< ၄ ဓမ္မရာဇဝင် 3 >

1 ယုဒရှင်ဘုရင်ယောရှဖတ်နန်းစံဆယ်ရှစ်နှစ် တွင်၊ အာဟပ်သား ယောရံသည်ရှမာရိမြို့၌ မင်းပြု၍ ဣသရေလနိုင်ငံကို စိုးစံ၏။
ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರ್ಷ ಆಳಿದನು.
2 ထိုမင်းသည် ထာဝရဘုရားရှေ့တော်၌ ဒုစရိုက် ကို ပြု၏။ သို့ရာတွင် မိဘကဲ့သို့မပြု။ ခမည်းတော်လုပ် သော ဗာလရုပ်တုကို ပယ်ရှား၏။
ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.
3 သို့သော်လည်း ဣသရေလအမျိုးကို ပြစ်မှားစေ သော နေဗတ်၏သား ယေရောဗောင်ပြုသော ဒုစရိုက် အပြစ်ကို မရှောင်မှီဝဲ၏။
ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.
4 မောဘမင်းကြီး မေရှာသည် သိုးထိန်းကြီး ဖြစ်၍၊ ဣသရေလရှင်ဘုရင်အား သိုးသငယ်တသိန်းနှင့် အမွေး ပါသော သိုးထီးတသိန်းကို ဆက်ရ၏။
ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.
5 အာဟပ်သေသောအခါ၊ မောဘမင်းကြီးသည် ဣသရေလရှင်ဘုရင်ကို ပုန်ကန်လေ၏။
ಆದರೆ ಅಹಾಬನು ಮರಣಹೊಂದಿದ ನಂತರ ಮೋವಾಬ್ಯರ ಅರಸನು ಇಸ್ರಾಯೇಲರ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.
6 ထိုအခါ ယောရံမင်းကြီးသည် ရှမာရိမြို့ထဲက ထွက်၍ ဣသရေလအမျိုးသားအပေါင်းတို့ကို စာရင်း ယူ၏။
ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು ಸಮಾರ್ಯದಿಂದ ಹೊರಟು ಬಂದನು.
7 ယုဒရှင်ဘုရင် ယောရှဖတ်ထံသို့ လူကိုစေလွှတ် ၍၊ မောဘမင်း ကြီးသည် ငါ့ကိုပုန်ကန်ပြီ။ မောဘပြည်ကို စစ်တိုက်ခြင်းငှါ ငါနှင့်အတူ လိုက်မည်လောဟု မေးလျှင်၊ ယောရှဖတ်က ငါလိုက်မည်။ ငါသည် မင်းကြီး ကဲ့သို့ ဖြစ်၏။ ငါ့လူတို့သည် မင်းကြီး၏ လူကဲ့သို့၎င်း၊ ငါ့မြင်းတို့သည် မင်းကြီး၏ မြင်းကဲ့သို့၎င်း ဖြစ်ကြသည်ဟု ပြန်ပြော၏။
ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು.
8 အဘယ်လမ်းဖြင့် စစ်ချီရမည်နည်းဟုမေးသော်၊ ဧဒုံတောလမ်းဖြင့် ချီရမည်ဟုပြန်ပြော၏။
ಮತ್ತೆ ಯೆಹೋಷಾಫಾಟನು, “ಯಾವ ಮಾರ್ಗವಾಗಿ ಹೋಗಬೇಕು?” ಎಂದು ವಿಚಾರಿಸಿದಾಗ ಯೋರಾಮನು, “ಎದೋಮ್ಯರ ಅರಣ್ಯ ಮಾರ್ಗವಾಗಿ” ಎಂದನು.
9 ထိုသို့ဣသရေလရှင်ဘုရင်၊ ယုဒရှင်ဘုရင်၊ ဧဒုံ ရှင်ဘုရင်တို့သည် ဝိုင်း၍ခုနှစ်ရက် ခရီးသွားကြ၏။ ဗိုလ်ခြေများ သောက်စရာ၊ ပါသော တိရစ္ဆာန် များသောက်စရာ ရေမရှိ။
ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು.
10 ၁၀ ဣသရေလရှင်ဘုရင်က၊ ခက်လှပြီ။ ထာဝရ ဘုရားသည် ဤရှင် ဘုရင်သုံးပါးတို့ကို မောဘလူတို့ လက်သို့အပ်ခြင်းငှါ စုဝေးစေတော်မူသည်တကားဟု ဆို၏။
೧೦ಇಸ್ರಾಯೇಲರ ಅರಸರು, “ಅಯ್ಯೋ, ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ” ಎಂದು ಗೋಳಾಡಿದರು.
