< ဇာခရိ 11 >
1 ၁ အို လေဗနုန်တောင်၊ သင်၏သစ်ကတိုးပင်များသည် မီးသင့်လောင်၍သွားနိုင်ရန်သင်၏တံခါးတို့ကို ဖွင့်ပါလော့။
ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ, ನಿನ್ನ ಬಾಗಿಲುಗಳನ್ನು ತೆರೆ.
2 ၂ အို ထင်းရှူးပင်တို့ငိုကြွေးမြည်တမ်းကြလော့။ သစ်ကတိုးပင်များသည်ပြိုလဲကြလေပြီ။ ကြက်သရေဆောင်သည့်ထိုအပင်တို့သည် ပျက်ပြုန်း၍သွားလေပြီ။ အို ဗာရှန်ဝက်သစ်ချပင်တို့ငိုကြွေး မြည်တမ်းကြလော့။ ထူထပ်သည့်သစ်တောကိုခုတ်လှဲလိုက်ကြ လေပြီ။
ತುರಾಯಿ ಗಿಡವೇ, ಗೋಳಾಡು. ಏಕೆಂದರೆ ದೇವದಾರು ಬಿದ್ದುಹೋಯಿತು. ಭವ್ಯವಾದ ಮರಗಳು ಹಾಳಾದವು. ಬಾಷಾನಿನ ಅಲ್ಲೋನ್ ಮರಗಳೇ, ಗೋಳಾಡಿರಿ. ದಟ್ಟವಾದ ಅಡವಿಯು ಕಡಿಯಲಾಗಿದೆ.
3 ၃ ဘုရင်မင်းတို့သည်ဝမ်းနည်းကြေကွဲလျက် ငိုကြွေးကြ၏။ သူတို့၏ဘုန်းအသရေကားကွယ်ပျောက် သွားလေပြီ။ ခြင်္သေ့များ၏ဟောက်သံကိုနားထောင် ကြလော့။ သူတို့ခိုအောင်းရာယော်ဒန်မြစ်ဝှမ်းရှိ သစ်တောသည်ကားပျက်ပြုန်း၍သွားလေပြီ။
ಕುರುಬರ ಗೋಳಾಟವನ್ನು ಕೇಳಿರಿ, ಅವರ ಸೊಂಪಾದ ಹುಲ್ಲುಗಾವಲುಗಳು ಹಾಳಾಗಿವೆ ಪ್ರಾಯದ ಸಿಂಹಗಳು ಗರ್ಜಿಸುವ ಶಬ್ದ ಕೇಳಿಸುತ್ತಿದೆ, ಯೊರ್ದನಿನ ದಟ್ಟವಾದ ಪೊದೆಗಳು ನಾಶವಾಗಿವೆ.
4 ၄ ငါ၏ဘုရားသခင်ထာဝရဘုရားကငါ့ အား``သင်သည်သတ်ရန်လျာထားသည့်သိုး စုမှသိုးထိန်းကဲ့သို့ပြုမူလော့။-
ನನ್ನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಹತ್ಯೆಗಾಗಿ ಗುರುತಿಸಲಾಗಿರುವ ಮಂದೆಯನ್ನು ಮೇಯಿಸು.
5 ၅ သိုးရှင်များသည်ထိုသိုးတို့ကိုသတ်ဖြတ် ကြသော်လည်း အဘယ်သို့မျှအပြစ်မသင့် ကြ။ သူတို့သည်သိုးသားကိုရောင်းပြီး လျှင်`ငါတို့ကားချမ်းသာကြွယ်ဝလာလေ ပြီ။ ထာဝရဘုရားသည်မင်္ဂလာရှိတော်မူ စေသတည်း။' သိုးထိန်းများပင်လျှင်မိမိ တို့၏သိုးများကိုသနားဖော်မရကြဟု ဆိုကြ၏'' ဟူ၍မိန့်တော်မူ၏။
ಅವುಗಳನ್ನು ಕೊಂಡುಕೊಳ್ಳುವವರು, ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ. ಅವುಗಳನ್ನು ಮಾರುವವರು, ‘ನಾನು ಐಶ್ವರ್ಯವಂತನಾದೆನು, ಯೆಹೋವ ದೇವರಿಗೆ ಸ್ತೋತ್ರ,’ ಎಂದೆನ್ನುತ್ತಾರೆ. ಅವರ ಸ್ವಂತ ಕುರುಬರೂ ಅವುಗಳನ್ನು ಕನಿಕರಿಸುವುದಿಲ್ಲ.
