< ၂ ဓမ္မရာဇဝင် 18 >
1 ၁ ဒါဝိဒ်သည် မိမိ၌ပါသော လူတို့ကိုရေတွက်၍ တထောင်အုပ်၊ တရာအုပ်တို့ကို ခန့်ထား၏။
ದಾವೀದನು ತನ್ನ ಸಂಗಡದಲ್ಲಿದ್ದ ಜನರನ್ನು ಲೆಕ್ಕ ಮಾಡಿ, ಅವರ ಮೇಲೆ ಸಾವಿರ ಜನರಿಗೂ, ನೂರು ಜನರಿಗೂ ಅಧಿಪತಿಗಳನ್ನು ನೇಮಿಸಿದನು.
2 ၂ လူသုံးစုတစုကို ယွာဘ၌၎င်း၊ တစုကို ဇေရုယာ သား ယွာဘညီ အဘိရှဲ၌၎င်း၊ တစုကိုဂိတ္တိလူ အိတ္တဲ၌၎င်း အပ်၍၊ ငါ့ကိုယ်တိုင်ချီသွားမည်ဟု လူများတို့အား မိန့်တော် မူ၏။
ದಾವೀದನು ಜನರಲ್ಲಿ ಮೂರನೆಯ ಪಾಲನ್ನು ಯೋವಾಬನಿಗೂ, ಎರಡನೆಯ ಪಾಲನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆಗಿರುವ ಅಬೀಷೈಗೂ, ಮೂರನೆಯ ಪಾಲನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿದನು. ತರುವಾಯ ಅರಸನು ಸೈನಿಕರಿಗೆ, “ನಾನೂ ನಿಮ್ಮ ಸಂಗಡ ಹೊರಟು ಬರುತ್ತೇನೆ,” ಎಂದನು.
3 ၃ လူများတို့ကလည်း၊ ကိုယ်တိုင်ကြွတော်မမူပါနှင့်။ ကျွန်တော်တို့ပြေးသော်လည်း သူတို့သည်အမှုမထား ကြပါ။ ကျွန်တော်တို့ တဝက်သေသော်လည်း သူတို့သည်အမှုမထားကြပါ။ ကိုယ်တော်မူကား၊ ကျွန်တော်တို့ တသောင်းထက် မြတ်တော်မူ၏။ သို့ဖြစ်၍ ကျွန်တော် တို့ကို မြို့ထဲက မစတော်မူလျှင်သာ၍ ကောင်းပါလိမ့်မည် ဟု လျှောက်ကြ၏။
ಆದರೆ ಸೈನಿಕರು ಅವನಿಗೆ, “ನೀನು ನಮ್ಮ ಸಂಗಡ ಬರಬೇಡ. ಏಕೆಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವುದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸಮನಾಗಿದ್ದೀ. ಈಗ ನೀನು ಊರಿನಲ್ಲಿದ್ದು, ನಮಗೆ ಸಹಾಯವಾಗಿರುವುದೇ ಉತ್ತಮ,” ಎಂದರು.
4 ၄ ရှင်ဘုရင်ကလည်း၊ ငါသည်သင်တို့အလိုသို့ လိုက်မည်ဟု မိန့်တော်မူ၍ တံခါးဝနားမှာ ရပ်တော်မူ လျှင်၊ လူအပေါင်းတို့သည် တရာတပ်၊ တထောင်တပ်အား ဖြင့် ချီသွားကြ၏။
ಆಗ ಅರಸನು ಅವರಿಗೆ, “ನಿಮಗೆ ಸರಿಕಾಣಿಸುವುದನ್ನು ಮಾಡುತ್ತೇನೆ,” ಎಂದನು. ಅರಸನು ಬಾಗಿಲ ಬಳಿಯಲ್ಲಿ ನಿಂತನು. ಸೈನಿಕರೆಲ್ಲಾ ನೂರು ನೂರಾಗಿಯೂ, ಸಾವಿರ ಸಾವಿರಗಳಾಗಿಯೂ ಹೊರಟರು.
