ။ မင်းကြီး၏ရေတွင်းများမှရေကို လည်းမသောက်ပါ။ အကျွန်ုပ်တို့သည်မင်းကြီး ၏နယ်မြေမှထွက်သည်အထိ လမ်းမကြီး အတိုင်းဖြတ်သွားပါမည်'' ဟူ၍အခွင့် တောင်းစေ၏။-
“ನಾವು ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಯಾವುದೇ ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ, ಬಾವಿಯ ನೀರನ್ನು ಕುಡಿಯದೆ, ನಿನ್ನ ದೇಶವನ್ನು ದಾಟುವವರೆಗೆ ರಾಜಮಾರ್ಗದಲ್ಲಿಯೇ ಹೋಗುತ್ತೇವೆ,” ಎಂದು ಬೇಡಿಕೊಂಡರು.
23 ၂၃ သို့ရာတွင်ရှိဟုန်ဘုရင်သည်ဣသရေလ အမျိုးသားတို့အား မိမိ၏ပြည်ကိုဖြတ် သန်းခွင့်မပေးချေ။ သူသည်တောကန္တာရရှိ ယာဟတ်မြို့သို့စစ်ချီလာပြီးလျှင် ဣသရေလ အမျိုးသားတို့ကိုတိုက်ခိုက်လေသည်။-
ಆದರೆ ಸೀಹೋನನು ಇಸ್ರಾಯೇಲರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ, ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು, ಇಸ್ರಾಯೇಲರನ್ನು ಎದುರಿಸಲು ಮರುಭೂಮಿಗೆ ಹೊರಟನು. ಅವನು ಯಹಚಕ್ಕೆ ಬಂದು ಇಸ್ರಾಯೇಲರ ಸಂಗಡ ಯುದ್ಧಮಾಡಿದನು.
24 ၂၄ သို့ရာတွင်ဣသရေလအမျိုးသားတို့သည်ရန် သူများစွာတို့ကို တိုက်ပွဲ၌ကျဆုံးစေပြီးလျှင် အာနုန်မြစ်မှမြောက်ဘက်အမ္မုန်ပြည်နယ်စပ် ယဗ္ဗုတ်မြစ်တိုင်အောင် ရှိဟုန်ဘုရင်၏နယ်မြေ များကိုသိမ်းယူကြလေသည်။ အမ္မုန်ပြည် နယ်စပ်တိုင်အောင်သာချီတက်နိုင်ခြင်းမှာ ထိုနယ်စပ်ကိုခိုင်ခံ့စွာကာကွယ်ထားခြင်း ကြောင့်ဖြစ်သည်။-
ಆದರೆ ಇಸ್ರಾಯೇಲರು ಅವನನ್ನು ಖಡ್ಗದಿಂದ ಹೊಡೆದು, ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೆ ಅಮ್ಮೋನನ ಮಕ್ಕಳ ಮೇರೆಯವರೆಗೂ ಸ್ವಾಧೀನಪಡಿಸಿಕೊಂಡರು. ಏಕೆಂದರೆ ಅಮ್ಮೋನನ ಮಕ್ಕಳ ಮೇರೆಯು ಬಲಿಷ್ಠವಾಗಿತ್ತು.