11 ၁၁ ယောရှဖတ်ကလည်း၊ ထာဝရဘုရား၌ မေး လျှောက်မည်အကြောင်း၊ ထာဝရဘုရား၏ ပရောဖက် တယောက်မျှမရှိသလောဟုမေးလျှင်၊ ဣသရေလ ရှင်ဘုရင်၏ ကျွန်တယောက်က၊ ဧလိယလက်ထောက် ရှာဖတ်သားဧလိရှဲရှိပါ၏ဟု လျှောက်သော်၊
೧೧ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.
12 ၁၂ ယောရှဖတ်က၊ ထာဝရဘုရား၏နှုတ်ကပတ် တော်သည် သူ၌ရှိတော်မူသည်ဟုဆိုလျက်၊ ရှင်ဘုရင် သုံးပါးတို့သည် ဧလိရှဲထံသို့သွားကြ၏။
೧೨ಯೆಹೋಷಾಫಾಟನು, “ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು” ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.
13 ၁၃ ဧလိရှဲသည် ဣသရေလရှင်ဘုရင်အားလည်း၊ ငါသည်သင်နှင့် အဘယ်သို့ ဆိုင်သနည်း။ သင့်အဘ၏ ပရောဖက်၊ သင့်အမိ၏ ပရောဖက်တို့ထံသို့ သွားလော့ဟု ဆိုလျှင်၊ ဣသရေလရှင်ဘုရင်က၊ မဆိုပါနှင့်။ ထာဝရ ဘုရားသည် ဤရှင်ဘုရင်သုံးပါးတို့ကို မောဘလူတို့ လက်သို့ အပ်ခြင်းငှါ စုဝေးစေတော်မူသည်တကားဟု ဆိုသော်၊
೧೩ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.
14 ၁၄ ဧလိရှဲက၊ ငါကိုးကွယ်သော ကောင်းကင်ဗိုလ် ခြေအရှင် ထာဝရဘုရား အသက်ရှင်တော်မူသည် အတိုင်း၊ အကယ်၍ ယုဒရှင်ဘုရင်ယောရှဖတ်၏ မျက်နှာ ကို ငါမထောက်လျှင်၊ သင့်ကို ငါမကြည့်မမြင်လို။
೧೪ಆಗ ಎಲೀಷನು, “ನಾನು ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿರಲಿಲ್ಲ. ನಿನ್ನನ್ನು ಲಕ್ಷಿಸುತ್ತಲೂ ಇರಲಿಲ್ಲ.
15 ၁၅ စောင်းသမားကို ခေါ်ခဲ့ဟုဆို၍ စောင်းသမား သည် တီးသော အခါ၊ ထာဝရဘုရား၏ လက်တော်သည် ဧလိရှဲအပေါ်သို့ ရောက်၍၊
೧೫ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.
16 ၁၆ ထာဝရဘုရားမိန့်တော်မူသည်ကား၊ ဤချိုင့်ပတ် လည်၌ ဆယ်ပေါင်းတို့ကို လုပ်ကြလော့။
೧೬ಅನಂತರ ಎಲೀಷನು ಇಸ್ರಾಯೇಲರ ಅರಸನಿಗೆ, ಯೆಹೋವನು ಹೀಗೆ ಹೇಳುತ್ತಾನೆ, “ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ.
17 ၁၇ အကြောင်းမူကား၊ သင်တို့နှင့်တိရစ္ဆာန်တို့သည် သောက်စရာဘို့ လေမလာ၊ မိုဃ်းမရွာဘဲ ဤချိုင့်သည် ရေနှင့်ပြည့်လိမ့်မည်။
೧೭‘ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು’ ಎಂಬುದಾಗಿ ಯೆಹೋವನು ಅನ್ನುತ್ತಾನೆ.
18 ၁၈ ထိုအမှုသည် ထာဝရဘုရားရှေ့တော်၌ သာမည အမှုဖြစ်သေး၏။ မောဘလူတို့ကိုလည်း သင်တို့လက်သို့ အပ်တော်မူမည်။
೧೮“ಯೆಹೋವನ ದೃಷ್ಟಿಯಲ್ಲಿ ಈ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.
19 ၁၉ သင်တို့သည် ခိုင်ခံ့ထူးဆန်းသော မြို့ရှိသမျှတို့ကို လုပ်ကြံကြလိမ့်မည်။ အသုံးဝင်သော သစ်ပင်ရှိသမျှတို့ကို ခုတ်လှဲကြလိမ့်မည်။ ရေတွင်းရှိသမျှတို့ကို မြေဖို့ကြလိမ့်မည်။ ကောင်း သော မြေကွက် ရှိသမျှတို့ကို ကျောက်ခဲနှင့် ဖျက်ကြလိမ့် မည်ဟု မိန့်တော်မူ၏။
೧೯ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹಣ್ಣಿನ ಮರಗಳನ್ನೂ ಕಡಿದುಹಾಕಿ, ಒರತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿಸಿ ಹಾಳುಮಾಡುವಿರಿ” ಎಂದು ನುಡಿದನು.