5 ၅ ရှင်ဘုရင်ကလည်း၊ ငါ့မျက်နှာကို ထောက်၍ ငါ့သားအဗရှလုံကို ဖြည်းညှင်းစွာ ပြုကြလော့ဟု ယွာဘ၊ အဘိရှဲ၊ အိတ္တဲတို့ကို မှာထားတော်မူ၏။ ထိုသို့ ရှင်ဘုရင် သည် အဗရှလုံအတွက် ဗိုလ်မင်းအပေါင်းတို့ကို မှာထား တော်မူသောအခါ၊ လူအပေါင်းတို့သည် ကြားကြ၏။
ಅರಸನು ಯೋವಾಬನಿಗೂ, ಅಬೀಷೈಯಿಗೂ, ಇತ್ತೈಗೂ ಆಜ್ಞಾಪಿಸಿ, “ನನಗೋಸ್ಕರ ಯುವಕನಾದ ಅಬ್ಷಾಲೋಮನೊಂದಿಗೆ ಮೃದುವಾಗಿ ವರ್ತಿಸಿರಿ,” ಎಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಟ ಆಜ್ಞೆಯನ್ನು ಸೈನಿಕರೆಲ್ಲರೂ ಕೇಳಿದರು.
6 ၆ ထိုသို့ လူများတို့သည် ဣသရေလလူတို့ကို စစ်တိုက်အံ့သောငှါ မြို့ပြင်သို့ထွက်၍ ဧဖရိမ်တော၌ စစ်ပြိုင်ကြ၏။
ಅನಂತರ ಸೈನಿಕರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು. ಯುದ್ಧವು ಎಫ್ರಾಯೀಮ್ ಅಡವಿಯಲ್ಲಿತ್ತು.
7 ၇ ဣသရေလလူတို့သည် ဒါဝိဒ်၏ကျွန်တို့ ရှေ့မှာ ရှုံး၍ ထိုနေ့ခြင်းတွင် ကြီးစွာသောလုပ်ကြံခြင်းအားဖြင့် လူနှစ်သောင်းသေကြ၏။
ಅಲ್ಲಿ ಇಸ್ರಾಯೇಲರು ದಾವೀದನ ಸೇವಕರ ಮುಂದೆ ಸಂಹಾರವಾದರು.
8 ၈ မြေတပြင်လုံးအနှံ့အပြား တိုက်ကြသဖြင့် ထိုနေ့ ၌ လူချင်းသတ်၍ သေသည်ထက် တော၌ ဆုံးရှုံးသော သူသာ၍ များကြ၏။
ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು. ಇಪ್ಪತ್ತು ಸಾವಿರ ಸೈನಿಕರು ಸತ್ತರು. ಅಲ್ಲಿನ ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಸೈನಿಕರಲ್ಲಿ ಖಡ್ಗದಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.
9 ၉ ဒါဝိဒ်၏ ကျွန်တို့သည် အဗရှလုံကိုတွေ့ကြ၏။ သူသည်မြည်းကို စီးလျက်ပင် မြည်းသည် ကြီးသော သပိတ်ပင်အကိုင်းအခက်အောက်သို့ဝင်၍၊ အဗရှလုံ၏ ခေါင်းသည်သပိတ်ပင်၌ ငြိသဖြင့်၊ မိုဃ်းနှင့်မြေကြီး စပ်ကြားမှာ တွဲလွဲဆွဲလျက်နေ၍၊ မြည်းသည် အလို အလျောက် သွားလေ၏။
ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.
10 ၁၀ မြင်သော သူတယောက်သည် ယွာဘထံသို့ သွား၍၊ သပိတ်ပင်၌ အဗရှလုံဆွဲနေသည်ကို ကျွန်တော် မြင်ခဲ့သည်ဟု ကြားပြောလျှင်၊
ಅದನ್ನು ಒಬ್ಬನು ಕಂಡು ಯೋವಾಬನಿಗೆ, “ಅಬ್ಷಾಲೋಮನು ಒಂದು ಏಲಾ ಮರದಲ್ಲಿ ತೂಗಾಡುವುದನ್ನು ಕಂಡೆನು,” ಎಂದನು.