6 ၆ (ထာဝရဘုရားက၊``ငါသည်ကမ္ဘာမြေကြီး ပေါ်တွင်အဘယ်သူ့ကိုမျှသနားတော့မည် မဟုတ်ပါ။ ငါကိုယ်တိုင်ပင်လူအပေါင်းတို့ ကို သူတို့၏ဘုရင်များ၏လက်သို့ပေးအပ် မည်။ ထိုဘုရင်တို့သည်ကမ္ဘာမြေကြီးကို ပျက်ပြုန်းစေကြမည်ဖြစ်သော်လည်း ငါ သည်ကယ်တင်ပေးလိမ့်မည်မဟုတ်'' ဟု မိန့်တော်မူ၏။)
ಏಕೆಂದರೆ ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೆ ನಾನು ಒಬ್ಬೊಬ್ಬನನ್ನು ಅವನವನ ನೆರೆಯವನ ಕೈಗೂ, ಅವನ ಅರಸನ ಕೈಗೂ ಒಪ್ಪಿಸುವೆನು. ಅವರು ದೇಶವನ್ನು ಧ್ವಂಸಮಾಡುವರು. ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವುದಿಲ್ಲ.”
7 ၇ သိုးရောင်းဝယ်သူတို့ကငါ့ကိုငှားရမ်းသ ဖြင့်ငါသည်နှိပ်စက်ခြင်းခံရသောသိုးတို့ ကို ထိန်းကျောင်းရသူဖြစ်လာလေသည်။ ``ကျေး ဇူးပြုခြင်း'' ဟုနာမည်တွင်သောသိုးထိန်း တောင်ဝှေးတစ်ချောင်းနှင့်``စည်းလုံးခြင်း'' ဟု နာမည်တွင်သောသိုးထိန်းတောင်ဝှေးတစ် ချောင်းကိုယူပြီးလျှင်သိုးအုပ်ကိုငါ ထိန်းကျောင်းရ၏။-
ಆಗ ಹತ್ಯೆಗಾಗಿ ಗುರುತಿಸಲಾಗಿರುವ ಮಂದೆಯನ್ನು, ವಿಶೇಷವಾಗಿ ಬಡವಾದ ಮಂದೆಯನ್ನು ಮೇಯಿಸಿದೆನು. ನಾನು ಎರಡು ಕೋಲುಗಳನ್ನು ತೆಗೆದುಕೊಂಡೆನು. ಒಂದಕ್ಕೆ “ಕೃಪೆ” ಎಂದೂ ಮತ್ತೊಂದಕ್ಕೆ “ಐಕ್ಯ” ಎಂದು ಹೆಸರಿಟ್ಟೆನು. ಹೀಗೆ ಮಂದೆಯನ್ನು ಮೇಯಿಸಿದೆನು.
8 ၈ ငါသည်မိမိအားမုန်းသည့်သိုးထိန်းသုံး ယောက်ကိုသည်းမခံနိုင်သဖြင့် သူတို့ အားတစ်လတည်းတွင်ဖယ်ရှားပစ်လိုက်၏။-
ಇದಲ್ಲದೆ, ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು. ಮಂದೆಯು ನನ್ನನ್ನು ಅಸಹ್ಯಪಡಿಸಿತು, ಮತ್ತು ಅವುಗಳಿಂದ ನನಗೆ ಬೇಸರವಾಯಿತು.
9 ၉ ထိုနောက်ငါ၏သိုးအုပ်အား``ငါသည်သင် တို့၏သိုးထိန်းမလုပ်လိုတော့ပါ၊ သေရ မည့်သိုးတို့သည်သေကြပါလေစေ။ အသတ် ခံရမည့်သိုးများသည်လည်းအသတ်ခံရ ကြပါလေစေ။ အသက်မသေဘဲကျန်ရှိ သည့်သိုးများသည်လည်း မိမိတို့အချင်း ချင်းသတ်ဖြတ်ကြပါလိမ့်မည်'' ဟုပြော ဆို၏။-
ಆಗ ನಾನು, “ನಾನು ನಿಮ್ಮನ್ನು ಮೇಯಿಸುವುದಿಲ್ಲ, ಸಾಯುವಂಥದ್ದು ಸಾಯಲಿ, ಕೆಡುವಂಥದ್ದು ಕೆಡಲಿ, ಮಿಕ್ಕಾದವುಗಳು ಒಂದರ ಮಾಂಸವನ್ನು ಒಂದು ತಿನ್ನಲಿ,” ಎಂದು ಹೇಳಿದೆನು.