25 ၂၅ ဤနည်းအားဖြင့်ဣသရေလအမျိုးသားတို့ သည် ဟေရှဘုန်မြို့နှင့်ပတ်ဝန်းကျင်ရှိမြို့များ အပါအဝင် အာမောရိအမျိုးသားတို့၏မြို့ အားလုံးကိုသိမ်းပိုက်၍ ထိုမြို့များတွင်နေ ထိုင်ကြလေသည်။-
ಇಸ್ರಾಯೇಲರು ಆ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಇಸ್ರಾಯೇಲರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
26 ၂၆ ဟေရှဘုန်မြို့သည်ကားရှိဟုန်ဘုရင်နန်းစိုက် သောမြို့တော်ဖြစ်သည်။ ရှိဟုန်ဘုရင်၏ပိုင်နက် မှာအာနုန်မြစ်တိုင်အောင်ကျယ်ပြန့်သော ယခင် မောဘပြည်ဘုရင်ပိုင်နက်ဖြစ်သည်။ ထိုနယ်မြေ ကိုရှိဟုန်ဘုရင်ကတိုက်ခိုက်သိမ်းယူခဲ့ခြင်း ဖြစ်သည်။-
ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು. ಅವನು ಮೋವಾಬ್ ದೇಶದ ಹಿಂದಿನ ಅರಸನ ಸಂಗಡ ಯುದ್ಧಮಾಡಿ, ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯವರೆಗೂ ಅವನಿಂದ ವಶಪಡಿಸಿಕೊಂಡಿದ್ದನು.
27 ၂၇ သို့ဖြစ်၍ကဗျာဆရာတို့က၊ ``ရှိဟုန်ဘုရင်၏မြို့တော်ဟေရှဘုန်မြို့သို့ လာကြလော့။ ငါတို့သည်ထိုမြို့ကိုအသစ်တစ်ဖန်တည်ကြ ကုန်စို့။
ಇದರ ಬಗ್ಗೆ ಕವಿಗಳು ಹೀಗೆಂದು ಹಾಡಿದ್ದಾರೆ: “ಹೆಷ್ಬೋನಿಗೆ ಬನ್ನಿರಿ ಅದನ್ನು ತಿರುಗಿ ಕಟ್ಟಬೇಕು. ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆ ಮಾಡಬೇಕು.
28 ၂၈ တစ်ခါကရှိဟုန်ဘုရင်၏တပ်သည်ဟေရှဘုန် မြို့မှ ထွက်သောမီးလျှံကဲ့သို့ချီတက်၍ မောဘပြည်အာရမြို့ကိုဖျက်ဆီးလျက် အာနုန်မြစ် အထက်ပိုင်းရှိတောင်များကိုလောင်ကျွမ်းစေ၏။
“ಏಕೆಂದರೆ ಬೆಂಕಿ ಹೆಷ್ಬೋನಿನಿಂದಲೂ, ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು, ಮೋವಾಬಿನ ಆರ್ ಎಂಬ ಪಟ್ಟಣವನ್ನೂ, ಅರ್ನೋನ್ ಹೊಳೆಯ ಬಳಿಯಲ್ಲಿರುವ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
29 ၂၉ မောဘပြည်သားတို့သင်တို့သည်အလွန် ဆင်းရဲဒုက္ခရောက်ကြရပါပြီတကား။ ခေမုရှဘုရားကိုကိုးကွယ်သောအသင်တို့ ပျက်စီးရကြလေပြီ။ သင်တို့၏ဘုရားများသည်သင်တို့၏အမျိုး သားများကို စစ်ပြေးဒုက္ခသည်များဖြစ်စေ၍၊ အမျိုးသမီးများကိုအာမောရိဘုရင်၏ သုံ့ပန်းများဖြစ်စေ၏။
ಮೋವಾಬೇ, ನಿನಗೆ ದಿಕ್ಕಾರ! ಕೆಮೋಷಿನ ಜನವೇ ನಿಮಗೆ ದುರ್ಗತಿ ಉಂಟಾಯಿತಲ್ಲಾ! ಅವನು ತನ್ನ ಪುತ್ರರನ್ನು ದೇಶಭ್ರಷ್ಟರನ್ನಾಗಿಯೂ ತನ್ನ ಪುತ್ರಿಯರನ್ನು ಸೆರೆಯವರನ್ನಾಗಿಯೂ ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಒಪ್ಪಿಸಿಕೊಟ್ಟನು.