11 ၁၁ ယွာဘက၊ သင်သည် မြင်ခဲ့သည်မှန်လျှင် အဘယ်ကြောင့် သူ့ကို ထိုး၍ မြေကြီးပေါ်သို့ မချခဲ့ သနည်း။ ထိုသို့ပြုလျှင် ငွေကျပ်တဆယ်နှင့်ခါးစည်းကို ငါပေးပြီဟု ပြောဆိုသော်၊
ಅದಕ್ಕೆ ಯೋವಾಬನು ತನಗೆ ಅದನ್ನು ತಿಳಿಸಿದವನಿಗೆ, “ನೀನು ಕಂಡು ಅವನನ್ನು ಏಕೆ ಕಡಿದು ನೆಲಕ್ಕೆ ಉರುಳಿಸಲಿಲ್ಲ? ನಾನು ನಿನಗೆ ಹತ್ತು ಬೆಳ್ಳಿ ನಾಣ್ಯಗಳನ್ನು, ಒಂದು ಬೆಳ್ಳಿ ನಡುಕಟ್ಟನ್ನು ಕೊಡುತ್ತಿದ್ದೆನು,” ಎಂದನು.
12 ၁၂ ထိုသူက ကျွန်တော်သည် ကိုယ်လက်၌ ငွေ အခွက်တဆယ်ကို ပင်ခံရသော်လည်း ရှင်ဘုရင်၏သားကို မပြုနိုင်ပါ။ အကြောင်းမူကား၊ ကျွန်တော်တို့ကြားသည့် အတိုင်း ရှင်ဘုရင်က၊ ငါ့မျက်နှာကိုထောက်၍ ငါ့သား အဗရှလုံကို စောင့်မကြလော့ဟု ကိုယ်တော်နှင့်အဘိရှဲ၊ အိတ္တဲတို့ကို မှာထားတော်မူပြီ။
ಆದರೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ, ನಾನು ಅರಸನ ಮಗನ ಮೇಲೆ ನನ್ನ ಕೈಚಾಚುವುದಿಲ್ಲ. ಏಕೆಂದರೆ, ‘ಅಬ್ಷಾಲೋಮನೆಂಬ ಯುವಕನೊಡನೆ ಸೌಮ್ಯದಿಂದ ನಡೆದು ಕಾಪಾಡಿರಿ,’ ಎಂದು ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಯನಿಗೂ, ಇತ್ತೈಗೂ ಸ್ಪಷ್ಟವಾಗಿ ಆಜ್ಞಾಪಿಸಿದ್ದನು.
13 ၁၃ ကျွန်တော်ပြုမိလျှင် ကိုယ်ကိုလှည့်စား၍ ကိုယ် အသက်ရှုံးပါပြီ။ ရှင်ဘုရင်မသိသော အမှုတစုံတခုမျှမရှိ။ ကိုယ်တော်သည်လည်း ကျွန်တော်တဘက်၌ နေပါလိမ့် မည်ဟု ပြောဆိုသော်၊
ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಏಕೆ ಮೋಸಮಾಡಿಕೊಳ್ಳಬೇಕು. ಏಕೆಂದರೆ ಅರಸನಿಗೆ ಯಾವ ಕಾರ್ಯವೂ ಮರೆಯಾಗಿರುವುದಿಲ್ಲ. ನೀನೇ ನನಗೆ ವಿರೋಧವಾಗಿ ನಿಲ್ಲುವಿ,” ಎಂದನು.
14 ၁၄ ယွာဘက၊ သင်နှင့်အတူ ငါမနေအားဟု ဆိုလျက်လှံယဉ်သုံးစင်း ကိုကိုင်ယူ၍ သပိတ်ပင်အလယ်၌ အသက်ရှင်လျက်ရှိသော အဗရှလုံ၏ နှလုံးကို ထုတ်ချင်း ခပ်ထိုးလေ၏။
ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು.