20 ၂၀ နံနက်အချိန် ဘောဇဉ်ပူဇော်သက္ကာကို ပူဇော် သောအခါ၊ ရေသည် ဧဒုံလမ်းဖြင့်လာ၍ တပြည်လုံးကို လွှမ်းလေ၏။
೨೦ಮುಂಜಾನೆ ವೇಳೆಯಲ್ಲಿ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಪಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.
21 ၂၁ ရှင်ဘုရင်တို့သည် စစ်ချီ၍ လာကြောင်းကို မောဘပြည်သားအပေါင်းတို့သည် ကြားသောအခါ၊ လက်နက်ဆောင်သောသူ အကြီးအငယ်ရှိသမျှတို့ကို စုဝေးစေ၍၊ ပြည်စွန်းနားမှာ တပ်ချကြ၏။
೨೧ಅರಸರು ತಮಗೆ ವಿರುದ್ಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬುವುದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲಾ ಯೌವನಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಪ್ರದೇಶಕ್ಕೆ ಬಂದರು.
22 ၂၂ နံနက်စောစောထသောအခါ၊ ရေပေါ်မှာ နေရောင်ထင်၍၊ ပြည် တဘက်၌ ရေသည်အသွေးကဲ့သို့ နီသည်ကို မောဘပြည်သားတို့သည် မြင်ကြလျှင်၊
೨೨ಬೆಳಿಗ್ಗೆ ಎದ್ದು ನೋಡಲಾಗಿ, ಎದುರಿಗೆ ಇದ್ದ ನೀರು ಮೋವಾಬ್ಯರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.
23 ၂၃ အသွေးဖြစ်၏။ စင်စစ်ရှင်ဘုရင်တို့သည် တယောက်ကိုတယောက်လုပ်ကြံ၍ သေကြပြီ။ သို့ဖြစ်၍ မောဘပြည်သားတို့၊ လုယူကြလော့ဟု ဆိုကြ၏။
೨೩ಇವರು, “ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಯರೇ ಏಳಿರಿ, ಸುಲಿಗೆಗೆ ಹೋಗೋಣ!” ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು.
24 ၂၄ ဣသရေလတပ်သို့ ရောက်သောအခါ၊ ဣသ ရေလလူတို့သည် ထ၍ မောဘပြည်သားတို့ကို လိုက် သဖြင့် သူတို့သည် ပြေးကြ၏။ ဣသရေလလူတို့သည် မောဘပြည်ထဲသို့တိုင်အောင် လိုက်၍ လုပ်ကြံကြ၏။
೨೪ಆದರೆ ಇಸ್ರಾಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸಿದರು.
25 ၂၅ မြို့တို့ကိုဖြိုဖျက်ကြ၏။ ကောင်းသော မြေကွက် ရှိသမျှတို့အပေါ်မှာ လူအပေါင်းတို့သည် ကျောက်ခဲ ပစ်ချ၍ ဖုံးလွှမ်းကြ၏။ ရေတွင်းရှိသမျှတို့ကိုလည်း မြေဖို့ ၍၊ အသုံးဝင်သော သစ်ပင်ရှိသမျှတို့ကို ခုတ်လှဲကြ၏။ ကိရဟရက်မြို့၌သာ မြို့ရိုးကို ချန်ထားရာတွင်၊လောက်လွှဲ သမားတို့သည် ဝိုင်း၍ ပစ်ကြ၏။
೨೫ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.
26 ၂၆ မောဘမင်းကြီးသည် အတိုက်မခံနိုင်သည်ကို သိသောအခါ၊ ထားကိုင်သောသူခုနစ်ရာကို ခေါ်၍ ဧဒုံရှင်ဘုရင်၏ တပ်ကိုဖျက်မည်ဟု အားထုတ်သော် လည်း မဖျက်နိုင်။
೨೬ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು, ಏಳು ನೂರು ಮಂದಿ ಭಟರೊಡನೆ, ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಲು ಪ್ರಯತ್ನಿಸಿದನು. ಆದರೆ ಆಗದೆಹೋಯಿತು.
27 ၂၇ နောက်မှမိမိကိုယ်စား နန်းထိုင်ထိုက်သော သားဦးကို ယူ၍ မြို့ရိုးပေါ်မှာ မီးရှို့ရာယဇ်ပြုလေ၏။ ဣသရေလအမျိုးသားတို့သည် သူတပါးအမျက်ထွက်ခြင်း ကို ခံရသောကြောင့်၊ ထိုပြည်ကို ထား၍ ကိုယ်ပြည်သို့ ပြန်သွားကြ၏။
೨೭ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.

< ၄ ဓမ္မရာဇဝင် 3 >