10 ၁၀ ထိုနောက်ငါသည်လူမျိုးတကာတို့နှင့် ထာဝရဘုရားပြုတော်မူခဲ့သည့်ပဋိ ညာဉ်တော်ကိုဖျက်သိမ်းသည့်အနေဖြင့်``ကျေး ဇူးပြုခြင်း'' နာမည်တွင်သောတောင်ဝှေး ကိုယူ၍ချိုးပစ်လိုက်လေသည်။-
ಆಗ “ಕೃಪೆ” ಎಂಬ ನನ್ನ ಕೋಲನ್ನು ತೆಗೆದುಕೊಂಡು ಅದನ್ನು ಮುರಿದುಬಿಟ್ಟೆನು. ಹೀಗೆ ಎಲ್ಲಾ ಜನಾಂಗಗಳ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ರದ್ದುಗೊಳಿಸಿದೆನು.
11 ၁၁ ဤသို့လျှင်ပဋိညာဉ်တော်သည်ထိုနေ့၌ ပျက်ပြား၍သွားလေတော့၏။ သိုးများ ကိုဝယ်ယူရောင်းချသူတို့သည်ငါ့အား စောင့်၍ကြည့်နေကြ၏။ သူတို့သည်ငါ၏ အပြုအမူအားဖြင့်ထာဝရဘုရားဗျာ ဒိတ်ပေးတော်မူလျက်ရှိကြောင်းကိုသိ ကြ၏။-
ಅದೇ ದಿವಸದಲ್ಲಿ ಅದು ರದ್ದುಗೊಂಡಿತು. ಆಗ ನನ್ನನ್ನು ನೋಡಿಕೊಳ್ಳುತ್ತಿದ್ದ ಬಡ ಕುರಿ ಮಂದೆಯು, ಅದು ಯೆಹೋವ ದೇವರ ವಾಕ್ಯವೆಂದು ತಿಳಿದುಕೊಂಡಿತು.
12 ၁၂ ငါကသူတို့အား``သင်တို့ပေးလိုလျှင်ငါ၏ လုပ်အားခကိုပေးကြလော့။ မပေးလိုလျှင် လည်းနေကြတော့'' ဟုပြော၏။ သို့ဖြစ်၍သူ တို့သည်ငါ့လုပ်အားခအဖြစ်ငွေစသုံး ဆယ်ကိုပေးကြ၏။
ನಾನು ಅವರಿಗೆ, “ಇದು ನಿಮ್ಮ ಕಣ್ಣುಗಳಲ್ಲಿ ಒಳ್ಳೆಯದಾಗಿ ತೋರಿದರೆ, ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ,” ಎಂದೆನು. ಆಗ ಅವರು ನನಗೆ ಸಂಬಳವಾಗಿ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು.
13 ၁၃ ထာဝရဘုရားကငါ့အား``ထိုငွေများ ကိုဗိမာန်တော်ဘဏ္ဍာတိုက်ထဲသို့ထည့်လိုက် လော့'' ဟုမိန့်တော်မူသည့်အတိုင်းငါသည် မိမိ၏တန်ဖိုးအဖြစ်သူတို့အကဲဖြတ် သည့်မြောက်မြားလှသောငွေစသုံးဆယ် ကိုယူ၍ဗိမာန်တော်ဘဏ္ဍာတိုက်ထဲသို့ထည့် လိုက်လေသည်။-
ಆಗ ಯೆಹೋವ ದೇವರು ನನಗೆ, “ಅದನ್ನು ಕುಂಬಾರನಿಗೆ ಎಸೆ. ಅವರು ನನಗೆ ಕಟ್ಟಿದ ಬೆಲೆ ಸರಿಯಾಗಿದೆ,” ಎಂದನು. ಆಗ ನಾನು, ಆ ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಯೆಹೋವ ದೇವರ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಎಸೆದೆನು.