15 ၁၅ လက်နက်ဆောင်လုလင် တကျိပ်တို့သည်လည်း ဝိုင်း၍ အဗရှလုံကို အသေသတ်ကြ၏။
ಆಗ ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯುವಕರು ಸುತ್ತಿಕೊಂಡು, ಅಬ್ಷಾಲೋಮನನ್ನು ಕೊಂದುಹಾಕಿದರು.
16 ၁၆ ယွာဘသည်လည်း တံပိုးမှုတ်၍ လူတို့ကို ဆီး တားသဖြင့် ဣသရေလလူတို့ကို လိုက်ရာမှပြန်လာကြ၏။
ಆಗ ಯೋವಾಬನು ತುತೂರಿಯನ್ನು ಊದಿದ್ದರಿಂದ, ಸೈನಿಕರು ಇಸ್ರಾಯೇಲರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು. ಏಕೆಂದರೆ ಯೋವಾಬನು ಜನರನ್ನು ತಡೆದನು.
17 ၁၇ အဗရှလုံကိုလည်း ယူ၍ တော၌နက်သော မြေတွင်းထဲသို့ ချပြီးမှ ကျောက်ပုံကြီးကို ပုံထားကြ၏။ ဣသရေလလူအပေါင်းတို့သည် အသီးအသီး မိမိတို့ အိမ်သို့ပြေးကြ၏။
ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು.
18 ၁၈ အဗရှလုံသည် အသက်ရှင်စဉ်အခါ၊ ငါ၏နာမ သည် မပျောက်အမြဲတည်မည်အကြောင်း၊ သားမရှိဟု ဆိုလျက် ရှင်ဘုရင်ချိုင့်တွင် ကိုယ်အဘို့ ကျောက်တိုင်ကို စိုက်၍ မိမိနာမဖြင့်သမုတ်သောကြောင့်၊ ယနေ့တိုင် အောင် အဗရှလုံအောင်တိုင်ဟူ၍ တွင်သတည်း၊
ಅಬ್ಷಾಲೋಮನು ಜೀವದಿಂದಿರುವಾಗ, “ನನ್ನ ಹೆಸರನ್ನು ಜ್ಞಾಪಕಾರ್ಥವಾಗಿ ಉಳಿಸಲು ನನಗೆ ಮಗನಿಲ್ಲ,” ಎಂದು ಹೇಳಿ, ಅವನು ತಗ್ಗಿನಲ್ಲಿರುವ ಒಂದು ಕಲ್ಲಿನ ಸ್ತಂಭವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಈ ದಿನದವರೆಗೂ ಅಬ್ಷಾಲೋಮನ ಸ್ಮಾರಕಸ್ತಂಭ ಎಂದು ಕರೆಯಲಾಗುತ್ತದೆ.
19 ၁၉ ထိုအခါ ဇာဒုတ်၏သား အဟိမတ်က၊ ထာဝရ ဘုရားသည် ရှင်ဘုရင်၏ ရန်သူတို့ကို အပြစ်အလျောက် စီရင်တော်မူကြောင်းကို ကျွန်တော်ပြေး၍ သိတင်း ကြားလျှောက်ပါရစေဟု အခွင့်တောင်းလျှင်၊
ಆಗ ಚಾದೋಕನ ಮಗ ಅಹೀಮಾಚನು, “ಯೆಹೋವ ದೇವರು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾರೆಂಬ ವರ್ತಮಾನವನ್ನು ಅರಸನಿಗೆ ತಿಳಿಸುವ ಹಾಗೆ, ನಾನು ಓಡಿ ಹೋಗುವೆನು,” ಎಂದನು.