30 ၃၀ သို့ဖြစ်၍သူတို့၏အဆက်အနွယ်တို့သည် ဟေရှဘုန်မြို့မှဒိဘုန်မြို့သို့လည်းကောင်း၊ နာရှင်မြို့မှမေဒဘမြို့အနီးနောဖာမြို့သို့ လည်းကောင်း၊ ဖျက်ဆီးသုတ်သင်ခြင်းခံရလေပြီ'' ဟူ၍ စပ်ဆိုကြ၏။
“ನಾವು ಅವರನ್ನು ಪದಚ್ಚುತಿಗೊಳಿಸಿದೆವು. ಹೆಷ್ಬೋನು ದೀಬೋನಿನವರೆಗೂ ನಾಶವಾಯಿತು. ನಾವು ಅವರನ್ನು ಮೇದೆಬಾಕ್ಕೆ ಮುಟ್ಟುವ ನೋಫಹದ ತನಕ ಹಾಳುಮಾಡಿದೆವು.”
31 ၃၁ သို့ဖြစ်၍ဣသရေလအမျိုးသားတို့သည် အာမောရိပြည်တွင်အခြေချနေထိုင်ကြ လေသည်။-
ಹೀಗೆ ಇಸ್ರಾಯೇಲರು ಅಮೋರಿಯರ ದೇಶದಲ್ಲಿ ವಾಸಮಾಡಿದರು.
32 ၃၂ မောရှေသည်ယာဇာမြို့ကိုမတိုက်ခိုက်မီ လူကို စေလွှတ်၍ထောက်လှမ်းစေ၏။ ဣသရေလအမျိုး သားတို့သည်ထိုမြို့နှင့်တကွ ပတ်ဝန်းကျင်ရှိမြို့ များကိုတိုက်ခိုက်သိမ်းပိုက်သဖြင့် အာမောရိ အမျိုးသားတို့သည်ထိုမြို့များမှထွက်ပြေး ကြ၏။
ಇದಲ್ಲದೆ ಮೋಶೆಯು ಯಜ್ಜೇರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದನು. ಅವರು ಅವರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿರುವ ಅಮೋರಿಯರನ್ನು ಹೊರಡಿಸಿಬಿಟ್ಟರು.
33 ၃၃ ထိုနောက်ဣသရေလအမျိုးသားတို့သည် ဗာရှန် ပြည်ကိုဦးတည်ချီတက်ကြလေသည်။ ထိုအခါ ဗာရှန်ပြည်ဘုရင်သြဃသည်စစ်ချီ၍ ဣသ ရေလအမျိုးသားတို့ကိုဧဒြိအရပ်တွင် တိုက်ခိုက်လေသည်။-
ಅವರು ತಿರುಗಿ ಬಾಷಾನಿನ ಹಾದಿ ಏರಿದರು. ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವುದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.
34 ၃၄ ထာဝရဘုရားကမောရှေအား``သူ့ကိုမ ကြောက်နှင့်။ သူနှင့်တကွပြည်သူပြည်သား အပေါင်းတို့ကိုလည်းကောင်း၊ သူ၏ပြည်ကို လည်းကောင်းသင့်လက်၌ငါအပ်ပေးမည်။ သင်သည်ဟေရှဘုန်မြို့တွင်စိုးစံသော အာ မောရိဘုရင်ရှိဟုန်အားပြုသကဲ့သို့သူ့ အားပြုလော့'' ဟုမိန့်တော်မူ၏။-
ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಅವನಿಗೆ ಭಯಪಡಬೇಡ, ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.
35 ၃၅ ထိုကြောင့်ဣသရေလအမျိုးသားတို့သည် သြဃဘုရင်နှင့်သူ၏သားများအပါအဝင် တိုင်းသူပြည်သားတို့ကိုတစ်ယောက်မကျန် သုတ်သင်သတ်ဖြတ်ပြီးနောက်တိုင်းပြည်ကို သိမ်းပိုက်လေသည်။
ಈ ಪ್ರಕಾರ ಅವರು ಅವನನ್ನೂ ಅವನ ಮಕ್ಕಳನ್ನೂ ಅವನ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು, ಅವನ ದೇಶವನ್ನು ವಶಮಾಡಿಕೊಂಡರು.