14 ၁၄ ထိုနောက်ငါသည်``စည်းလုံးခြင်း'' နာမည်တွင် သောတောင်ဝှေးကိုချိုးပစ်လိုက်၏။ ထိုအခါ ယုဒပြည်နှင့်ဣသရေလပြည်စည်းလုံးမှု သည်ပျက်ပြား၍သွားလေတော့၏။
ಆಗ ನನ್ನ ಎರಡನೆಯ ಕೋಲಾದ “ಐಕ್ಯ” ಎಂಬುದನ್ನು ಮುರಿದುಬಿಟ್ಟೆನು. ಹೀಗೆ ಯೆಹೂದಕ್ಕೂ, ಇಸ್ರಾಯೇಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.
15 ၁၅ ထာဝရဘုရားကငါ့အား``သင်သည်နောက် တစ်ကြိမ်သိုးထိန်းကဲ့သို့ပြုမူပြန်ဦးလော့။ ယခုအကြိမ်၌သိုးထိန်းမိုက်ကဲ့သို့ဖြစ်၏။-
ಯೆಹೋವ ದೇವರು ನನಗೆ, “ಇನ್ನು ಬುದ್ಧಿಹೀನವಾದ ಕುರುಬನ ಆಯುಧಗಳನ್ನು ತೆಗೆದುಕೋ.
16 ၁၆ ငါသည်မိမိ၏သိုးစုအတွက်သိုးထိန်းတစ် ဦးကိုခန့်ထားခဲ့သော်လည်း သူသည်သေဘေး တွေ့သည့်သိုးများကိုမကူညီ။ ပျောက်သည့် သိုးများကိုမရှာဖွေ။ အနာရသည့်သိုးများ ကိုမကုသ။ မသေဘဲကျန်ရှိနေသောသိုး များကိုလည်းမကျွေးမွေး။ ယင်းသို့ပြုမည့် အစားသူသည်အဆူဖြိုးဆုံးသောသိုးတို့ ၏အသားကိုစား၏။ သူတို့၏ခွာများကို လည်းချွတ်ပစ်၏။-
ಏಕೆಂದರೆ ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು. ಅವನು ಕಳೆದುಹೋದ ಕುರಿಗಳ ಬಗ್ಗೆ ಕಾಳಜಿವಹಿಸುವುದಿಲ್ಲ ಮತ್ತು ಪ್ರಾಯದ ಕುರಿಗಳನ್ನು ಹುಡುಕುವುದಿಲ್ಲ, ಗಾಯಗೊಂಡದ್ದನ್ನು ಅವನು ಗುಣ ಮಾಡುವುದಿಲ್ಲ, ಇನ್ನೂ ಆರೋಗ್ಯದಿಂದಿರುವುದನ್ನು ಅವನು ಪೋಷಿಸುವುದಿಲ್ಲ. ಆದರೆ ಕೊಬ್ಬಿದವುಗಳ ಮಾಂಸವನ್ನು ತಿನ್ನುವನು. ಅವುಗಳ ಗೊರಸುಗಳನ್ನು ಮುರಿದು ಬಿಡುವನು.
17 ၁၇ တန်ဖိုးမရှိသောသိုးထိန်းမိုက်သည်အမင်္ဂ လာရှိ၏။ သူသည်မိမိ၏သိုးစုကိုစွန့်ပစ် ထားလေပြီ။ စစ်မက်ဘေးဒဏ်ကြောင့်သူ၏ လက်ရုံးနှင့်ညာမျက်စိသည်ပျက်ပြုန်း၍ သွားလိမ့်မည်။ သူ့၏ညာလက်ရုံးသည်ရှုံ့တွ တွန့်လိမ်လျက်၊ ညာမျက်စိသည်လည်းအလင်း ကွယ်၍သွားလိမ့်မည်'' ဟုမိန့်တော်မူ၏။
“ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಕಷ್ಟ! ಖಡ್ಗವು ಅವನ ತೋಳಿನ ಮೇಲೆಯೂ, ಅವನ ಬಲಗಣ್ಣಿನ ಮೇಲೆಯೂ ಇರುವುದು. ಅವನ ತೋಳು ಪೂರ್ತಿಯಾಗಿ ಒಣಗುವುದು. ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವುದು.”