20 ၂၀ ယွာဘက၊ ယနေ့သင်သည် သိတင်းမကြား မလျှောက်ရ။ အခြားသောနေ့၌ ကြားလျှောက်ရမည်။ ရှင်ဘုရင်၏ သားတော်သေသောကြောင့် ယနေ့သင်သည် သိတင်းမကြားမလျှောက်ရဟု ဆိုပြီးမှ၊
ಆದರೆ ಯೋವಾಬನು ಅವನಿಗೆ, “ನೀನು ಈ ಹೊತ್ತು ವರ್ತಮಾನ ತೆಗೆದುಕೊಂಡು ಹೋಗಬೇಡ. ಮತ್ತೊಂದು ದಿವಸ ವರ್ತಮಾನ ತೆಗೆದುಕೊಂಡು ಹೋಗಬಹುದು. ಏಕೆಂದರೆ ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತೆಗೆದುಕೊಂಡು ಹೋಗಬೇಡ,” ಎಂದನು.
21 ၂၁ ကုရှိအား သင်မြင်သမျှကိုသွား၍ ရှင်ဘုရင် အား ကြားလျှောက်လော့ဟုဆိုသည်အတိုင်း၊ ကုရှိသည် ယွာဘအား ဦးညွှတ်၍ ပြေးလေ၏။
ಯೋವಾಬನು ಕೂಷ್ಯ ದೇಶವಾಸಿಯಾದ ಒಬ್ಬನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು,” ಎಂದನು. ಕೂಷ್ಯ ದೇಶವಾಸಿ ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು.
22 ၂၂ တဖန် ဇာဒုတ်သားအဟိမတ်က၊ သို့သော်လည်း ကျွန်တော်သည် ကုရှိနောက်မှာ ပြေးပါရစေဟု ခွင်း တောင်းပြန်လျှင်၊ ယွာဘက ငါ့သား ဝမ်းမြောက်စရာ သိတင်းမဟုတ်သည်ဖြစ်၍ အဘယ်ကြောင့်ပြေးသွားချင် သနည်းဟု ဆိုသော်လည်း၊
ಆಗ ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, ಏನೇ ಆಗಲಿ, “ನಾನು ಕೂಷ್ಯ ದೇಶವಾಸಿ ಹಿಂದೆ ಓಡಿಹೋಗುವ ಹಾಗೆ ಅಪ್ಪಣೆಕೊಡಬೇಕು,” ಎಂದನು. ಅದಕ್ಕೆ ಯೋವಾಬನು, “ನನ್ನ ಮಗನೇ, ನೀನು ಏಕೆ ಹೋಗಲು ಬಯಸುತ್ತಿರುವೆ? ನಿನಗೆ ಪ್ರಶಸ್ತಿಯನ್ನು ತರುವ ಯಾವುದೇ ಸುದ್ದಿ ನಿನ್ನ ಬಳಿ ಇಲ್ಲ,” ಎಂದನು.
23 ၂၃ ပြေးပါရစေဟု တဖန် အခွင့်တောင်းသောကြောင့် ပြေးလော့ဟုအခွင့်ပေး၏။ ထိုအခါ အဟိမတ်သည် လွင်ပြင်လမ်း၌ပြေး၍ ကုရှိကိုလွန်လေ၏။
ಅವನು, “ಏನೇ ಆಗಲಿ, ನಾನು ಓಡಿ ಹೋಗುತ್ತೇನೆ,” ಎಂದನು. ಯೋವಾಬನು, “ಓಡು,” ಎಂದನು. ಆಗ ಅಹೀಮಾಚನು ಬಯಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.
24 ၂၄ ဒါဝိဒ်သည် မြို့တံခါးနှစ်ထပ်ကြား မှာထိုင်၍နေ၏။ ကင်းစောင့်တယောက်သည် မြို့ရိုးတံခါးအပေါ် ပြအိုးမိုးအောက်သို့ တက်၍ မြော်ကြည့်သဖြင့် လူ တယောက်တည်းပြေးလာသည်ကို မြင်သောအခါ၊
ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ, ಕಣ್ಣುಗಳನ್ನೆತ್ತಿ ನೋಡಲಾಗಿ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿಬರುವುದನ್ನು ಕಂಡನು.
25 ၂၅ ရှင်ဘုရင်အား ဟစ်၍ လျှောက်လေ၏။ ရှင်ဘုရင်ကလည်း၊ တယောက်တည်းဖြစ်လျှင် သိတင်း ပါလိမ့်မည်ဟု အမိန့်ရှိ၏။ ထိုသူသည် ပြေးလာ၍ အနီးသို့ ရောက်သောအခါ၊
ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು, “ಅವನು ಒಬ್ಬನಾಗಿ ಬಂದರೆ, ಅವನ ಬಳಿ ಒಳ್ಳೆಯ ಸಮಾಚಾರ ಇರುವುದು,” ಎಂದನು. ಅವನು ಬಂದು ಸಮೀಪಿಸಿದನು.
26 ၂၆ ကင်းစောင့်သည်လည်း အခြားသော သူပြေးလာသည်ကိုမြင်၍၊ အခြားသောသူတယောက်တည်း ပြေးလာပါသည်ဟု တံခါးသို့လှည့်၍ ဟစ်လျှင်၊ ရှင်ဘုရင်က ထိုသူ၌လည်း သိတင်းပါလိမ့်မည်ဟု အမိန့်ရှိ၏။
ಕಾವಲುಗಾರನು ಬೇರೊಬ್ಬನು ಓಡಿಬರುವುದನ್ನು ಕಂಡು, ಬಾಗಿಲು ಕಾಯುವವನನ್ನು ಕರೆದು, “ಇಗೋ, ಮತ್ತೊಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ,” ಎಂದನು. ಅದಕ್ಕೆ ಅರಸನು, “ಅವನೂ ಸಹ ಒಳ್ಳೆಯ ಸಮಾಚಾರ ತೆಗೆದುಕೊಂಡು ಬರುತ್ತಾನೆ,” ಎಂದನು.
27 ၂၇ ကင်စောင့်ကလည်း၊ ရှေ့လာသော သူ၏ပြေးခြင်းသည် ဇာဒုတ်သား အဟိမတ်ပြေးခြင်းနှင့် တူသည် ကို ကျွန်တော်ထင်ပါသည်ဟု လျှောက်သော်၊ ရှင်ဘုရင်က သူသည် လူကောင်းဖြစ်၏။ ကောင်းသော သိတင်းပါလိမ့် မည်ဟု အမိန့်ရှိပြန်၏။
ಕಾವಲುಗಾರನು, “ಮೊದಲನೆಯವನ ಓಟವು ಚಾದೋಕನ ಮಗ ಅಹೀಮಾಚನ ಓಟದ ಹಾಗೆ ಇರುವುದೆಂದು ನನಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಒಳ್ಳೆಯ ಸಮಾಚಾರ ತರುತ್ತಾನೆ,” ಎಂದನು.
28 ၂၈ အဟိမတ်ကလည်း၊ ချမ်းသာရပါ၏ဟုဟစ်လျက် ရှင်ဘုရင်ရှေ့မြေပေါ်မှာ ပြပ်ဝပ်လျက်၊ အရှင်မင်းကြီး ကို ပုန်ကန်သောလူတို့ကို အပ်တော်မူသောကိုယ်တော်၏ဘုရားသခင် ထာဝရဘုရားသည် မင်္ဂလာ ရှိတော်မူစေသတည်းဟု လျှောက်လေ၏။
ಆಗ ಅಹೀಮಾಚನು ಕೂಗಿ ಅರಸನಿಗೆ, “ಎಲ್ಲವೂ ಕ್ಷೇಮ,” ಎಂದು ಹೇಳಿ ಅರಸನ ಮುಂದೆ ಮೋರೆ ಕೆಳಗಾಗಿ, ನೆಲಕ್ಕೆ ಅಡ್ಡಬಿದ್ದು, “ಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಮನುಷ್ಯರನ್ನು ಒಪ್ಪಿಸಿಕೊಟ್ಟ ನಿಮ್ಮ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ,” ಎಂದನು.
29 ၂၉ ရှင်ဘုရင်ကလည်း၊ ငါ့သား အဗရှလုံသည် ဘေးလွတ်၏လောဟု မေးတော်မူလျှင် အဟိမတ်က၊ အရှင်မင်းကြီး၏ ကျွန်ယွာဘသည် ကိုယ်တော်ကျွန် ကိုစေလွှတ်သောအခါ ရုန်းရင်းခတ်ခြင်းအမှုကို ကျွန် တော်မြင်သော်လည်း သေချာစွာမသိရပါဟု လျှောက် သော်၊
ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು.
30 ၃၀ ရှင်ဘုရင်က၊ ဤအနားမှာ ရွှေ့၍နေလော့ဟု မိန့်တော်မူသည်အတိုင်း သူသည်ရွှေ့၍ နေလေ၏။
ಅರಸನು, “ನೀನು ಇತ್ತಲಾಗಿ ಬಂದು ನಿಲ್ಲು,” ಎಂದನು. ಅವನು ಅತ್ತಲಾಗಿ ಹೋಗಿ ನಿಂತನು. ಆಗ ಕೂಷ್ಯನು ಬಂದನು.
31 ၃၁ တဖန် ကုရှိရောက်လာ၍ အရှင်မင်းကြီး၊ သိတင်းပါပါ၏။ ကိုယ်တော်ကို ပုန်ကန်သော သူအပေါင်း တို့ကို ထာဝရဘုရားသည် ထိုသူ၏ အပြစ်အလျောက် ယနေ့စီရင်တော်မူပြီဟု လျှောက်လျှင်၊
ಕೂಷ್ಯನು, “ಅರಸನಾದ ನನ್ನ ಒಡೆಯನಿಗೆ ಶುಭವರ್ತಮಾನ ಉಂಟು, ಏನೆಂದರೆ ಯೆಹೋವ ದೇವರು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು, ಸಮಸ್ತರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾರೆ,” ಎಂದನು.
32 ၃၂ ရှင်ဘုရင်က၊ ငါ့သားအဗရှလုံသည် ဘေးလွတ် ၏လောဟု မေးတော်မူသော်၊ ကုရှိက အရှင်မင်းကြီး၏ ရန်သူများ၊ ကိုယ်တော်ကို ညှဉ်းဆဲခြင်းငှါ ပုန်ကန်သောသူများအပေါင်းတို့သည် ထိုလုလင်ကဲ့သို့ဖြစ်ကြပါ စေသောဟု ပြန်လျှောက်လေ၏။
ಅರಸನು ಕೂಷ್ಯನಿಗೆ, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದನು. ಕೂಷ್ಯನು ಉತ್ತರವಾಗಿ, “ಅರಸನಾದ ನನ್ನ ಒಡೆಯನ ಶತ್ರುಗಳು ಕೇಡು ಮಾಡುವಂತೆ ನಿನಗೆ ವಿರೋಧವಾಗಿ ಏಳುವ ಸಮಸ್ತರಿಗೂ, ಆ ಯುವಕನಿಗಾದ ಹಾಗೆಯೇ ಆಗಲಿ,” ಎಂದನು.
33 ၃၃ ရှင်ဘုရင်သည် အလွန်ကြင်နာသောစိတ် ရှိသဖြင့် မြို့တံခါးအပေါ်၌ရှိသော တဲသို့တက်၍ တက်စဉ် တွင်၊ အိုငါ့သားအဗရှလုံ၊ ငါ့သား၊ ငါ့သားအဗရှလုံ၊ သင့်ကိုယ်စား ငါမသေပါလေတကား။ အိုအဗရှလုံ၊ ငါ့သား၊ ငါ့သားဟု ငိုကြွေးလေ၏။
ಆಗ ಅರಸನು ನಡುಗುತ್ತಾ ಊರು ಬಾಗಿಲ ಮೇಲಿರುವ ಕೊಠಡಿಗೆ ಏರಿಹೋದನು. ಹೋಗುವಾಗ, “ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ,” ಎಂದು ಹೇಳಿ ಅತ್ತನು.